ಲೇಖಕ: admin

ನಾಪೋಕ್ಲು ಡಿ.31 NEWS DESK :  ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ಗೆಲುವು ಸಾಧಿಸುವುದರ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.  ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಕೋಲಾರ ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕೋಲಾರದಲ್ಲಿ ಜರುಗಿದ 44 ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ಗೆಲುವು ಸಾಧಿಸುವುದರ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾದವರಲ್ಲಿ ನಾಂಗಾಲ, ಬಿಟ್ಟಂಗಾಲಾ, ಚೇಮಿರ ಸೀತಮ್ಮ, ಪ್ರೇಮ ತಟ್ಟೆ ಎಸೆತ ಪ್ರಥಮ, ಗುಂಡು ಎಸೆತ ಪ್ರಥಮ, ಜಾವೆಲಿನ್ ಎಸೆತ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ  ಮನು ಜಾವಲಿನ್ ಎಸೆತದಲ್ಲಿ ಪ್ರಥಮ, ಭಾರದ ಗುಂಡು ಎಸೆತದಲ್ಲಿ ಹಾಗೂ ಹ್ಯಾಮರ್ ಥ್ರೊ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಟಿ ಶೆಟ್ಟಿಗೇರಿಯ ಪೆಮಂಡ ಸಂಭೀತ ಕುಶಾಲಪ್ಪ ಜಾವಲಿನ್ ಮತ್ತು ಡಿಸ್ಕಸ್ ಥ್ರೋ ಎಸೆತದಲ್ಲಿ ತೃತೀಯ…

Read More

ನಾಪೋಕ್ಲು ಡಿ.31 NEWS DESK  : ಬೇತು ಗ್ರಾಮದ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಸ್ಪರ್ಧೆಯಲ್ಲಿ 7ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧಿಸಿದ್ದು. ಒಟ್ಟು 29 ಗುಂಪುಗಳು ಭಾಗವಹಿಸಿದ್ದು, ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ನಾಲ್ಕು ಗುಂಪುಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು. ಸ್ಪರ್ಧೆಯಲ್ಲಿ ಐದು ಸುತ್ತುಗಳಿದ್ದು, ಶಮಂತ್ ಹಾಗೂ ಮೊಹಮ್ಮದ್ ಪ್ರಥಮ ಸ್ಥಾನ, ನಿಶಾಂತ್ ಹಾಗೂ ಅನಸ್ ದ್ವಿತೀಯ ಸ್ಥಾನ ಪಡೆದರು. ವಿಜೇತರಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ, ಸಂಸ್ಥೆಯ ಸಂಚಾಲಕಿ ವಿದ್ಯಾ ಸುರೇಶ್ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಹಾಜರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ದುಂದುಬಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಬಿ.ಸಿ ಸ್ವಾಗತಿಸಿದರು. ರಸಪ್ರಶ್ನೆ ಆಯೋಜಕರಾಗಿ ಶಿಕ್ಷಕಕಿಯರಾದ ಸ್ಪೂರ್ತಿ, ಶಿಲ್ಪ ಕಾರ್ಯನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಡಿ.31 NEWS DESK : ಆಂಧ್ರಪ್ರದೇಶದ ಕಡತದಲ್ಲಿ ನಡೆದ ಮೂರನೆಯ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಗ್ರೀಷ್ಮ ಪೊನ್ನಪ್ಪ ಪಿ. ಹಾಗೂ ಚರಿಷ್ಮಾ ಕಾವೇರಮ್ಮ ಸಿ. ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪೈನಲ್ ನಲ್ಲಿ ಆಂಧ್ರಪ್ರದೇಶದ ವಿರುದ್ದ 2-0 ಗೋಲುಗಳಿಂದ ಜಯಭೇರಿ ಬಾರಿಸುವ ಮೂಲಕ ಕರ್ನಾಟಕಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

Read More

ನಾಪೋಕ್ಲು ಡಿ.31 NEWS DESK :  ಕೂರುಳಿ ಸುಭಾಷ್ ನಗರದ ನಾಗದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತ್ತು. ಉತ್ಸವದ ಅಂಗವಾಗಿ ನಾಗದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಬೆಳಿಗ್ಗೆ ಗಣಪತಿ ಹೋಮ, ನಾಗನಿಗೆ ಹೂವಿನಿಂದ ಅಲಂಕಾರ, ಪಂಚಾಮೃತ ಅಭಿಷೇಕ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳನ್ನು  ನೆರವೇರಿತು.  ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ಅನ್ನದಾನ ನಡೆಯಿತು. ಉತ್ಸವದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಿದರು. ಪೂಜಾ ವಿಧಿ ವಿಧಾನಗಳನ್ನು ಭಗವತಿ ದೇವಾಲಯದ ಅರ್ಚಕರಾದ ಹರೀಶ್ ಕೇಕುಣ್ಣಾಯ ಅವರ ಮುಂದಾಳತ್ವದಲ್ಲಿ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ  ಲೋಕೇಶ್ ಪದಾಧಿಕಾರಿಗಳು, ಸದಸ್ಯ, ಊರ ಮತ್ತು ಪರವೂರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ  ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ಡಿ.30 : ಯುನೈಟೆಡ್ ಪ್ಲಾಂಟೇಷನ್ ವರ್ಕ ರ‍್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಣಶೇಖರ್ ಅವರ ಸ್ಮರಣಾರ್ಥ ಕಾರ್ಮಿಕ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಸಕಲೇಶಪುರದಲ್ಲಿ ನಡೆಯಿತು. ಪ್ರತಿಭಾ ಪುರಸ್ಕಾರ ಪಡೆದ ಬಿಳಿಗೇರಿ ಗ್ರಾಮದ ಪಿಯುಸಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಯುನೈಟೆಡ್ ಪ್ಲಾಂಟೇಷನ್ ವರ್ಕ ರ‍್ಸ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಸನ್ಮಾನಿಸಿ ಪ್ರೋತ್ಸಾಹಿಸಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಮತ್ತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎನ್ನುವ ಕಾರಣಕ್ಕಾಗಿ ಪ್ರತಿವರ್ಷ ಗುಣಶೇಖರ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು. ಪ್ರಸ್ತುತ ವರ್ಷ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪಿಯುಸಿ ಮತ್ತು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕ ಕುಟುಂಬದ ವಿದ್ಯಾರ್ಥಿಗಳನ್ನು ಸಕಲೇಶಪುರದಲ್ಲಿ ಪುರಸ್ಕರಿಸಲಾಗಿದೆ. ಬಿಳಿಗೇರಿ…

Read More

ಮಡಿಕೇರಿ NEWS DESK ಡಿ.30 : ದೇಶದ ವಿವಿಧ ಭಾಗಗಳಲ್ಲಿ ಕ್ರಿಶ್ಚಿಯನ್ ಸಮುದಾಯಗಳು, ಕ್ರಿಸ್ಮಸ್ ಆಚರಣೆಗಳು ಮತ್ತು ಕೆರೋಲ್ ಗುಂಪುಗಳ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ದಕ್ಷಿಣ ಕೊಡಗು ಕ್ರಿಶ್ಚಿಯನ್ ಸಂಘದ ಅಧ್ಯಕ್ಷ ಎ.ಜೆ.ಬಾಬು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶಾಂತಿಯುತವಾಗಿ ನಮ್ಮ ನಂಬಿಕೆಯನ್ನು ಸ್ವೀಕರಿಸುವ, ಆಚರಿಸುವ ಮತ್ತು ಪ್ರಸಾರ ಮಾಡುವ ಹಕ್ಕು ಸಂವಿಧಾನದಲ್ಲಿ ನಿಗಧಿ ಪಡಿಸಲಾದ ಮೂಲಭೂತ ಸ್ವಾತಂತ್ರ್ಯವಾಗಿದೆ. ಆದರೆ ಇತ್ತೀಚೆಗೆ ಕ್ರಿಶ್ಚಿಯನ್ ಸಮುದಾಯಗಳ ಮೇಲೆ ನಡೆದಿರುವ ದಾಳಿ ಕಳವಳಕಾರಿ ಬೆಳವಣಿಗೆ ಮತ್ತು ಕಾನೂನು ವಿರೋಧಿ ಕೃತ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಯ ವಾತಾವರಣದ ನಡುವೆ ಒಂದು ಸಮುದಾಯವನ್ನು ಗುರಿಯಾಗಿಸುವ ಈ ರೀತಿಯ ಘಟನೆಗಳು ಭಾರತದ ಪ್ರೀತಿಪಾತ್ರ ಬಹುಸಂಸ್ಕೃತಿಯ ಸಾಮಾಜಿಕ ಸಾಮರಸ್ಯಕ್ಕೆ ದಕ್ಕೆಯನ್ನುಂಟು ಮಾಡುತ್ತದೆ. ಆದ್ದರಿಂದ ಸಂಬಂಧಿಸಿದ ರಾಜ್ಯಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ನಾಗರಿಕ ಭಯವಿಲ್ಲದೆ ದೇಶದ ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬೇಕು ಎಂದು…

