ನಾಪೋಕ್ಲು ಸೆ.28 NEWS DESK : ಕಾರುಗುಂದ ಗೌಡ ಸಮಾಜದಲ್ಲಿ 1855ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಮಡಿಕೇರಿ ತಾಲೂಕು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಟ್ಟಗೇರಿ ವಲಯದ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಉಜಿರೆ ಸಂಶೋಧನಾ ಕೇಂದ್ರ ಲಾಯಿಲ, ಬೆಂಗಳೂರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಾರ್ಗದರ್ಶನದೊಂದಿಗೆ ಚೇರಂಬಾಣೆ ಗೌಡ ಸಮಾಜ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಬೆಟ್ಟಗೇರಿ ಗ್ರಾ.ಪಂ, ಬೇಂಗೂರು – ಚೇರಂಬಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗಮಂಡಲ ಆರಕ್ಷಕ ಇಲಾಖೆ, ಮಡಿಕೇರಿ ತಾಲೂಕು ನವಜೀವನ ಸಮಿತಿ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಎಂಟು ದಿನಗಳ ಕಾಲ 1855ನೇ ಮದ್ಯವರ್ಜನ ಶಿಬಿರ ನಡೆಯಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ…
ಲೇಖಕ: admin
ಸೋಮವಾರಪೇಟೆ NEWS DESK ಸೆ.28 : ಕಂದಾಯ ಇಲಾಖೆಯಲ್ಲಿನ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಸೋಮವಾರಪೇಟೆ ತಾಲ್ಲೂಕಿನ ಹಂಡ್ಲಿ ಗ್ರಾಮ ಆಡಳಿತ ಅಧಿಕಾರಿಗಳಾದ ಶ್ವೇತ ಶ್ರೀ ಹಾಗೂ ಚೈತ್ರ ಎಸ್.ಎಸ್ ಅವರಿಗೆ ಸರ್ಕಾರ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ” ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಬ್ಬರು ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ಸೆ.28 NEWS DESK : ಕೊಡಗು ಜಿಲ್ಲೆಯ ಮೂವರು ವಿದ್ಯಾಥಿ೯ಗಳು ಮಂಗಳೂರು ವಲಯದಿಂದ 16 ವಷ೯ದೊಳಗಿನ ಕನಾ೯ಟಕ ರಾಜ್ಯ ಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶನಿವಾರಸಂತೆಯ ಕಾಫಿ ಬೆಳೆಗಾರ ಹೆಚ್.ಎಸ್.ವಸಂತ್ ಕುಮಾರ್, ಶ್ವೇತಾ ದಂಪತಿ ಪುತ್ರ ಯತೀಂದ್ರ, ಕುಶಾಲನಗರದ ಸುರೇಶ್, ಗಾಯತ್ರಿ ದಂಪತಿ ಪುತ್ರ ಸೂಯ೯ತ್ರಿಭುವನ್ ಮತ್ತು ವಿರಾಜಪೇಟೆಯ ಎಂ.ಸಿ.ಅಪ್ಪಣ್ಣ, ತನೋಜ್ ದೇವಮ್ಮ ದಂಪತಿ ಪುತ್ರ ಅಂಶಲ್ ಪೊನ್ನಣ್ಣ 16 ವಷ೯ದೊಳಗಿನ ಕ್ರಿಕೆಟ್ ಪಂದ್ಯಾಟಕ್ಕೆ ಮಂಗಳೂರು ವಲಯದಿಂದ ಕನಾ೯ಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಯತೀಂದ್ರ ಪ್ರಸ್ತುತ ಬೆಂಗಳೂರಿನ ಕ್ರೀಡಾಶಾಲೆಯಲ್ಲಿ ಕಲಿಯುತ್ತಿದ್ದರೆ. ಸೂಯ೯ತ್ರಿಭುವನ್ ಕುಶಾಲನಗರದ ಪಾತಿಮಾ ಕಾನ್ವೆಂಟ್ ವಿದ್ಯಾಥಿ೯ಯಾಗಿದ್ದು, ಅಂಶಲ್ ಪೊನ್ನಣ್ಣ ವಿರಾಜಪೇಟೆಯ ಎಸ್ ಎಂ ಎಸ್ ಶಾಲಾ ವಿದ್ಯಾಥಿ೯ಯಾಗಿದ್ದಾನೆ.
