ಮಡಿಕೇರಿ ಸೆ.24 NEWS DESK : ಮಡಿಕೇರಿ ನಗರ ದಸರಾ ಸಮಿತಿ 2024ರ ಸ್ವಾಗತ ಸಮಿತಿಯ ಪ್ರಥಮ ಸಭೆಯು ಸಮಿತಿಯ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ದಸರಾ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎ.ಜಿ.ರಮೇಶ್, ಯಕ್ಷಿತ್ ಕೊತ್ತೋಳಿ, ಆರ್.ಪಿ.ಚಂದ್ರಶೇಖರ್, ಸಹ ಕಾರ್ಯದರ್ಶಿಯಾಗಿ ಅಹಮದ್, ಕೆ.ಶರಣ್, ಗೌರವ ಸಲಹೆಗಾರರಾಗಿ ಶೇಕ್ ಅಹಮದ್ ಮತ್ತು ಕೆ.ಜಿ.ಪೀಟರ್ ಆಯ್ಕೆಯಾಗಿದ್ದಾರೆ.
ಲೇಖಕ: admin
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲಾ ಹೊಟೇಲ್, ರೆಸಾಟ್೯, ರೆಸ್ಟೋರೆಂಟ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಕಾಯ೯ಪ್ಪ ಆಯ್ಕೆಯಾಗಿದ್ದು, ಪ್ರಧಾನ ಕಾಯ೯ದಶಿ೯ಯಾಗಿ ನಾಸೀರ್ ಅಹಮ್ಮದ್ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಫೋಟ್೯ ಮಕೇ೯ರಾ ಹೊಟೇಲ್ ನಲ್ಲಿ ಜರುಗಿದ ಸಂಘದ ವಾಷಿ೯ಕ ಮಹಾಸಭೆಯಲ್ಲಿ ನಿಕಟಪೂವ೯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಅಧಿಕಾರವನ್ನು ದಿನೇಶ್ ಕಾಯ೯ಪ್ಪ ಅವರಿಗೆ ಹಸ್ತಾಂತರಿಸಿದರು. ಸಂಘದ ಪ್ರಧಾನ ಕಾಯ೯ದಶಿ೯ಯಾಗಿ ಎಂ.ಎ.ನಾಸೀರ್ ಅಹ್ಮದ್, ಮಡಿಕೇರಿ ವಿಭಾಗದ ಉಪ ಅಧ್ಯಕ್ಷರಾಗಿ ಎಂ.ಬಿ.ಝಹೀರ್ ಅಹ್ಮದ್ , ವಿರಾಜಪೇಟೆ ವಿಭಾಗದ ಉಪ ಅಧ್ಯಕ್ಷರಾಗಿ ಬಿ.ಸಿ.ಮಂಜುನಾಥ್ , ಸೋಮವಾರಪೇಟೆ ವಿಭಾಗದ ಉಪ ಅಧ್ಯಕ್ಷರಾಗಿ ಸುಂದರ್ ಹಾಗೂ ಕುಶಾಲನಗರ ವಿಭಾಗದ ಉಪಾಧ್ಯಕ್ಷರಾಗಿ ರಥೀಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ನಾಸೀರ್ ಅಹಮ್ಮದ್ ವರದಿ ಮಂಡಿಸಿದರೆ, ಖಜಾಂಚಿ ಭಾಸ್ಕರ್ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಥಹೀರ್ ಸಂಘದ ಕಾಯ೯ಚಟುವಟಿಕೆ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಹಿರಿಯ ಸದಸ್ಯ ಮಡಿಕೇರಿಯ ಹೋಟೆಲ್ ಚಿತ್ರಾದ ಮಾಲೀಕ ಗಣೇಶ್ ಮತ್ತು…
ಮಡಿಕೇರಿ ಸೆ.24 NEWS DESK : ಆಧುನಿಕ ತಂತ್ರಜ್ಞಾನ ಮತ್ತು ನವ ಅವಿಷ್ಕಾರದೊಂದಿಗೆ ನಿರಂತರವಾಗಿ ವೈದ್ಯರು ಹೊಸವಿಚಾರಗಳೊಂದಿಗೆ ವೃತ್ತಿಯಲ್ಲಿ ಬೆಳೆಯುತ್ತಿರಬೇಕು. ಸಾಮಾಜಿಕ ಜಾಲತಾಣವನ್ನು ಹೇಗೆ ಸದುಪಯೋಗಪಡಿಸಿಕೊಂಡು ಪ್ರಪಂಚದ ಯಾವ ಮೂಲೆಯಲ್ಲೂ ಆಯುರ್ವೇದ ತಲುಪುವಂತೆ ಮಾಡಬೇಕು ಎಂದು ಸುಳ್ಯದ ಆಯುಧಾ೯ಮ ಆಯುವೇ೯ದ ಆಸ್ಪತ್ರೆಯ ಸ್ಥಾಪಕರಾದ ಡಾ.