ಲೇಖಕ: admin

ಕುಶಾಲನಗರ ಅ.19 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ-50 ಹಾಗೂ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.11 ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕಂಠ ಗಾಯನ ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ಸಹಭಾಗಿತ್ವದಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ವಿನೂತನವಾಗಿ ನ.11 ರಂದು ಕುಶಾಲನಗರ ಪಟ್ಟಣದ ರಥಬೀದಿ ಹಾಗೂ ಪ್ರವಾಸಿ ಮಂದಿರ (ಐ.ಬಿ.) ರಸ್ತೆಯಲ್ಲಿ ಎಲ್ಲರೂ ಜತೆಗೂಡಿ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲಿನಿಂದ ನಿರ್ಧಾರ ಕೈಗೊಂಡು ಕಂಠ ಗಾಯನವನ್ನು ಯಶಸ್ವಿಗೊಳಿಸುವಂತೆ ತೀರ್ಮಾನ…

Read More

ಮಡಿಕೇರಿ ಅ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಪೊನ್ನಂಪೇಟೆ ಜೇಸಿ ಸಂಸ್ಥೆ ಹಾಗೂ ಮಾಯಮುಡಿ ಶ್ರೀ ಕಾವೇರಿ ಅಸೋಸಿಯೇಷನ್‍ನ ಸಹಭಾಗಿತ್ವದಲ್ಲಿ ನ.24 ರಂದು ಮಾಯಮುಡಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ‘ತೋಕ್‍ನಮ್ಮೆ’ಯನ್ನು ಆಯೋಜಿಸುವ ಕುರಿತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಮಾಯಮುಡಿ ಶ್ರೀ ಕಾವೇರಿ ಅಸೋಸಿಯೇಷನ್ ಕಟ್ಟಡದಲ್ಲಿ ಸಂಸ್ಥೆಯ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಮಾತನಾಡಿ, ಕೊಡವ ಸಂಸ್ಕøತಿಯ ಪ್ರತೀಕವಾಗಿರುವ ತೋಕ್ ಜನಾಂಗ ಭಾಂದವರ ಆಧ್ಯಾತ್ಮಿಕ ಸಂಕೇತವಾಗಿದ್ದು ಪೂಜ್ಯನೀಯವಾಗಿರುತ್ತದೆ. ಕೊಡವ ಸಾಹಿತ್ಯ-ಸಂಸ್ಕøತಿಯಲ್ಲಿ ‘ತೋಕ್’ಗೆ ಉನ್ನತ ಸ್ಥಾನ-ಮಾನವಿದ್ದು ಅಕಾಡೆಮಿ ವತಿಯಿಂದ ತೋಕ್‍ನಮ್ಮೆ ನಡೆಸುವುದು ಜನಾಂಗ ಭಾಂದವರ ಒಗ್ಗೂಡುವಿಕೆ ಹಾಗೂ ತೋಕ್‍ನ ಮಹತ್ವದ ಬಗ್ಗೆ ಅರಿಯಲು ಸೂಕ್ತ ವೇದಿಕೆಯಾಗಿರುತ್ತದೆ. ತೋಕ್ ನಮ್ಮೆಯು ಕೇವಲ ಗುಂಡು ಹೊಡೆಯುವ ಸ್ಪರ್ಧೆ ಆಗಿರದೆ, ಇದನ್ನು ಕೊಡವ ಸಾಂಸ್ಕøತಿಕ ಮೆರುಗಿನೊಂದಿಗೆ ಧೈವೀ ಭಾವದೊಂದಿಗೆ ಬೆರೆಯುವ ಕೆಲಸವನ್ನು ಅಕಾಡೆಮಿಯಿಂದ ಮಾಡಲಾಗುವುದೆಂದರು.…

Read More

ಮಡಿಕೇರಿ ಅ.19 : NEWS DESK : ತಾಳತ್ತಮನೆ-ಮೇಕೇರಿಯ ಕೃಷ್ಣಪ್ಪ ಎಂಬವರ ಮನೆಯ ಪಕ್ಕದಲ್ಲಿದ್ದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Read More

