ಮಡಿಕೇರಿ ಅ.15 NEWS DESK : ಬೆಂಗಳೂರಿನಲ್ಲಿ ನಡೆದ ಫೆಡರೇಷನ್ ಆಫ್ ಮಿಶ್ರ ಮಾರ್ಷಲ್ ಆರ್ಟ್ಸ್ ಇಂಡಿಯಾ (FAMMAI) ರಾಷ್ಟ್ರೀಯ ಮಿಶ್ರ ಮಾರ್ಷಲ್ ಆರ್ಟ್ಸ್ ಚಾಂಪಿಯನ್ಶಿಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕ ಗೆದ್ದ ಕೊಡಗಿನ ಆಜ್ಞ ಗ್ಲೋಬಲ್ ಅಸೋಸಿಯೇಶನ್ ಫಾರ್ ಮಿಶ್ರ ಮಾರ್ಷಲ್ ಆರ್ಟ್ಸ್ (GAMMA) ವಿಶ್ವ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾಳೆ. ಡಿ.8 ರಿಂದ ಇಂಡೋನೇಷ್ಯಾ ದಲ್ಲಿ ನಡೆಯಲಿರುವ ಗ್ಲೋಬಲ್ ಅಸೋಸಿಯೇಶನ್ ಫಾರ್ ಮಿಶ್ರ ಮಾರ್ಷಲ್ ಆರ್ಟ್ಸ್ (GAMMA) ವಿಶ್ವ ಚಾಂಪಿಯನ್ಶಿಪ್ಗೆ ಅತಿ ಕಿರಿಯ ವಯಸ್ಸಿನ ಬಾಲಕಿಯಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿರುವ ಆಜ್ಞ ಕೊಡಗು ಜಿಲ್ಲೆಯ ಕೂಡುಮಂಗಳೂರಿನ ಅಮಿತ್ ಹಾಗೂ ದಿವ್ಯ ದಂಪತಿಯ ಪುತ್ರಿ. ಕುಶಾಲನಗರದ ಮಾರ್ಕೆಟ್ ರಸ್ತೆ ಯಲ್ಲಿರುವ ಕೂರ್ಗ್ ಕೊಂಬ್ಯಾಟ್ ಕ್ಲಬ್ (C3MMA)ನಲ್ಲಿ ತರಬೇತಿ ಪಡೆಯುತ್ತಿರುವ ಆಜ್ಞ ಮಿಶ್ರ ಮಾರ್ಷಲ್ ಆರ್ಟ್ಸ್ ನಲ್ಲಿ ವಿಶ್ವ ದಾಖಲೆ ಮಾಡುವ ಹೆಬ್ಬಯಕೆ ಹೊಂದಿದ್ದಾಳೆ. 9 ವರ್ಷದ ಆಜ್ಞ ಈಗಾಗಲೇ ಹಲವಾರು ಪದಕಗಳನ್ನು ತನ್ನದಾಗಿಸಿಕೊಂದಿದ್ದು, 2021 ರಲ್ಲಿ ರಾಜ್ಯ…
ಲೇಖಕ: admin
ನಾಪೋಕ್ಲು ಅ.15 NEWS DESK : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿಯ ಸೋಂದೆಯಲ್ಲಿ ನಡೆಯುವ ಏಳನೇ ರಾಜ್ಯಮಟ್ಟದ ಇತಿಹಾಸೋತ್ಸವಕ್ಕೆ, ಕೊಡಗಿನ ಪ್ರತಿನಿಧಿಯಾಗಿ ಚಾಮೆರ ದಿನೇಶ್ ಬೆಳ್ಯಪ್ಪ ಭಾಗವಹಿಸಿ, ರಾಜಡಳಿತಕ್ಕೆ ಹಿಂದಿನ ಕೊಡಗಿನ ಇತಿಹಾಸ ಎಂಬ ವಿಚಾರ ಮಂಡನೆ ಮಾಡಲಿದ್ದಾರೆ. ಜಾಗೃತ ವೇದಿಕೆ ಸೋಂದಾ, ಮಿಥಿಕ್ ಸೊಸೈಟಿ ಬೆಂಗಳೂರು, ಪುರಾತತ್ವ ವಸ್ತು ಸಂಗ್ರಹಾಲಯಗಳ ಪರಂಪರೆ ಇಲಾಖೆ, ಮೈಸೂರು, ಸೋದೆ ಸದಾಶಿವರಾಯ ಪ್ರಶಸ್ತಿ ಪ್ರಧಾನ ಸಮಿತಿ, ರಂಗಚರಿತ ಸೋಂದಾ, ಸಂಯುಕ್ತಾಶ್ರಯದಲ್ಲಿ ಅ.19 ಮತ್ತು 20ರಂದು ಸೋಂದೆಯ ಜೈನಮಠದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾದರೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ಖ್ಯಾತ ಇತಿಹಾಸ ತಜ್ಞರಾದ, ಡಾ. ವಸುಂದರಾ ಫಿಲಿಯೋಜ ಮೈಸೂರು ಅವರ ಸರ್ವಾಧ್ಯಕ್ಷತೆಯಲ್ಲಿ, ಕರ್ನಾಟಕದ ಖ್ಯಾತ ಇತಿಹಾಸಕಾರ ಮತ್ತು ಸೋಂದಾ ಇತಿಹಾಸೋತ್ಸವ ಸಮಿತಿ ಸಂಚಾಲಕ ಲಕ್ಷ್ಮೀಶ್ ಹೆಗಡೆ ಸೋಂದಾ ಅವರ ನೇತೃತ್ವದಲ್ಲಿ ಈ ಐತಿಹಾಸಿಕ ಉತ್ಸವವು ನಡೆಯಲಿದೆ. ಕರ್ನಾಟಕದ ನಾನಾ ಭಾಗಗಳಿಂದ ಸುಮಾರು 40ಕ್ಕೂ ಅಧಿಕ ಇತಿಹಾಸ ತಜ್ಞರು, ವಿಧ್ವಾಂಸರು, ಸಂಶೋಧಕರು ಭಾಗವಹಿಸಲಿದ್ದು,…
ಮಡಿಕೇರಿ ಅ.15 NEWS DESK : ಇತಿಹಾಸ ಪ್ರಸಿದ್ಧ “ಕುಂದಾತ್ ಬೊಟ್ಟ್ ಬೋಡ್ ನಮ್ಮೆ”ಗೆ ಕುಂದಾ ಮುಗುಟಗೇರಿ ಸಮೀಪದ ಶ್ರೀ ಈಶ್ವರ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ಸಾಂಪ್ರದಾಯಿಕ ದೋಳ್ ತೆಗೆಯುವ ಮೂಲಕ ಚಾಲನೆ ದೊರೆಯಿತು. ಪ್ರತಿವರ್ಷ ತಲಕಾವೇರಿಯಲ್ಲಿ ತೀರ್ಥೋದ್ಭವದ ದಿನ ಹಾಗೂ ಮರುದಿನ ಹಬ್ಬ ನಡೆಯಲಿದ್ದು, ಈ ವರ್ಷ ಅ.17 ಹಾಗೂ 18 ರಂದು ಹಬ್ಬ ನಡೆಯಲಿದೆ ಎಂದು ಭಂಡಾರ ತಕ್ಕರಾರ ಸಣ್ಣುವಂಡ ಅಪ್ಪಿ ಪೂಣಚ್ಚ ತಿಳಿಸಿದ್ದಾರೆ. ಸಣ್ಣುವಂಡ ಹಾಗೂ ಮನೆಯಪಂಡ ಕುಟುಂಬಸ್ಥರ ತಕ್ಕಾಮೆಯಲ್ಲಿ ಹಬ್ಬ ನಡೆಯಲಿದ್ದು, ಅ.17 ರಂದು ರಾತ್ರಿ ಮನೆ, ಅ.18 ರಂದು ಕುಂದಾ ಬೆಟ್ಟದ ಮೇಲೆ ಹಬ್ಬ ನಡೆಯಲಿದೆ. ಅಂದು ಮಧ್ಯಾಹ್ನ 12.30 ಗಂಟೆಗೆ ಸಣ್ಣುವಂಡ ಹಾಗೂ ಮನೆಯಪಂಡ ಕುಟುಂಬದ ಬಲ್ಯ ಮನೆಯಿಂದ ಕೃತಕವಾಗಿ ತಯಾರಿಸಿ ಶೃಂಗರಿಸಲಾದ ತಲಾ ಒಂದೊಂದು ಕುದುರೆಯನ್ನು ಹೊತ್ತವರು ಬೆಟ್ಟದ ತಪ್ಪಲಿನಲ್ಲಿರುವ ನಾಡ್ ದೇವಸ್ಥಾನದ ಸಮೀಪದ ಅಂಬಲದಲ್ಲಿ ವಿವಿಧ ವಿಧಿ ವಿಧಾನಗಳನ್ನು ಆಚರಿಸಿ ನಂತರ ಕಡಿದಾದ ಬೆಟ್ಟವನ್ನು ಏರುವ ಮೂಲಕ ಕುಂದಾ ಬೆಟ್ಟದ…
