ಮಡಿಕೇರಿ ಅ.14 NEWS DESK : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು; ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ…
ಲೇಖಕ: admin
ಮಡಿಕೇರಿ ಅ.14 NEWS DESK : ಮೂರ್ನಾಡು ಗ್ರಾಮದ 33/11 ಕೆ.ವಿ ವಿದ್ಯುತ್ ಉಪ ಕೇಂದ್ರ ಹೊರಹೊಮ್ಮುವ ನಾಪೋಕ್ಲು ಮತ್ತು ಎಫ್5 ಹೊದ್ದೂರು ಫೀಡರ್ನಲ್ಲಿ ಅ.15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ನಾಪೋಕ್ಲು, ಕುಂಜಿಲ, ಕಕ್ಕಬೆ, ನಾಲಡಿ, ಯವಕಪಾಡಿ, ಕೊಟ್ಟಮುಡಿ, ಬೇತು, ಪಾಲೂರು, ಹೊದ್ದೂರು, ಹಳೆತಾಲೂಕು, ಎಮ್ಮೆಮಾಡು. ಬಲ್ಲಮಾವಟಿ, ಕೊಳಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಅ.14 NEWS DESK : ನೆಲ್ಯಹುದಿಕೇರಿ ಗ್ರಾಮದ ಶ್ರೀ ಸತ್ಯನಾರಾಯಣ ದೇವಸ್ಥಾನಕ್ಕೆ ಒಳಪಟ್ಟ ಜಾಗದಲ್ಲೆ ‘ಹಿಂದೂ ರುದ್ರಭೂಮಿ’ ನಿರ್ಮಾಣಕ್ಕೆ ನಡೆಯುತ್ತಿರುವ ಪ್ರಯತ್ನಗಳನ್ನು ವಿರೋಧಿಸಿ ಅ.15 ರಂದು ಮೌನ ಪಾದಯಾತ್ರೆ ಮತ್ತು ಗ್ರಾಮ ಪಂಚಾಯ್ತಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಸತ್ಯನಾರಾಯಣ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಟಿ.ಜಿ, ಅತ್ಯಂತ ಪುರಾತನವಾದ ಶ್ರೀಸತ್ಯನಾರಾಯಣ ದೇಗುಲದ ಸ್ವಾಧೀನದಲ್ಲಿರುವ ಜಾಗದಲ್ಲೆ ‘ಮಸಣಿಕಮ್ಮ’ನ ಸ್ಥಾನವಿದ್ದು, ಶತಮಾನಗಳಿಂದ ಈ ಸ್ಥಾನದಲ್ಲಿ ಆರಾಧನೆಯನ್ನು ಮಾಡಿಕೊಂಡು ಬರಲಾಗುತ್ತಿದೆ. ಇದರ ಸಮೀಪವೇ ರುದ್ರಭೂಮಿ ನಿರ್ಮಾಣಕ್ಕೆ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಿಸಿದರು. ದೇವರ ಉತ್ಸವದ ಸಂದರ್ಭ ದೇವರ ಭಂಡಾರ ತರುವ, ದೇವರು ಜಳಕಕ್ಕೆ ತೆರಳುವ ಹಾದಿಯ ಬಳಿಯಲ್ಲೆ ರುದ್ರ ಭೂಮಿ ನಿರ್ಮಿಸಬೇಕೆಂದು ಎಡಪಕ್ಷವೊಂದು ಪ್ರತಿಭಟನೆ ನಡೆಸಿರುವುದಲ್ಲದೆ, ಪಂಚಾಯ್ತಿಗೆ, ಜಿಲ್ಲಾಡಳಿತಕ್ಕೆ ಮನವಿಗಳನ್ನು ನೀಡಿದೆ. ರುದ್ರಭೂಮಿಯನ್ನು ದೇವಸ್ಥಾನದ ಬಳಿಯಲ್ಲಿ ನಿರ್ಮಿಸುವ ಪ್ರಯತ್ನಗಳು ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುತ್ತಿದೆ. ಯಾವುದೇ ಕಾರಣಕ್ಕೂ ದೇವಸ್ಥಾನದ ಬಳಿಯಲ್ಲಿ ರುದ್ರಭೂಮಿಯನ್ನು ನಿರ್ಮಿಸಬಾರದು…
