ಮಡಿಕೇರಿ ಸೆ.26 NEWS DESK : ಮೂರ್ನಾಡು ಪ್ರೌಢ ಶಾಲೆಯಲ್ಲಿ ನಡೆದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಸಾಧನೆಗೈದಿದ್ದಾರೆ. 1 ರಿಂದ 4ನೇ ತರಗತಿ ವಿಭಾಗದ ಅರೇಬಿಕ್ ಧಾರ್ಮಿಕ ಪಠಣದಲ್ಲಿ ಉಮೈಝ್ ಪ್ರಥಮ, ಚಿತ್ರಕಲೆ ಸ್ಪರ್ಧೆಯಲ್ಲಿ ಲಾಜಿಯಾ ಫಾತಿಮಾ ಪ್ರಥಮ, ಆಶಯ ಭಾಷಣ ಜಿ.ಯು.ಜಿಯಾನ ತೃತೀಯ, ಛದ್ಮವೇಷ ಎಂ.ಎನ್.ರಾಹಿದ್ ತೃತೀಯ, ಹಿಂದಿ ಕಂಠಪಾಠದಲ್ಲಿ ಎ.ಆರ್.ಸಫ್ವಾನ್ ತೃತೀಯ ಸ್ಥಾನಗಳಿಸಿದ್ದಾರೆ. 5 ರಿಂದ 7ನೇ ತರಗತಿ ವಿಭಾಗದಲ್ಲಿ ಅರೇಬಿಕ್ ಧಾರ್ಮಿಕ ಪಠಣ ಹೈಝ್ ಸಿ.ಎಚ್ ಪ್ರಥಮ, ಭಕ್ತಿಗೀತೆ ಫಾತಿಮತ್ ವಫಾ ಪ್ರಥಮ, ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ನಿಸಾಜ್ ತೃತೀಯ ಸ್ಥಾನಗಳಿಸಿದ್ದಾರೆ. 8ನೇ ತರಗತಿಯಿಂದ 12ನೇ ತರಗತಿ ವಿಭಾಗದಲ್ಲಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಪಿ.ಎಂ.ಫಜೀಲ ತೃತೀಯ, ಹಿಂದಿ ಭಾಷಣ ಕೆ.ಆರ್.ಫೈಜಾ ತೃತೀಯ, ಆಶು ಭಾಷಣ ಅಸ್ಮತ್ ರುಮಾನ ತೃತೀಯ, ಕನ್ನಡ ಪ್ರಬಂಧ ಸಲ್ಮಾನ್ ಫಾರಿಸ್ ದ್ವಿತೀಯ, ಗಜಲ್…
ಲೇಖಕ: admin
ಪೊನ್ನಂಪೇಟೆ ಸೆ.26 NEWS DESK : ಇಸ್ಲಾಮಿನ ಇತಿಹಾಸದಲ್ಲಿ ಆದರ್ಶ ಧೀರರಾಗಿರುವ ವಿಶ್ವ ಪ್ರವಾದಿ ಪ್ರವಾದಿ ಮುಹಮ್ಮದ್ ರ ಜೀವನವು ಒಂದು ತೆರೆದ ಪುಸ್ತಕವಾಗಿದೆ. ತಮ್ಮ ಖಾಸಗಿ ಬದುಕನ್ನು ಪರಿಶುದ್ಧವಾಗಿ, ಕುಟುಂಬ ಜೀವನವನ್ನು ಸುಭದ್ರವಾಗಿ, ಸಾಮಾಜಿಕ ಜೀವನವನ್ನು ಮಾದರಿಯಾಗಿ ಹಾಗೂ ಸಮುದಾಯವನ್ನು ಕಲ್ಯಾಣಕಾರಿಯನ್ನಾಗಿ ರೂಪಿಸಿದ ಪ್ರವಾದಿಯವರು ಜನಕೋಟಿಗಳ ಹೃದಯದಲ್ಲಿ ಇಂದಿಗೂ ಜೀವಂತವಾಗಿದ್ದಾರೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಹೇಳಿದರು. ದುಬೈನ ಅನಿವಾಸಿ ಕೊಡಗಿನ ಕನ್ನಡಿಗರ ಸಂಘಟನೆಯಾದ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯು.ಎ.ಇ. ರಾಷ್ಟ್ರೀಯ ಸಮಿತಿ ವತಿಯಿಂದ ದುಬೈನ ದೇರಾದಲ್ಲಿ ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆಯ ಅಂಗವಾಗಿ ‘ವಿಶ್ವ ವಿಮೋಚನೆಯ ಹಾದಿ -ಪ್ರವಾದಿ’ ಎಂಬ ಧ್ಯೇಯವಾಕ್ಯದಲ್ಲಿ ಆಯೋಜಿಸಲಾಗಿದ್ದ ಬೃಹತ್ ಮಿಲಾದ್ ಸಮಾವೇಶ-2024 ರಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಪ್ರವಾದಿತ್ವ ಲಭಿಸಿದ 23 ವರ್ಷಗಳಲ್ಲಿ ಇಸ್ಲಾಂ ಎಂಬ ಜೀವನಪದ್ಧತಿಯನ್ನು 12ಲಕ್ಷ ಚದರ ಮೈಲಿ ವಿಸ್ತೀರ್ಣದ ಭೂಪ್ರದೇಶದಲ್ಲಿ ವಿಸ್ತರಿಸಿದ ಯಶಸ್ವಿ ಮಹಾ…