ಹರಿಪ್ರಸಾದ್ ಶೆಟ್ಟಿ ಕರೆ ನೀಡಿದ್ದಾರೆ. ನಗರದ ಆಕ್ಸಿರಿಚ್ ಹೋಟೇಲ್ ಸಭಾಂಗಣದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ ಕೊಡಗು, ಸಂಘದ ವತಿಯಿಂದ ಆಯೋಜಿತ ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಜಾಗತಿಕ ಗ್ರಾಹಕರನ್ನು ತಲುಪಲು ಆಯುರ್ವೇದ ಕ್ಲಿನಿಕ್ ಅಥವಾ ಆಸ್ಪತ್ರೆಯನ್ನು ಹೇಗೆ ಅಭಿವೃದ್ಧಿಪಡಿಸುವುದು ಎನ್ನುವ ಬಗ್ಗೆ ಅವರು ಮಾಹಿತಿ ನೀಡಿದರು. ನೂತನ ಅಧ್ಯಕ್ಷರಾಗಿ ಡಾ ರಾಜಾರಾಮ್ :: ಎನ್.ಐ.ಎಂ.ಎ ಕೊಡಗು 2024-26 ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಡಾ.ರಾಜಾರಾಮ್, ಕಾರ್ಯದರ್ಶಿಯಾಗಿ ಡಾ. ಪಿ.ಎಸ್.ಶ್ಯಾಮ್ ಪ್ರಸಾದ, ಖಜಾಂಚಿಯಾಗಿ ಡಾ.ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಡಾ.ಶೈಲಜಾ ರಾಜೇಂದ್ರ, ಕಾರ್ಯದರ್ಶಿಯಾಗಿ ಡಾ. ಸೌಮ್ಯ,…
ಸೋಮವಾರಪೇಟೆ ಸೆ.24 NEWS DESK : ಅಂಕುರಂ ಹಿರಿಯ ವಿದ್ಯಾರ್ಥಿಗಳ ಎಜುಕೇಷನ್ ಟ್ರಸ್ಟ್, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಿಯಿಂದ ಪ್ರಾರಂಭವಾಗಿರುವ ಎಲ್ಕೆಜಿ ತರಗತಿಯ ನೂತನ ಕೊಠಡಿಗಳನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಾತೃ ಭಾಷೆ ನಮಗೆಲ್ಲ ಅತ್ಯಾವಶ್ಯಕವಾದರೂ, ಬದುಕಿಗಾಗಿ ಆಂಗ್ಲಭಾಷೆ ಕಲಿಯಲೇಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಆಂಗ್ಲ ಮಾದ್ಯಮ ಶಾಲೆಗಳಿಗೆ ಸೇರಿಸಿ ಶಿಕ್ಷಣ ಕೊಡಿಸುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ಕಡಿಮೆ ಹಣದಲ್ಲಿ ಪ್ರಾಥಮಿಕ ಶಿಕ್ಷಣ ಕೊಡಿಸುವ ಬಗ್ಗೆ ಚಿಂತಿಸಬೇಕು ಎಂದರು. ಯಾವುದೇ ಗ್ರಾಮಗಳಲ್ಲಿ ಸ್ಥಳೀಯರ ನೆರವಿಲ್ಲದೆ, ಸರ್ಕಾರಿ ಶಾಲೆಗಳು ಮುಂದುವರೆಯಲು ಸಾಧ್ಯವಿಲ್ಲ. ಶಾಲೆಯ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ಉಳಿಸಲು ಲಕ್ಷಾಂತರ ರೂ.ಸಂಗ್ರಹಿಸಿ, ಆಂಗ್ಲ ಮಾದ್ಯಮದಲ್ಲಿ ಶಿಕ್ಷಣವನ್ನು ಸ್ಥಳೀಯರಿಗೆ ಕೊಡಲು ಮುಂದಾಗಿರುವುದ ಶ್ಲಾಘನೀಯ. ಶಿಕ್ಷಕರು ಬದಲಾದ ಪಠ್ಯದಂತೆಯೇ ಮಕ್ಕಳಿಗೆ ಶಿಕ್ಷಣ…
ಮೈಸೂರು NEWS DESK ಸೆ.24 : ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯದ ಧನ ಸಹಾಯದೊಂದಿಗೆ ಮೈಸೂರು ವಿಶ್ವವಿದ್ಯಾನಿಲಯದ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ ನಡೆಸಿದ ಬಹು ನಿರೀಕ್ಷಿತ ರಾಜ್ಯದ ಮೊದಲ ಬುಡಕಟ್ಟು ಮಾನವ ಅಭಿವೃದ್ಧಿ ವರದಿ -2022 ಬಿಡುಗಡೆಯಾಗಿದ್ದು ಬುಡಕಟ್ಟು ಅಭಿವೃದ್ಧಿ ವಿಚಾರದಲ್ಲಿ ರಾಜ್ಯವು ಇನ್ನಷ್ಟು ಮುಂದೆ ಸಾಗಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳುತ್ತಿದೆ. ಬಡತನ, ಕಳಪೆ ಆರೋಗ್ಯ ಸೇವೆ, ಸಾಂಪ್ರದಾಯಿಕ ಆರೋಗ್ಯ ವರ್ತನೆಗಳು ಅಪೌಷ್ಟಿಕತೆ, ಮತ್ತು ಅನೈರ್ಮಲ್ಯದಿಂದ ರಾಜ್ಯದ ಬುಡಕಟ್ಟು ಸಮುದಾಯದ ಜನರ ಬದುಕುವ ಸರಾಸರಿ ಆಯಸ್ಸು ಕೇವಲ 58.2 ವರ್ಷಗಳು ಎನ್ನುವ ಅಂಶ ತಿಳಿದುಬಂದಿದೆ. ಮೂರು ವರ್ಷಗಳ ಕಾಲ ರಾಜ್ಯದ 50 ಬುಡಕಟ್ಟು ಸಮುದಾಯಗಳ ಸುಮಾರು ಆರು ಸಾವಿರ ವ್ಯಕ್ತಿಗಳ ಪ್ರಾಥಮಿಕ ಸರ್ವೆಯನ್ನು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ ನಡೆಸಿದ್ದು ರಾಜ್ಯದ ಬುಡಕಟ್ಟು ಸಮುದಾಯಗಳು ಆರೋಗ್ಯ, ಶಿಕ್ಷಣ, ಲಿಂಗ, ಉದ್ಯೋಗ ಮತ್ತು ಭಾಗವಹಿಸುವಿಕೆ ಮುಂತಾದ ವಿಚಾರದಲ್ಲಿ ಕಳಪೆ ಸಾಧನೆಯನ್ನು ಗಮನಿಸಲಾಗಿದೆ. ಈ ಅಧ್ಯಯನವನ್ನು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ…
ಸೋಮವಾರಪೇಟೆ ಸೆ.24 NEWS DESK : ಅಭಿವೃದ್ಧಿ ಮತ್ತು ಸಂಘಟನೆಯನ್ನು ಮಾಡಿದರೆ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಪಟ್ಟಣ ಪಂಚಾಯಿತಿ ಆಡಳಿತವನ್ನು ಕಾಂಗ್ರೆಸ್ ಪಕ್ಷ ಹಿಡಿಯಬಹುದು ಎಂದು ಶಾಸಕ ಡಾ.ಮಂತರ್ಗೌಡ ಹೇಳಿದರು. ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆದ ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಣದ ಎಲ್ಲಾ ಬೂತ್ಗಳಲ್ಲಿ ನನಗೆ ಉತ್ತಮ ಬೆಂಬಲ ಸಿಕ್ಕಿದೆ. ಪಟ್ಟಣದ ನಿವಾಸಿಗಳ ಕಷ್ಟಸುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ, ಪ್ರೀತಿ ಗಳಿಸಬೇಕು. ನಾನು ಕೂಡ ಎಲ್ಲಾ ವಾರ್ಡ್ಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸಲು ಶ್ರಮವಹಿಸುತ್ತೇನೆ ಎಂದು ಅಭಯ ನೀಡಿದರು. ಹಲವು ವರ್ಷಗಳಿಂದ ಪಟ್ಟಣದ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿದೆ ಎಂಬುದನ್ನು ಜನರ ಬಾಯಿಂದ ಕೇಳಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಪಂಚಾಯಿತಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನ ಮಾಡುತ್ತೇನೆ. ಈಗಾಗಲೇ ಅಮೃತ್ ಯೋಜನೆಯಲ್ಲಿ ಸರ್ಕಾರ 12 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದೆ. ಈ ಯೋಜನೆಯಲ್ಲಿ ಪಟ್ಟಣಕ್ಕೆ ಹಾರಂಗಿಯಿಂದ ಕುಡಿಯುವ ನೀರು…
ಸುಂಟಿಕೊಪ್ಪ ಸೆ.24 NEWS DESK : ಸರ್ಕಾರ ಮಹಿಳೆಯರ ರಕ್ಷಣೆಗಾಗಿ ಮತ್ತು ಸುರಕ್ಷತೆಯ ದಿಸೆಯಲ್ಲಿ ಹಲವು ಕಠಿಣ ರೀತಿಯ ಕಾನೂನುಗಳನ್ನು ಜಾರಿಗೆ ತಂದಿದ್ದು, ಮಹಿಳೆಯರು ಕಾನೂನಿನ ಮಾಹಿತಿಯನ್ನು ಪಡೆದುಕೊಂಡು ಇತರರಿಗೆ ತಿಳಿಸುವಂತೆ ಠಾಣಾಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್ಬೈಲ್ ಸರಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಕಾನ್ಬೈಲ್ ಕಾರ್ಯಕ್ಷೇತ್ರದ ಸ್ವಸಹಾಯ ಸಂಘದ ಮಹಿಳೆಯರಿಗೆ ನಡೆದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ವಾಹನಗಳನ್ನು ಚಲಾಯಿಸುವಾಗ ವಾಹನದ ಪರವನಾಗಿ ದಾಖಲಾತಿಗಳನ್ನು ವಾಹನದಲ್ಲಿರಿಸಿಕೊಂಡಿರಬೇಕು, ಸಂಚಾರಿ ನಿಯಮವನ್ನು ಪಾಲಿಸಬೇಕು, ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನಗಳನ್ನು ಚಲಾಯಿಸಲು ನೀಡಬೇಡಿ ತಪ್ಪಿದಲ್ಲಿ ಪೋಷಕರಿಗೆ ದಂಡ ಹಾಗೂ ಜೈಲು ಶಿಕ್ಷೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಮೇಲೆ ದೌರ್ಜನ್ಯ,…
ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಹೆಚ್.ರಫೀಕ್ ದಾದ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿ ಸಂಭ್ರಮಿಸಿದರು. ಖ್ಯಾತ ಜೂನಿಯರ್ ವಿಷ್ಣುವರ್ಧನ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಾರ್ವಜನಿಕರನ್ನು ರಂಜಿಸಿದರು. ಹಿರಿಯ ಪತ್ರಕರ್ತ, ರವಿ ಪ್ರೆಸ್ನ ಮಾಲೀಕ ಎಂ.ಪಿ.ಕೃಷ್ಣರಾಜ್ ಮಾತನಾಡಿ, ವಿಷ್ಣು ಸೇನಾ ಸಮಿತಿಯ ವತಿಯಿಂದ ಹಲವು ಜನಪರ ಕೆಲಸ ಕಾರ್ಯಗಳು ಮಾಡುತ್ತಾ ಬರಲಾಗಿದೆ. ಮುಂದೆಯೂ ಉತ್ತಮ ಕಾರ್ಯಕ್ರಮ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಮಾತನಾಡಿ, ಎಲ್ಲರೂ ಸೇರಿ ಒಂದು ಸಂಘವನ್ನು ಕಟ್ಟಬಹುದು ಆದರೆ ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಬಹಳ ಕಷ್ಟ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್ ಹಾಗೂ ಸಮಾಜ…