ಮಡಿಕೇರಿ ಅ.14 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸಂಭ್ರಮದಿಂದ ಸಮಾರೋಪಗೊಂಡಿದ್ದು, ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ವಿಶೇಷ ವೇತನ ಪಾವತಿಸಬೇಕೆಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಯೂನಿಯನ್ ನ ಅಧ್ಯಕ್ಷ ಷರೀಫಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್ ಅವರು, ಕಾಯಕವೇ ಕೈಲಾಸ ಎಂಬಂತೆ ರಾತ್ರಿ ಹಗಲೆನ್ನದೆ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ನವರಾತ್ರಿಯ ಅಂಗವಾಗಿ ವಿಶೇಷ ವೇತನ ಪಾವತಿ ಮಾಡುವ ಮೂಲಕ ನಗರಸಭೆ ದುಡಿಮೆಗೆ ತಕ್ಕ ಫಲ ನೀಡಬೇಕೆಂದು ಒತ್ತಾಯಿಸಿದ್ದಾರೆ. ನಗರದ ತುಂಬಾ ರಾಶಿ ರಾಶಿ ಕಸ ಬಿದ್ದಿದೆ, ಮಳೆಯಿಂದಾಗಿ ತ್ಯಾಜ್ಯ ಕೆಸರುಮಯವಾಗಿದೆ, ಚರಂಡಿಗಳು ತುಂಬಿ ಹೋಗಿವೆ. ಕಸ ವಿಲೇವಾರಿ ಮಾಡಿ ಸ್ವಚ್ಛತೆಯನ್ನು ಕಾಪಾಡಲು ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಪರಿಗಣಿಸಿ ಗೌರವಿಸಬೇಕು ಮತ್ತು ಹೆಚ್ಚು ವೇತನವನ್ನು ನೀಡಬೇಕು. ಈ ಬಗ್ಗೆ ನಗರಸಭೆಯ ಆಡಳಿತಾಧಿಕಾರಿ ಹಾಗೂ ದಸರಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಗಮನ…
ಮಡಿಕೇರಿ ಅ.14 NEWS DESK : ಕರ್ನಾಟಕ ಮತ್ತು ಬಾಗಲಕೋಟೆ ಜಿಲ್ಲಾ ಕಿವುಡರ ಸಂಘದಿಂದ ಬಾಗಲಕೋಟೆಯಲ್ಲಿ ನಡೆದ 14ನೇ ಕರ್ನಾಟಕ ರಾಜ್ಯ ಕಿವುಡರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡ ತೃತೀಯ ಬಹುಮಾನ ಪಡೆದುಕೊಂಡಿತು. ಬಾಗಲಕೋಟೆಯ ಕಾಲೇಜು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ಕೊಡಗು ಸೇರಿದಂತೆ ಸುಮಾರು 20 ಜಿಲ್ಲೆಗಳಿಂದ ಸ್ಪರ್ಧಿಗಳು ಪಾಲ್ಗೊಂಡು ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಪ್ರಥಮ ಬಹುಮಾನ ಮಂಗಳೂರು, ದ್ವಿತೀಯ ಬಹುಮಾನ ಮಂಡ್ಯ, ತೃತೀಯ ಕೊಡಗು ಹಾಗೂ ನಾಲ್ಕನೇ ಬಹುಮಾನವನ್ನು ಮೈಸೂರು ತಂಡ ತಮ್ಮದಾಗಿಸಿಕೊಂಡಿತು. ಸಂಜ್ಞೆ ಭಾಷೆ ಹಾಗೂ ಧ್ವಜದ ಚಿಹ್ನೆಗಳನ್ನು ನೋಡುವ ಮೂಲಕ ಕ್ರೀಡೆಗಳಲ್ಲಿ ಸೆಣಸಾಟ ಆರಂಭಿಸಿದ ಕ್ರೀಡಾಪಟುಗಳು ಕೊನೆಯ ಕ್ಷಣದವರೆಗೂ ರೋಚಕವಾಗಿ ಹೋರಾಟ ನಡೆಸಿ ಗಮನ ಸೆಳೆದರು. 2025ರ ಅಕ್ಟೋಬರ್ ತಿಂಗಳಿನಲ್ಲಿ 15ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟವು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯಲಿದೆ.
