ಲೇಖಕ: admin

ಮಡಿಕೇರಿ ಅ.17 NEWS DESK : ರಾಷ್ಟ್ರದ ಆದಿಕವಿ, ರಾಮಾಯಣ ಮಹಾಕಾವ್ಯ ಬರೆದ ಶ್ರೇಷ್ಠ ಕವಿ ವಾಲ್ಮೀಕಿ ಅವರು ಹುಟ್ಟಿದ ದಿನವನ್ನು ನಾಡಿನ ಎಲ್ಲೆಡೆ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅವರು 24 ಸಾವಿರ ಸಂಸ್ಕೃತ ಶ್ಲೋಕಗಳ ಒಂದು ಬೃಹತ್ ಗ್ರಂಥವನ್ನು ರಚಿಸಿರುವುದು ವಿಶೇಷವಾಗಿದೆ ಎಂದು ಎನ್.ಎಸ್.ಭೋಸರಾಜು ತಿಳಿಸಿದರು. ಮಹರ್ಷಿ ವಾಲ್ಮೀಕಿಯವರು ರಾಮಾಯಣವನ್ನು ವಿದ್ವತ್ ಪೂರ್ಣವಾಗಿ ಬರೆದಿದ್ದಾರೆ. ರಾಮಾಯಣ ಬರೆಯುವಲ್ಲಿ ಸಾಕಷ್ಟು ಪರಿಶ್ರಮ ವಹಿಸಿದ್ದಾರೆ ಎಂದು ಸಚಿವರು ನುಡಿದರು. ವಾಲ್ಮೀಕಿಯ ಮಾತೃ ವಾತ್ಸಲ್ಯದ ಕುರಿತು ರಾಮಾಯಣದಲ್ಲಿಯೇ ಸಾಕಷ್ಟು ಮಾಹಿತಿ ಸಿಗುತ್ತದೆ. ಪುರಾಣ ಮತ್ತು ಐತಿಹ್ಯಗಳ ವಿಭಿನ್ನ ನಿರೂಪಣೆಗಳ ನಡುವೆ ವಾಲ್ಮೀಕಿ ಹೇಗೆ ಪ್ರಸ್ತುತರಾಗುತ್ತಾರೆ ಎಂಬುದನ್ನು ನಾವೆಲ್ಲಾ ಅರಿತುಕೊಳ್ಳಬೇಕು. ವಾಲ್ಮೀಕಿಯವರ ಚಿಂತನೆಗಳು,…

Read More

ಮಡಿಕೇರಿ ಅ.17 NEWS DESK : ಕಾವೇರಿ ತೀರ್ಥೋದ್ಭವ ಹಿನ್ನೆಲೆ ವಿರಾಜಪೇಟೆಯಿಂದ ತಲಕಾವೇರಿವರೆಗೆ ಆರು ಯುವಕರು 4ನೇ ವರ್ಷದ ಪಾದಯಾತ್ರೆ ಪಾದಯಾತ್ರೆ ಮಾಡಿದರು. ವಿರಾಜಪೇಟೆಯ ಚೆಟ್ಟೊಳಿರ ಶರತ್ ಸೋಮಣ್ಣ, ಮುರುವಂಡ ಸಾವನ್ ಸೋಮಣ್ಣ, ಕಾಳಮಂಡ ರಾಬಿನ್ ಅಚ್ಚಮ್ಮ, ಮುಕ್ಕಾಟಿರ ಉತ್ತಪ್ಪ, ಮುರುವಂಡ ಸ್ಪೂರ್ತಿ ಸೀತಮ್ಮ, ಪೊರುಕೊಂಡ ಶಾನ್ ನಾಣಯ್ಯ ಕಾವೇರಿ ತೀರ್ಥೋದ್ಭವದ ಹಿನ್ನೆಲೆ ವಿರಾಜಪೇಟೆಯಿಂದ ಸುಮಾರು 58 ಕಿಮೀ ಪಾದಯಾತ್ರೆ ಕೈಗೊಂಡಿದ್ದರು. ಬುಧವಾರ ಮುಂಜಾನೆಯಿಂದಲೇ ವಿರಾಜಪೇಟೆಯಿಂದ ಪಾದಯಾತ್ರೆ ಕೈಗೊಂಡು ಕದನೂರು, ಕಡಂಗ, ನಾಪೋಕ್ಲು, ಬಲ್ಲಮಾವಟಿ, ಅಯ್ಯಂಗೇರಿ ಮೂಲಕ ಭಾಗಮಂಡಲಕ್ಕೆ ಸಂಜೆ 6.30 ಗಂಟೆಗೆ ತಲುಪಿದ್ದು, ಗುರುವಾರ ಭಾಗಮಂಡಲದಿಂದ ಹಲವು ಸಂಘಟನೆಯೊಂದಿಗೆ ಕಾವೇರಿ ಭಜನೆಯ ಮೂಲಕ ಪಾದಯಾತ್ರೆ ಮುಂದುವರಿಸಿ ತೀರ್ಥೋದ್ಭವ ಮುನ್ನ ತಲಕಾವೇರಿಗೆ ತಲುಪಿದರು. ಕಾವೇರಿಯ ಪವಿತ್ರ ತೀರ್ಥವನ್ನು ಪಡೆದು, ಹಲವೆಡೆ ವಿತರಿಸಿದರು.

Read More

ಕುಶಾಲನಗರ ಅ.17 NEWS DESK :  ಸಮಾಜದ ಪರಿವರ್ತನೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖದ್ದಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮರಣೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.  ರಾಜ್ಯ ಹಾಗೂ ದೇಶದ ಹಲವು ಕ್ಷೇತ್ರಗಳಲ್ಲಿ ಮಹಿಳಾ ಶಕ್ತಿ ಮಂಚೂಣಿಯಲ್ಲಿದೆ ಎಂದ ಅವರು, ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕಾಗಿದೆ ಎಂದರು. ಇದೇ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆ ಯಶಸ್ವಿ ಆಗುತ್ತಿರುವ ಬಗ್ಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೋಮವಾರಪೇಟೆ ಪೊಲೀಸ್ ಉಪ ಅಧೀಕ್ಷಕರಾದ ಆರ್.ವಿ.ಗಂಗಾಧರಪ್ಪ ದುಶ್ಚಟಗಳ ಮೂಲಕ ಕುಟುಂಬ ಕಲಹ ಏರ್ಪಡುವುದರ ನಡುವೆ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ. ಯಾವುದೇ ಸಂದರ್ಭ ಕುಡಿತದ ದಾಸರಾಗಬಾರದು. ದುಶ್ಚಟಗಳಿಗೆ…

