ಮಡಿಕೇರಿ ಏ.21 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನವು ಇದೇ 23 ರಿಂದ ಮೇ, 22 ರವರೆಗೆ ನಡೆಯಲಿದ್ದು, ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಮಂಗಳವಾರ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸುಗೊಳಿಸಬೇಕು ಎಂದರು. ಜಾನುವಾರುಗಳು ರೈತರ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಜವಾಬ್ದಾರಿ ಎಲ್ಲರದ್ದಾಗಿದೆ. ಹೈನುಗಾರಿಕೆ ರೈತರ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಜಾನುವಾರುಗಳ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ ಎಂದರು. ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ಮಾತನಾಡಿ…
ಲೇಖಕ: admin
ಪಿರಿಯಾಪಟ್ಟಣ ಏ.21 NEWS DESK : ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಮೈಸೂರು ವತಿಯಿಂದ ಪಿರಿಯಾಪಟ್ಟಣದ ಪಾರೆಕೊಪ್ಪಲು ಆಯೋಜಿಸಲಾಗಿದ್ದ ಪಿರಿಯಾಪಟ್ಟಣ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಸ್ಥಾನ, ಪಿರಿಯಾಪಟ್ಟಣ ತಾಲ್ಲೂಕು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ ಹಾಗೂ ಬೆಟ್ಟದ ಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಹಾಗೂ ವಿವಿಧ ಇಲಾಖೆಗಳ ಒಟ್ಟಾರೆ ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಮಾತನಾಡಿದರು.
ವಿರಾಜಪೇಟೆ ಮಾ.21 NEWS DESK : ಬೇಟೋಳಿ ಗ್ರಾಮದ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಚಂಡಿಕಾ ಹೋಮ ನೆರವೇರಿತು. ದೇವಸ್ಥಾನದಲ್ಲಿ ಹಬ್ಬದ ಹಿಂದಿನ ದಿವಸವೇ ಸಂಜೆ ಅರ್ಚಕರು ವಿಶೇಷ ಪ್ರಾರ್ಥನೆಯೊಂದಿಗೆ ಪಾರಾಯಣವನ್ನು ನಡೆಸಿದರು. ಮಹೋತ್ಸವದ ದಿವಸ ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ದೇವಸ್ಥಾನದ ಆವರಣದಲ್ಲಿರುವ ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ ಹಾಗೂ ಶ್ರೀ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಅರ್ಚಕರು ಸಲ್ಲಿಸಿದರು. ನಂತರ ಮಹಾ ಗಣಪತಿ ಹೋಮವನ್ನು ನೆರವೇರಿಸಲಾಯಿತು. ಹೂವಿನ ಅಲಂಕೃತ ಮಂಟಪದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿಯ ಫೋಟೋವನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ನೆರವೇರಿಸಲಾಯಿತು. ಅದರೊಟ್ಟಿಗೆ ಮಹಾ ಚಂಡಿಕಾ ಹೋಮದ ಆಚರಣೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಅರ್ಚಕರು ಸತ್ಯನಾರಾಯಣ ಸ್ವಾಮಿಗೆ ಸಂಕಲ್ಪ…
ಮಡಿಕೇರಿ ಮಾ.21 NEWS DESK : ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮದ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ಹಲವಾರು ಅವಕಾಶಗಳಿವೆ ಎಂದು ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ತರಬೇತುದಾರ ಮತ್ತು ವೃತ್ತಿ ಮಾಗ೯ದಶ೯ಕ, ಆರ್.ಕೆ.ಬಾಲಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಮಂಗಳವಾರ ಕುಶಾಲನಗರ ಗೌಡ ಸಮಾಜದಲ್ಲಿ ಆಯೋಜಿಸಿದ್ದ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಕರ್ಯಕ್ರಮದಲ್ಲಿ ಅವರು ‘ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕೊಡಗಿನಲ್ಲಿ ಸುಮಾರು 1.05 ಲಕ್ಷ ಹೆಕ್ಟೇರ್ ಕಾಫಿ ತೋಟವಿದೆ. ಭಾರತದ ಒಟ್ಟು ಕಾಫಿ ಉತ್ಪಾದನೆಯ ಸುಮಾರು ಶೇ.30ರಷ್ಟು ಇಲ್ಲೇ ಬೆಳೆಯುತ್ತದೆ. ಆದರೆ ಕಳೆದ ಎರಡು ದಶಕಗಳಲ್ಲಿ ಕಾಫಿ ಬೆಲೆಯ ಏರಿಳಿತ, ಹವಾಮಾನ ಬದಲಾವಣೆ, ಕೂಲಿ ಕರ್ಮಿಕರ ಕೊರತೆ, ಕಾಡಾನೆ ಹಾವಳಿ ಇವೆಲ್ಲ ರೈತರ…