ಮಡಿಕೇರಿ NEWS DESK ಸೆ.26 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಮೂಲಭೂತ ಸೌಲಭ್ಯಕ್ಕಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿರುವ 17 ಅಧಿಕ ತಂತ್ರಾಂಶಗಳ ಮೊಬೈಲ್, ಲ್ಯಾಪ್ ಟಾಪ್, ಇಂಟರ್ನೆಟ್ ಹಾಗೂ ಕಾರ್ಯನಿರ್ವಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡಬೇಕು. ಇವುಗಳನ್ನು ಸಮರ್ಪಕವಾಗಿ ನೀಡದೆ ಕರ್ತವ್ಯದ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಮೂಲಭೂತ ಸೌಲಭ್ಯಗಳನ್ನು ನೀಡಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸರ್ಕಾರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ಕರ್ತವ್ಯ ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರಮುಖರು ತಿಳಿಸಿದರು. ::: ಗ್ರಾಮ…
ಮಡಿಕೇರಿ NEWS DESK ಸೆ.26 : ಮಡಿಕೇರಿ ದಸರಾ ಜನೋತ್ಸವ ಹಿನ್ನಲೆ ಮತ್ತು ನಾಡಹಬ್ಬದ ಮಹತ್ವ ತಿಳಿಸುವ ಮಡಿಕೇರಿ ಜನೋತ್ಸವ ದಸರಾ ಕಾಫಿ ಟೇಬಲ್ ಪುಸ್ತಕವು ಸೆ 29 ರಂದು ಭಾನುವಾರ ಮಡಿಕೇರಿಯಲ್ಲಿ ಲೋಕಾಪ೯ಣೆಯಾಗಲಿದೆ. ದಸರಾ ಜನೋತ್ಸವದ ಸಮಗ್ರ ಮಾಹಿತಿಗಳನ್ನು ಸಂಗ್ರಹಿಸಿ ಪತ್ರಕತ೯ ಅನಿಲ್ ಹೆಚ್ .ಟಿ ಪ್ರಕಟಿಸಿರುವ 132 ವಣ೯ಪುಟಗಳ ಸಂಗ್ರಹಯೋಗ್ಯ ಕೃತಿಯಾಗಿರುವ ಮಡಿಕೇರಿ ದಸರಾ ಜನೋತ್ಸವವನ್ನು ಸೆ 29 ರ ಭಾನುವಾರ ಸಂಜೆ 4 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಡಾ ಮಂತರ್ ಗೌಡ ಲೋಕಾಪ೯ಣೆ ಮಾಡಲಿದ್ದಾರೆ, ಮಡಿಕೇರಿ ದಸರಾಕ್ಕೆ ರೂಪುರೇಷೆ ನೀಡಿದ್ದ ದಿ.ಭೀಮ್ ಸಿಂಗ್ ಅವರ ಪುತ್ರಿ ಶಾರದಾಭಾಯಿ ಮತ್ತು ಮಂಟಪಗಳಿಗೆ ವಿನೂತನ ವಿನ್ಯಾಸ ನೀಡಿದ್ದ ನಗರದ ಹಿರಿಯ ಶಿವರಾಮ್ ಶೆಟ್ಟಿ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ ಪಿ ಸುಜಾಕುಶಾಲಪ್ಪ, ಮಾಜಿ ಸಚಿವ ಎಂ ಸಿ ನಾಣಯ್ಯ, ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ…
ಮಡಿಕೇರಿ ಸೆ.26 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 21ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸೆ.24ರ ಸಂಜೆಯಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೆ.25 ರಂದು ಮುಂಜಾನೆಯಿಂದ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವ ಪ್ರಯುಕ್ತ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ನಂತರ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿತ್ತು.
