ಮಡಿಕೇರಿ ಅ.18 NEWS DESK : ತೋಟಗಳಲ್ಲಿ ದುಡಿಯುವ ಕಾರ್ಮಿಕರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಬೇಕು ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಿಳಿಗೇರಿಯ ಟಾಟಾ ಕಾಫಿ ಸಂಸ್ಥೆಯಲ್ಲಿ ಕಳೆದ 36 ವರ್ಷಗಳಿಂದ ಕಾರ್ಯನಿರ್ವಹಿಸಿ ನಿವೃತ್ತರಾದ ಕಾರ್ಮಿಕ ಮಹಿಳೆ ಎ.ಯಶೋಧ ಅವರನ್ನು ಎಐಟಿಯುಸಿ ಸಂಘಟನೆ ವತಿಯಿಂದ ಬೀಳ್ಕೊಡಲಾಯಿತು. ಬಿಳಿಗೇರಿಯ ಟಾಟಾ ಕಾಫಿ ತೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರನ್ನು ಕೇವಲ ದುಡಿಸಿಕೊಳ್ಳುವುದಕ್ಕೆ ಮಾತ್ರ ಸೀಮಿತಗೊಳಿಸಬಾರದು. ಅವರ ಎಲ್ಲಾ ಸಂಕಷ್ಟಗಳಿಗೆ ಸ್ಪಂದಿಸಿ ನಿವೃತ್ತಿ ಹೊಂದುವಾಗ ಗೌರವದಿಂದ ಕಳುಹಿಸಿಕೊಡಬೇಕು ಎಂದರು. ಇತರ ಕಾರ್ಮಿಕ ಸಂಘಟನೆಗಳಿಗೆ ಮಾದರಿಯಾಗುವ ರೀತಿಯಲ್ಲಿ ಎಐಟಿಯುಸಿ ಸಂಘಟನೆ ಕಾರ್ಯನಿರ್ವಹಿಸುತ್ತಿದೆ. ಯಶೋಧ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು. ಹಿರಿಯರಾದ ನಾರಾಯಣ, ಸಂಜೀವ, ಕಾರ್ಮಿಕ ಮುಖಂಡರಾದ ಗಣೇಶ್, ಲೋಕೇಶ್, ಸೂರ್ಯ, ವೇಲಮ್ಮ, ಗಿರಿಜಾ, ಮುತ್ತಜ್ಜಿ ಮತ್ತಿತರ ಕಾರ್ಮಿಕರು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಅ.18 NEWS DESK : ಜೀವನದಿ ಕಾವೇರಿಯ ತೀರ್ಥೋದ್ಭವದ ಹಿನ್ನೆಲೆಯಲ್ಲಿ ನಗರದ ಶ್ರೀ ಕಾವೇರಿ ಭಕ್ತ ಮಂಡಳಿಯಿಂದ ಇಂದು (ಅ.18) ನಗರ ವ್ಯಾಪ್ತಿಯಲ್ಲಿ 70ನೇ ವರ್ಷದ ಶ್ರೀ ಕಾವೇರಿಯ ಮಂಟಪದೊಂದಿಗೆ ಭಕ್ತಾದಿಗಳಿಗೆ ತೀರ್ಥ ವಿತರಣೆ ಮಾಡಲಾಯಿತು. ಶ್ರೀ ಕಾವೇರಿ ಭಕ್ತ ಮಂಡಳಿಯ ಪದಾಧಿಕಾರಿಗಳು ತೀರ್ಥೋದ್ಭವದ ದಿನವಾದ ಗುರುವಾರ ತಲಕಾವೇರಿಗೆ ತೆರಳಿ ಪವಿತ್ರ ಕಾವೇರಿ ತೀರ್ಥವನ್ನು ಸಂಗ್ರಹಿಸಿ, ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯಲ್ಲಿನ ಶ್ರೀ ಕಾವೇರಿ ಭಕ್ತ ಮಂಡಳಿಗೆ ಅದನ್ನು ತಂದರು, ಇಂದು ಬೆಳಗ್ಗೆ ವಿಧ್ಯುಕ್ತ್ತವಾಗಿ ತೀರ್ಥಪೂಜೆಯನ್ನು ನೆರವೇರಿಸಲಾಯಿತು. ಕಾವೇರಿ ತೀರ್ಥ ಪೂಜೆ ಹಿನ್ನೆಲೆ ಇಂದು ಬೆಳಗ್ಗೆ ಗಣಪತಿ ಹೋಮ, ಕಳಸ ಕಟ್ಟುವ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದವನ್ನು ವಿತರಿಸಿದ ಬಳಿಕ ಕಾವೇರಿ ಮಾತೆಯ ಮೂರ್ತಿಯನ್ನು ಹೊಂದಿದ ಆಕರ್ಷಕ ಮಂಟಪದಲ್ಲಿ ಮಂಗಳ ವಾದ್ಯಗಳ ಸಹಿತ ನಗರದ ವಿವಿಧ ಬಡಾವಣೆಗಳಿಗೆ ಮೆರವಣಿಗೆ ತೆರಳಿ ಭಕ್ತರಿಗೆ ಕಾವೇರಿ ತೀರ್ಥವನ್ನು ವಿತರಿಸಲಾಯಿತು. ಶ್ರೀ ಕಾವೇರಿ ತೀರ್ಥ ವಿತರಣಾ ಪುಣ್ಯ ಕಾರ್ಯವನ್ನು…
