ಮಡಿಕೇರಿ ಅ.19 NEWS DESK : ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರನ್ನು ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಲಾಯಿತು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ವೆಂಕಟ್ ರಾಜಾ ಮಡಿಕೇರಿ ದಸರಾ ಯಶಸ್ಸಿಗೆ ಪೌರ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯ ನಡುವೆಯೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಿರುವುದು ಮೆಚ್ಚುವಂತದ್ದು, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆ ಸ್ವಚ್ಚತೆಯಲ್ಲಿ ಇಡೀ ವಿಶ್ವದಲ್ಲಿಯೇ…
ಲೇಖಕ: admin
ಮಡಿಕೇರಿ ಅ.19 NEWS DESK : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಬೇಟಿ ಬಚಾವೋ-ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆಯಲ್ಲಿ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ನಡೆಯಿತು. ಸೋಮವಾರಪೇಟೆ ತಾಲ್ಲೂಕಿನ ಸ್ರ್ತೀಶಕ್ತಿ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನಡೆದ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಮಾತನಾಡಿ, ನಾವು ತಳಮಟ್ಟದಿಂದ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಪೋಷಣಾ ಅಭಿಯಾನ ಯೋಜನೆಯ ಸುಪೋಷಿತ ಕಿಶೋರಿ, ಸಶಕ್ತ ನಾರಿ ಘೋಷವಾಕ್ಯದಂತೆ ಹೆಣ್ಣು ಮಗು ಜನಿಸಿ ಮನೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿ ಒಂದು ಗುಲಾಬಿ ಹೂ ನೀಡುವುದರ ಮುಖಾಂತರ ಆ ಮಗುವನ್ನು ಸ್ವಾಗತಿಸಬೇಕು ಮತ್ತು ಕುಟುಂಬದವರಿಗೆ ಹೆಣ್ಣು ಮಗುವಿನ ಮಹತ್ವವನ್ನು ತಿಳಿ ಹೇಳಿಬೇಕು. ಇದರಿಂದ ಮುಂದಿನ ದಿನಗಳಲ್ಲಿ ಧನಾತ್ಮಕ ಬದಲಾವಣೆಯನ್ನು ಕಾಣಬಹುದು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಂಡರ್ ಸ್ಪೆಷಲಿಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಬೇಟಿ ಬಚಾವೋ-…
ಮಡಿಕೇರಿ ಅ.19 NEWS DESK : ಎರಡು ಆರ್ಇ ಗೋಡೆಗಳು ಇಂಡುವಾಳ ಮತ್ತು ಬೂದನೂರು ಗ್ರಾಮದ ಮೈಸೂರ -ಬೆಂಗಳೂರು ಹೆದ್ದಾರಿಯಲ್ಲಿ ನಿರ್ಮಿಸಲಾದ ಎರಡು RE ವಾಲ್ ಸ್ಪಾಟ್ಗಳಿಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯದುವೀರ್ ಒಡೆಯರ್ ಈ ಭಾಗದ ಜನರಿಗೆ ಉಡುಗೊರೆಯಾಗಿರುವ ಮೋದಿ-ಸರ್ಕಾರದ ಅಡಿಯಲ್ಲಿ ಮೈಸೂರು-ಬೆಂಗಳೂರು ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಈ ರಸ್ತೆಯ ಸುರಕ್ಷತೆಯ ಕಾಳಜಿಯನ್ನು ಖಾತ್ರಿಪಡಿಸುವುದು ಅತ್ಯಂತ ಆದ್ಯತೆಯಾಗಿದೆ. NHAI ಮತ್ತು ಮಾಧ್ಯಮದ ವರದಿಗಳ ಆಧಾರದ ಮೇಲೆ ನಾನೇ ಖುದ್ದು ಭೇಟಿ ನೀಡಿ ಸಮಸ್ಯೆಯ ಮೊದಲ ಮಾಹಿತಿ ಪಡೆಯಲು ನಿರ್ಧರಿಸಿದ್ದೇನೆ. ದುರಸ್ತಿ ಮತ್ತು ನಿರ್ವಹಣೆ ಕಾರ್ಯವನ್ನು ನಡೆಸಲಾಗಿದೆ ಮತ್ತು ರಸ್ತೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ನಾನು ಯಾವಾಗಲೂ ನನ್ನ ಕ್ಷೇತ್ರದ ಜನರೊಂದಿಗೆ ನಿಲ್ಲುತ್ತೇನೆ ಮತ್ತು ಯಾವುದೇ ರೀತಿಯ ಪ್ರಮುಖ ಅಥವಾ ಸಣ್ಣ ಕಾಳಜಿಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಆರ್ಇ ವಾಲ್ನ…
ಮಡಿಕೇರಿ ಅ.19 NEWS DESK : ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರನ್ನು ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಲಾಯಿತು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ವೆಂಕಟ್ ರಾಜಾ ಮಡಿಕೇರಿ ದಸರಾ ಯಶಸ್ಸಿಗೆ ಪೌರ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯ ನಡುವೆಯೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಿರುವುದು ಮೆಚ್ಚುವಂತದ್ದು, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆ ಸ್ವಚ್ಚತೆಯಲ್ಲಿ ಇಡೀ ವಿಶ್ವದಲ್ಲಿಯೇ…
ಮಡಿಕೇರಿ NEWS DESK ಅ.18 : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿ ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಹಾಗೂ ತುಲಾ ಸಂಕ್ರಮಣ ಜಾತ್ರೆ ಮರುದಿನ ಹಾರಂಗಿಯ ಕಾವೇರಿ ಪ್ರತಿಮೆಗೆ ಶಾಸಕರಾದ ಡಾ.ಮಂತರ್ಗೌಡ, ಅರಕಲಗೋಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು, ವಿಧಾನಪರಿಷತ್ ಸದಸ್ಯರಾದ ಎಂ.ಪಿ.ಸುಜಾಕುಶಾಲಪ್ಪ ಇತರರು ಹಾರಂಗಿ ಜಲಾಶಯ ಬಳಿಯ ಕಾವೇರಿ ಪ್ರತಿಮೆಗೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಹಾರಂಗಿ ನೀರು ಬಳಕೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಚೌಡೇಗೌಡ, ಅಧೀಕ್ಷಕ ಎಂಜಿನಿಯರ್ ರಘುಪತಿ, ಹಾರಂಗಿ ಜಲಾಶಯದ ಇಇ ಐ.ಕೆ.ಪುಟ್ಟಸ್ವಾಮಿ, ತಹಶೀಲ್ದಾರ್ ಕಿರಣ್ ಗೌರಯ್ಯ, ಸಹಾಯಕ ಎಂಜಿನಿಯರ್ ಕಿರಣ್ ದೇವಯ್ಯ, ಸಿದ್ದರಾಜು, ಸೌಮ್ಯ, ಸಂಧ್ಯಾ, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಘಟಕದ ಅಧ್ಯಕ್ಷರಾದ ವಿ.ಪಿ.ಶಶಿಧರ, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷರಾದ ಭಾಸ್ಕರ ನಾಯ್ಕ್, ಹಾರಂಗಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಂಜಿನಿಯರ್ಗಳು ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ‘ಬಳಿಕ ಮಾತನಾಡಿದ ಡಾ.ಮಂತರ್ಗೌಡ ಅವರು ಹಾರಂಗಿ ಎಡದಂಡೆ ಮುಖ್ಯ…