Read More

ಮಡಿಕೇರಿ ಅ.17 NEWS DESK : ಜಿಲ್ಲಾ ಹಾಪ್‍ಕಾಮ್ಸ್ 4ನೇ ವಾರ್ಷಿಕೋತ್ಸವ ಅಂಗವಾಗಿ ನಗರದಲ್ಲಿ ನೂತನವಾಗಿ ಆರಂಭಿಸಿರುವ ಸಾವಯವ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಹಾಪ್‍ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಉದ್ಘಾಟಿಸಿದರು. ನಗರದ ಅಂಚೆಕಚೇರಿ ಎದುರಿನ ಹಾಪ್‍ಕಾಮ್ಸ್ ಕಟ್ಟಡದಲ್ಲಿ ಜಿಲ್ಲೆಯ ಸಾವಯವ ಬೆಳೆಗಾರರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಮಳಿಗೆ ಆರಂಭಿಸಲಾಗಿದ್ದು, ಕೈಗೆಟಕುವ ದರದಲ್ಲಿ ಉತ್ಪನ್ನ ದೊರೆಯುವುದರೊಂದಿಗೆ ಸ್ಥಳೀಯ ರೈತರಿಗೆ ಮಾರುಕಟ್ಟೆಯೂ ತೆರೆದುಕೊಂಡಂತಾಗಿದೆ. ಸಾವಯವ ಕೃಷಿಗೆ ಪ್ರತ್ಯೇಕ ಮಾರುಕಟ್ಟೆ ರೂಪಿಸಿರುವುದರಿಂದ ಸಾವಯವ ಬೆಳೆಗಳು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ರಮೇಶ್ ಚಂಗಪ್ಪ ಹೇಳಿದರು. ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ, ಮಡಿಕೇರಿ ತಾಲ್ಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬೊಟ್ಟೋಳಂಡ ಉತ್ತಪ್ಪ ಮಾತನಾಡಿ, ಕೊಡಗಿನಲ್ಲಿ ಬೆಳೆಯುವ ತರಕಾರಿ, ಹಣ್ಣು-ಹಂಪಲು ಸೇರಿದಂತೆ ಕೆಲವೊಂದು ಸಾವಯವ ಆಹಾರ ಉತ್ಪನ್ನಗಳನ್ನು ಪ್ರಥಮ ಹಂತದಲ್ಲಿ ಮಾರಾಟಕ್ಕೆ ನೀಡಲಾಗಿದೆ ಎಂದರು. ಸಾವಯವ ಕೃಷಿಕ ಪೊನ್ನಪ್ಪ ಮಾತನಾಡಿ, ಕಳೆದ 3 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆ ಬೆಳೆಯುತ್ತಿದ್ದ, ಇದಕ್ಕೆ ಪೂರಕವಾಗಿ ಹಾಪ್‍ಕಾಮ್ಸ್ ಮಾರುಕಟ್ಟೆ…

Read More

ಬೆಂಗಳೂರು ಅ.17 NEWS DESK : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು. ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು, ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಸವನಗೌಡ ದದ್ದಲ್, ಶಾಸಕರಾದ ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ನಂತರ  ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಶುಭ ಹಾರೈಸಿದರು. ರಾಜನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಜಗದ್ಗುರು ಪ್ರಸನ್ನಾನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್,…