ಮಡಿಕೇರಿ ಅ.18 NEWS DESK : ಹೆಜ್ಜೇನು ದಾಳಿಯಿಂದ ಮೃತಪಟ್ಟ ನಿಟ್ಟೂರು ಕಾರ್ಮಾಡು ಗ್ರಾಮದ ಕೊಟ್ಟಂಗಡ ಪೂಣಚ್ಚ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭ ಪೊನ್ನoಪೇಟೆ ಬ್ಲಾಕ್ ಅಧ್ಯಕ್ಷ ಮಿದೆರೀರ ನವೀನ್, ಬಾಳಲೆ ವಲಯ ಅಧ್ಯಕ್ಷ ವಿನು ಉತ್ತಪ್ಪ ಹಾಗೂ ಬಾನಂಡ ಪೃಥ್ವಿ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
ಕುಶಾಲನಗರ ಅ.18 NEWS DESK : ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ತಲಕಾವೇರಿ-ಪೂಂಪ್ ಹಾರ್ 14ನೇ ವರ್ಷದ ಕಾವೇರಿ ನದಿ ಜಾಗೃತಿ ಯಾತ್ರೆ ಅ.20 ರಿಂದ ಒಂದು ತಿಂಗಳ ಕಾಲ ನಡೆಯಲಿದೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ಸ್ವಚ್ಛ ಕಾವೇರಿ ಹಾಗೂ ಜಲ ಮೂಲಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯಾತ್ರೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಾಧು ಸಂತರು ಪಾಲ್ಗೊಳ್ಳಲಿದ್ದು, ಅ.19 ರಂದು ತಂಡ ತಲಕಾವೇರಿಗೆ ಆಗಮಿಸಲಿದೆ. ಅ.20 ರಂದು ಬೆಳಗ್ಗೆ ಯಾತ್ರ ತಂಡ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿ ಕಳಸಗಳಲ್ಲಿ ಪವಿತ್ರ ಕಾವೇರಿ ತೀರ್ಥ ಸಂಗ್ರಹಿಸಿ ಬೆಳಗ್ಗೆ 9 ಗಂಟೆಗೆ ವಿರಾಜಪೇಟೆ ಅರಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕಾವೇರಿ ಜಾಗೃತಿ ಯಾತ್ರೆಯ ಕರ್ನಾಟಕ ಮತ್ತು ತಮಿಳುನಾಡು ಪ್ರಾಂತದ ಸಂಚಾಲಕರು ಹಾಗೂ…
ನಾಪೋಕ್ಲು ಅ.18 : ಬಲ್ಲಮಾವಟಿಯ ನೇತಾಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಡಳಿತ ಮಂಡಳಿ ಅಧ್ಯಕ್ಷರಾಗಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಉಪಾಧ್ಯಕ್ಷರಾಗಿ ಚಂಗೇಟಿರ ಕುಮಾರ್ ಸೋಮಣ್ಣ, ಕರಾಸ್ಪಾಂಡೆಂಟಾಗಿ ತೋಲಂಡ ಅರುಣ್ ಕಾವೇರಪ್ಪ ಮತ್ತು ಗೌರವ ಕಾರ್ಯದರ್ಶಿಯಾಗಿ ಮುಕ್ಕಾಟಿರ ವಿನಯ್ ಆಯ್ಕೆಯಾದರು. ಸಭೆಯಲ್ಲಿ ಆಡಳಿತ ಮಂಡಳಿ ಸದಸ್ಯರಾದ ಬೊಟ್ಟೋಳಂಡ ಗಿರೀಶ್ ಮಾದಪ್ಪ, ತಾಪಂಡ ವರುಣ್ ಸುಬ್ಬಯ್ಯ, ಬೈರುಡ ವಸಂತ, ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ನೆರವಂಡ ಅಪ್ಪಣ್ಣ, ಅಪ್ಪಚ್ಚೀರ ಗೌತಮ್ ಕಾರ್ಯಪ್ಪ, ನಿಕಟಪೂರ್ವ ಗೌರವ ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಚೆಟ್ಟಳ್ಳಿ ಅ.18 NEWS DESK : ಚೆಟ್ಟಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 14ನೇ ವರ್ಷದ ಕಾವೇರಿ ಪ್ರತಿಮೆಗೆ ಪೂಜೆ ಹಾಗೂ ಕಾವೇರಿ ತೀರ್ಥ ವಿತರಣೆ ನೆರವೇರಿತು. ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವದ ನಂತರ ಚೆಟ್ಟಳ್ಳಿ ಸಹಕಾರ ಸಂಘದ ಮುಂದಿರುವ ಕಾವೇರಿ ಪ್ರತಿಮೆಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಣೆ ಹಾಗೂ ತೀರ್ಥವಿತರಿಸಲಾಯಿತು. ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಕಳೆದ 14 ವರ್ಷಗಳ ಹಿಂದೆ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಕಾವೇರಿ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ನಂತರದಲ್ಲಿ ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕಾವೇರಿ ತೀರ್ಥವನ್ನು ವಿತರಿಸಲಾಗುತ್ತಿದೆ. ಇಂತಹ ದೈವೀಕಾರ್ಯವನ್ನು ಮಾಡುವ ಮೂಲಕ ಸಂಘವು ಅಭಿವೃದ್ಧಿಯತ್ತ ಸಾಗುತಿದೆಂದರು. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಕುಶಾಲನಗರ ಅ.18 NEWS DESK : ಆದಿಕವಿ ಮಹರ್ಷಿ ವಾಲ್ಮೀಕಿಯವರು ಮಾನವೀಯತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಚಿಕ್ಕ ಅಳುವಾರ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ನಡೆದ ವಾಲ್ಮೀಕಿ ಜಯಂತಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದಲ್ಲಿ ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಗುರು ಹಿರಿಯರನ್ನು ಗೌರವಿಸುವ ಜೀವನದ ಮೌಲ್ಯಗಳು, ಮಾತೃತ್ವ, ತ್ಯಾಗ ಮನೋಭಾವ, ದೇಶಕ್ಕಾಗಿ ಸೇವೆ, ಪ್ರಕೃತಿ ಸೇವೆ ಮೊದಲಾದ ಸಾಮಾಜಿಕ ವಿಚಾರಗಳನ್ನು ಸಾರಿದ್ದಾರೆ. ಈ ನಿಟ್ಟಿನಲ್ಲಿ ಕೇವಲ ಆಚರಣೆಗೆ ಸೀಮಿತವಾಗಿರದೆ ಮಹರ್ಷಿ ವಾಲ್ಮೀಕಿಯವರ ಸಾಮಾಜಿಕ…
