ನಾಪೋಕ್ಲು ಸೆ.26 NEWS DESK : ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣಮಟ್ಟದ ಆಹಾರ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಭಾರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ನಾಪೋಕ್ಲುವಿನ ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಿದೆ ಎಂದರು. ಇತ್ತೀಚಿನ ದಿನಗಳ ಜೀವನ ಶೈಲಿಯಲ್ಲಿನ ಬದಲಾವಣೆ, ಗುಣಮಟ್ಟದ ಆಹಾರ ಪಡೆಯದಿರುವುದು ಮತ್ತಿತರ ಕಾರಣವಾಗಿದೆ. ಆದ್ದರಿಂದ ಸರ್ಕಾರದಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಿ ಅಪೌಷ್ಟಿಕತೆ ತಡೆಯಬೇಕು ಎಂದರು. ಅಪೌಷ್ಟಿಕತೆಯು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ರೋಗಕ್ಕೆ ಒಳಗಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ. ಸಮತೋಲಿತ ಆಹಾರವಾದ ಹಸಿರು ಎಲೆಯುಕ್ತ ತರಕಾರಿ…
ಲೇಖಕ: admin
ಮಡಿಕೇರಿ ಸೆ.26 NEWS DESK : ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ. ಜಿಲ್ಲಾಧಿಕಾರಿ, ಕೊಡಗು ಉಪವಿಭಾಗಾಧಿಕಾರಿ ಹಾಗೂ ಜಿಲ್ಲೆಯ ಐದು ತಾಲ್ಲೂಕಿನ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಘಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಸಂಘದ ಕೇಂದ್ರ ಸಂಘದ ಕಾರ್ಯಕಾರಿಣಿ ನಿರ್ಣಯದಂತೆ ಇಲಾಖೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ 17 ಅಧಿಕ ತಂತ್ರಾಂಶಗಳನ್ನು ಮೊಬೈಲ್, ಲ್ಯಾಪ್ ಟಾಪ್, ಇಂಟರ್ನೆಟ್ ಹಾಗೂ ಅವಶ್ಯ ಸೌಲಭ್ಯಗಳನ್ನು ನೀಡದೆ ಅವುಗಳನ್ನು ನಿರ್ವಹಿಸಲು ಒತ್ತಡ ಹೆರುತ್ತಿರುವ ಬಗ್ಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಒದಗಿಸಬೇಕು, ಗ್ರಾಮ ಸಹಾಯಕರ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ ಅವರು, ತಪ್ಪಿದ್ದಲ್ಲಿ ಬೇಡಿಕೆಗಳು ಈಡೇರಿವವರೆಗೂ ಮುಷ್ಕರ ಹೂಡುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ ಸೆ.26 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಕುರಿತು ಮಾಹಿತಿ ನೀಡಲಾಯಿತು. ಸುಂಟಿಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಎಎಸ್ಐ ಸೈಮನ್ ಡಿಕುನ್ನ, ದುಶ್ಚಟಗಳಿಂದ ಮಕ್ಕಳ ಆರೋಗ್ಯದ ಮೇಲೆ ಬೀರುವ ದುಷ್ಪಾರಿಣಾಮಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ತಾಲ್ಲೂಕು ಜ್ಞಾನವಿಕಾಸ ಅಧಿಕಾರಿ ಮಾಲಿನಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಾಲ ವಿತರಿಸುವುದು ವಸೂಲಾತಿ ಮಾಡುವುದಕ್ಕೆ ಮಾತ್ರ ಸಂಘವು ಸಿಮೀತಗೊಳ್ಳದೆ ವ್ಯಕ್ತಿಗಳ ವೈಯಕ್ತಿಕ ಅಭಿವೃದ್ಧಿಗೆ ಬೇಕಾದ ತರಬೇತಿಗಳನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು. ವಿದ್ಯಾರ್ಥಿಗಳ ಜೀವನವು ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಿ ಸಮಾಜದ ಉತ್ತಮ ಪ್ರಜೆಗಳಾಗಬೇಕೆಂದು…
