ಲೇಖಕ: admin

ಮಡಿಕೇರಿ ಅ.10 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ ಕರಿಕೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ನೇತ್ರ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಿದರು. ಸುಮಾರು 180 ಕ್ಕಿಂತ ಹೆಚ್ಚು ಹೊರ ರೋಗಿಗಳ ವ್ಯೆದ್ಯರ ಭೇಟಿ, 16 ಯುಡಿಐಡಿ ಕಾರ್ಡ್ ಗಳು, 100 ಕ್ಕಿಂತ ಹೆಚ್ಚಿನ ಜನರು ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಪಡೆದುಕೊಂಡರು ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ ರೆಫರ್ ಮಾಡಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಉದ್ಘಾಟಿಸಿ, ಶಿಬಿರಗಳನ್ನು ಆಯೋಜನೆ ಮಾಡಿ ಎಲ್ಲರಿಗೂ…

Read More

ಮಡಿಕೇರಿ ಅ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಶು ಅಭಿವೃದ್ದಿ ಯೋಜನಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆಯ-ಬೇಟಿ ಬಚಾವೊ-ಬೇಟಿ ಪಡಾವೊ ಯೋಜನೆಯಡಿ ‘ಅಂತರಾಷ್ರ್ಟೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ’ ‘ಹೆಣ್ಣು ಮಗುವಿನ ಪ್ರಾಮುಖ್ಯತೆಯ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ, ಮಕ್ಕಳ ತಾಯಂದಿಯರಿಗೆ ಹಾಗೂ ಕಿಶೋರಿಯರಿಗೆ ಅರಿವು ಕಾರ್ಯಕ್ರಮ ನಡೆಯಿತು. ಗುಡ್ಡೆಹೊಸೂರಿನ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗುಡ್ಡೆಹೊಸೂರು ಗ್ರಾ.ಪಂ.ಅಧ್ಯಕ್ಷರಾದ ಸೌಮ್ಯ, ಮಕ್ಕಳು ಪ್ರಸ್ತುತ ದಿನಗಳಲ್ಲಿ ಮೊಬೈಲ್ ಗೀಳಿಗೆ ತುತ್ತಾಗಿದ್ದು, ಓದಿನ ಕಡೆ ಹೆಚ್ಚು ಗಮನ ಹರಿಸದೇ ಇರುವುದು ಇಂದಿನ ದಿನಗಳಲ್ಲಿ ವಿಪರ್ಯಾಸವೇ ಸರಿ ಎಂದರು. ಹಾಡಿಗಳಂತಹ ವಾತವರಣದಲ್ಲಿ ಬೆಳೆಯುವ ಮಕ್ಕಳು ಹೆಚ್ಚಿನದ್ದಾಗಿ ಶಿಕ್ಷಣದ ಮಹತ್ವ ಅರಿಯಬೇಕಾಗಿದೆ. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳು ಮುಂದಿನ ದಿನಗಳಲ್ಲಿ ಉತ್ತಮ…

Read More

ಮುಂಬೈ ಅ.10 NEWS DESK : ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದು ಭಾರತೀಯ ಕೈಗಾರಿಕೋದ್ಯಮ ವಲಯದ ಒಂದು ಯುಗ ಅಂತ್ಯವಾಗಿದೆ. ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ: ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA)ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲಾ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

Read More

ಸೋಮವಾರಪೇಟೆ NEWS DESK ಅ.9 : ಕಾಡಾನೆ ದಾಳಿಯಿಂದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಲ್ತಾರೆಶೆಟ್ಟಳ್ಳಿ ಗ್ರಾಮದ ಬಿ.ಸಿ.ಪ್ರಮೋದ್ ಮತ್ತು ಅವರ ಸ್ನೇಹಿತ ಕೌಶಿಕ್ ಅವರುಗಳು ಮೈಸೂರಿನಿಂದ ವಾಪಾಸ್ಸಾಗಿ ಯಡವನಾಡು ಮೀಸಲು ಅರಣ್ಯದ ಸನಿಹದಲ್ಲಿರುವ ಕಾರೇಕೊಪ್ಪ ಗ್ರಾಮದ ರಸ್ತೆಗೆ ರಾತ್ರಿ 10.30ಕ್ಕೆ ಬರುತ್ತಿದ್ದಂತೆ ಒಂಟಿ ಸಲಗ ಎದುರಿಗೆ ಬಂದು ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನಲ್ಲಿದ್ದವರು ಜೀವಭಯದಿಂದ ಕಾರಿನಿಂದ ಹೊರಬಂದು ತಪ್ಪಿಸಿಕೊಂಡಿದ್ದಾರೆ. ಓರ್ವ ಕಾಫಿ ತೋಟದೊಳಗೆ ಓಡಿದ್ದಾರೆ. ಸೋಲಾರ್ ತಂತಿ ಬೇಲಿಯಿದ್ದ ಕಾರಣ ಕಾಡಾನೆ ಅಟ್ಟಿಸಿಕೊಂಡು ಹೋಗಿಲ್ಲ. ಇನ್ನೋರ್ವ ಮನೆಯೊಂದರ ಗೇಟ್ ದಾಟಿ ತಪ್ಪಿಸಿಕೊಂಡಿದ್ದಾರೆ. ನಂತರ ಕಾಡಾನೆ ಕಾರನ್ನು 10 ಮೀಟರ್ ದೂರಕ್ಕೆ ಕಾರನ್ನು ತಳ್ಳಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಜಖಂಗೊAಡಿರುವ ಕಾರನ್ನು ದುರಸ್ತಿಪಡಿಸಲು ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ವಿಳಂಬವಾಗಿ ಬಂದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕಾಡಾನೆ ಹಾವಳಿ ನಿಯಂತ್ರಣದ ಯೋಜನೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ…