ನಾಪೋಕ್ಲು ಸೆ.26 NEWS DESK : ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟ ಸುಕುಮಾರ ಅವರ ಕುಟುಂಬಕ್ಕೆ ನಾಪೋಕ್ಲು ಇಂದಿರಾ ನಗರ ವಿವೇಕಾನಂದ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಬಾವಲಿ ಗ್ರಾಮದ ಮುಖಂಡಬಾಣೆ ಪೈಸಾರಿ ನಿವಾಸಿ ಟ್ರ್ಯಾಕ್ಟರ್ ಡ್ರೈವರ್ ಸುಕುಮಾರ ಅವರ ಮನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿ, ಅವರ ಪತ್ನಿ ಚಿತ್ರ ಮತ್ತು ಮಗ ನವೀನ್ ಅವರಿಗೆ ರೂ.20 ಸಾವಿರ ಸಹಾಯಧನವನ್ನು ಹಸ್ತಾಂತರಿಸದರು. ಈ ಸಂದರ್ಭ ವಿವೇಕಾನಂದ ಸಂಘದ ಖಜಾಂಚಿ ಜಲೆಂದ್ರ, ಉಪಾಧ್ಯಕ್ಷ ಶಶಿ, ಸದಸ್ಯರಾದ ಪ್ರಕಾಶ್, ಸುನಿ, ಪಟ್ಟಬಿ ಪ್ರಕಾಶ್, ಶ್ರೀಧರ, ಗಣೇಶ, ಸಂದೇಶ ಹಾಗೂ ನಾರಾಯಣ ಸೇರಿದಂತೆ ಇನ್ನಿತರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.26 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡಸ್೯ ಪ್ರಶಸ್ತಿಗಳನ್ನು ಮುಳ್ಳೂರು ಶಾಲಾ ಮುಖ್ಯೋಪಾಧ್ಯಾಯ ಸಿ.ಎಸ್.ಸತೀಶ್ ಮತ್ತು ನಾಪೋಕ್ಲು ರಾಮಟ್ರಸ್ಟ್ ನ ಶಿಕ್ಷಕಿ ಶೋಭಾಗೆ ಪ್ರದಾನ ಮಾಡಲಾಯಿತು. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು ಕಾಯ೯ದಶಿ೯ ಕಟ್ಟೆಮನೆ ಸೋನಜಿತ್ ನೇಷನ್ ಬಿಲ್ಡರ್ಸ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು. ಈ ಸಂದಭ೯ ಮಾತನಾಡಿದ ಸತೀಶ್, ಕೋವಿಡ್ ಸಂದಭ೯ದಲ್ಲಿ ಶಾಲಾ ವಿದ್ಯಾಥಿ೯ಗಳಿಗೆ ಅಟ್ಟಣಿಗೆ ನಿಮಿ೯ಸಿ ಮೊಬೈಲ್ ಸಿಗ್ನಲ್ ಸಿಗುವಂತೆ ಮಾಡಿ ಶಿಕ್ಷಣ ನೀಡಿದ್ದು, ಜಾಗತಿಕ ಮಟ್ಟದಲ್ಲಿ ಪ್ರಚಾರಕ್ಕೆ ಕಾರಣವಾಯಿತು. ತನ್ನ ಸೇವೆಗೆ ಸಾವ೯ಜನಿಕರು ನೀಡುತ್ತಿರುವ ಶ್ಲಾಘನೆ ತನ್ನಲ್ಲಿ ಮತ್ತಷ್ಟು ಛಲವನ್ನು ತಂದಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕಿ ಬೊಳ್ಳಚೆಟ್ಟೀರ ಶೋಭಾವಿಜಯ, ರೋಟರಿ ಮಿಸ್ಟಿ ಹಿಲ್ಸ್ ಶ್ರೀರಾಮಟ್ರಸ್ಟ್ ನಲ್ಲಿ ಮೊದಲು ಪ್ರಾರಂಭಿಸಿದ ಇಂಟರ್ಯಾಕ್ಟ್ ಕ್ಲಬ್ ನಿಂದಾಗಿ ವಿದ್ಯಾಥಿ೯ಗಳಲ್ಲಿ ಸಮಾಜಸೇವಾ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ನೆರವಾಗಿದೆ. ನಾಯಕತ್ವ ಗುಣ ಬೆಳೆಸುವಲ್ಲಿ…