ನಾಪೋಕ್ಲು ಅ.19 NEWS DESK : ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವದ ಎರಡನೇ ದಿನ ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಅಗಸ್ತ್ಯೇಶ್ವರ ದೇವಾಲಯದಲ್ಲಿ ಸಂಕ್ರಮಣದ ಪ್ರಯುಕ್ತ ಕಾವೇರಿ ನದಿಗೆ ಮಹಾ ಮಂಗಳಾರತಿ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಿದವು. ನಂತರ ಕೇಶ ಮುಂಡನ, ಪಿಂಡಪ್ರಧಾನ, ಕಾವೇರಿ ತೀರ್ಥಸ್ನಾನ, ಕಾವೇರಿಯ ಬಾಳೋಪಾಟ್ ಮತ್ತಿತರ ಕಾರ್ಯಗಳು ನಡೆಯಿತು. ಮಧ್ಯಾಹ್ನ ಕಾವೇರಿ ನದಿಗೆ ಮಹಾ ಮಂಗಳಾರತಿಯನ್ನು ಅರ್ಚಕ ಮಹಾಬಲೇಶ್ವರ ಭಟ್ ಸಹವರ್ತಿಗಳು ನೆರವೇರಿಸಿದರು. ಬಳಿಕ ನದಿಯಿಂದ ಪವಿತ್ರ ನೀರನ್ನು ದೇವಾಲಯಕ್ಕೆ ತಂದು ದೇವರ ಪ್ರತಿಬಿಂಬಕ್ಕೆ ಅಭಿಷೇಕ ಮಾಡಲಾಯಿತು. ವಿಶೇಷ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯದ ತಕ್ಕರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಕೊಂಗೀರಂಡ ಸಾಧು ತಮ್ಮಯ್ಯ, ಕಾರ್ಯದರ್ಶಿ ನ್ನಚ್ಚನ ಜಯ, ಅನ್ನದಾನ ಸಮಿತಿಯ ಅಧ್ಯಕ್ಷ ಬೊಳ್ಳಚೆಟ್ಟಿರ ಚೆಟ್ಟಿಚ್ಚ, ಕಾರ್ಯದರ್ಶಿ ಪಾಲಂದಿರ ಚಂಗಪ್ಪ, ನಿರ್ದೇಶಕರುಗಳಾದ…

Read More

ನಾಪೋಕ್ಲು ಅ.19 NEWS DESK  : ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವದ ಎರಡನೇ ದಿನ ಇತಿಹಾಸ ಪ್ರಸಿದ್ಧ ಬಲಮುರಿ ಅಗಸ್ತ್ಯೇಶ್ವರ ಹಾಗೂ ಶ್ರೀ ಕಣ್ವ ಮುನೀಶ್ವರ ದೇವಾಲಗಳಲ್ಲಿ ತುಲ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಸ್ಥಳವಾಗಿದ್ದು ಶುಕ್ರವಾರ ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕವೃಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ನೆರವೇರಿಸಿದರು. ಕಣ್ವ ಮುನೇಶ್ವರ ದೇವಾಲಯದಲ್ಲಿ ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೈಯಂಡ ತಿಮ್ಮಯ್ಯ, ಆಡಳಿತ ಮಂಡಳಿ ಸದಸ್ಯರು, ಊರಿನ ತಕ್ಕ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಚುನಾಯಿತ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅರ್ಚಕ ರವಿ ಕಲ್ಲುರಾಯ ಮಾತನಾಡಿ, ದೇವಾಲಯದಲ್ಲಿ ಕಾವೇರಿ ತೀರ್ಥವನ್ನು ತಂದು ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಅನ್ನ ಸಂತರ್ಪಣೆ ಕೈಗೊಳ್ಳಲಾಯಿತು ಎಂದರು.…

Read More

ಸೋಮವಾರಪೇಟೆ ಅ.19 NEWS DESK : ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದ ಮಡಿಕೇರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ವಾರ್ಷಿಕ ಪೂಜೆ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಪೂಜಾ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಯೋಜನಾಧಿಕಾರಿ ರೋಹಿತ್, ಎಸ್.ಮಹೇಶ್, ಭಗವಾನ್, ಸುರೇಶ್, ಯೋಜನಾ ಘಟಕದ ಸಿಬ್ಬಂದಿಗಳು ಇದ್ದರು.