Read More

ಮಡಿಕೇರಿ NEWS DESK ಅ.9 : ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಸಾಹಿತ್ಯ ಕ್ಷೇತ್ರ ಮತ್ತು ಕವಿಗೋಷ್ಠಿಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ನೀಡಿದರು. ಕತೆ, ಕವನ, ಕಾದಂಬರಿ, ಹಾಸ್ಯ ಲೇಖನಗಳು, ವಿಡಂಬಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವಕಾಶಗಳು ಹೆಚ್ಚು ಲಭಿಸಲಿವೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಪ್ರೋತ್ಸಾಹಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಸಂಗೀತ ನಿರ್ದೇಶಕ ಎಂ.ಆರ್.ಚರಣ್ ರಾಜ್ ಅವರು ಮಾತನಾಡಿ ಸಾಹಿತ್ಯ ಮತ್ತು ಸಂಗೀತಕ್ಕೆ ಒಂದಕ್ಕೊಂದು ಅವಿನಾಭಾವ ಸಂಬಂಧವಿದೆ ಎಂದು ತಿಳಿಸಿದರು.…

Read More

ಮಡಿಕೇರಿ ಅ.9 NEWS DESK : ಕೊಡವರ ಸ್ವಾಧೀನದಲ್ಲಿರುವ ಯುಗ ಯುಗಗಳ ಭೂಮಿಯನ್ನು 30 ವರ್ಷಗಳಿಗೆ ಗುತ್ತಿಗೆಗೆ ನೀಡುವ ಸರ್ಕಾರದ ಯೋಜನೆಯನ್ನು ದುಷ್ಟಕೂಟಗಳು ವಿಫಲಗೊಳಿಸಲು ಯತ್ನಿಸುತ್ತಿವೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‍ಸಿ ವತಿಯಿಂದ ಅಮ್ಮತ್ತಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕೊಡವರಿಗೆ ಭೂಮಿ ಸಿಗದಂತೆ ಮಾಡಿ ಸಂಕಷ್ಟಕ್ಕೆ ಸಿಲುಕಿಸಿ ಆತಂಕಕ್ಕೆ ತಳ್ಳುವ ಪ್ರಯತ್ನಗಳು ನಡೆಯುತ್ತಿದೆ. ಕೊಡಗಿನಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಬಂಡವಾಳಶಾಹಿಗಳು ಹಾಗೂ ಅವರು ಕರೆ ತಂದಿರುವ ಜನರಿಂದ ಇಲ್ಲಿನ ಪರಿಸರ, ಪ್ರಕೃತಿ, ಸಂಸ್ಕೃತಿ, ಜಲಮೂಲ, ಸಾಮಾಜಿಕ ಭದ್ರತೆ ಮತ್ತು ಜನಾಂಗೀಯ ಶಾಸ್ತ್ರ ಸಂಪೂರ್ಣ ಬುಡಮೇಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿ ದುರುಪಯೋಗವಾಗುತ್ತಿದ್ದು, ಇವರು ಇಂದು ಬೃಹತ್ ಭೂಪರಿವರ್ತನೆ…

