ಲೇಖಕ: admin

ಮಡಿಕೇರಿ ಡಿ.31 NEWS DESK : ನಗರದ ಸುದರ್ಶನ್ ವೃತ್ತದ ಬಳಿ ಸರ್ಕಾರದ ಅನುದಾನದಲ್ಲಿ  ಡಾ. ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಭೂಮಿ ಪೂಜೆ ನಡೆದಿದೆ. ಈ ಹಂತದಲ್ಲಿ ಕೆಲವರು ಸರ್ಕಾರಿ ನೌಕರರಿಂದ ದೇಣಿಗೆ ಸಂಗ್ರಹಿಸಲು ಹೊರಟಿರುವುದನ್ನು ತೀವ್ರವಾಗಿ ವಿರೋಧಿಸಿರುವ ದಸಂಸ ವಿಭಾಗೀಯ ಸಂಯೋಜಕ ಎಂ.ಎನ್.ರಾಜಪ್ಪ, ಇಂತಹ ದುಸ್ಸಾಹಸಕ್ಕೆ ಕೈಹಾಕಬಾರದೆಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದರ್ಶನ್ ವೃತ್ತದ ಪಕ್ಕದಲ್ಲಿರುವ ನಾಲ್ಕು ಸೆಂಟ್ ಸರ್ಕಾರಿ ಜಾಗದಲ್ಲಿ ಸರ್ಕಾರದ ವತಿಯಿಂದ ಸುಮಾರು 44 ಲಕ್ಷ ರೂಗಳ ವೆಚ್ಚದಲ್ಲಿ ಅಂಬೇಡ್ಕರ್ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗುತ್ತದೆ. ಅದರ ನಿರ್ವಹಣೆಗಾಗಿ  ಶಾಸಕರು ಕೆಲವು ದಲಿತ ಸಂಘಟನೆಗಳು ಮುಖಂಡರನ್ನು ಮೇಲುಸ್ತುವಾರಿ ಸಮಿತಿ ಮಾಡಿದ್ದಾರೆ. ಇವರುಗಳಿಗೆ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸುವುದಷ್ಟೇ  ಕೆಲಸ. ಹೀಗಿದ್ದೂ ಇತ್ತೀಚೆಗೆ  ಸಮಿತಿಯ ಕೆಲವು ಸದಸ್ಯರು ಸರ್ಕಾರಿ ನೌಕರರಿಂದ, ಅಧಿಕಾರಿಗಳಿಂದ ದೇಣಿಗೆ ಪಡೆಯಲು ಹೊರಟಿರುವುದು ತಮ್ಮ ಗಮನಕ್ಕೆ ಬಂದಿದೆ. ಇದನ್ನು ಸಹಿಸಲು ಸಾಧ್ಯವಿಲ್ಲವೆಂದು ಹೇಳಿದರು. ಈಗಾಗಲೇ ಸರ್ಕಾರವೇ ಪುತ್ಥಳಿ ನಿರ್ಮಾಣಕ್ಕೆ ಅನುದಾನವನ್ನು ಒದಗಿಸಿರುವಾಗ, ಸರ್ಕಾರಿ ನೌಕರರಿಂದ ದೇಣಿಗೆ…

