ಮಡಿಕೇರಿ ಸೆ.28 NEWS DESK : ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್ಟಿ ಇಂದ ನೀಡಲಾದ ಔಡಿಜeಡಿ ಜಿoಡಿ ಛಿಚಿಟಿಛಿeಟ ಜಿoಡಿ ಖegisಣಡಿಚಿಣioಟಿ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ…
ಲೇಖಕ: admin
ಮಡಿಕೇರಿ ಸೆ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇಂಗಾ ಹೆಲ್ತ್ ಪೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ತ್ಯ ಕಾರ್ಯಕ್ರಮದಡಿ ಇಂಗಾ ಹೆಲ್ತ್ ಪೌಂಡೇಶನ್ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಸೀಳು ತುಟಿ, ಸೀಳು ಅಂಗುಲ ಮತ್ತು ಕ್ರೋನಿಯೋಫೇಷಿಯಲ್ ವಿರೂಪಗಳ ತಪಾಸಣಾ ಶಿಬಿರ’ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್ ಕೆ.ಎಂ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಇಂಗಾ ಹೆಲ್ತ್ ಪೌಂಡೇಶನ್, ಇವರೊಂದಿಗೆ “ಸೀಳು ತುಟಿ, ಸೀಳು ಅಂಗುಲ ಮತ್ತು ಕ್ರೋನಿಯೋಫೇಷಿಯಲ್ ವಿರೂಪಗಳ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆಗೆ ಜಿಲ್ಲೆಯನ್ನು ರಾಜ್ಯ ಮಟ್ಟದಿಂದ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಶಿಬಿರದಲ್ಲಿ ತಪಾಸಣೆ ಮಾಡಿ ಶಸ್ತ್ರ ಚಿಕಿತ್ಸೆಗೆ ಗುರುತಿಸಲಾಗುವ ಮಕ್ಕಳಿಗೆ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು, ಇವರಿಂದ ಉಚಿತವಾಗಿ…
ಮಡಿಕೇರಿ NEWS DESK ಸೆ.27 : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಮುಂಬರುವ ಜಿ.ಪಂ, ತಾ.ಪಂ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಎನ್ಡಿಎ ಮೈತ್ರಿ ಕೂಟದ ಮೂಲಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ. ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಸಮರ್ಥ ಕಾರ್ಯಕರ್ತರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಜಾತ್ಯತೀತ ಜನತಾದಳದ ಸದಸ್ಯತ್ವ ಅಭಿಯಾನದ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ನಗರದ ರಾಜದರ್ಶನ್ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಕನಿಷ್ಟ 10 ಸಾವಿರ ಸದಸ್ಯರನ್ನು ನೋಂದಾಯಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕೆಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಲಕ್ಕೆ ಸಿಲುಕಿದ ಸಂದರ್ಭ 6 ತಿಂಗಳಲ್ಲಿ 8 ಬಾರಿ ಜಿಲ್ಲೆಗ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಮಾತ್ರವಲ್ಲದೇ ನೂರಾರು…
ಮಡಿಕೇರಿ NEWS DESK ಸೆ.27 : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಆದೇಶಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನಿಷ್ಪಕ್ಷಪಾತ ತನಿಖೆೆಗೆ ಅನುವು ಮಾಡಿಕೊಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು, ಈ ಹಿಂದೆ ಯಡಿಯೂರಪ್ಪ ಅವರು ಆರೋಪಗಳಿಗೆ ಗುರಿಯಾದ ಸಂದರ್ಭ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ನೈತಿಕ ಹೊಣೆÉ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. ಅದರಂತೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಕೂಡ ರಾಜೀನಾಮೆ ನೀಡಲಿ. ತನಿಖೆಯ ಮೂಲಕ ದೋಷಮುಕ್ತವಾದಲ್ಲಿ ಮತ್ತೆ ಬೇಕಾದರೆ ಮುಖ್ಯಮಂತ್ರಿಯಾಗಲಿ ಎಂದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಮುಡಾ ಪ್ರಕರಣದ ತನಿಖೆ ಲೋಕಾಯುಕ್ತದ ಮೂಲಕ ನಡೆಯಬೇಕಾಗಿದೆ. ಆದರೆ, ಈ ಲೋಕಾಯುಕ್ತ ನೇರವಾಗಿ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ…
ಮಡಿಕೇರಿ NEWS DESK ಸೆ.27 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದು, ಮಡಿಕೇರಿ ನಗರ ಅಲಂಕಾರ ಸಮಿತಿ ವತಿಯಿಂದ ನವರಾತ್ರಿ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಅಲಂಕಾರ ಸಮಿತಿ ಉಪಾಧ್ಯಕ್ಷ ಜೆ.ರವಿ ಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3 ರಂದು ಕರಗ ಸಾಗುವ ರಸ್ತೆಯಲ್ಲಿ ರಂಗೋಲಿ ಸ್ಪರ್ಧೆ ಆಯೋಜಿತವಾಗಿದ್ದು, ಚುಕ್ಕಿ, ಪುಡಿ, ಎಳೆ ಮತ್ತು ಪುಷ್ಪ ರಂಗೋಲಿ ವಿಭಾಗಗಳ ಸ್ಪರ್ಧೆಗಳು ಜರುಗಲಿದೆ. ಅ.11 ರಂದು ಆಯುಧ ಪೂಜೆ ಅಂಗವಾಗಿ ನಗರದ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ನಡೆಯಲಿದ್ದು, ಲಾರಿ, ಬಸ್, ಕಾರ್, ಸೈಕಲ್, ಆಟೋ, ಟಾಟಾಏಸ್, ಜೀಪ್, ಪಿಕ್ಅಪ್, ಜೆಸಿಬಿ ಹಾಗೂ ಇನ್ನಿತರ ವಾಹನ ಅಲಂಕಾರ ಸ್ಪರ್ಧೆಗಳು ನಡೆಯಲಿದೆ ಎಂದರು. ನವರಾತ್ರಿ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯ ಅಂಗವಾಗಿ ನಗರದ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ನಡೆಯಲಿದ್ದು, ನವರಾತ್ರಿಯ 9 ದಿನವೂ ಮಡಿಕೇರಿ ನಗರದ ದಶ ದೇವಾಲಯಗಳು, ಸರ್ಕಾರಿ,…
ಮಡಿಕೇರಿ NEWS DESK ಸೆ.27 : ರೋಟರಿ ಕ್ಲಬ್ ಮಡಿಕೇರಿ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರೋಟರ್ಯಾಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ ನಡೆಯಿತು. ಪಿಡಿಜಿ ರೋಟರಿಯನ್ ಎಂ.ಸುರೇಶ್ ಚಂಗಪ್ಪ ಪದಗ್ರಹಣ ಅಧಿಕಾರಿಯಾಗಿ ರೋಟರ್ಯಾಕ್ಟ್ ಕ್ಲಬ್ನ ಸದಸ್ಯರುಗಳಿಗೆ ಪ್ರಮಾಣವಚನ ಬೋಧಿಸಿದರು. ನಂತರ ಮಾತನಾಡಿದ ಅವರು ಇಂದಿನ ಯುವ ಪೀಳಿಗೆಗೆ ತಂತ್ರಜ್ಞಾನ ಹೆಚ್ಚು ಅನುಕೂಲಕರವಾಗಿದೆ. ಮುಂದುವರಿದ ಕಾಲಘಟ್ಟದಲ್ಲಿ ನವೀನ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡು ಜಾತಿ, ಧರ್ಮ ಎಲ್ಲವನ್ನೂ ಮೀರಿ ಮನುಷ್ಯತ್ವವನ್ನು ಅಳವಡಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಮ್ಮ ಜಗತ್ತಿನಲ್ಲಿ ಬಂದೊದಗಿದೆ. ತಾವು ರೋಟರಿ ಸಂಸ್ಥೆಯ ಭಾಗವಾಗಿ ಭಾತೃತ್ವವನ್ನು ನಮ್ಮ ಪರಿಸರದಲ್ಲಿ ಗಟ್ಟಿಯಾಗಿ ಬೇರೂರುವಂತೆ ಕೆಲಸ ಮಾಡಬೇಕೆಂದು ನೂತನ ಪದಾಧಿಕಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ರೋಟರಿ ಕ್ಲಬ್ನ ಅಧ್ಯಕ್ಷ ಎಂ.ಸುದಯ್ ನಾಣಯ್ಯ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ ಮಾತನಾಡಿ ವಿದ್ಯಾರ್ಥಿಗಳು ರೋಟರ್ಯಾಕ್ಟ್ ಕ್ಲಬ್ ಗೆ ನೀಡಲಾಗುವ ಪ್ರಶಸ್ತಿಗೆ ಭಾಜನರಾಗಬೇಕು. ಈ ನಿಟ್ಟಿನಲ್ಲಿ ತಮ್ಮ ಕಾರ್ಯಚಟುವಟಿಕೆಯನ್ನು ರೂಪಿಸಿ ಅನುಷ್ಠಾನ ಮಾಡಬೇಕೆಂದು…