Read More

ಮಡಿಕೇರಿ ಅ.9 NEWS DESK : ನಗರದ ಶ್ರೀ ಕೋಟೆ ಮಹಾಗಣಪತಿ ದೇವಾಲಯ ದಸರಾ ಮಂಟಪ ಸಮಿತಿ 48ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ವಿ.ಅರವಿಂದ್ ತಿಳಿಸಿದ್ದಾರೆ. ಎರಡು ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು, ಲೈಟಿಂಗ್ ಬೋರ್ಡನ್ನು ಮಡಿಕೇರಿ ಪೂಜಾ ಲೈಟಿಂಗ್‍ನ ನಜೀರ್ ಒದಗಿಸಲಿದ್ದಾರೆ. ಶ್ರೀ ಮಹಾಗಣಪತಿಯಿಂದ ಅಜಗರ – ಶಲಭಾಸುರ ದೈತ್ಯರ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ಧ್ವನಿವರ್ಧಕ ಹಾಗೂ ಸ್ಟುಡಿಯೋ ಲೈಟಿಂಗ್ ವ್ಯವಸ್ಥೆಯನ್ನು ಮಡಿಕೇರಿ ಸಂಗೀತ ಇವೆಂಟ್‍ನ ಲೋಕೇಶ್ ಮಾಡಲಿದ್ದಾರೆ. 21 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಕಲಾಕೃತಿಗಳ ರಚನೆ, ಚಲನವಲನ ಹಾಗೂ ಸೆಟ್ ವರ್ಕ್‍ನ್ನು ಎಸ್‍ಕೆಎಂಜಿ ಕ್ರಿಯೇಷನ್ಸ್‍ನ ಎಂ.ವಿ.ನವೀನ್ ಹಾಗೂ ಅರ್ಮೊನ್, ಸುಲ್ತಾನ್ ಮತ್ತು ತಂಡದವರು ಮಾಡಲಿದ್ದಾರೆ. ಫೈರ್ ವರ್ಕ್ ಹಾಗೂ ಕಲಾಕೃತಿಗಳಿಗೆ ಸ್ಪೆಷಲ್ ಎಫೆಕ್ಟನ್ನು ಟೀಂ99 ರೆಟ್ರೋ ಟ್ರ್ಯಾಂಗಲ್ ಮಡಿಕೇರಿ ತಂಡ ಮತ್ತು ಅಶ್ರಫ್ (ಅಚ್ಚು) ನೀಡಲಿದ್ದಾರೆ. ಪ್ಲಾಟ್‍ಫಾರಂನ್ನು ಪುನೀತ್ ತಂಡ ನಿರ್ಮಿಸಲಿದೆ. ಮುಂಬೈ ತಂಡ ಮಂಟಪಕ್ಕೆ ಸ್ಪೆಷಲ್ ಎಫೆಕ್ಟ್ ವ್ಯವಸ್ಥೆ ಮಾಡಲಿದೆ. ಒಟ್ಟು 27.75…

Read More

ಕುಶಾಲನಗರ ಅ.9 NEWS DESK :  ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೊಡಗು ಜಿಲ್ಲೆಯಿಂದ ಪ್ರತಿದಿನ ತೆರಿಗೆ ಹಣ ಪಾವತಿಯಾಗುತ್ತಿದ್ದರೂ ಕೂಡ ಜಿಲ್ಲೆಗೆ ಸರ್ಕಾರದಿಂದ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ ಎಂದು ವರ್ತಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಸಮಧಾನ ವ್ಯಕ್ತಪಡಿಸಿದರು. ಕುಶಾಲನಗರದ ಕನ್ನಿಕಾ ಹೋಟೆಲ್ ಸಭಾಂಗಣದಲ್ಲಿ ನಡೆದ ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ‌ ಅಧ್ಯಕ್ಷ ಕೆ.ಎಸ್.ನಾಗೇಶ್ ಅವರಿಗೆ ಸಮಾನ ಮನಸ್ಕರು ನೀಡಿದ ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ವ್ಯಾಪಾರ ವಹಿವಾಟುಗಳು ನಡೆಯುವ ಕುಶಾಲನಗರದ ಪ್ರಮುಖ ವಾಣಿಜ್ಯ ವಹಿವಾಟಿನ ರಥಬೀದಿಯಲ್ಲಿ ವಾಹನ ನಿಲುಗಡೆ ಸಮಸ್ಯೆಯಿಂದಾಗಿ ವರ್ತಕರಿಗೆ ಬಹಳಷ್ಟು ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಸ್ಥಳೀಯ ಪುರಸಭೆಯ ಸಹಕಾರದೊಂದಿಗೆ ಸ್ಥಾನೀಯ ಸಮಿತಿ ವಾಹನ ನಿಲುಗಡೆಗೆ ಪೂರಕವಾದ ವಿವಿಧೋದ್ದೇಶ ಕಟ್ಟಡ ನಿರ್ಮಿಸಿ ವಾಹನ ನಿಲುಗಡೆಗೆ ಅವಕಾಶಗಳಾಗಬೇಕಿದೆ. ಹಾಗೆಯೇ ಕುಶಾಲನಗರ ಪಟ್ಟಣದಲ್ಲಿ ವರ್ತಕರ ಸಂಘದ ಸ್ವಂತ ಕಟ್ಟಡ ನಿರ್ಮಾಣದ ಯೋಜನೆ ರೂಪುಗೊಳ್ಳಲು ನಾಗೇಂದ್ರ ಪ್ರಸಾದ್ ಕರೆ ನೀಡಿದರು.…

