ಮಡಿಕೇರಿ ಸೆ.24 NEWS DESK : ಭಾಗಮಂಡಲ ಹೋಬಳಿ ಕರಿಕೆ ಗ್ರಾಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೆ.26 ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನ ಕಾರ್ಯಕ್ರಮ ನಡೆಯಲಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದು ಕೊರತೆಗಳನ್ನು ನೋಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಸಾಧಾರಣ ಅಪೌಷ್ಟಿಕತೆಯಿಂದ 264 ಮಕ್ಕಳು ಹಾಗೂ ತೀವ್ರ ಅಪೌಷ್ಟಿಕತೆಯಿಂದ 50 ಮಕ್ಕಳು ತುತ್ತಾಗಿದ್ದು, ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣಮಟ್ಟದ ಆಹಾರ ನೀಡುವಂತಾಗಬೇಕು ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಧುಸೂದನ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಹೊರ ರೋಗಿಗಳ ವಿಭಾಗದಲ್ಲಿ ನಡೆದ ‘ಪೋಷಣ ಅಭಿಯಾನ ಮಾಸಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಿದೆ ಎಂದರು. ಇತ್ತೀಚಿನ ದಿನಗಳ ಜೀವನ ಶೈಲಿಯಲ್ಲಿನ ಬದಲಾವಣೆ, ಗುಣಮಟ್ಟದ ಆಹಾರ ಪಡೆಯದಿರುವುದು ಮತ್ತಿತರ ಕಾರಣವಾಗಿದೆ. ಆದ್ದರಿಂದ ಸರ್ಕಾರದಿಂದ ಪ್ರತೀ ಮೂರು…
ಮಡಿಕೇರಿ ಸೆ.24 NEWS DESK : ಅಖಿಲ ಭಾರತ ಸಂತ ಸಮಿತಿಯ ಕರ್ನಾಟಕ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಕೊಡಗಿನ ಸಿದ್ಧಲಿಂಗಪುರ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದ ಶ್ರೀ ರಾಜೇಶ್ ನಾಥ ಗುರೂಜಿ ನಿಯುಕ್ತಿಗೊಂಡಿದ್ದಾರೆ. ಹಾಲಿ ಕೊಡಗು ಜಿಲ್ಲಾ ಅಧ್ಯಕ್ಷರಾಗಿರುವ ರಾಜೇಶ್ ನಾಥ್ ಜೀ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಸಹ ಕಾರ್ಯದರ್ಶಿಯಾಗಿ ಸೋಮವಾರಪೇಟೆ ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ನೇಮಕಗೊಂಡಿದ್ದಾರೆ. ಅಲ್ಲದೆ ಕೊಡಗಿನ ಧಾರ್ಮಿಕ ಚಿಂತಕ ಚಿ.ನಾ.ಸೋಮೇಶ್ ಎಬಿಎಸ್ಎಸ್ ಸಂಚಲನ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ. ಮಂಗಳೂರಿನ ಓಂ ಶ್ರೀ ಮಠದಲ್ಲಿ ನಡೆದ ಅಖಿಲ ಭಾರತ ಸಂತ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ನಿಯುಕ್ತಿಯೊಂದಿಗೆ ಪ್ರತಿಜ್ಞೆ ಭೋದಿಸಲಾಯಿತು. ಎಬಿಎಸ್ಎಸ್ ಕರ್ನಾಟಕ ರಾಜ್ಯ ಅಧ್ಯಕ್ಷ ಶ್ರೀ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕ್ ಡಾ. ವಾಮನ ಶೆಣೈ ಸೇರಿದಂತೆ ಅನೇಕ ಸಂತರು ಧಾರ್ಮಿಕ ಪ್ರಮುಖರು ಪಾಲ್ಗೊಂಡಿದ್ದರು.