Read More

ಸೋಮವಾರಪೇಟೆ ಅ.19 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯ ಎಂ.ವಿ.ಜೀವನ್ ಪುಷ್ಪಾ ನಮನ ಸಲ್ಲಿಸಿದರು. ಈ ಸಂದರ್ಭ ಸಿಬ್ಬಂದಿಗಳಾದ ಆದಿಲ್, ಹನುಮ ಸೇರಿದಂತೆ ಪೌರಕಾರ್ಮಿಕರು ಇದ್ದರು.

Read More

ಮಡಿಕೇರಿ NEWS DESK ಅ.19 : ಪವರ್ ಟಿವಿಯ 7ನೇ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕೊಡಗಿನ ಸಿದ್ದಲಿಂಗಪುರದ ಉದ್ಯಮಿ, ಸಮಾಜ ಸೇವಕ ಹಾಗೂ ದಾನಿಗಳೂ ಆದ ನಾಪಂಡ ಮುತ್ತಪ್ಪ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಪವರ್ ಟಿವಿಯ ಮುಖ್ಯಸ್ಥರು ನಾಪಂಡ ಮುತ್ತಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಕಾರ್ಮಿಕ ಮುಖಂಡರಾಗಿ ದುಡಿಯುವ ವರ್ಗಕ್ಕೆ ಹೋರಾಟದ ಮೂಲಕ ನ್ಯಾಯ ದೊರಕಿಸಿಕೊಡುತ್ತಿರುವ ನಾಪಂಡ ಮುತ್ತಪ್ಪ ಅವರು, ರಾಜ್ಯವ್ಯಾಪಿ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಯಾವುದೇ ಪ್ರಚಾರವನ್ನು ಬಯಸದೆ ಕೊಡುಗೈ ದಾನಿಯಾಗಿ ನೊಂದವರ ನೋವಿಗೆ ಸ್ಪಂದಿಸುತ್ತಿರುವ ಮುತ್ತಪ್ಪ ಅವರ ಸೇವೆಯನ್ನು ಗುರುತಿಸಿ ಪವರ್ ಟಿವಿ ಪ್ರಶಸ್ತಿ ನೀಡಿ ಗೌರವಿಸಿದೆ.

Read More

ಸೋಮವಾರಪೇಟೆ ಅ.19 NEWS  DESK : ಸೋಮವಾರಪೇಟೆ ಕೊಡವ ಸಮಾಜದ ವತಿಯಿಂದ ಕಾವೇರಿ ತೀರ್ಥವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಸಮಾಜದಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ತೀರ್ಥ ವಿತರಿಸಲಾಯಿತು. ಈ ಸಂದರ್ಭ ಹಿರಿಯರಾದ ಕಲ್ಲೇಂಗಡ ಅಪ್ಪಚ್ಚು, ಸಮಾಜದ ಉಪಾಧ್ಯಕ್ಷ ಬೊಳಂದಂಡ ಕುಟ್ಟಪ್ಪ, ಖಚಾಂಚಿ ಪಾಡೆಯಂಡ ಮುತ್ತಣ್ಣ, ಮೈನಾ ಸುಬ್ರಮಣಿ ಸೇರಿದಂತೆ ಸಮಾಜದ ನಿರ್ದೆಶಕರುಗಳು ಇದ್ದರು.

Read More

ಮಡಿಕೇರಿ ಅ.19 NEWS DESK : ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ (ಎರಡು ವರ್ಷ) 2024-25ನೇ ಸಾಲಿನಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಅಕ್ಟೋಬರ್, 25 ರಂದು ಮುಕ್ತ ಕೌನ್ಸಿಲಿಂಗ್ ನಡೆಯಲಿದೆ.  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜು ಬ್ರಹ್ಮಾವರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾμÉಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಟ ಶೇ.40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಸೀಟುಗಳನ್ನು…

Read More