ಮಡಿಕೇರಿ ಮಾ.20 NEWS DESK : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇ6 ರಿಂದ 10ರವರೆಗೆ ಕಕ್ಕಬ್ಬೆಯ ಪ್ರೌಢ ಶಾಲಾ ಮೈದಾನದಲ್ಲಿ ಜಮಾಅತ್ ಮಟ್ಟದ “ಕೊಡಗು ಕಪ್” ಕ್ರಿಕೆಟ್ ಸೀಸನ್-2 ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ಜಮಾಅತ್ಗಳಿಗೆ ಸಂಬಂಧಿಸಿದ ತಂಡಗಳು ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸಲಿವೆ. ಪಂದ್ಯಾವಳಿಯಲ್ಲಿ 60 ರಿಂದ 70 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆಸಕ್ತ ತಂಡಗಳು ಮೇ1ರ ಒಳಗಾಗಿ 3ಸಾವಿರ ರೂ. ಪ್ರವೇಶ ಶುಲ್ಕದೊಂದಿಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.9845225284ನ್ನು ಸಂಪರ್ಕಿಸಬಹುದೆಂದರು. ಪಂದ್ಯಾವಳಿ ವಿಜೇತ ತಂಡಕ್ಕೆ 66,666 ರೂ. ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 33,333 ರೂ. ಮತ್ತು ಆಕರ್ಷಕ ಟ್ರೋಫಿ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಿಗೂ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುತ್ತದೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಪಂದ್ಯಗಳು 6 ಓವರ್ಗಳಿಗೆ ಸೀಮಿತವಾಗಿ ನಡೆಯಲಿದೆ. ತಂಡಗಳಿಗೆ ಸಮವಸ್ತ್ರ…
ಮಡಿಕೇರಿ ಏ.21 NEWS DESK : ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು. ಕೊಡವ ನರಮೇಧ ದುರಂತ ಹತ್ಯಾಕಾಂಡ ಸ್ಮಾರಕ ಸ್ಥಳ ದೇವಟ್ ಪರಂಬುವಿಗೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಸದಸ್ಯರು ಹಿರಿಯರನ್ನು ಸ್ಮರಿಸಿ ಪುಷ್ಪನಮನ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ವೆನಿಸ್ ಚಾರ್ಟರ್ 1964ರ ವಿಧಿ 7 ಮತ್ತು ಭಾರತೀಯ ಸಂವಿಧಾನದ ವಿಧಿ 49ರ ಅಡಿಯಲ್ಲಿ ದೇವಟ್ ಪರಂಬ್ ಹತ್ಯಾಕಾಂಡ ಸ್ಥಳದಲ್ಲಿ “ಅಂತಾರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯಾಕಾಂಡ ಸ್ಮಾರಕ’ವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ದೇವಟ್ ಪರಂಬ್ ದುರಂತ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಹತ್ಯಾಕಾಂಡ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ಸೂಕ್ಷ್ಮ, ಏಕ-ಜನಾಂಗೀಯ, ಆದಿಮಸಂಜಾತ, ಅನಿಮಿಸ್ಟಿಕ್ ನಂಬುಗೆಯ, ಪ್ರಕೃತಿಯನ್ನು ಆರಾಧಿಸುವ ಕೊಡವ ಯೋಧ ಕುಲಕ್ಕೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಕೊಡವ ಯೋಧ ಕುಲವನ್ನು ಭಾರತೀಯ ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ…
ಮಡಿಕೇರಿ NEWS DESK ಏ.21 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.22 ರ ಪಂದ್ಯಗಳು>>> *ಮೈದಾನ 1* ಬೆಳಿಗ್ಗೆ 8 ಗಂಟೆಗೆ ಮೋಟನಾಳಿರ ಮತ್ತು ಚೌರೀರ, 9.30ಕ್ಕೆ ಮಚ್ಚಮಾಡ ಮತ್ತು ಸರ್ಕಂಡ, 11ಕ್ಕೆ ಪಾಂಡ್ಯoಡ ಮತ್ತು ಪೊನ್ನಚಂಡ, ಮಧ್ಯಾಹ್ನ 12ಕ್ಕೆ ಮುಕ್ಕಾಟಿರ (ಬೇತ್ರಿ) ಮತ್ತು ಮಾದೆಯಂಡ (ಮಾದಾಪುರ) ಹಾಗೂ 1 ಗಂಟೆಗೆ ಗೀಜಿಗಂಡ ಮತ್ತು ಬೊಳ್ಳೆಪಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೇರಂಡ ಮತ್ತು ಕೋಳೇರ, 10ಕ್ಕೆ ಮೂಕಳೇರ ಮತ್ತು ಕೂತಂಡ, 11ಕ್ಕೆ ಪಾರುವಂಡ ಮತ್ತು ಬೊಳ್ಳಚಟ್ಟೀರ, ಮಧ್ಯಾಹ್ನ 12ಕ್ಕೆ ಕೋಲುಮಾಡಂಡ (ರ್ವತ್ತೊಕ್ಲು) ಮತ್ತು ಚೊಟ್ಟಂಗಡ, 1ಕ್ಕೆ ಮುಕ್ಕಾಟಿರ (ಹರಿಹರ ಬೆಳ್ಳೂರು) ಮತ್ತು ಕಂಗoಡ *ಮೈದಾನ 3* ಮಹಿಳಾ ಕ್ರಿಕೆಟ್* ಬೆಳಿಗ್ಗೆ 10 ಗಂಟೆಗೆ ಮಂಡoಗಡ ಮತ್ತು ಮಚ್ಚಮಾಡ (ತಾವಳಗೇರಿ), 11ಕ್ಕೆ ಪಾಸುರ ಮತ್ತು ಕಟ್ಟೇರ (ಅರಮೇರಿ), ಮಧ್ಯಾಹ್ನ 12ಕ್ಕೆ ಚೆಕ್ಕೇರ ಮತ್ತು ಅಚ್ಚಪ್ಪಂಡ, 1ಕ್ಕೆ…