ಮಡಿಕೇರಿ ಸೆ.28 NEWS DESK : ವಿದ್ಯುತ್ ಅವಘಡದಿಂದ ಮೃತಪಟ್ಟ ಐಗೂರು ಗ್ರಾಮದ ಕಾಲೇಜು ವಿದ್ಯಾರ್ಥಿ ಹೇಮಂತ್ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ನಾಪೋಕ್ಲು ಸೆ.28 NEWS DESK : ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮ ಸಭೆ ನಡೆಯಿತು. ಕಕ್ಕಬೆಯ ವಿಎಸ್ಎಸ್ ಎನ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ, ರಸ್ತೆಗಳು ಗುಂಡಿ ಬಿದ್ದು ಸಂಚಾರ ಯಾತನಾಮಯವಾಗಿದೆ. ಇಲಾಖಾ ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗಿಲ್ಲ. ಹೀಗೆ ವಿವಿಧ ವಿಷಯಗಳ ಕುರಿತು ಗ್ರಾಮಸ್ಥರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಜೆಜೆಮ್ ಕಾಮಗಾರಿಯು ಪ್ರಾರಂಭಿಸಿ ಮೂರು ವರ್ಷ ಆದರು ಪೂರ್ಣವಾಗದ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆಗಳು ತುಂಬಾ ಹದಗೆಟ್ಟಿದ್ದು, ರಸ್ತೆಗಳನ್ನು ಸರಿಪಡಿಸಲು ಮತ್ತು ರಸ್ತೆಯ ಬದಿಯ ಚರಂಡಿಯನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು. ನಾಲಾಡಿ ಗ್ರಾಮದಲ್ಲಿ ಅವೈಜ್ಞಾನಿಕ ಕಟ್ಟಡವನ್ನು ಕಟ್ಟುತ್ತಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿದರು. ಮನೆಗಳನ್ನು ನಿರ್ಮಿಸಿಕೊಂಡಿರುವ ಹಾಗೂ ತೋಟಗಳನ್ನು ಮಾಡಿರುವಂತಹ ಜಾಗವನ್ನು ಯಾವುದೇ ಕಾರಣಕ್ಕೂ ಮೀಸಲು ಅರಣ್ಯಕ್ಕೆ ಬಿಟ್ಟು ಕೊಡುವುದಿಲ್ಲ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಭೆಗೆ ಇಲಾಖಾ ಅಧಿಕಾರಿಗಳು ಹಾಜರಾಗದ…
ನಾಪೋಕ್ಲು ಸೆ.28 NEWS DESK : ಜಾರ್ಖಂಡ್ ನ ರಾಂಚಿಯಲ್ಲಿ ಸೆ.30 ರಿಂದ ನಡೆಯುವ ರಾಷ್ಟ್ರೀಯ ಜೂನಿಯರ್ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ಬಿ.ಡಿ.ಶ್ರಾವ್ಯ ಆಯ್ಕೆಯಾಗಿದ್ದಾಳೆ. ಮುಂಬೈಯ ಎನ್.ಸಿ.ಓ.ಇ ತಂಡದಲ್ಲಿ ತರಬೇತಿ ಪಡೆಯುತ್ತಿರುವ ಶ್ರಾವ್ಯ ಈಗ ಕರ್ನಾಟಕದ ಜೂನಿಯರ್ ತಂಡಕ್ಕೆ ಆಯ್ಕೆಯಾಗಿದ್ದು, ಈಕೆ ಕಕ್ಕಬೆ-ಕುಂಜಿಲ ಗ್ರಾಮದ ದೇವಯ್ಯ, ಚಿತ್ರ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.28 NEWS DESK : ಕರ್ನಾಟಕ ಮತ್ತು ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದಿಂದ ಬಾಗಲಕೋಟೆಯಲ್ಲಿ 14ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟ ನಡೆಯಿತು. ಬಾಗಲಕೋಟೆಯ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ಕೊಡಗು ಸೇರಿದಂತೆ ಸುಮಾರು 20 ಜಿಲ್ಲೆಗಳಿಂದ ಸ್ಪರ್ಧಿಗಳು ಪಾಲ್ಗೊಂಡು ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಸೋಮವಾರಪೇಟೆ ಸೆ.28 NEWS DESK : ಪಂಚಾಯಿತಿ ವ್ಯಾಪ್ತಿಯಲ್ಲಿನ ವರ್ತಕರು ವ್ಯಾಪಾರ ಪರವಾನಗಿ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ನಿಯಮ ಮೀರುವ ವರ್ತಕರ ಅಂಗಡಿಗಳಿಗೆ ಬೀಗ ಜಡಿದು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಸದಸ್ಯರು ಮುಖ್ಯಾಧಿಕಾರಿಗೆ ಸೂಚಿಸಿದರು. ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕೆಲ ಸದಸ್ಯರು ವ್ಯಾಪಾರ ಪರವಾನಗಿ ಪಡೆಯದ ವರ್ತಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆದರೆ ಕೆಲವರು ಲೈಸೆನ್ಸ್ ಪಡೆಯದೆ ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆ ನೋಟೀಸು ಜಾರಿಗೊಳಿಸಲಾಗಿದೆ ಎಂದು ಮುಖ್ಯಾಧಿಕಾರಿ ಸಭೆಯ ಗಮನಕ್ಕೆ ತಂದರು. ಟ್ರೇಡ್ ಲೈಸೆನ್ಸ್ ಪಡೆಯದ ಅಂಗಡಿಗಳಿಗೆ ಬೀಗ ಜಡಿಯಬೇಕು ಎಂದು ಸದಸ್ಯ ಬಿ.ಆರ್.ಮಹೇಶ್ ಸಲಹೆ ನೀಡಿದರು. ಪಟ್ಟಣ ಪಂಚಾಯಿತಿಯಿಂದ ತೆರಿಗೆ ಮತ್ತು ಕಂದಾಯ ವಸೂಲಿ ಸಂದರ್ಭ ಕಡ್ಡಾಯವಾಗಿ ರಶೀದಿ ನೀಡಿ ಹಣ ಪಡೆಯಬೇಕು ಎಂದು ಪಂಚಾಯಿತಿ ಸದಸ್ಯರು ಸೂಚಿಸಿದರು. ಕೆಲ ವರ್ತಕರಿಂದ 5 ಸಾವಿರ ರೂ.,ಗಳ ನಗದು ಪಡೆದು ರಶೀದಿ ನೀಡಿಲ್ಲ. ಲೆಡ್ಜರ್ನಲ್ಲಿ ಬರೆದುಕೊಂಡಿದ್ದೇವೆ ಎಂದು ಹೇಳುತ್ತಾರೆ. ರಶೀದಿ ನೀಡದಿದ್ದರೆ, ಆ…
ಮಡಿಕೇರಿ ಸೆ.28 NEWS DESK : ಶ್ರೀಮಂಗಲದಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಪಂದ್ಯಾವಳಿಗಳಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಗುಂಡು ಎಸೆತ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಿಪ್ರಾ ಕಾಳಪ್ಪ ಚಿನ್ನದ ಪದಕ, 100 ಮೀಟರ್ ಓಟದ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿಂ ಸ್ಪೂರ್ತಿ ಪೂವಮ್ಮ ಚಿನ್ನದ ಪದಕ, 400 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಕೃತಿಕಾ ಅಕ್ಕಮ ಕಂಚಿನ ಪದಕ ಹಾಗೂ 4100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿಗಳಾದ ಶತಕ ಕಾವೇರಮ್ಮ, ಫಾತಿಮಾ ಫಿದಾ, ಸ್ಪೂರ್ತಿ ಪೂವಮ್ಮ, ಎನ್.ಎಸ್.ಮೋಕ್ಷಿತ ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿಯರು, ಶಿಕ್ಷಕ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ದೈಹಿಕ ಶಿಕ್ಷಕಿಯರುಗಳಾದ…
ಸುಂಟಿಕೊಪ್ಪ ಸೆ.28 NEWS DESK : ವಿದ್ಯಾರ್ಥಿಗಳು ತಾವು ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಾಣಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಕರೆ ನೀಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯಲು ಕಾರಣಕರ್ತರಾದ ಉಪನ್ಯಾಸಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪ್ರಾಸ್ತಾವಿಕವಾಗಿ ಮತನಾಡಿದ ಅವರು, ಕಳೆದ 35 ವರ್ಷಗಳಿಂದ ಸಂಘಟನೆಯು ವಾರ್ಷಿಕವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದ್ದು, ಶಿಕ್ಷಣ ಸಂಘಟನೆ ಮತ್ತು ಹೋರಾಟದಲ್ಲಿ ನಾವು ಜಯಕಾಣಬೇಕಾದರೆ ಉತ್ತಮ ಶಿಕ್ಷಣ ಅಗತ್ಯ. ಸಂಘಟನೆಯು ಪರಿಶೀಷ್ಟ ಜಾತಿ ಪರಿಶೀಷ್ಟ ವರ್ಗದ ವಿರುದ್ದ ನಡೆಯುವ ಯಾವುದೇ ದೌರ್ಜನ್ಯಗಳನ್ನು ಕಾನೂನಿನ ಮೂಲಕ ಎದುರಿಸುತ್ತಿದೆ. ಹಾಡಿಗಳಲ್ಲಿ ಮಕ್ಕಳ ಶಿಕ್ಷಣ ಉನ್ನತ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುತ್ತ ಬರುತ್ತಿದೆ. ವೃದ್ಧಾಶ್ರಮಗಳಲ್ಲಿ ಹಿರಿಯರಿಗೆ ಬಟ್ಟೆ ವಿತರಣೆ, ಮಳೆಗಾಲದ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಪಾದರಕ್ಷೆ ಹಾಗೂ ಸ್ವೆಟರ್ ವಿತರಣೆ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟನೆಯ ಮೂಲಕ ಮಾಡುತ್ತ…