ಸುಂಟಿಕೊಪ್ಪ ಸೆ.25 NEWS DESK : ರಂಗಸಮುದ್ರ, ವಿವಿಧೋದ್ದೇಶ ಸಹಕಾರ ದವಸ ಭಂಡಾರ ನಿಯಮಿತದ 86ನೇ ವಾರ್ಷಿಕ ಮಹಾಸಭೆಯು ದವಸ ಭಂಡಾರ “ಎ” ಕಟ್ಟಡದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಎಸ್.ಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಕೆಳೆದ ಅವಧಿಯ ಮಹಾಸಭೆಯ ವರದಿಯನ್ನು ಹಾಗೂ ಸಭೆಯಲ್ಲಿ 2023-24ರ ಸಾಲಿನ ಜಮಾ-ಖರ್ಚು ಕರಡು ಪ್ರತಿಯನ್ನು ವಾಚಿಸುವ ಮೂಲಕಸಭೆಯ ಅಂಗೀಕಾರ ಪಡೆಯಲಾಯಿತು. ಪ್ರಸಕ್ತ ಸಾಲಿನ ಆಡಳಿತ ಮಂಡಳಿಯ ವರದಿಯನ್ನು ಮಂಡಿಸಲಾಯಿತು. ಪ್ರಸ್ತುತ ಕಾರ್ಯನಿರ್ಸುತ್ತಿರುವ ಆಡಳಿತ ಮಂಡಳಿಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಕಾರಿ ಮಂಡಳಿಯನ್ನು ಯಥವತ್ತಾಗಿ ಮುಂದುವರಿಸಲು ಸದಸ್ಯರಾದ ಬಸಪ್ಪ ಹಾಗೂ ನಂದಿನೆರವಂಡ ಅಚ್ಚಯ್ಯ ಸೇರಿದಂತೆ ಮತ್ತಿತರರು ಸಲಹೆ ನೀಡಿದರು. ಮಹಾಸಭೆಯಲ್ಲಿ ಸದಸ್ಯರುಗಳು ನೀಡಿದ ಅನೇಕ ಅಭಿವೃದ್ಧಿಪರ ಅಂಶಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮವಹಿಸುವುದಾಗಿ ದವಸ ಭಂಡಾರದ ಅಧ್ಯಕ್ಷ ಪಿ.ಎಸ್. ಬಸಪ್ಪ ಭರವಸೆ ನೀಡಿದರು. ಸಭೆಯಲ್ಲಿ ಉಪಾಧ್ಯಕ್ಷ ಆರ್.ಕೆ.ಚಂದ್ರ, ನಿರ್ದೇಶಕ ಎಂ.ಸಿ.ದಾಮೋದರ, ಹೆಚ್.ಬಿ.ರುದ್ರಪ್ಪ, ಎ.ಎಂ.ಲೋಕನಾಥ, ಪಿ.ಬಿ.ಆಶೋಕ, ಬಿ.ಎಸ್.ಧನಪಾಲ, ಟಿ.ಸಿ.ಶಿವಕುಮಾರ್, ಜಿ.ಆರ್.ಶಾರದ, ಕೆ.ಕೆ.ಲೀಲಾವತಿ, ಡಬ್ಲ್ಯೂ.ಪಿ.ಶಿವಕುಮಾರ್ ಮತ್ತಿತರರು…
ಮಡಿಕೇರಿ ಸೆ.26 NEWS DESK : ನಿರಂತರವಾಗಿ ಕ್ರೀಡೆ, ಶೈಕ್ಷಣಿಕ ಮತ್ತು ಸಾಮಾಜಿಕ ರಂಗದಲ್ಲಿ ತೊಡಗಿಕೊಂಡಿರುವ ಚೆಟ್ಟಳ್ಳಿ ಸಮೀಪದ ಕಂಡಕರೆಯ ಗಾಂಧಿ ಯುವಕ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಪುನರಾಯ್ಕೆಯಾಗಿದ್ದಾರೆ. ಸೆ. 23ರಂದು ಕಂಡಕರೆಯ ಬ್ರೈಟ್ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆದ ಗಾಂಧಿ ಯುವಕ ಸಂಘದ ಮಹಾಸಭೆಯಲ್ಲಿ 2024-26ನೇ ಅವಧಿಗೆ ಇಸ್ಮಾಯಿಲ್ ಕಂಡಕರೆ ಅವರನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆ ಮಾಡಲಾಯಿತು. ಸಂಘದ ನೂತನ ಹಿರಿಯ ಉಪಾಧ್ಯಕ್ಷರಾಗಿ ಷರೀಫ್ ಪಿ.ಎಂ,ಉಪಾಧ್ಯಕ್ಷರಾಗಿ ಇರ್ಷಾದ್ ಕೆ.ಎಂ,ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಉಸ್ಮಾನ್, ಕಾರ್ಯದರ್ಶಿಯಾಗಿ ಪಿ.ಎಂ.ಅಜಿನಾನ್, ಸಂಘಟನಾ ಕಾರ್ಯದರ್ಶಿಯಾಗಿ ಸಿ.ಎ.ಉವೈಸ್, ಕೆ.ಜೆ.ಮೊಹಮ್ಮದ್ ಶಿಬಲ್, ಖಜಾಂಚಿಯಾಗಿ ಒ.ಎಸ್.ಸುಹೈಲ್ ಆಯ್ಕೆಯಾಗಿದ್ದಾರೆ. ಸಂಘದ ನೂತನ ನಿರ್ದೇಶಕರಾಗಿ ಉನೈಸ್ ಕೆ.ಎಂ,ಅಫ್ನಾನ್ ಪಿ.ಎಂ,ಶಮ್ಮಾಸ್,ಹರ್ಷಾದ್, ಸಿ.ಎಸ್.ಅಫ್ಸಲ್ , ಇಮ್ರಾನ್ ಆಲಿ ಹಾಗೂ ಮೊಹಮ್ಮದ್ ಸಿದ್ದೀಖ್ ಆಯ್ಕೆಯಾಗಿದ್ದಾರೆ. ಮಹಾಸಭೆಯಲ್ಲಿ ಗಾಂಧಿ ಯುವಕ ಸಂಘದ ಮುಂದಿನ ಎರಡು ವರ್ಷಗಳ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು. ಅ.2 ರಂದು ಕಂಡಕರೆ ಸರ್ಕಾರಿ ಹಿರಿಯ…
