ಸುಂಟಿಕೊಪ್ಪ ಸೆ.25 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಗದ್ದೆಹಳ್ಳ ಒಕ್ಕೂಟದ ತ್ರೈಮಾಸಿಕ ಸಭೆಯು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ಆರೋಗ್ಯ ಮಾಹಿತಿ ಹಾಗೂ ಸಾಂಕ್ರಾಮಿಕ ರೋಗಗಳು ಮತ್ತು ಅಸಾಂಕ್ರಾಮಿಕ ರೋಗಗಳ ಬಗ್ಗೆ ವಿವರಣೆ ನೀಡಿದರು. ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ತಾಯಿ ಮಾಡಬೇಕಾದ ಮುಂಜಾಗ್ರತೆಗಳ ಬಗ್ಗೆ ಮಾಹಿತಿ ನೀಡಿ, ಸ್ವಚ್ಛತಾ ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಿದರು. ವಲಯದ ಮೇಲ್ವಿಚಾರಕ ಪ್ರಗತಿ ನಿಧಿ ಸಾಲದ ಬಡ್ಡಿಯ ಬಗ್ಗೆ, ದಶಾಂಶದ ಬಗ್ಗೆ, ಸಂಘದ ವಾರದ ಸಭೆಯ ಮಹತ್ವ, ವಿನಿಯೋಗದಾರರ ಬದಲಾವಣೆಯಾದ ಬಗ್ಗೆ ಹಾಗೂ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾವಿತ್ರಿ ಮಾತನಾಡಿ ಸಂಘವು ಒಳ್ಳೆಯ ರೀತಿಯಲ್ಲಿ ನಡೆಯಬೇಕಿದ್ದಲ್ಲಿ ನಮ್ಮಲ್ಲಿ ಶಿಸ್ತು, ಸಂಯಮ ಅಗತ್ಯ ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎತ್ತರಕ್ಕೆ ಬೆಳೆಯಲೆಂದು ಹಾರೈಸಿದರು. ಒಕ್ಕೂಟ ಉಪಾಧ್ಯಕ್ಷ ಆನಂದ್ ಅವರ…
ಲೇಖಕ: admin
ಸುಂಟಿಕೊಪ್ಪ ಸೆ.25 NEWS DESK : ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 40,55,195 ರೂಗಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.18 ಡಿವಿಡೆಂಡ್ ನೀಡಿದರು. ವರ್ಷದಿಂದ ವರ್ಷಕ್ಕೆ ಪ್ರಗತಿಯನ್ನು ಸಾಧಿಸುತ್ತಾ ಬರುತ್ತಿದೆ ಎಂದು ಸಂಘದ ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ ಹೇಳಿದರು. ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 93ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಸದಸ್ಯರುಗಳಿಗೆ ಭೂ ದಾಖಲಾತಿ ಆಧಾರದ ಮೇಲೆ ಕೆಪಿಸಿ ಫಸಲು ಸಾಲ ಕೃಷಿಯೇತರ ಸಾಲ, ಮಧ್ಯಮಾವದಿ ಕೃಷಿ ಸಾಲ, ವಾಹನ ಸಾಲ, ವೇತನ ಆಧಾರಿತ ಸಾಲ, ಆಭರಣ ಸಾಲ, ವ್ಯಾಪಾರ ಅಭಿವೃದ್ಧಿ ಸಾಲ, ಪಿಗ್ಮಿಠೇವಣಿ ಜವರ್ ಡ್ರಾಪ್ಟ್ ಸಾಲ, ಹಾಗೂ ಸ್ವಸಹಾಯ ಸಂಘಗಳಿಗೆ ಸಾಲ ನೀಡಲಾಗುತ್ತಿದೆ ಎಂದರು. ಸಂಘದಲ್ಲಿ 1576 ಮಂದಿ ಸದಸ್ಯರುಗಳಿದ್ದು, ಪಾಲು ಬಂಡವಾಳ ರೂ.1,14,80,35 ಇರುತ್ತದೆ. ಸಂಘದಲ್ಲಿ 9 ಕೋಟಿ 52 ಲಕ್ಷ 32328 ಠೇವಣಿ ಸಂಗ್ರಹಿಸಲಾಗಿದೆ. ಕೆಸಿಸಿ ಸಾಲದ 350 ಸದಸ್ಯರಿಗೆ…
ಮಡಿಕೇರಿ ಸೆ.25 NEWS DESK : ಮೇಲ್ನೋಟಕ್ಕೆ ನಮಗೆ ಪರಿಸರ ತನ್ನ ವೈಭವ ಕಳೆದು ಕೊಂಡಿದೆ ಎಂದು ಕಾಣುವುದಿಲ್ಲ. ಏಕೆಂದರೆ ನಾವು ನೋಡುವಾಗ ಎಲ್ಲ ಕಡೆ ಹಸಿರು ಹಾಗೆ ಕಾಣುತ್ತದೆ. ನಾವು ಪ್ರಕೃತಿಯ ಒಳ ಹೊಕ್ಕು ನೋಡಿದಾಗ ಮಾತ್ರ ನಮಗೆ ಪ್ರಕೃತಿಯ ನಾಶದ ಅರಿವಾಗುತ್ತದೆ. ಪ್ರಕೃತಿಯಲ್ಲಿ ಏನು ಇಲ್ಲ. ನಾವು ನಮಗೆ ಅರಿವಾದಲ್ಲಿಂದ ಗಮನಿಸಿದರೆ ಸಾಕು ಪ್ರತಿ ಸಿಸೆನ್ನಲ್ಲಿ ಪ್ರಕೃತಿಯಲ್ಲಿ ನೈಸರ್ಗಿಕವಾಗಿ ಬೆಳೆಯುತ್ತ ಇದ್ದ ಹಣ್ಣುಗಳು, ಕಾಡು ಹೂವುಗಳು, ಅನೇಕ ರೀತಿಯ ಸಣ್ಣ ಸಣ್ಣ ಸಸ್ಯಗಳು, ಗಿಡಗಳು, ಕಾಡು ಜಾತಿಯ ಮರಗಳು ಇತಿಹಾಸದ ಪುಟ ಸೇರಿವೆ. ಸಾವಿರಾರು ಸಂಖ್ಯೆಯ ಮದ್ದಿನ ಗಿಡಗಳು ಕಣ್ಮರೆಯಾಗಿದೆ. ಅದೇ ರೀತಿ ಅನೇಕ ಸಣ್ಣ ಸಣ್ಣ ಪ್ರಾಣಿ ಪಕ್ಷಿಗಳು, ಜಲಚರಗಳು ಇಂದು ಕಾಣೆಯಾಗಿದೆ. ಅದಕ್ಕೆ ಅನೇಕ ಕಾರಣಗಳಿವೆ. ಮುಖ್ಯವಾಗಿ ಕೃಷಿಗಾಗಿ ಅರಣ್ಯ ಒತ್ತುವರಿ, ಅವಶ್ಯಕತೆಗಿಂತ ಹೆಚ್ಚಾಗಿ ರಾಸಾಯನಗಳ ಬಳಕೆ, ಅಣೆಕಟ್ಟುಗಳ ನಿರ್ಮಾಣ, ಕಾಲುವೆಗಳ ಒತ್ತುವರಿ, ನಗರಿಕರಣ, ಮೊಬೈಲ್ ತರಂಗಂತರ ಹೀಗೆ ಹಲವು ಕಾರಣ ಗಳೊಂದಿಗೆ ಪ್ರವಾಸೋದ್ಯಮವು ಒಂದು…
ಮಡಿಕೇರಿ ಸೆ.25 NEWS DESK : ಸೇವಾ ಭಾರತಿ ಕೊಡಗು, ವೈದ್ಯಕೀಯ ವಿಜ್ಞಾನ ಸಂಸ್ಥೆ ಕೊಡಗು ಮತ್ತು ಎನ್.ಎಂ.ಓ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಆಶ್ರಯದಲ್ಲಿ ಕಾನ್ ಬೈಲ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಔಷಧಿ ವಿತರಣಾ ಕಾರ್ಯಕ್ರಮ ನಡೆಯಿತು. ಶಿಬಿರದಲ್ಲಿ ಕಾನ್ ಬೈಲ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸುಮಾರು 126 ಮಂದಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಿಬಿರದಲ್ಲಿ ಅವಶ್ಯಕತೆ ಇದ್ದವರಿಗೆ ಉಚಿತ ಔಷಧಿಯನ್ನೂ ವಿತರಿಸಲಾಯಿತು. ಸೇವಾ ಭಾರತಿ ಕೊಡಗು ಅಧ್ಯಕ್ಷ ಟಿ.ಸಿ.ಚಂದ್ರನ್, ಕಾರ್ಯದರ್ಶಿ ಡಿ.ಎಚ್.ತಮ್ಮಪ್ಪ ನೇತೃತ್ವದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಶಶಾಂಕ ಎಂ.ಜೆ, ಡಾ.ಚಿತ್ರಾ, ಡಾ. ಗಗನ ವಿ, ಡಾ. ಸುಷ್ಮಿತಾ, ಡಾ. ಹೆಚ್ ಹರಿ ನಾರಾಯಣ, ಡಾ. ಪವನ್ ಪವಾರ್, ಡಾ. ಪ್ರಫುಲ್ ಎಸ್.ವಿ, ಡಾ. ಜ್ಯೋತಿ ಪಿ.ವಿ, ಡಾ. ಮನೀಷಾ ದೇವಿ, ಡಾ. ದಿಶಾ ರಘುನಾಥ್, ಡಾ. ಹರ್ಷ, ಡಾ. ಲೋಹಿತ್ ಎಂ.ಎಸ್, ಫಾರ್ಮಾಶಿಸ್ಟ್ ಆಶೀಕ್…