Read More

ವಿರಾಜಪೇಟೆ ಡಿ.31 NEWS DESK : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಅಮ್ಮತ್ತಿಯ ಮಾಚಿಮಂಡ ದೇವಯ್ಯ ಮೆಮೋರಿಯಲ್ ಪಬ್ಲಿಕ್ ಸ್ಕೂಲ್‍ನ ವ್ಯವಸ್ಥಾಪಕರು ಹಾಗೂ ಪ್ರಾಂಶುಪಾಲರಾದ ಇಂದು ಗಣಪತಿ ಅಭಿಪ್ರಾಯಪಟ್ಟರು. ಅಮ್ಮತ್ತಿ ಪಟ್ಟಣದ ಮಾಚಿಮಂಡ ದೇವಯ್ಯ ಮೆಮೋರಿಯಲ್ ಪಬ್ಲಿಕ್ ಸ್ಕೂಲ್‍ನ ಸಭಾಂಗಣದಲ್ಲಿ ನಡೆದ ಮೆಗಾ ಕಾರ್ನಿಪೋಪ್ಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ದೊರೆಯುತ್ತಿದೆ. ಇದರ ಜತೆಯಲ್ಲಿಯೇ ಸಾಂಸ್ಕೃತಿಕ ಚಟುವಟಿಕೆಗಳು ಜರುಗುತ್ತಿರು ವುದು ಮಕ್ಕಳನ್ನು ಉತ್ತೇಜಿಸಿದಂತಾಗುತ್ತಿದೆ. ಸಾಂಸ್ಕೃತಿಕ ಕಲೆಗಳನ್ನು ಮಕ್ಕಳಿಂದ ಪ್ರದರ್ಶಿಸುವ ಮೂಲಕ ಅವರಿಗೆ ನಮ್ಮ ಸಂಸ್ಕೃತಿಯ ಅರಿವು ಮೂಡಿಸಿದಂತಾಗುತ್ತಿದೆ. ಈ ನಿಟ್ಟಿನಲ್ಲಿ ದೇಶೀಯ ಪರಂಪರೆಯನ್ನು ಬಿಂಬಿಸುವ ಕಲೆಗಳು ವಿದ್ಯಾರ್ಥಿಗಳಿಂದ ಮೂಡಿ ಬರಲು ಶಿಕ್ಷಕರು ಶ್ರಮಿಸುತ್ತಿದ್ದಾರೆ. ಆಧುನಿಕ ಯುಗಕ್ಕೆ ಮಾರುಹೋಗುತ್ತಿರುವ ಯುವ ಜನತೆಗೆ ಐತಿಹಾಸಿಕ ವಿಚಾರವನ್ನು ತಿಳಿ ಹೇಳುವ ಅಗತ್ಯ ಇದೆ. ಪಠ್ಯದಲ್ಲಿ ಸಾಮಾಜಿಕ ವಾದ ಎಲ್ಲಾ ವಿಚಾರಗಳನ್ನು ಏಕಕಾಲದಲ್ಲಿ ಹೇಳಲು ಸಾಧ್ಯವಿಲ್ಲ. ಆದರೆ ಕಲೆಗಳ ಮುಖೇನಾ ತಿಳಿಸಲು ಸಾಧ್ಯವಿದೆ. ವಿದ್ಯಾರ್ಥಿಗಳ ಪ್ರತಿಭೆ…

Read More

ವಿರಾಜಪೇಟೆ ಡಿ.31 NEWS DESK : ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆ ವಲಯದ ಅರ್ವತ್ತೋಕ್ಲು ಕಾರ್ಯ ಕ್ಷೇತ್ರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಕಲಿಕಾ ಕೇಂದ್ರ (ಟ್ಯೂಷನ್ ಕ್ಲಾಸ್) ಉದ್ಗಾಟನಾ ಕಾರ್ಯಕ್ರಮ ನಡೆಯಿತು. ಶಾಲೆಯ ಪ್ರಭಾರ ಮುಖ್ಯೋಪದ್ಯಾಯರಾದ ರೇವತಿ ಅವರು ಕಾರ್ಯಕ್ರಮಕ್ಕೆ ಉದ್ಘಾಟಿಸಿ ಮಾತನಾಡಿ, ಶಿಕ್ಷಕರಿಂದ ಅನೇಕ ಕಾರ್ಯಕ್ರಮಗಳ ಅನುಷ್ಠಾನಗಳು ನಡೆಯುತ್ತಿದ್ದು, ಅದರೊಂದಿಗೆ ಟ್ಯೂಷನ್ ಕ್ಲಾಸ್ ಕೂಡ ಒಂದಾಗಿದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯನ್ನು ಆಯ್ಕೆ ಮಾಡಿಕೊಂಡಿರುವುದು ಸಂತೋಷದ ವಿಷಯವಾಗಿದೆ. ಹಾಗೆಯೇ ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ವಲಯದ ಮೇಲ್ವಿಚಾರಕರಾದ ನಾಗರಾಜ್ ಅವರು ಮಕ್ಕಳಿಗೆ ಮಾಹಿತಿ ನೀಡಿ ಶಾಲೆಯಲ್ಲಿ ಕಲಿತಂತ ಪಾಠವನ್ನು ಯಾವತ್ತು ಮರೆಯಲು ಆಗುವುದಿಲ್ಲ. ಇಂದಿನ ಮಕ್ಕಳೆ ನಾಳಿನ ಪ್ರಜೆಗಳು ಎಂಬುದರ ಬಗ್ಗೆ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಶಿಷ್ಯವೇತನ, ಶಾಲೆಗಳಿಗೆ ಸಲಕರಣೆ ನೀಡುವುದರ ಬಗ್ಗೆ ಹಾಗೂ ಈ ವರ್ಷದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆಯಬೇಕು ಓದುವುದರ ಬಗ್ಗೆ ಹೆಚ್ಚು ಒಲವನ್ನು ನೀಡಬೇಕೆಂದು…