ವಿರಾಜಪೇಟೆ ಅ.17 NEWS DESK : ಹೃದಯಾಘಾತದ ಚಿಕಿತ್ಸಾ ವಿಧಾನಗಳಲ್ಲಿ ಒಂದಾದ ಸಿಪಿಆರ್ ಚಿಕಿತ್ಸಾ ವಿಧಾನದ ಅರಿವು ಪ್ರತಿಯೊಬ್ಬರಲ್ಲಿ ಇರಬೇಕು ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಸಲಹೆ ನೀಡಿದರು. ಜೆಎಸ್ಎಸ್ ಆಸ್ಪತ್ರೆ ತುರ್ತು ವಿಭಾಗ ಮತ್ತು ಐಸಿಎಟಿಟಿ ಫೌಂಡೇಶನ್, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಯುವ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಹೃದಯ ಶ್ವಾಶಕೋಷದ ಪುನರುಜೀವನ ಚಿಕಿತ್ಸೆ (ಸಿಪಿಆರ್) ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತದ ಜೀವನ ಶೈಲಿಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅದರ ಚಿಕಿತ್ಸ ವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕ. ಸಿಪಿಆರ್ ಸಹಾಯದಿಂದ ಹೃದಯಾಘಾತ ತಡೆಗಟ್ಟಲು ಸಾಧ್ಯ. ಉತ್ತಮ ದೈಹಿಕ ವ್ಯಾಯಾಮ ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ ಎಂದರು. ಮೈಸೂರು ಜೆಎಸ್ಎಸ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾದ್ಯಾಪಕರು ಹಾಗೂ ವೈದ್ಯರಾದ ಡಾ.ಆದರ್ಶ್ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ನಿಯಮಿತ ಆಹಾರ, ವ್ಯಾಯಾಮ, ಯೋಗ,…
ಮಡಿಕೇರಿ ಅ.17 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆ ನಡೆಸಿದರು. ಸತತ ಮೂರನೇ ವರ್ಷ ಸಾಂಪ್ರದಾಯಿಕ ಉಡುಪಿನಲ್ಲಿ 8ಕಿ.ಮೀ ಪಾದಯಾತ್ರೆಯ ಮೂಲಕ ತಲಕಾವೇರಿಗೆ ಪತ್ನಿ ಕಾಂಚನ್ ಪೊನ್ನಣ್ಣ ಸೇರಿದಂತೆ ಸಾವಿರಾರು ಭಕ್ತರೊಂದಿಗೆ ಆಗಮಿಸಿ ತಾಯಿ ಕಾವೇರಿ ಮಾತೆಗೆ ನಮಿಸಿದ್ದು ವಿಶೇಷವಾಗಿತ್ತು. ಪಾದಯಾತ್ರೆಯಲ್ಲಿ ತಳಿಯತಕ್ಕಿ ಬೊಳಕ್, ದುಡಿಕೊಟ್ಟ್ ಪಾಟ್ ನೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಪುರುಷರು, ಯುವಕರು, ಮಕ್ಕಳು ಪಾಲ್ಗೊಂಡಿದ್ದರು.
ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಸಂಪ್ರದಾಯದಂತೆ ತಾಯಿ ಕಾವೇರಿ ಮಾತೆಗೆ ಪೂಜಾ ವಿಧಿವಿಧಾನಗಳು ನಡೆದವು. ಪವಿತ್ರ ತೀರ್ಥೋದ್ಭವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಸಾಂಪ್ರದಾಯಿಕ ಉಡುಪಿನೊಂದಿಗೆ ಆರತಿ ತಟ್ಟೆಯೊಂದಿಗೆ ತಾಯಿ ಕಾವೇರಿ ಮಾತೆಯನ್ನು ಭಕ್ತರು ನಮಿಸಿದರು. ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ,…