Read More

ಮಡಿಕೇರಿ ಅ.9 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮಡಿಕೇರಿ ತಾಲ್ಲೂಕು ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ಮರಗೋಡು ಶಿವಪಾರ್ವತಿ ದೇವಾಲಯದಲ್ಲಿ ದುರ್ಗಾಪೂಜೆ ಹಾಗೂ ಗೋಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ದುರ್ಗಾಪೂಜೆಯ ಮೂಲಕ ನಾಡಿನ ಒಳಿತಿಗಾಗಿ ದುರ್ಗೆಯನ್ನು ಪ್ರಾರ್ಥಿಸಲಾಯಿತು. ಗೋವು ಮತ್ತು ಕರುವಿಗೆ ವಿಶೇಷ ಪೂಜೆ ಸಲ್ಲಿಸಿ ಬೆಲ್ಲ, ಕಡಲೆ, ಬಾಳೆಹಣ್ಣು, ಅವಲಕ್ಕಿ ಫಲಹಾರ ನೀಡಿ ಗೌರವಿಸಲಾಯಿತು. ನಂತರ ದೇವಾಲಯದ ಸಭಾಂಗಣದಲ್ಲಿ ದುರ್ಗಾಸ್ತೋತ್ರದೊಂದಿಗೆ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ಸಭಾ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಜಿಲ್ಲಾ ಮಠ, ಮಂದಿರಗಳ ಪ್ರಮುಖ್ ಡಾ.ಮಹಾಭಲೇಶ್ವರ ಭಟ್ ಬೌದಿಕ್ ನಡೆಸಿಕೊಟ್ಟು ಹಿಂದೂ ಧರ್ಮ, ಧಾರ್ಮಿಕ ಆಚರಣೆ, ದುರ್ಗಾಪೂಜೆ ಮತ್ತು ಗೋಪೂಜೆಯ ಮಹತ್ವವನ್ನು ತಿಳಿಸಿದರು. ಮಾತೃಶಕ್ತಿಯ ಮಡಿಕೇರಿ ತಾಲ್ಲೂಕು ಸಂಯೋಜಕಿ ಮಮತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹ ಪ್ರಮುಖ್ ಪೂರ್ಣಿಮ ಸುರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಯೋಜಕಿ ಉಮಾವತಿ, ರೋಹಿಣಿ ಚಂದ್ರಶೇಖರ್, ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಜಿಲ್ಲಾ ಪ್ರಸಾರ…

Read More

ಕಣಿವೆ ಅ.9 NEWS DESK : ಐಟಿಡಿಪಿ ಇಲಾಖೆ ಅಧಿಕಾರಿಗಳು ಜೇನು ಕುರುಬರ ಹಾಡಿಗಳಿಗೆ ಬರುತ್ತಿಲ್ಲ. ಅವರ ಕಾರುಗಳು ಹೋಗುವಂತಹ ರಸ್ತೆಗಳು ಇರುವ ಕಡೆಗಳಲ್ಲಿ ಮಾತ್ರ ಹೋಗ್ತಾ ಇದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಡಿಗಳೇ ಗೊತ್ತಿಲ್ಲ. ಇಂತಹ ಬೇಜವಬ್ದಾರಿ ಇಲಾಖಾಧಿಕಾರಿಗಳಿಂದ ಜೇನು ಕುರುಬ ಜನಾಂಗಕ್ಕೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜೇನು ಕುರುಬರ ಮುಖಂಡ, ಜಿ.ಪಂ ಮಾಜಿ ಸದಸ್ಯ ಹಾಗೂ ನಂಜರಾಯಪಟ್ಟಣ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಕುಶಾಲನಗರ ತಾಲ್ಲೂಕು ಚಿಕ್ಲಿಹೊಳೆ ಜಲಾಶಯದ ಬಳಿ ಇರುವ ಕಟ್ಟೆಹಾಡಿಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜೇನು ಕುರುಬರ ಹೆಸರಿನಲ್ಲಿ ಉಳ್ಳವರು ಹಾಗೂ ಜೇನು ಕುರುಬರಲ್ಲದವರು ಜಾತಿ ಪ್ರಮಾಣ ಪತ್ರಗಳನ್ನು ಮಾಡಿಸಿಕೊಂಡು ನಿಜವಾದ ಅರ್ಹ ಫಲಾನುಭವಿಗಳಿಗೆ ವಂಚಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮೀಸಲಿಡುವ ಪರಿಶಿಷ್ಟರ ಅನುದಾನದ ಶೇ.25 ರಷ್ಟು ಹಣ ನಮ್ಮ ಜೇನು ಕುರುಬರಿಗೆ ಸಲ್ಲಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮ ನಮ್ಮ…

Read More