ಮಡಿಕೇರಿ ಅ.14 NEWS DESK : ಇತರರಿಗೆ ಮಾದರಿಯಾಗಿರುವ “ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗ” ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಶ್ರಮದಲ್ಲಿರುವ ನೊಂದ ಹಿರಿಯರಿಗೆ ಅನ್ನದಾನ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. “ಎಲ್ಲರೂ ನಮ್ಮವರು” ಎಂಬ ಘೋಷವಾಕ್ಯದೊಂದಿಗೆ ಮಡಿಕೇರಿಯ ತ್ಯಾಗರಾಜ ಕಾಲೋನಿಯ ತನಲ್ ಆಶ್ರಮದಲ್ಲಿ ಹಿರಿಯರಿಗಾಗಿ ವಿವಿಧ ಸ್ಪರ್ಧೆಯನ್ನು ನಡೆಸಲಾಯಿತು. ನಂತರ ಆಶಾಕಿರಣದ ಫೈವ್ ಸ್ಟಾರ್ ಸಿಂಗರ್ಸ್ ನ ಭಾಷಾ ಹಾಗೂ ಶಿವಣ್ಣ ಅವರ ನೇತೃತ್ವದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿ ಆಶ್ರಮವಾಸಿಗಳಿಗೆ ಮನರಂಜನೆ ನೀಡಲಾಯಿತು ಮತ್ತು ಅನ್ನದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನೊಂದವರ ಬಾಳಿನ ಆಶಾಕಿರಣ ಗೆಳೆಯರ ಬಳಗದ ಅಧ್ಯಕ್ಷ ಮೊಹಮ್ಮದ್ ಆಲಿ, ಉಪಾಧ್ಯಕ್ಷ ಸುಲೇಮಾನ್, ಖಜಾಂಚಿ ಶಿವು, ಕಾರ್ಯದರ್ಶಿ ಎಂ.ಎ.ಅಬ್ದುಲ್ ರಜಾಕ್, ಗಾಯಕಿ ಮಮತಾ, ದೀಕ್ಷಿತ್, ನಗರಸಭಾ ಸದಸ್ಯರಾದ ಅಮಿನ್ ಮೊಹಿಸಿನ್, ಬಶೀರ್, ಅಹ್ಮದ್, ಮೇರಿ ವೇಗಸ್, ಲತೀಫ್, ಸಾಮಾಜಿಕ ಕಾರ್ಯಕರ್ತರಾದ ರಜಾಕ್, ಅಬ್ಸೀನಾ, ಸೆಲಿಕತ್ ಹಾಗೂ ಬಡಾವಣೆಯ ನಿವಾಸಿಗಳು ಹಾಜರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮಡಿಕೇರಿ ಅ.14 NEWS DESK : ದಸರಾ ಉತ್ಸವದ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಈ ಸಂದರ್ಭ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪಕ್ಷದ ಕಾರ್ಯಕರ್ತರುಗಳೊಂದಿಗೆ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಬಳ್ಳಾರಿ ಅ.14 NEWS DESK : ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಿಮಿತ್ತ ಬಳ್ಳಾರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದರಾದ ಈ.ತುಕಾರಾಂ ಸೇರಿ ಹಲವು ಗಣ್ಯರು ಹಾಜರಿದ್ದರು. ಸಂಡೂರು ತಾಲೂಕಿನ ನಾರಿಹಳ್ಳ ಕಿರು ಜಲಾಶಯವು 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಸರೆಯಾಗಿದೆ.
ಮಡಿಕೇರಿ ಅ.14 NEWS DESK : ಮಡಿಕೇರಿ ದಸರಾ ಜನೋತ್ಸವ ಸಂದಭ೯ 9 ದಿನಗಳು ಸಾಂಸ್ಕೃತಿಕ ಕಾಯ೯ಕ್ರಮಗಳನ್ನು ವ್ಯವಸ್ಥಿತವಾಗಿ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಅವರನ್ನು ಸಾಂಸ್ಕೃತಿಕ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾಯ೯ಕ್ರಮದಲ್ಲಿ ಸಾಂಸ್ಕೃತಿಕ ಸಮಿತಿ ಪರವಾಗಿ ಅನಿಲ್ ಅವರಿಗೆ ಜಿಲ್ಲಾಧಿಕಾರಿ ಮತ್ತು ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ವೆಂಕಟ್ರಾಜಾ ಸನ್ಮಾನಿಸಿ ಗೌರವಿಸಿದರು. ಯಾವುದೇ ಸಮಸ್ಯೆಯಿಲ್ಲದಂತೆ ಈ ಬಾರಿ ಸಾಂಸ್ಕೃತಿಕ ಕಾಯ೯ಕ್ರಮಗಳೂ ಭವ್ಯ ವೇದಿಕೆಯಲ್ಲಿ ಆಯೋಜಿತವಾಗಿ ಜನಮನ ಗೆದ್ದಿದೆ. ಇದಕ್ಕಾಗಿ ಸಮಿತಿ ಸದಸ್ಯರು, ವೇದಿಕೆ, ಸ್ವಾಗತ ಸಮಿತಿಯವರಿಗೂ ಅಭಿನಂದನೆ ಸಲ್ಲಿಸುವುದಾಗಿಯೂ ಜಿಲ್ಲಾಧಿಕಾರಿಗಳು ನುಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿಲ್ ಹೆಚ್.ಟಿ ಮಾತನಾಡಿ, ಸ್ಥಳೀಯ ಪ್ರತಿಭೆಗಳ ಜತೆಗೇ ರಾಷ್ಟ್ರ ಮತ್ತು ರಾಜ್ಯಮಟ್ಟದ ಖ್ಯಾತ ಕಲಾವಿದರನ್ನು ದಸರಾ ವೇದಿಕೆಗೆ ಆಹ್ವಾನಿಸಿ ಕಾಯ೯ಕ್ರಮ ನೀಡುವಲ್ಲಿ ಶಾಸಕ ಡಾ.ಮಂಥರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್ರಾಜಾ, ಪೌರಾಯುಕ್ತ ರಮೇಶ್ ಹಾಗೂ ದಸರಾ ಸಮಿತಿ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ಬಿ.ವೈ.ರಾಜೇಶ್ ಮತ್ತು…
ಮಡಿಕೇರಿ ಅ.14 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ “ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ” ಎಂಬ ಘೋಷ ವಾಕ್ಯದೊಂದಿಗೆ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2024” ಆಚರಿಸಲಾಯಿತು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಮುನಿರತ್ನಮ್ಮ ಉದ್ಘಾಟಿಸಿ, ಅತಿಯಾದ ಕೆಲಸದ ಅವಧಿ ಮತ್ತು ಸ್ಪಷ್ಟತೆ ಇರದ ಸಂದೇಶಗಳು, ಮಾನಸಿಕ ಕ್ಷೋಭೆ ಉಂಟು ಮಾಡುತ್ತವೆ. ನೌಕರರ ಒಳ್ಳೆಯ ಕೆಲಸಗಳಿಗೆ ಪ್ರೋತ್ಸಾಹ ಸಿಗದಿರುವುದು ಕೂಡ ಮಾನಸಿಕ ಅನಾರೋಗ್ಯ ಉಂಟುಮಾಡಬಹುದು ಎಂದು ಹೇಳಿದರು.…