ಹುಣಸೂರು NEWS DESK ಸೆ.24 : ಒಂದೇ ಕಂಟೈನರ್ ನಲ್ಲಿ ಸುಮಾರು 42 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಣುಸೂರಿನಿಂದ ಮೈಸೂರು ಕಡೆಗೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು 42 ಜಾನುವಾರುಗಳನ್ನು ರಕ್ಷಿಸಿದರು. ಕರುಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ವಶಪಡಿಸಿಕೊಂಡ ಜಾನುವಾರುಗಳನ್ನು ಪಿಂಜಾರಾಪೋಲ್ ಗೆ ಕಳುಹಿಸಲಾಗಿದೆ.
ಗುಂಡ್ಲುಪೇಟೆ NEWS DESK ಸೆ.24 : ಉಪಟಳ ನೀಡುತ್ತಿದ್ದ ಹುಲಿ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಸುಮಾರು 6 ವರ್ಷದ ಗಂಡು ಚಿರತೆ ಸೆರೆಯಾಗಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ. ಕೆಲವು ದಿನಗಳ ಹಿಂದೆ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆ ರೈತರ ಒತ್ತಾಯದ ಮೇರೆಗೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿಗಳು ಬೋನ್ ಇರಿಸಿದ್ದರು. ಪಡಗೂರು ಮತ್ತು ಪರಮಾಪುರ ವ್ಯಾಪ್ತಿಯಲ್ಲಿ ಹುಲಿ ಹಾಗೂ ಚಿರತೆ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ NEWS DESK ಸೆ.24 : ಯೋಧರ ನಾಡು ಕೊಡಗಿನಲ್ಲಿ ಸೇನಾ ನೇಮಕಾತಿ ಕೇಂದ್ರ ಸ್ಥಾಪಿಸುವ ಮೂಲಕ ಸೇನಾ ಕ್ಷೇತ್ರದ ಬಗ್ಗೆ ಯುವ ಸಮೂಹದಲ್ಲಿ ಮತ್ತಷ್ಟು ಉತ್ತೇಜನವನ್ನು ತುಂಬಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಕೇಂದ್ರದ ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಪತ್ರ ಬರೆದಿರುವ ಅವರು ಕೊಡಗು ಜಿಲ್ಲೆಯ ಹೆಚ್ಚಿನ ಯುವಕರು ಸೇನಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸೇನಾ ನೇಮಕಾತಿ ಕೇಂದ್ರ ಸಹಕಾರಿಯಾಗಲಿದೆ ಎಂದು ವಿವರಿಸಿದ್ದಾರೆ. ಕೊಡಗಿನ ವೀರ ಯೋಧರು ಸೇನೆಯ ಮೂರೂ ವಿಭಾಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಮತ್ತಷ್ಟು ಯುವಕ, ಯುವತಿಯರು ಸೇನೆಗೆ ಸೇರಲು ಅನುಕೂಲವಾಗುವಂತೆ ನೇಮಕಾತಿ ಕೇಂದ್ರ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಮಾಜಿ ಸೈನಿಕರ ಕುಂದುಕೊರತೆಗಳ ನಿವಾರಣೆಗೆ ಸುಸಜ್ಜಿತವಾದ ಇಸಿಎಚ್ ಆಸ್ಪತ್ರೆ ವ್ಯವಸ್ಥೆ ಕಲ್ಪಿಸಬೇಕು ಮತ್ತು ಯುವ ಸಮೂಹಕ್ಕೆ ಸ್ಫೂರ್ತಿ ತುಂಬಲು ಸೇನಾ ಮ್ಯೂಸಿಯಂ ನಿರ್ಮಾಣ ಮಾಡಬೇಕು ಎಂದು ಭೋಜಣ್ಣ…