Read More

ನಾಪೋಕ್ಲು ಅ.17 NEWS  DESK : ಮೈಸೂರು ಕೊಡಗು ಗೌಡ ಸಮಾಜದಲ್ಲಿ ಕಾವೇರಿ ಸಂಕ್ರಮಣದ ಅಂಗವಾಗಿ ಅ.18 ರಂದು ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ವಿಜಯನಗರ ಗೌಡ ಸಮಾಜದ ಸಾಂಸ್ಕೃತಿಕ ಸಭಾಭವನದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ನಂತರ ಕಾವೇರಿ ತೀರ್ಥ ವಿತರಣೆ ನಡೆಯಲಿದೆ. ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸುವಂತೆ ಸಮಾಜದ ಕಾರ್ಯದರ್ಶಿ ಪೊನ್ನೇಟಿ ನಂದರ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಅ.17 NEWS DESK : ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಬೆಳೆಗಾರರು ಮತ್ತು ಕಾರ್ಮಿಕರ ನಡುವಿನ ಬಾಂಧವ್ಯ ಉತ್ತಮವಾಗಿದೆ ಎಂದು ನಾಪೋಕ್ಲು ಕೃಷಿ ಉತ್ಪನ್ನ ಮಾರುಕಟ್ಟೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸಾಯ ಬ್ಯಾಂಕಿನ ನಿರ್ದೇಶಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಹೇಳಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೋಕ್ಲುವಿನ ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನವಿಕಾಸ ಸಂಘದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೃಷಿಯಿಂದಾಗಿ ಬೆಳೆಗಾರರು ಮತ್ತು ಕಾರ್ಮಿಕರು ಉತ್ತಮವಾಗಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಸದಸ್ಯರಿಗೆ ಕೃಷಿ ಉತ್ಪನ್ನಗಳ ಬಗ್ಗೆ ಉತ್ತಮವಾದ ಮಾಹಿತಿ ನೀಡಿ ಮಧ್ಯವರ್ಜನಾ ಶಿಬಿರದಿಂದ ಕಾರ್ಮಿಕರು ಕುಡಿತವನ್ನು ತ್ಯಜಿಸಿದ್ದು ಯೋಜನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸಾಜಿದ ವಹಿಸಿದ್ದು, ಸಂಘದ ಸಮನ್ವಯಾಧಿಕಾರಿ ಮಾಲಿನಿ ಸದಸ್ಯರಿಗೆ ಸಂಘದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಭೆಯಲ್ಲಿ ಸೇವಾಪ್ರತಿನಿಧಿ ಉಮಾಲಕ್ಷ್ಮಿ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಅ.17 NEWS DESK : ಶ್ರೀ ಕಾವೇರಿ ಭಕ್ತ ಮಂಡಳಿ ವತಿಯಿಂದ ಅ.18 ರಂದು ನಗರದ ಮೇಲಿನ ಗೌಡ ಸಮಾಜದ ಬಳಿ ಕಾವೇರಿ ತೀರ್ಥ ವಿತರಣೆ ನಡೆಯಲಿದೆ.  ಬೆಳಿಗ್ಗೆ 8 ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಅಲಂಕೃತ ಮಂಟಪದಲ್ಲಿ ಮಡಿಕೇರಿ ನಗರದ ಸರ್ವ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ  ಕಾವೇರಿ ಭಕ್ತ ಮಂಡಳಿ ಅಧ್ಯಕ್ಷರು, ಕಾರ್ಯದರ್ಶಿ ಮನವಿ ಮಾಡಿದ್ದಾರೆ.

Read More

ಸಿದ್ದಾಪುರ ಅ.17 NEWS DESK : ಮಾಲ್ದಾರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಸಹಯೋಗದಲ್ಲಿ ಆಯುಷ್ಮಾನ್ ಭಾರತ ಕಾರ್ಯಕ್ರಮದ ಅಡಿಯಲ್ಲಿ ನಡೆದ ಶಿಬಿರದಲ್ಲಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಅದರ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಒಟ್ಟು 161 ಮಂದಿ ಆರೋಗ್ಯ ಸೇವೆಗಳ ಸದುಪಯೋಗ ಪಡೆದುಕೊಂಡರು.  ಈ ಸಂದರ್ಭ ವೈದ್ಯರುಗಳಾದ ಡಾ.ಕರುಣಾಕರ್, ಡಾ.ಶರವಣ್, ಡಾ.ಸಲ್ಮಾ ಶಾಝಿಯಾ, ಡಾ.ನಿರಂಜನ್, ಡಾ. ಸಾಗರ್, ಡಾ.ಶಾರೂಕ್ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಇತರ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ ಅ.17 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾ. ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹಾಗೂ ಮೂರ್ನಾಡು ಹೋ. ಕ.ಸಾ.ಪ., ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ ಸಮಿತಿ, ಮಹಾದೇವ ಸ್ಪೋಟ್ರ್ಸ್ ಕ್ಲಬ್, ಬಲಮುರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕಾವೇರಿಯ ಎರಡನೆಯ ಪುಣ್ಯಕ್ಷೇತ್ರ ಬಲಮುರಿಯ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಭಕ್ತಿ ಗೀತೆ ಗಾಯನ ಕಾರ್ಯಕ್ರಮವು ಅಕ್ಟೋಬರ್, 18 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ನಾಪೋಕ್ಲು ರವಿ ಓಂಕಾರ್ ಮ್ಯೂಸಿಕ್ ಹಾಗೂ ಸ್ಥಳೀಯ ಕಲಾವಿದರಿಂದ ಭಕ್ತಿಗೀತೆ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More