ಮಡಿಕೇರಿ NEWS DESK ಸೆ.26 : ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನ ಅವರು ಮೃತಪಟ್ಟಿದ್ದಾರೆ. ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜ್ ಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ಡಿಕ್ಕಿಯಾಗಿ ಕ್ರಿಸ್ಟಲಿನ ಗಾಯಗೊಂಡಿದ್ದರು. ಇವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ನಿಧನ ಹೊಂದಿದರು. ಕ್ರಿಸ್ಟಲಿನ ಅವರು ವಿರಾಜಪೇಟೆ ಬೇಟೋಳಿ ನಿವಾಸಿ ಸಬಾಸ್ಟಿನ್ ಅವರ ಪತ್ನಿ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ. ಮೃತ ಕ್ರಿಸ್ಟಲಿನ ಅವರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸುಂಟಿಕೊಪ್ಪ ಸೆ.26 NEWS DESK : ಆಯುಷ್ಮಾನ್ ಯೋಜನೆಯಡಿಯಲ್ಲಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ಮೇಳ ನಡೆಯಿತು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ಕುಮಾರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ವರ್ಷವನ್ನು ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸೂಚಿಸಿದೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯು ಸುಸ್ಥಿರ ಆರೋಗ್ಯವನ್ನು ಹೊಂದುವಂತಾಗಬೇಕು ಎಂದರು. ‘ಆಯುಷ್ಮಾನ್’ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ವಾರ್ಡ್ಗಳಲ್ಲಿ ನಡೆಸಲಾಗುತ್ತಿದೆ. ಶಿಬಿರದಲ್ಲಿ ನುರಿತ ವೈದ್ಯರು ಹಾಗೂ ಸಿಬ್ಬಂದಿಗಳು ಆಗಮಿಸುತ್ತಿದ್ದು, ಎಲ್ಲಾ ತರಹದ ಕಾಯಿಲೆಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತದೆ. ಪ್ರತಿಯೋರ್ವ ವ್ಯಕ್ತಿಯು ಉಚಿತ ತಪಾಸಣೆ ನಡೆಸಿಕೊಂಡು ಸಂಬಂಧಿಸಿದ ನುರಿತ ವೈದ್ಯರಿಂದ ಸ್ಥಳದಲ್ಲೇ ಚಿಕಿತ್ಸೆ ಪಡೆಯುವಂತಾಗಲಿ ಎಂದರು. ಜಿಲ್ಲಾ ಶಸ್ತ್ರ ಚಿಕಿತ್ಸೆಯ ವೈದ್ಯರಾದ ನಂಜುಡಯ್ಯ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಚೇತನ್, ಮಡಿಕೇರಿ ಜಿಲ್ಲಾ ಸರ್ವೆಶಿಕ್ಷಣ ಘಟಕದ…
ಸೋಮವಾರಪೇಟೆ NEWS DESK ಸೆ.25 : ಸೋಮವಾರಪೇಟೆ ಪಟ್ಟಣದ ಎಂ.ಜಿ.ರಸ್ತೆ ನಿವಾಸಿ ದಿವಂಗತ ವೆಂಕಟಪ್ಪ(ಬಾರ್ ವೆಂಕಟಪ್ಪ) ಅವರ ಪತ್ನಿ ಗೌರಮ್ಮ(76) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೆ.26 ಗುರುವಾರ ಸಂಜೆ 3ಗಂಟೆಯ ನಂತರ ಕರ್ಕಳ್ಳಿಯಲ್ಲಿರುವ ಕುರುಹಿನ ಶೆಟ್ಟಿ ರುದ್ರಭೂಮಿಯಲ್ಲಿ ನಡೆಯಲಿದೆ.