ಮಡಿಕೇರಿ ಅ.15 NEWS DESK : ಕೊಡಗಿನ ಕ್ರೀಡಾ ಲೋಕದ ಎಲ್ಲಾ ಕ್ರೀಡೆಯಲ್ಲೂ ಕೊಡಗಿನ ಆಟಗಾರರು ಮೆಲುಗೈ ಸಾಧಿಸಿದ್ದಾರೆ. ಕರಾಟೆ, ಸ್ಕ್ವಾಷ್ , ಸೈಲಿಂಗ್, ಅಥ್ಲೆಟಿಕ್ಸ್, ಫುಟ್ಬಾಲ್, ಟೆನ್ನಿಸ್ ಹಾಗೂ ಕುದುರೆ ಸವಾರಿಯಲ್ಲೂ ಕೂಡ ಹೆಸರುವಾಸಿಯೇ ಸರಿ. ಜಾಕಿ ಎಂದರೆ ಸಮ ಮೈಕಟ್ಟು, ತೂಕ ಹಾಗೂ ಅಳತೆ ತೂಗುವಂತೆ ಕುದುರೆಯ ಮೇಲೆ ಕುಳಿತು ತನ್ನ ಹತೋಟಿಯಲ್ಲಿ ನಿಯಂತ್ರಿಸುವುದು, ಒಂದು ಕಲಾತ್ಮಕ ಆಟ ಹಾಗೂ ಒಂದು ರೋಚಕ ವಿದ್ಯೆ. ಕೊಡಗಿನ ಹೆಸರಾಂತ ಜಾಕಿ ಮನೆಯಪಂಡ ರಾಜು ನಿರಂತರವಾಗಿ 4 ದಶಕಗಳ ಕಾಲ ತನ್ನ ನೈಪುಣ್ಯವನ್ನು ಪಳಗಿಸಿ, ಆಮೇಲೆ ತರಬೇತುದಾರರಾಗಿ ಕೊಡಗಿಗೆ ಹೆಸರು ತಂದು ಜಾಕಿ ರಾಜು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ ಹೊಟ್ಟೇಂಗಡ ಪೂಣಚ್ಚ ಕೂಡ ಜಾಕಿಯಲ್ಲಿ ಹೆಸರು ಗಳಿಸಿದರು. ಇನ್ನೊಬ್ಬ ಯುವ ಪ್ರತಿಭೆ ಪಟ್ಟಡ ಮೋಹನ್ ಬೋಪಣ್ಣ, ಜನರಲ್ ಬಸ್ ಮಾಲೀಕ ಮೋಹನ್ ಅವರ ಮಗ ಜಪಾನಿನಲ್ಲಿ ಜಾಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಅವರ ಪ್ರಕಾರ ದೇಹದ ತೂಕ 55ಕೆಜಿ ಮೀರದಂತೆ ನೋಡಿಕೊಳ್ಳಬೇಕು.…
ವಿರಾಜಪೇಟೆ ಅ.15 NEWS DESK : ವಿರಾಜಪೇಟೆ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಎನ್.ಕಮಲಮ್ಮ ಹಾಗೂ ವಿರಾಜಪೇಟೆ ವಿನಾಯಕ ಆಂಗ್ಲ ಮಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಬಿ.ಎ.ಶೈಲಾ ರಾಜ್ಯ ಮಟ್ಟದ ಗುರುಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಧಾರವಾಡದ ಅಪ್ನಾದೇಶ ಫೌಂಡೇಶನ್ ಈ ಪ್ರಶಸ್ತಿಯನ್ನು ನೀಡಿದ್ದು, ಧಾರವಾಡದ ನಾಡೋಜ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಈರ್ವರು ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು. ಶಿಕ್ಷಕಿ ಕಮಲಮ್ಮ ವಿರಾಜಪೇಟೆ ಸಮೀಪದ ಬೇಟೋಳಿ ನಿವಾಸಿಯಾಗಿದ್ದಾರೆ. ಶಿಕ್ಷಕಿ ಶೈಲಾ ಮೂಲತಃ ಐಮಂಗಲ ಗ್ರಾಮದವರಾಗಿದ್ದಾರೆ.