ಮಡಿಕೇರಿ ಸೆ.27 NEWS DESK : ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ನಿರ್ದೇಶನ ನೀಡಿದರು. ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಓದಿಕೊಂಡು ಪರೀಕ್ಷೆಯನ್ನು ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ, ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಹಾಗೆಯೇ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ…
ಮಡಿಕೇರಿ ಸೆ.27 NEWS DESK : ಕೊಡಗು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಸಾಲ ಸಾಮಾನ್ಯವಾಗಿ ವಾಣಿಜ್ಯ ಬ್ಯಾಂಕುಗಳಲ್ಲಿ ಮಾತ್ರ ಪಡೆಯಲು ಅವಕಾಶವಿದೆ. ಆದರೆ ಜಿಲ್ಲೆಯ ರೈತರು ಮತ್ತು ಬ್ಯಾಂಕಿನ ಹಾಲಿ ಗ್ರಾಹಕರ ಮಕ್ಕಳು ದೇಶ ಮತ್ತು ವಿದೇಶದಲ್ಲಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದ್ಯಾಭ್ಯಾಸ ಸಾಲ ಪಡೆಯಲು ವಂಚಿತರಾಗಿರುವುದನ್ನು ಪರಿಗಣಿಸಿ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ “ವಿದ್ಯಾ ಸಹಕಾರ” ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರೂ.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ತಿಳಿಸಿದ್ದಾರೆ. 2023-24 ನೇ ಸಾಲಿನಲ್ಲಿ ಒಟ್ಟು ವ್ಯವಹಾರ ರೂ.2926.07 ಕೋಟಿ ದಾಖಲಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ರೂ 524.97 ಏರಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ. ರೈತ ಸದಸ್ಯರ ಬೆಳೆ ಸಾಲದ ಬೇಡಿಕೆಯನ್ನು ಪೂರೈಸಲು ಅನುಕೂಲವಾಗುವಂತೆ ಬ್ಯಾಂಕು ಜಿಲ್ಲೆಯ ಪ್ರಾಥಮಿಕ…
ಮಡಿಕೇರಿ NEWS DESK ಸೆ.27 : ಮಡಿಕೇರಿ ದಸರಾ ಜನೋತ್ಸವದ ವೇದಿಕೆ ಸಮಿತಿಯನ್ನು ರಚಿಸಲಾಗಿದ್ದು, ಕನ್ನಂಡ ಕವಿತಾ ಕಾವೇರಮ್ಮ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದಸರಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಬಾಳೆಯಡ ಸಬಿತಾ, ಉಪಾಧ್ಯಕ್ಷರಾಗಿ ಅಂಬೆಕಲ್ಲು ನವೀನ್ ಕುಶಾಲಪ್ಪ, ಖಜಾಂಚಿ ಕನ್ನಂಡ ಸುನಿತಾ ಸಂಪತ್ ಹಾಗೂ ಕಾರ್ಯದರ್ಶಿಯಾಗಿ ಸುನಿಲ್ ಟಿ.ಎಸ್ ನೇಮಕಗೊಂಡಿದ್ದಾರೆ. ಮಡಿಕೇರಿ ದಸರಾ ಜನೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ನಡೆಸಲು ವೇದಿಕೆ ಸಮಿತಿ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ನೂತನ ಅಧ್ಯಕ್ಷರಾದ ಕನ್ನಂಡ ಕವಿತಾ ಕಾವೇರಮ್ಮ ತಿಳಿಸಿದರು.
ಮೈಸೂರು ಸೆ.27 NEWS DESK : ಮೈಸೂರಿನಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮೈಸೂರು ಹಾಗೂ ಪ್ರವಾಸೋದ್ಯಮ ನೇರ ಪಾಲುದಾರರ ಸಹಯೋಗದೊಂದಿಗೆ ಮೈಸೂರಿನ ಅರಮನೆ ಮುಂಭಾಗ ಆಯೋಜಿಸಿದ್ದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ”ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.