Read More

ಮಡಿಕೇರಿ NEWS DESK ಡಿ.30 : ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ನಡೆದ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಅಂತಿಮ ಪಂದ್ಯದಲ್ಲಿ ಚೆಪ್ಪುಡಿರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಟ್ರೋಫಿಯನ್ನು ಗೆದ್ದು ಬೀಗಿದೆ, ಕುಲ್ಲೇಟಿರ ತಂಡ ಸೋಲೊಪ್ಪಿಕೊಂಡಿದೆ. ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಚೆಪ್ಪುಡಿರ ಮತ್ತು ಕುಲ್ಲೇಟಿರ ನಡುವೆ ನಡೆದ ಅಂತಿಮ ಪಂದ್ಯದಲ್ಲಿ 1-0 ಗೋಲಿನ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ಸಾಧಿಸಿತು. ಚೆಪ್ಪುಡಿರ ಸೋಮಣ್ಣ ಒಂದು ಗೋಲು ದಾಖಲಿಸಿದರು. ವಿಜೇತ ಚೆಪ್ಪುಡಿರ ತಂಡಕ್ಕೆ 2 ಲಕ್ಷ ರೂ., ದ್ವಿತೀಯ ಸ್ಥಾನ ಪಡೆದ ಕುಲ್ಲೇಟಿರ ತಂಡಕ್ಕೆ 1 ಲಕ್ಷ ರೂ., ಸೆಮಿಫೈನಲ್‌ಗೆ ಅರ್ಹತೆ ಪಡೆದ ಮಂಡೇಪಂಡ ಮತ್ತು ಕುಪ್ಪಂಡ ತಂಡಕ್ಕೆ ತಲಾ 50 ಸಾವಿರ ರೂ. ಹಾಗೂ ಉಳಿದ 8 ತಂಡಗಳಿಗೆ ತಲಾ 25 ಸಾವಿರ ರೂ. ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಲಾಯಿತು. ಬೆಸ್ಟ್…

Read More

ಮಡಿಕೇರಿ ಡಿ.30 NEWS DESK  : ಇತ್ತೀಚಿನ ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ಕೊಡಗಿನ ಕ್ರೀಡಾ ಪ್ರತಿಭೆಗಳು ಆಯ್ಕೆಯಾಗದೆ ಇರುವುದು ಕಂಡು ಬಂದಿದೆ. ಈ ಕುರಿತು ಸಾಮೂಹಿಕ ಚಿಂತನೆ ನಡೆಸಿ ಕ್ರೀಡಾಪಟುಗಳ ಬೆಳವಣಿಗೆಗೆ ಶಿಸ್ತುಬದ್ಧ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹಾಕಿ ಕೊಡವ ಸಂಸ್ಕøತಿಯ ಒಂದು ಭಾಗವಾಗಿದೆ, ಕೊಡವರು ಸಣ್ಣ ಸಂಖ್ಯೆಯಲ್ಲಿದ್ದರೂ ದೊಡ್ಡ ಸಂಖ್ಯೆಯ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಿದ್ದಾರೆ. ಆದರೆ ಇಂದು ರಾಜ್ಯ ಮಟ್ಟದ ತಂಡಕ್ಕೂ ಕ್ರೀಡಾ ಪ್ರತಿಭೆಗಳು ಆಯ್ಕೆಯಾಗದೆ ಇರುವುದು ಕಂಡು ಬಂದಿದೆ ಎಂದು…

Read More

ಕಾರ್ಕಳ ಡಿ.30 NEWS DESK : ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು. ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ…

Read More

ಮಡಿಕೇರಿ ಡಿ.30 NEWS DESK : ಹೊಸ ವರ್ಷಾಚರಣೆ ಹೆಸರಲ್ಲಿ ಕಾನೂನು ಉಲ್ಲಂಘನೆ, ಅಕ್ರಮ ಚಟುವಟಿಕೆ ಕಂಡು ಬಂದಲ್ಲಿ ಶಿಸ್ತು ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟ ಸಂದೇಶ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್.ಪಿ.ರಾಮರಾಜನ್ ಹೋಂ ಸ್ಟೇ, ರೆಸಾರ್ಟ್‍ಗಳಲ್ಲಿ ಸಂಭ್ರಮಾಚರಣೆ ಮಾಡಲು ಯಾವುದೇ ಅಡ್ಡಿ ಇಲ್ಲ. 10 ಗಂಟೆಯ ಬಳಿಕ ನಿಗಧಿತ ಮಿತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಧ್ವನಿವರ್ಧಕಗಳನ್ನು ಬಳಸಬೇಕು. ತೆರೆದ ಪ್ರದೇಶಗಳಲ್ಲಿ ಸಂಭ್ರಮಾಚರಣೆ ಮಾಡಲು ಅನುಮತಿ ಕಡ್ಡಾಯವಾಗಿರುತ್ತದೆ. ಹೋಂಸ್ಟೇಗಳಲ್ಲಿ ಮಾದಕ ವಸ್ತುಗಳ ಬಳಕೆ, ಸೇವನೆ ಕಂಡು ಬಂದಲ್ಲಿ ಅದರ ಮಾಲೀಕರ ಮೇಲೂ ಪ್ರಕರಣ ದಾಖಲಿಸಲಾಗುತ್ತದೆ. ಹೋಂಸ್ಟೇ ಕಟ್ಟಡವನ್ನು ಬಾಡಿಗೆ ನೀಡಲಾಗಿದೆ ಎಂಬ ನೆಪಗಳಿಗೆ ಅವಕಾಶ ಇಲ್ಲ. ಈ ಕುರಿತು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹೋಂಸ್ಟೇ ಮಾಲೀಕರು, ಹೋಂ ಸ್ಟೇ ನಡೆಸುವವರಿಗೂ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. :: ಪಾರ್ಟಿಗಳ ಮೇಲೆ ನಿಘಾ :: ಹೋಂ ಸ್ಟೇ,…

Read More