Read More

ಮೈಸೂರು, ಡಿ.31 NEWS DESK : ಅಕ್ರಮವಾಗಿ ದೇಶದೊಳಗೆ ನುಸುಳುವವರ ಸಂಖ್ಯೆ ಹೆಚ್ಚಾಗಿದೆ. ಅತ್ಯಂತ ಕಳವಳಕಾರಿ ವಿಷಯ ಎಂದರೆ ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಒತ್ತಾಯಿಸಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ಪತ್ರ ಬರೆದಿರುವ ಸಂಸದ ಯದುವೀರ್‌ ಒಡೆಯರ್‌ ಇಂಥ ವಿಷಯಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. :: ವೀಡಿಯೋ ವೈರಲ್‌ ::  ಇನ್‌ಸ್ಟಾಗ್ರಾಮ್‌ ವೀಡಿಯೋದಲ್ಲಿ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರು (ಆಟೋ ಚಾಲಕರು) ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ನಾವು ವಾಸಿಸುತ್ತಿದ್ದು, ಇಲ್ಲಿ ಯಾವುದೇ ಭಯ, ಆತಂಕವಿಲ್ಲ. ಅಕ್ರಮವಾಗಿ ಇಲ್ಲಿ ನೆಲಸಬಹುದು ಎಂದು ಹೇಳಿಕೊಂಡಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಎಂದು ಯದುವೀರ್‌ ತಿಳಿಸಿದ್ದಾರೆ. ಇದು ಒಂದು ವೇಳೆ ನಿಜವಾದರೆ, ಪೊಲೀಸ್‌ ಇಲಾಖೆಯ ವೈಫಲ್ಯ ಎಂಬುದು ಕಂಡುಬರುತ್ತದೆ.…

Read More

ಸೋಮವಾರಪೇಟೆ ಡಿ.31 NEWS DESK : ಪಟ್ಟಣದ ಆಂಜನೇಯ ದೇವಾಲಯ ಸಮೀಪದ ಹೌಸಿಂಗ್ ಬೋರ್ಡ್ ನಿವಾಸಿ ನಿವೃತ್ತ ಇಂಜಿನಿಯರ್ ಕೆ.ಎಸ್.ನಾಗರಾಜ್(90)ಇಂದು (ಡಿ.31) ಸಂಜೆ ನಿಧನರಾಗಿದ್ದಾರೆ.  ಮೃತರು ಪತ್ನಿ ಸುನಂದಾ ನಾಗರಾಜ್, ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂದು, ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಜ.1 ರಂದು ಸಂಜೆ 5 ಗಂಟೆಗೆ ಅವರ ಹುಟ್ಟೂರು ಶನಿವಾರಸಂತೆ ಸಮೀಪದ ಕಿತ್ತೂರು ಗ್ರಾಮದಲ್ಲಿ ನಡೆಯಲಿದೆ. ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಸೋಮವಾರಪೇಟೆ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಅಂತಿಮ ದರ್ಶನ ಪಡೆಯಬಹುದಾಗಿದೆ.

Read More

ಮಡಿಕೇರಿ ಡಿ.31 NEWS DESK :  ಕೇರಳ ರಾಜ್ಯದ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಮತ್ತು ಗಣ್ಯರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭಾಗವಹಿಸಿದರು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರೀ ಗುರುಗಳಿಗೆ ನಮಿಸಲಾಯಿತು. ಬಳಿಕ ಮಠದ ಯಾಯಾತ್ರಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನಡೆ ಬರೆದ ದರ್ಶನಿಕ ಶ್ರೀ ನಾರಾಯಣ ಗುರುಗಳ ಜೀವನ ಹಾಗೂ ಉಪದೇಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಕೇರಳ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು…

Read More

ಮಡಿಕೇರಿ ಡಿ.31 NEWS DESK : ಕಳೆದೆರಡು ಶೈಕ್ಷಣಿಕ ವರ್ಷಗಳಲ್ಲಿ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿನ ಶಾಲೆಗಳಲ್ಲಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರನ್ನು ವಿರಾಜಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ  ಸನ್ಮಾನಿಸಲಾಯಿತು.  ಬಿಟ್ಟಂಗಾಲ ಕೊಡಗು ಹೆಗ್ಗಡೆ ವಿದ್ಯಾಭಿವೃದ್ಧಿ ಸಂಘ ಮತ್ತು ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಗಾಯತ್ರಿ, ಕೇಚಂಡ ಪ್ರಸನ್ನ, ಮದ್ದಂಡ ಮೋಣ್ಣಪ್ಪ, ಕುಪ್ಪಣಮಾಡ ಮಾದಪ್ಪ, ಕಾಡೇಮಾಡ ಸುಬ್ಬಯ್ಯ, ಮಚ್ಚಂಡ ಬೋಪಣ್ಣ, ಅಪ್ಪಂಡೆರಂಡ ದೇವಕ್ಕಿ, ಕೊಂಗೆಪ್ಪಂಡ ಕುಟ್ಟಪ್ಪ, ಪ್ರೇಮಕುಮಾರಿ, ಶಿವಣ್ಣ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯದರ್ಶಿ ಪಡಿಞರಂಡ ಪ್ರಭು ಕುಮಾರ್ ಸನ್ಮಾನಿತ ಶಿಕ್ಷಕರ ಸಾಧನೆಯನ್ನು ವಿವರಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ವರ್ಷಂಪ್ರತಿ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ನಿರಂತರವಾಗಿ ಉತ್ತಮ ಸಾಧನೆಯನ್ನು ತೊರುತ್ತಾ ಬರುವುದರೊಂದಿಗೆ ಕೊಡಗಿನಲ್ಲಿ ಶಾಲಾ ಹಂತದ ವ್ಯಾಸಾಂಗ ಮುಗಿಸಿದವರು ಹಾಕಿಯಲ್ಲಿ ಒಲಿಂಪಿಕ್ಸ್ ನಲ್ಲೂ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರುವುದರ ಹಿಂದೆ ಶಾಲಾ ಹಂತದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದದ್ದಾಗಿದೆಯೆಂದು ಅಭಿಪ್ರಾಯ…

Read More

ಮಡಿಕೇರಿ ಡಿ.31 NEWS DESK : ನಗರದ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಜ.8 ರಂದು ಮಡಿಕೇರಿಯಲ್ಲಿ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ದೈವಜ್ಞ ಬ್ರಾಹ್ಮಣ ಕಟ್ಟಡ ಸಮಿತಿ ಅಧ್ಯಕ್ಷ ಬಿ.ಹೆಚ್.ಉಲ್ಲಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಫಲಾನ್ಯಾನ, ಗುರುಗಣಪತಿ ಪೂಜೆ, ಸ್ವಸ್ತಿ ಪೂಣ್ಯಾವಾಚನ, ಸತ್ಯನಾರಾಯಣ ವೃತ ಕಥಾ ಪ್ರಾರಂಭ ನಡೆಯಲಿದೆ ಎಂದು ತಿಳಿಸಿದರು. ಮಧ್ಯಾಹ್ನ ಅನ್ನದಾನ ನಡೆಯಲಿದ್ದು, ಸಂಜೆ 4.30 ಗಂಟೆಗೆ ಶ್ರೀಗಳ ಪುರಪ್ರವೇಶವಾಗಲಿದೆ. ನಂತರ ಪೂರ್ಣ ಕುಂಭ ಮೆರವಣಿಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ನಡೆಯಲಿದೆ. ಬಳಿಕ ಸಮಾಜದ ವತಿಯಿಂದ ಶ್ರೀಗಳಿಗೆ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಲಿದೆ.…

Read More

ಬೆಂಗಳೂರು ಡಿ.31 NEWS DESK : 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ – ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.  ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.  ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರನ್ನು ಸಜ್ಜುಗೊಳಿಸಲಾಗುತ್ತಿದೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಪೊಲೀಸರು ನೀಡುವ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಿ, ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸಿ ಎಂದು ಎಂದು ತಿಳಿಸಿದರು.

Read More

ಮಡಿಕೇರಿ ಡಿ.31 NEWS DESK : ಕುಶಾಲನಗರದ ಹೋಟೆಲ್ ಉದ್ಯಮಿ ಅತಿಥಿ ಭಾಸ್ಕರ್ ಅವರು ಅನಾರೋಗ್ಯದಿಂದ ಇಂದು (ಡಿ.31) ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪಾರ್ಥಿವ ಶರೀರ ಮಧ್ಯಾಹ್ನ 3 ಗಂಟೆ ವೇಳೆಗೆ ಕುಶಾಲನಗರ ತಲುಪಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಮಡಿಕೇರಿಯಲ್ಲಿ ಹಲವು ವರ್ಷಗಳ ಕಾಲ ಅತಿಥಿ ಹೋಟೆಲ್ ನಡೆಸುತ್ತಿದ್ದ ಭಾಸ್ಕರ್ ಅವರು ನಂತರ ಕುಶಾಲನಗರದ ಪ್ರವೇಶದಲ್ಲಿ ಅತಿಥಿ ರೆಸ್ಟೋರೆಂಟ್ ಆರಂಭ ಮಾಡಿದ್ದರು. ಕ್ರಿಯಾಶೀಲ ಪ್ರವಾಸೋದ್ಯಮಿ ಆಗಿದ್ದ ಭಾಸ್ಕರ್ ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್ ನಲ್ಲಿ ಸಕ್ರಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಭಾಸ್ಕರ್ ನಿಧನಕ್ಕೆ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕಾರ್ಯಪ್ಪ, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Read More