ಮಡಿಕೇರಿ NEWS DESK ಏ.21 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.21 ರ ವಿಜೇತ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಕಲಿಯಂಡ ಮತ್ತು ಪುದಿಯೊಕ್ಕಡ ತಂಡಗಳ ನಡುವಿನ ಪಂದ್ಯವನ್ನು ಪುದಿಯೊಕ್ಕಡ 43 ರನ್ ಗಳಿಂದ ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪುದಿಯೊಕ್ಕಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಸೇರಿಸಿತು. ಕಲಿಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ತೆಕ್ಕಡ ಮತ್ತು ಕರಿನೆರವಂಡ ನಡುವಿನ ಪಂದ್ಯದಲ್ಲಿ ಕರಿನೆರವಂಡ 8 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆಕ್ಕಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಕರಿನೆರವಂಡ 4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ…
ಮಡಿಕೇರಿ ಏ.21 NEWS DESK : ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದ ವಾರ್ಷಿಕ ಪ್ರತಿಷ್ಠಾ ದಿನಾಚರಣೆ ಏ.26 ರಂದು ಜರುಗಲಿದೆ. ಶ್ರೀ ಆಂಜನೇಯ ದೇವಾಲಯದ ಆವರಣದಲ್ಲಿ ನೂತನವಾಗಿ ನವಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಕ್ಷೇತ್ರ ತಂತ್ರಿಗಳಾದ ಉಚ್ಚಿಲದ ವೇದಬ್ರಹ್ಮ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆ ಜರುಗಲಿದೆ. ಏ.25 ರಂದು ಸಂಜೆ 6ರಿಂದ ಪ್ರಾರ್ಥನೆ, ಆಂಜನೇಯ ಗುಡಿಯಲ್ಲಿ ಪುಣ್ಯಾಹ, ಆರೂಢ ಪರಿಗ್ರಹ ಹಾಗೂ ನವಗ್ರಹ ಬಿಂಬ ಪರಿಗ್ರಹ, ಜಲಾಧಿವಾಸ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ ಹಾಗೂ ಮಹಾಪೂಜೆ ನಡೆಯಲಿದೆ. ಏ.26 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಬಿಂಬ ಶುದ್ಧಿ, ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರಿಂದ 11 ಗಂಟೆಗೆ ಆಂಜನೇಯ ದೇವಾಲಯದ ಆವರಣದಲ್ಲಿ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ನವಗ್ರಹ ಪ್ರತಿಷ್ಠಾಪನೆ, ಸಾನಿಧ್ಯ ಕಳಶ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆಯಾಗಲಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ…
ಮಡಿಕೇರಿ NEWS DESK ಏ.21 : ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಸಂಭೋದಿಸಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೀಳುಮಟ್ಟದ ರಾಜಕೀಯ ನಡೆ ಖಂಡನೀಯವೆoದು ಕೊಡಗು ಜಿಲ್ಲಾ ಬಿಜೆಪಿಯ ವಕ್ತಾರ ಬಿ.ಕೆ.ಅರುಣ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮಿಳುನಾಡು ಚುನಾವಣಾ ಪ್ರಚಾರದ ಸಂದರ್ಭ ಮಲ್ಲಿಕಾರ್ಜುನ ಖರ್ಗೆ ಅವರು ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ದೇಶದ ಜನ ಮಾತ್ರವಲ್ಲದೆ ಇಡೀ ವಿಶ್ವವೇ ಮೆಚ್ಚಿಕೊಂಡಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಲಘುವಾಗಿ ಮಾತನಾಡುವ ಮೂಲಕ ಖರ್ಗೆ ಅವರು ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದ್ದಾರೆ. ಜನಸ್ನೇಹಿ ಆಡಳಿತದ ಮೂಲಕ ದೇಶವನ್ನು ಪ್ರಗತಿಪಥದತ್ತ ಸಾಗಿಸಿ ಮೂರು ಬಾರಿ ಅಧಿಕಾರಕ್ಕೇರಿರುವ ನರೇಂದ್ರ ಮೋದಿ ಅವರ ವಿರುದ್ಧ ಕಟು ಭಾಷೆಯನ್ನು ಬಳಸುವ ಮೊದಲು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿರುವ ಖರ್ಗೆ ಅವರು ಮೊದಲು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಸಾಹಸವನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ.…