ಮಡಿಕೇರಿ ಸೆ.23 NEWS DESK : ಸಮಾಜದಲ್ಲಿ ಬದಲಾವಣೆ ತರುವಲ್ಲಿ ಸರ್ಕಾರದ ಕಾನೂನುಗಳಿಗಿಂತ ಧರ್ಮದ ಆದೇಶಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಜೆ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ವಿರಾಜಪೇಟೆ ಸ್ಥಾನಿಯ ಶಾಖೆ ಸೀರತುನ್ನಬಿ ಪ್ರಯುಕ್ತ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ” ಎಂಬ ವಿಷಯದಲ್ಲಿ ಏರ್ಪಡಿಸಿದ್ದ ಗಣ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. “ಆಧ್ಯಾತ್ಮಿಕತೆಯ ಮೂಲಕ ಲೌಕಿಕ ಬದುಕನ್ನು ಸಂಸ್ಕರಿಸುವ ವಿಧಾನವನ್ನು ಪ್ರವಾದಿ ಮುಹಮ್ಮದ್(ಸ) ಪ್ರಾಯೋಗಿಕವಾಗಿ ತೋರಿಸಿಕೊಟ್ಟರು. ಇತರ ಹಲವು ಧಾರ್ಮಿಕ ಸುಧಾರಕರುಗಳಿಗೆ ಹೋಲಿಸಿದಲ್ಲಿ ಅವರು ಓರ್ವ ಸಂಸಾರಸ್ಥರಾಗಿದ್ದುಕೊಂಡೇ ಸಮಾಜಕ್ಕೆ ಮಾದರಿಯೋಗ್ಯ ಶಿಕ್ಷಣವನ್ನು ನೀಡಿದರು. ಪ್ರವಾದಿ ಮುಹಮ್ಮದ್(ಸ)ರವರ ಬದುಕು ತೆರೆದಿಟ್ಟ ಪುಸ್ತಕವಾಗಿತ್ತು. ಮಾತ್ರವಲ್ಲ, ಅವರ ಬದುಕಿನ ಎಲ್ಲಾ ಮಜಲುಗಳೂ ಇಂದು ದಾಖಲಿಸಲ್ಪಟ್ಟಿರುವುದು ವಿಶೇಷವಾಗಿದೆ. ಇತರ ಮಹಾಪುರುಷರು ಹಾಗೂ ಸುಧಾರಕರಂತೆ ಅವರು ಬದುಕಿನ ಕೆಲವೇ ಕ್ಷೇತ್ರಗಳನ್ನು ಮಾತ್ರ ಕೈಯಾಡಿಸಲಿಲ್ಲ. ಅವರು ಪ್ರಚಾರಪಡಿಸಿದ ಸಿದ್ದಾಂತಗಳು ಮತ್ತು ಆಶಯಗಳು ಸಮಾಜವನ್ನು ಸಂಪೂರ್ಣವಾಗಿ ಬದಲಾಯಿಸಲು ಸಾಧ್ಯವಂತದ್ದಾಗಿತ್ತು. ಬದುಕಿನ ನಿಖಿಲ ಕ್ಷೇತ್ರಗಳಲ್ಲೂ ದೇವನನ್ನು…
ಮಡಿಕೇರಿ ಸೆ.24 NEWS DESK : ಕರಿಮೆಣಸು ಬೆಳೆ ಮೇಲೆ ಸಕಾ೯ರ ಜಿಎಸ್ ಟಿ ವಿಧಿಸಿರುವುದರಿಂದಾಗಿ ಬೆಳೆಗಾರರ ಸಮಸ್ಯೆ ಹೆಚ್ಚಾಗಿದ್ದು, ಕೇಂದ್ರ ಸಕಾ೯ರ ಕರಿಮೆಣಸು ಮೇಲೆ ವಿಧಿಸಿರುವ ಜಿಎಸ್ ಟಿಯನ್ನು ತೆಗೆದುಹಾಕುವ ಮೂಲಕ ಕೃಷಿಕರ ಪರವಾಗಿ ನಿಲವು ತಳೆಯಬೇಕಾಗಿದೆ ಎಂದು ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ನ ನಿದೇ೯ಶಕ ತೇಲಪಂಡ ಪೂವಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವಾಷಿ೯ಕ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪೂವಯ್ಯ, ಕಪಿಮೆಣಸು ಫಸಲಿನ ಮೇಲೂ ಜಿಎಸ್ ಟಿ ವಿಧಿಸಿರುವುದು ಸರಿಯಾದ ಕ್ರಮವಲ್ಲ, ನಿಯಮಪ್ರಕಾರವಾಗಿ ಕರಿಮೆಣಸು ಜಿಎಸ್ ಟಿ ವ್ಯಾಪ್ತಿಗೆ ಸೇರಿದ್ದರೂ ಕೃಷಿ ಫಸಲಾಗಿರುವುದರಿಂದಾಗಿ ಜಿಎಸ್ ಟಿ ವಿಧಿಸುವುದರಿಂದ ವಿನಾಯಿತಿ ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಬೆಳೆಗಾರ ಸಂಘಟನೆಗಳು ಈಗಾಗಲೇ ಕೇಂದ್ರ ಸಕಾ೯ರದ ಗಮನ ಸೆಳೆದಿವೆ ಎಂದರು. ಕಾನೂನುಗಳನ್ನು ಏಕಪ್ರಕಾರವಾಗಿ ಬೆಳೆಗಾರರಿಗೂ ವಿಧಿಸುವುದರಿಂದಾಗಿ ಬೆಳೆಗಾರರ ಸಮಸ್ಯೆ ಮತ್ತಷ್ಟು ಹೆಚ್ಚಾಗಿ ಕೃಷಿ ಚಟುವಟಿಕೆಗಳಿಂದ ಅನೇಕರು ವಿಮುಖರಾಗುತ್ತಿರುವ ವಿದ್ಯಮಾನಕ್ಕೆ ಕಾರಣವಾಗಬಹುದು ಎಂದೂ ತೇಲಪಂಡ ಪೂವಯ್ಯ ಎಚ್ಚರಿಸಿದರು. ಬ್ರೆಜಿಲ್ ವಿಯಟ್ನಾಂ ಸೇರಿದಂತೆ…
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.28 ರಂದು ಕುಶಾಲನಗರದಲ್ಲಿ “ಛಾಯ ಕುಟುಂಬ ಸಮ್ಮಿಲನ” ಮತ್ತು ಸೋನಿ ಕ್ಯಾಮರ ಕುರಿತು ಕಾರ್ಯಾಗಾರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಕುಶಾಲನಗರದ ಗಣಪತಿ ದೇವಾಲಯದಿಂದ ರೈತ ಸಹಕಾರ ಭವನದವರೆಗೆ ಚಂಡೆ ವಾದ್ಯ, ಜಾನಪದ ಕಲಾತಂಡಗಳೊಂದಿಗೆ, ಗಣ್ಯರ ಮತ್ತು ಛಾಯಾಗ್ರಾಹಕರ ಬೃಹತ್ ಮೆರವಣಿಗೆ ನಡೆಯಲಿದ್ದು, 9.30 ಗಂಟೆಗೆ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದರು. ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಕಾರ್ಯಾಗಾರವನ್ನು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಉದ್ಘಾಟಿಸಲಿದ್ದಾರೆ. ಛಾಯಾಚಿತ್ರ ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಲಿರುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕುಶಾಲನಗರ ದೇವಾಲಯಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಕುಶಾಲನಗರ…
ಮಡಿಕೇರಿ ಸೆ.24 NEWS DESK : ಮಡಿಕೇರಿ ನಗರ ದಸರಾ ಸಮಿತಿ 2024ರ ಸ್ವಾಗತ ಸಮಿತಿಯ ಪ್ರಥಮ ಸಭೆಯು ಸಮಿತಿಯ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ದಸರಾ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎ.ಜಿ.ರಮೇಶ್, ಯಕ್ಷಿತ್ ಕೊತ್ತೋಳಿ, ಆರ್.ಪಿ.ಚಂದ್ರಶೇಖರ್, ಸಹ ಕಾರ್ಯದರ್ಶಿಯಾಗಿ ಅಹಮದ್, ಕೆ.ಶರಣ್, ಗೌರವ ಸಲಹೆಗಾರರಾಗಿ ಶೇಕ್ ಅಹಮದ್ ಮತ್ತು ಕೆ.ಜಿ.ಪೀಟರ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲಾ ಹೊಟೇಲ್, ರೆಸಾಟ್೯, ರೆಸ್ಟೋರೆಂಟ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಕಾಯ೯ಪ್ಪ ಆಯ್ಕೆಯಾಗಿದ್ದು, ಪ್ರಧಾನ ಕಾಯ೯ದಶಿ೯ಯಾಗಿ ನಾಸೀರ್ ಅಹಮ್ಮದ್ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಫೋಟ್೯ ಮಕೇ೯ರಾ ಹೊಟೇಲ್ ನಲ್ಲಿ ಜರುಗಿದ ಸಂಘದ ವಾಷಿ೯ಕ ಮಹಾಸಭೆಯಲ್ಲಿ ನಿಕಟಪೂವ೯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಅಧಿಕಾರವನ್ನು ದಿನೇಶ್ ಕಾಯ೯ಪ್ಪ ಅವರಿಗೆ ಹಸ್ತಾಂತರಿಸಿದರು. ಸಂಘದ ಪ್ರಧಾನ ಕಾಯ೯ದಶಿ೯ಯಾಗಿ ಎಂ.ಎ.ನಾಸೀರ್ ಅಹ್ಮದ್, ಮಡಿಕೇರಿ ವಿಭಾಗದ ಉಪ ಅಧ್ಯಕ್ಷರಾಗಿ ಎಂ.ಬಿ.ಝಹೀರ್ ಅಹ್ಮದ್ , ವಿರಾಜಪೇಟೆ ವಿಭಾಗದ ಉಪ ಅಧ್ಯಕ್ಷರಾಗಿ ಬಿ.ಸಿ.ಮಂಜುನಾಥ್ , ಸೋಮವಾರಪೇಟೆ ವಿಭಾಗದ ಉಪ ಅಧ್ಯಕ್ಷರಾಗಿ ಸುಂದರ್ ಹಾಗೂ ಕುಶಾಲನಗರ ವಿಭಾಗದ ಉಪಾಧ್ಯಕ್ಷರಾಗಿ ರಥೀಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ನಾಸೀರ್ ಅಹಮ್ಮದ್ ವರದಿ ಮಂಡಿಸಿದರೆ, ಖಜಾಂಚಿ ಭಾಸ್ಕರ್ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಥಹೀರ್ ಸಂಘದ ಕಾಯ೯ಚಟುವಟಿಕೆ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಹಿರಿಯ ಸದಸ್ಯ ಮಡಿಕೇರಿಯ ಹೋಟೆಲ್ ಚಿತ್ರಾದ ಮಾಲೀಕ ಗಣೇಶ್ ಮತ್ತು…
ಮಡಿಕೇರಿ ಸೆ.24 NEWS DESK : ಆಧುನಿಕ ತಂತ್ರಜ್ಞಾನ ಮತ್ತು ನವ ಅವಿಷ್ಕಾರದೊಂದಿಗೆ ನಿರಂತರವಾಗಿ ವೈದ್ಯರು ಹೊಸವಿಚಾರಗಳೊಂದಿಗೆ ವೃತ್ತಿಯಲ್ಲಿ ಬೆಳೆಯುತ್ತಿರಬೇಕು. ಸಾಮಾಜಿಕ ಜಾಲತಾಣವನ್ನು ಹೇಗೆ ಸದುಪಯೋಗಪಡಿಸಿಕೊಂಡು ಪ್ರಪಂಚದ ಯಾವ ಮೂಲೆಯಲ್ಲೂ ಆಯುರ್ವೇದ ತಲುಪುವಂತೆ ಮಾಡಬೇಕು ಎಂದು ಸುಳ್ಯದ ಆಯುಧಾ೯ಮ ಆಯುವೇ೯ದ ಆಸ್ಪತ್ರೆಯ ಸ್ಥಾಪಕರಾದ ಡಾ.