ನಾಪೋಕ್ಲು ಸೆ.26 NEWS DESK : ಸಂಘದ ಏಳಿಗೆಗೆ ಸರ್ವ ಸದಸ್ಯರ ಸಹಕಾರ ಅಗತ್ಯ ಎಂದು ನಾಪೋಕ್ಲು ನಾಡ್ ಕೊಡವ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಪ್ಪಾರಂಡ ಎಸ್.ಸುಧೀರ್ ಅಯ್ಯಪ್ಪ ಹೇಳಿದರು. ನಾಪೋಕ್ಲು ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ ಕವಿ ಸಭಾಂಗಣದಲ್ಲಿ ನಡೆದ ಆರನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸಂಘದಲ್ಲಿ ಪ್ರಸ್ತುತ 751 ಸದಸ್ಯರಿದ್ದು ಈ ವರ್ಷ ಸಂಘವು 3.1 0 ಲಕ್ಷ ರೂ. ಲಾಭಗಳಿಸಿದೆ. ಸಂಘವು ಅಭಿವೃದ್ಧಿಯಿಂದ ಸಾಗುತಿದ್ದು ಸಂಘದ ಏಳಿಗೆಗಾಗಿ ಸರ್ವ ಸದಸ್ಯರು ಹೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು. ಸಭೆಯಲ್ಲಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಚರ್ಚಿಸಿ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ನಿರ್ದೇಶಕರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಬೊಳ್ಳಿಯಂಡ ಪಿ.ಹರೀಶ್ ಕಾರ್ಯಪ್ಪ, ಕನ್ನಂಬಿರ ಸಿ.ತಿಮ್ಮಯ್ಯ, ಕುಂಡ್ಯೋಳಂಡ.ಸಿ.ಪೂವಯ್ಯ, ಕಾಟುಮಣಿಯಂಡ ಎಂ.ಉಮೇಶ್, ಅರೆಯಡ ಎಂ.ಅಶೋಕ್, ಚೋಕಿರ ಎಸ್.ಚಿಣ್ಣಪ್ಪ, ಚೇನಂಡ.ಈ.ಗಿರೀಶ್ ಪೂಣಚ್ಚ, ಕುಲ್ಲೇಟಿರ ಎಂ.ದೇವಯ್ಯ, ಪಾಡೆಯಂಡ ಸಿ.ಕುಶಾಲಪ್ಪ,…
ನಾಪೋಕ್ಲು ಸೆ.26 NEWS DESK : ಮರಗೋಡಿನ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಸೆ.26 NEWS DESK : ವಿರಾಜಪೇಟೆ ವಿವೇಕ ಜಾಗೃತ ಬಳಗ ವತಿಯಿಂದ ಸೆ.29 ರಂದು ದೇವಣಗೇರಿ ವಿಎಸ್ಎಸ್ಎನ್ ಸಭಾಂಗಣದಲ್ಲಿ ಆತ್ಮೋನ್ನತಿ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಶಿಬಿರ ನಡೆಯಲಿದ್ದು, ಆಸಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಳಗದ ಅಧ್ಯಕ್ಷ ಹೆಚ್.ಡಿ.ಲೋಕೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.