ಮಡಿಕೇರಿ NEWS DESK ಸೆ.24 : ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜೀನಾಮೆಗಾಗಿ ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು ಮತ್ತು ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು…
ಮಡಿಕೇರಿ NEWS DESK ಸೆ.24 : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಮಡಿಕೇರಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸಬಾಸ್ಟಿನ್ ಎ.ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಅಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ವಿಲ್ಫೆçಡ್ ಮಡಿಕೇರಿ, ಉಪಾಧ್ಯಕ್ಷರಾಗಿ ಜೋಸಿ ನಾಪೋಕ್ಲು, ಭಾವುತ್ತಿಸ್ ಹಟ್ಟಿಹೊಳೆ, ಮೈಕಲ್ ವೇಗಸ್ ಮಡಿಕೇರಿ, ಖಜಾಂಚಿ ಶರತ್ ಜೋಸೆಫ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪಿಯೂಶ್ ಪೆರೆರಾ ಅವಿರೋಧವಾಗಿ ಆಯ್ಕೆಯಾದರು. ಇದೇ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಜಿಲ್ಲಾ ಸಂಚಾಲಕರನ್ನಾಗಿ ಗಾಡ್ವಿನ್ ಮಾಸ್ಕೇರೆನಸ್ (ಪಮ್ಮಿ) ಅವರನ್ನು ನೇಮಕ ಮಾಡಲಾಯಿತು. ಅಸೋಸಿಯೇಷನ್ ನ ಸ್ಥಾಪಕಾಧ್ಯಕ್ಷ ವಿ.ಎ.ಲಾರೆನ್ಸ್ ಅವರು ಪ್ರಾಸ್ತಾವಿಕ ನುಡಿಯಾಡಿದರು. ಜಿಲ್ಲಾ ಸಂಘ ಮತ್ತು ಎಲ್ಲಾ ತಾಲ್ಲೂಕು ಘಟಕಗಳನ್ನು ಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಘದ ಗೌರವಾಧ್ಯಕ್ಷ ಜೋಕಿಂ ವಾಜ್, ಜಿಲ್ಲಾ ಉಪಾಧ್ಯಕ್ಷರುಗಳು ಹಾಗೂ ತಾಲ್ಲೂಕು ಘಟಕಗಳ…
ಮಡಿಕೇರಿ ಸೆ.24 NEWS DESK : ಹಮಾಲಿ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಮಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಈ ಸಂದರ್ಭ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಣಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮ ಜೀವಿಗಳಾದ ಹಮಾಲಿ ಕಾರ್ಮಿಕರಿಗೆ ಪಿಂಚಣಿ, ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಕರ್ನಾಟಕ ರಾಜ್ಯ ಸರಕಾರ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಅಂಬೇಡ್ಕರ ಸಹಾಯ ಹಸ್ತ ಸ್ಮಾರ್ಟ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ 23 ವಲಯದ ಅಸಂಘಟಿತ ಕಾರ್ಮಿಕರಿಗೆ ಅಪಘಾತ ಮರಣ, ಅಪಘಾತ ಅಂಗವಿಕಲತೆ, ಅಪಘಾತ ವೈದ್ಯಕೀಯ ಮರು…