ಮಡಿಕೇರಿ ಅ.15 NEWS DESK : ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ನಡೆದ ಯೋಗ ಘಟಿಕೋತ್ಸವದಲ್ಲಿ ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮಾ ಇನ್ ಯೋಗ ಎಜುಕೇಶನ್ (Post Graduation Diploma in Yoga Education ( PGDYEd) ವಿಭಾಗದಲ್ಲಿ ಪಾಲಿಬೆಟ್ಟದ ಚೆಶೈರ್ ಹೋಮ್ ಶಾಲೆಯ ಮುಖ್ಯ ಶಿಕ್ಷಕರಾದ ಶಿವರಾಜ್ ಚಿನ್ನದ ಪದಕವನ್ನು ಪಡೆದು ಕೇಂದ್ರಕ್ಕೆ ಮತ್ತು ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಸೋಮವಾರಪೇಟೆ ಅ.15 NEWS DESK : ಸಮಾಜದಲ್ಲಿ ನಕಾರಾತ್ಮಕ ಭಾವನೆಗಳು ಮಿತಿಮೀರಿ ಬೆಳೆಯುತ್ತಿರುವುದರಿಂದ ಜೀವನದಲ್ಲಿ ಅನಾರೋಗ್ಯ ಹೆಚ್ಚುತ್ತಿದೆ ಎಂದು ಶಾಸಕ ಡಾ.ಮಂತರ್ಗೌಡ ಅಭಿಪ್ರಾಯಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ನವರಾತ್ರಿ ಪ್ರಯುಕ್ತ ಪಟ್ಟಣದ ಆಟಲ್ಜೀ ಸಭಾಂಗಣದಲ್ಲಿ ಆಯೋಜಿಸಿರುವ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಜ್ಞಾನ, ಮೂಡನಂಬಿಕೆಗಳು ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಯುವ ಜನಾಂಗ ವೈಜ್ಞಾನಿಕತೆಯತ್ತ ಮರಳಬೇಕು ಎಂದು ಕಿವಿಮಾತು ಹೇಳಿದರು. ಪ್ರವಚನಗಳು ಜೀವನ ಮೌಲ್ಯವನ್ನು ಪ್ರತಿಪಾದಿಸುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಒತ್ತಡಗಳಿಂದ ದೂರವಾಗಿ ಮಾನಸಿಕ ನೆಮ್ಮದಿ ಕಾಣಲು ಸಾಧ್ಯ ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ನೀತಿ ಶಿಕ್ಷಣದ ಜೊತೆಗೆ ವ್ಯಸನಮುಕ್ತ ಆಂದೋಲನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪ್ರಾಣೇಶ್, ಪಟ್ಟಣ ಪಂಚಾಯಿತಿ ಸದಸ್ಯ ಡಿ.ಯು.ಕಿರಣ್ ಈಶ್ವರೀಯ ವಿಶ್ವವಿದ್ಯಾನಿಲಯದ ಭಕ್ತಾದಿಗಳು ಇದ್ದರು.