ಕುಶಾಲನಗರ NEWS DESK ಸೆ.25 : ನ್ಯಾಯಾಲಯದ ಸೂಚನೆಯಂತೆ, ನ್ಯಾಯಸಮ್ಮತವಾಗಿ ಚುನಾವಣೆ ಪ್ರಕ್ರಿಯೆ ನಡೆದಿದೆ. ಇಲ್ಲಿ ನಮ್ಮ ಪರ ಆದೇಶ ಬಂದ ಕಾರಣ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ. ನ್ಯಾಯ ಎಲ್ಲರಿಗೂ ಒಂದೆ, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಂದ ತೀರ್ಪಿಗೆ ಸಂಭ್ರಮಿಸುವ ಬಿಜೆಪಿ ಮಂದಿ ಕುಶಾಲನಗರದ ವಿಚಾರದಲ್ಲಿ ವಿರುದ್ಧವಾಗಿ ವರ್ತಿಸುತ್ತಿದ್ದಾರೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾನೂನಿನ ಚೌಕ್ಕಟ್ಟಿನಲ್ಲಿಯೇ ನಾಮನಿರ್ದೇಶನ ಪ್ರಕ್ರಿಯೆ ನಡೆದಿದ್ದು, ಮುಳ್ಳುಸೋಗೆ ಭಾಗದಿಂದ ಐವರನ್ನು ನೇಮಿಸಲಾಗಿದೆ. ಅಧಿಕಾರ ಕಳೆದುಕೊಂಡ ಇಬ್ಬರನ್ನು ಹೆಚ್ಚುವರಿ ಸೇರ್ಪಡೆ ಮಾಡಲಾಗಿದೆ. ಕಾನೂನಿನಲ್ಲಿದ್ದ ಅವಕಾಶದಂತೆ ನಾವು ಮಾಡಿದ್ದೇವೆ ಎಂದು ಶಾಸಕರು ಕುಶಾಲನಗರದಲ್ಲಿ ಸ್ಪಷ್ಟಪಡಿಸಿದರು.
ಮಡಿಕೇರಿ NEWS DESK ಸೆ.25 : ಜೆಡಿಎಸ್ ಬೆಂಬಲದಿಂದ ಕುಶಾಲನಗರ ಪುರಸಭೆಯ ಅಧಿಕಾರ ಕಾಂಗ್ರೆಸ್ ಪಾಲಾಗಿದೆ. ನೂತನ ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಪುಟ್ಟ ಲಕ್ಷ್ಮಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಸದಸ್ಯರುಗಳು ಚುನಾವಣೆ ಬಹಿಷ್ಕರಿಸಿದ್ದರು. ಇದು ಅವಿರೋಧ ಆಯ್ಕೆಗೆ ದಾರಿ ಸುಗಮಗೊಳಿಸಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಪರ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಹಾಗೂ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಪರ ಪುರಸಭೆ ಸದಸ್ಯರಾದ ಕಲೀಮುಲ್ಲಾ ಚುನಾವಣಾಧಿಕಾರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ನಾಮಪತ್ರ ಸಲ್ಲಿಸಿದರು. ಪುರಸಭೆ ಕಛೇರಿ ಆವರಣಕ್ಕೆ ಆಗಮಿಸಿದ ಬಿಜೆಪಿ ಮುಖಂಡರು ಹಾಗೂ ಸದಸ್ಯರು ಚುನಾವಣೆ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ದಿಕ್ಕಾರ ಕೂಗಿದರು. ಚುನಾವಣೆ ಬಹಿಷ್ಕರಿಸುವುದಾಗಿ ಹೇಳಿ ತಹಶೀಲ್ದಾರ್ ಗೆ ಪತ್ರ ಸಲ್ಲಿಸಿ ತೆರಳಿದರು. ನಿಗಧಿತ ಅವಧಿಯ ನಂತರ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಕುರಿತು ಚುನಾವಣಾಧಿಕಾರಿ ಘೋಷಿಸಿದರು. ಕಾಂಗ್ರೆಸ್ ಮುಖಂಡರು,…