ಮಡಿಕೇರಿ NEWS DESK ಅ.18 : ಕೊಡಗಿನ ಗಡಿ ಗ್ರಾಮ ಕರಿಕೆ ವ್ಯಾಪ್ತಿಯಲ್ಲಿ ಕಾಡಾನೆ ಮತ್ತು ಕಾಡುಹಂದಿಗಳ ಉಪಟಳ ಮಿತಿ ಮೀರಿದ್ದು, ಅಪಾರ ಬೆಳೆ ನಷ್ಟವಾಗಿದೆ. ಗ್ರಾಮದ ಆಲತ್ತಿಕಡವ್ ನಿವಾಸಿ ರಾಜನ್ ಎಂಬುವವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಅಡಿಕೆ ಮತ್ತು ತೆಂಗಿನ ಮರಗಳನ್ನು ನಾಶಪಡಿಸಿವೆ. ಅಕ್ಕಪಕ್ಕದ ನಿವಾಸಿಗಳ ಕುಡಿಯುವ ನೀರಿನ ಪೈಪ್ ಗಳನ್ನು ಜಖಂಗೊಳಿಸಿವೆ. ಇತರ ತೋಟಗಳಿಗೂ ಲಗ್ಗೆ ಇಟ್ಟಿರುವ ಕಾಡಾನೆಗಳು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿವೆ. ಈ ಭಾಗದ ಅನೇಕರು ಪೈಸಾರಿ ಭೂಮಿಯಲ್ಲೇ ಕಳೆದ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕೈಗೆ ಬಂದ ತುತ್ತು ಬಾಯಿಗೆ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷವೂ ಕಾಡಾನೆ ದಾಳಿಯಾಗಿದ್ದು, ಅರಣ್ಯ ಇಲಾಖೆ ಯಾವುದೇ ಪರಿಹಾರ ನೀಡಿಲ್ಲವೆಂದು ಕೃಷಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಶಾಸಕರು ಖುದ್ದು ಕರಿಕೆ ಗ್ರಾಮದ ಕೃಷಿಕರ ಸಮಸ್ಯೆಗಳನ್ನು ಅರಿತು ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ::: ಕಾಡುಹಂದಿಗಳ ಉಪಟಳ ::: ಒಂದೆಡೆ ಕಾಡಾನೆಗಳು ಕೃಷಿ ನಾಶ…
ಮಡಿಕೇರಿ NEWS DESK ಅ.18 : ಇದೇ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಸಂದರ್ಭದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು, ಜೊತೆಗೆ ಹೆಚ್ಚಿನ ಮಳೆ ಆಗಿರುವುದರಿಂದ ಮರಳು ಅಳವಡಿಸಿ ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು. ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಸೂಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವ ಸಂಬಂಧ ಹಾಡುಗಳನ್ನು…
ಸೋಮವಾರಪೇಟೆ ಅ.18 NEWS DESK : ಕೊಡಗು ಮಕ್ಕಳ ಗ್ರಂಥಾಲಯ, ಕೊಡಗು ಮಕ್ಕಳ ಹಕ್ಕುಗಳ ಕ್ಲಬ್, ನಾವು ಪ್ರತಿಷ್ಠಾನದ ವತಿಯಿಂದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ‘ಬಾಲ್ಯ ಕಟ್ಟುವ ಮಕ್ಕಳ ಹಬ್ಬ’ ಮಕ್ಕಳ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಶಿಬಿರಾರ್ಥಿಗಳ ಪಾಲಕರು ಉಪಸ್ಥಿರಿದ್ದು, ತಮ್ಮ ಮಕ್ಕಳ ಕಲಿಕೆ, ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾತನಾಡಿದರು. ಶಿಬಿರದಲ್ಲಿ ಭಾಗವಹಿಸಿರುವುದರಿಂದ ಗ್ರಾಮೀಣ ಕಲೆಯ ಹಳೆಯ ಆಟಗಳನ್ನು ಕಲಿತ್ತಿದ್ದಾರೆ. ಪೊಲೀಸರು, ಪತ್ರಕರ್ತರೊಂದಿಗೆ ಸಂವಾದ ನಡೆಸಿ ಕೆಲವೊಂದು ವಿಷಯಗಳನ್ನು ಮನೆಯರೊಂದಿಗೆ ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು. ಶಿಬಿರಾರ್ಥಿಗಳಾದ ತನಿಷಾ, ನಿಶ್ಮಿತ್, ಶಶಿ ಕುಮಾರ್, ಯಶ್ಮಿತಾ, ಬಾರ್ಗವಿ, ಕಲ್ಪನಾ, ಶ್ರೇಯಾ ಅವರು ತಾವೇ ಬರೆದ ಕವಿತೆ ವಾಚಿಸಿದರು. ಕತೆಗಳನ್ನು ಓದಿದರು. ದಿನಕ್ಕೊಂದು ಕಥೆ, ಅಜ್ಜಿಮನೆ ಹಳೆ ಆಟಗಳಾದ ಅಳಿ ಗುಳಿ ಮನೆ, ಪಗಡೆ, ಚೌಕಾಬಾರ, ಗೋಲಿ, ಚಿನ್ನಿ ದಾಂಡು, ಕುಂಟೆಬಿಲ್ಲೆ, ಕಡ್ಡಿ ಆಟ ಮತ್ತಿತರ ಹಳೆ ಆಟಗಳು, ಪರಿಸರ ಚಟುವಟಿಕೆಗಳಾದ ಬೀಜದುಂಡೆ ತಯಾರಿಕೆ, ಪ್ಲಾಸ್ಟಿಕ್ ಬ್ರಿಕ್ಸ್ ತಯಾರಿಕೆ, ಚಿತ್ರ ನೋಡಿ…
ವಿರಾಜಪೇಟೆ ಅ.18 NEWS DESK : ಹವಾಮಾನ ವೈಪರೀತ್ಯಗಳಿಂದ ಮತ್ತು ಬಾರಿ ಮಳೆಯ ಕಾರಣದಿಂದಾಗಿ ಗ್ರಾಮೀಣ ರಸ್ತೆಗಳು ಹಾನಿಯಾಗಿದ್ದು, ಮಳೆ ನಿಂತ ನಂತರದಲ್ಲಿ ಎಲ್ಲಾ ರಸ್ತೆಗಳು ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಸುಮಾರು 30ಲಕ್ಷ ರೂ.ವೆಚ್ಚದ ಒಟ್ಟು 6ಕಾಂಕ್ರೀಟ್ ರಸ್ತೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ನಿಧಿ ಯೋಜನೆ ಅಡಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಗಾಗಿ 17 ಕೋಟಿ ರೂಗಳು ಬಿಡುಗಡೆಗೊಳಿಸಿದ್ದು, ಕಾರ್ಮಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಸುಮಾರು 30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಗೆ ಒತ್ತು ನೀಡಿ ಅಭಿವೃದ್ಧಿ ಪಥದಲ್ಲಿ ಕೊಂಡ್ಯೊಯಲು ಸಾರ್ವಜನಿಕರು ಕೈಜೋಡಿಸಿ ಎಂದು ಹೇಳಿದರು. ಕಾರ್ಮಾಡು ಗ್ರಾ.ಪಂ ಸದಸ್ಯ ಕೆ.ಎನ್.ಹಂಸ ಮಾತನಾಡಿ, ಹಲವು ವರ್ಷಗಳಿಂದ…
ಮಡಿಕೇರಿ ಅ.18 NEWS DESK : ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ ಕಾವೇರಿ ತೀರ್ಥೋದ್ಭವದ ಮರುದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ದುರಂತ ಸ್ಥಳದಲ್ಲಿ ದೋಸೆ ಮತ್ತು ಪುಟ್ಟ್ ಭಕ್ಷ್ಯಗಳನ್ನಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಬೊತ್ತ್ ಬಳ್ಳಿ ಎಂದು ಕರೆಯಲಾಗುವ ಗಿಡಮೂಲಿಕೆಗಳಿಂದ ಹೆಣೆದಿರುವ ಬೊತ್ತ್ ಕಂಬದಲ್ಲಿ ದೋಸೆ ಮತ್ತು ಪುಟ್ಟ್ ಶಾಸ್ತ್ರೋಕ್ತವಾಗಿ ಇರಿಸಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು, ಕಾವೇರಿ ತೀರ್ಥೋದ್ಭವದ ಮರುದಿನ ಹಿರಿಯರಿಗೆ ದೋಸೆ ಮತ್ತು ಪುಟ್ಟ್ ಇಡುವ ಕ್ರಮ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದ್ದು, ಇದೊಂದು ಜನಪದ ಪದ್ಧತಿ. ಪ್ರತಿ ವರ್ಷ ಕಾವೇರಿ ತೊಲೆಯಾರ್ ಚಂಗ್ರಾಂದಿ ಆಚರಣೆಗೆ ಸಂಬಂಧಿಸಿದಂತೆ ಕೊಡವರು ತಮ್ಮ ಜೌಗು ಪ್ರದೇಶಗಳು, ಭತ್ತದ ಗದ್ದೆಗಳು, ಭತ್ತದ ಖಣಜ (ಬೋಟಿ ಕಳ), ದನದ ಸಗಣಿ ಗುಂಡಿ, ದನದ ಕೊಟ್ಟಿಗೆ, ಕುಡಿಯುವ ನೀರಿನ ಬಾವಿ,…