ಸೋಮವಾರಪೇಟೆ ಅ.15 NEWS DESK : ಕಿಬ್ಬೆಟ್ಟ ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ 9 ದಿನಗಳ ಕಾಲ ಪೂಜಿಸಿದ್ದ ಉತ್ಸವ ಮೂರ್ತಿಯನ್ನು ಹಾರಂಗಿ ನದಿಯಲ್ಲಿ ವಿಸರ್ಜಿಸಲಾಯಿತು. ಪ್ರಧಾನ ಅರ್ಚಕ ಮನೋಜ್ ಭಟ್ ಅವರ ಪೌರೋಹಿತ್ವದಲ್ಲಿ ನವದುರ್ಗಾ ಮಾತೆಗೆ 9 ದಿನಗಳ ಕಾಲ ಅಲಂಕಾರದೊಂದಿಗೆ, ವಿಶೇಷ ಪೂಜೆ, ಹೋಮ ನಡೆಯಿತು. ಈ ಸಂದರ್ಭ ಪ್ರಮುಖರಾದ ಮಧು, ಗಣಪತಿ, ರವಿ, ಕುಶಾಲಪ್ಪ, ಮುರುಳಿ ಸೇರಿದಂತೆ ಹಲವರು ಇದ್ದರು.
ಮಡಿಕೇರಿ ಅ.14 NEWS DESK : ಮೈಸೂರಿನ ಮಹಾರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಪಡೆದುಕೊಂಡರು. ಶಾಲೆಯ ವಿದ್ಯಾರ್ಥಿಗಳಾದ ಕೆ.ಎಚ್.ಭವಿಷ್, ಬಿ.ಎಂ.ಬಿಪಿನ್ ಚಿಣ್ಣಪ್ಪ, ಯು.ಎಸ್.ಅಲೈನಾ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ನ್ಯಾಷನಲ್ ರೆಫ್ರಿ ಸೆನ್ಸಾಯ್ ನಾಗೇಂದ್ರಪ್ಪ ಮತ್ತು ತರಬೇತುದಾರ ಪವನ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ಮಡಿಕೇರಿ ಅ.14 NEWS DESK : ಗಾಳಿಬೀಡು ಗ್ರಾಮದ ಅಡ್ಕದಬಾಣೆಯಲ್ಲಿ ಸ್ನೇಹಿತರ ಯುವಕ ಸಂಘದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸಂಘದ ಅಧ್ಯಕ್ಷ ಕೋಳುಮುಡಿಯನ ಮೋಹನ್ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಜಿ.ವಿ.ಶ್ರೀನಾಥ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿ, ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೌಷ್ಟಿಕ ಆಹಾರ ಸೇವನೆಯ ಮಹತ್ವ, ರಕ್ತ ಹೀನತೆ ಮತ್ತು ನಿವಾರಣೆ, ಗರ್ಭಿಣಿ, ಬಾಣಂತಿ ಆರೈಕೆ, ಲಸಿಕಾ ಕಾರ್ಯಕ್ರಮ, ಮಾನಸಿಕ ಆರೋಗ್ಯದ ಕುರಿತು ಗ್ರಾಮಸ್ಥರಿಗೆ ಸಂಪೂರ್ಣ ಮಾಹಿತಿ ನೀಡಿದರು. ಶಿಬಿರದಲ್ಲಿ ಮಡಿಕೇರಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಗಾಳಿಬೀಡು ಆಯುಷ್ಮಾನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ರಮ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಉಷಾ ಹಾಗೂ ಆಶಾ ಕಾರ್ಯಕರ್ತೆ ಕವಿತ ಹಾಜರಿದ್ದರು. ಆರೋಗ್ಯ ತಪಸಣಾ ಶಿಬಿರಕ್ಕೆ ಹಾಜರಾದ ಗ್ರಾಮಸ್ಥರಿಗೆ ಬಿಪಿ, ಮಧುಮೇಹ, ಹಿಮೋಗ್ಲೋಬಿನ್ ತಪಾಸಣೆ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಗ್ರಾಮಸ್ಥರು…