ಹರಿಪ್ರಸಾದ್ ಶೆಟ್ಟಿ ಕರೆ ನೀಡಿದ್ದಾರೆ. ನಗರದ ಆಕ್ಸಿರಿಚ್ ಹೋಟೇಲ್ ಸಭಾಂಗಣದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಕೊಡಗು, ಸಂಘದ ವತಿಯಿಂದ ಆಯೋಜಿತ ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಜಾಗತಿಕ ಗ್ರಾಹಕರನ್ನು ತಲುಪಲು ಆಯುರ್ವೇದ ಕ್ಲಿನಿಕ್ ಅಥವಾ ಆಸ್ಪತ್ರೆಯನ್ನು ಹೇಗೆ ಅಭಿವೃದ್ಧಿಪಡಿಸುವುದು ಎನ್ನುವ ಬಗ್ಗೆ ಅವರು ಮಾಹಿತಿ ನೀಡಿದರು. ನೂತನ ಅಧ್ಯಕ್ಷರಾಗಿ ಡಾ ರಾಜಾರಾಮ್ :: ಎನ್.ಐ.ಎಂ.ಎ ಕೊಡಗು 2024-26 ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಡಾ.ರಾಜಾರಾಮ್, ಕಾರ್ಯದರ್ಶಿಯಾಗಿ ಡಾ. ಪಿ.ಎಸ್.ಶ್ಯಾಮ್ ಪ್ರಸಾದ, ಖಜಾಂಚಿಯಾಗಿ ಡಾ.ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಡಾ.ಶೈಲಜಾ ರಾಜೇಂದ್ರ, ಕಾರ್ಯದರ್ಶಿಯಾಗಿ ಡಾ. ಸೌಮ್ಯ,…
ಸೋಮವಾರಪೇಟೆ ಸೆ.24 NEWS DESK : ಅಂಕುರಂ ಹಿರಿಯ ವಿದ್ಯಾರ್ಥಿಗಳ ಎಜುಕೇಷನ್ ಟ್ರಸ್ಟ್, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಿಯಿಂದ ಪ್ರಾರಂಭವಾಗಿರುವ ಎಲ್ಕೆಜಿ ತರಗತಿಯ ನೂತನ ಕೊಠಡಿಗಳನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಾತೃ ಭಾಷೆ ನಮಗೆಲ್ಲ ಅತ್ಯಾವಶ್ಯಕವಾದರೂ, ಬದುಕಿಗಾಗಿ ಆಂಗ್ಲಭಾಷೆ ಕಲಿಯಲೇಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಆಂಗ್ಲ ಮಾದ್ಯಮ ಶಾಲೆಗಳಿಗೆ ಸೇರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ಕಡಿಮೆ ಹಣದಲ್ಲಿ ಪ್ರಾಥಮಿಕ ಶಿಕ್ಷಣ ಕೊಡಿಸುವ ಬಗ್ಗೆ ಚಿಂತಿಸಬೇಕು ಎಂದರು. ಯಾವುದೇ ಗ್ರಾಮಗಳಲ್ಲಿ ಸ್ಥಳೀಯರ ನೆರವಿಲ್ಲದೆ, ಸರ್ಕಾರಿ ಶಾಲೆಗಳು ಮುಂದುವರೆಯಲು ಸಾಧ್ಯವಿಲ್ಲ. ಶಾಲೆಯ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ಉಳಿಸಲು ಲಕ್ಷಾಂತರ ರೂ.ಸಂಗ್ರಹಿಸಿ, ಆಂಗ್ಲ ಮಾದ್ಯಮದಲ್ಲಿ ಶಿಕ್ಷಣವನ್ನು ಸ್ಥಳೀಯರಿಗೆ ಕೊಡಲು ಮುಂದಾಗಿರುವುದ ಶ್ಲಾಘನೀಯ. ಶಿಕ್ಷಕರು ಬದಲಾದ ಪಠ್ಯದಂತೆಯೇ ಮಕ್ಕಳಿಗೆ ಶಿಕ್ಷಣ…