ಕಣಿವೆ ಸೆ.24 NEWS DESK : ತಲಾ ತಲಾಂತರಗಳಿಂದ ಅರಣ್ಯದೊಳಗೆ ಹಾಗೂ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಸಮುದಾಯದ ಗಿರಿಜನರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯಾವೊಂದು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿಲ್ಲ ಎಂದು ಆರೋಪಿಸಿ ಸರ್ಕಾರಗಳ ಧೋರಣೆಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸಿ ಪ್ರತಿಭಟನೆ ನಡೆಸುವ ಸಂಬಂಧ ಕೊಡಗು, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಆದಿವಾಸಿ ಪ್ರಮುಖರ ಸಭೆ ಬಸವನಹಳ್ಳಿಯಲ್ಲಿ ನಡೆಯಿತು. ಆದಿವಾಸಿಗಳ ಸಮುದಾಯದ ರಾಜ್ಯ ನಾಯಕ ಜೆ.ಟಿ.ರಾಜಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೂರು ಜಿಲ್ಲೆಗಳ 50ಕ್ಕೂ ಹೆಚ್ಚು ಆದಿವಾಸಿ ಪ್ರಮುಖರು ಪಾಲ್ಗೊಂಡಿದ್ದರು. ಪ್ರಾಚೀನ ಕಾಲದಿಂದಲೂ ಅರಣ್ಯದಲ್ಲಿ ವಾಸಿಸುತ್ತಾ ಬದುಕು ನಡೆಸಿಕೊಂಡು ಬರುತ್ತಿರುವ ಜೇನು ಕುರುಬ ಹಾಗೂ ಕೊರಗ ಸಮುದಾಯಗಳ ಪ್ರಾಚೀನ ಬುಡಕಟ್ಟು ಗುಂಪನ್ನು ಸರ್ಕಾರಗಳು ಅನೇಕ ದಶಕಗಳಿಂದಲೂ ಕಡೆಗಣಿಸುತ್ತಲೇ ಬಂದಿವೆ. ಹುಲಿ ಸಂರಕ್ಷಣಾ ಯೋಜನೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯ ಹೆಸರಿನಲ್ಲಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲು ಪರಿಸರವಾದಿಗಳ ಮಾತು ಕೇಳಿ ಗಿರಿಜನರನ್ನು ಒಕ್ಕಲೆಬ್ಬಿಸಲು ನಡೆಸಿರುವ ಹುನ್ನಾರದ ವಿರುದ್ಧ ಶೀಘ್ರದಲ್ಲಿಯೇ…
ಮಡಿಕೇರಿ ಸೆ.24 NEWS DESK : ಮಡಿಕೇರಿಯ ಅಶೋಕಪುರ ಗಣಪತಿ ಉತ್ಸವ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. 50ನೇ ವರ್ಷದ ಗಣೇಶೋತ್ಸವ ಸಂಭ್ರಮದಲ್ಲಿರುವ ಅಶೋಕಪುರದ ಗಣಪತಿ ಉತ್ಸವ ಸಮಿತಿ ಅಲ್ಲಿನ ಶ್ರೀ ಅನ್ನಪೂರ್ಣೆಶ್ವರಿ ದೇಗುಲದಲ್ಲಿ ಪ್ರತಿಷ್ಠಾಪಿಸಿದ್ದ ಉತ್ಸವ ಮೂರ್ತಿಗಳನ್ನು ಮಂಟಪದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಶೋಭಾಯಾತ್ರೆಗೆ ಚಾಲನೆ ನೀಡಿತು. ಮಂಟಪದಲ್ಲಿ ‘ಗಣಪತಿಯಿಂದ ಶತಮಹಿಷಿಯ ಸಂಹಾರ” ಎಂಬ ಕಥಾ ಸಾರಾಂಶವನ್ನು ಅಳವಡಿಸಲಾಗಿತ್ತು. ಗಣೇಶ ಸೇರಿದಂತೆ ದೇವಾನು ದೇವತೆ, ಅಸುರರ ಕಲಾಕೃತಿಗಳು ಮಂಟಪದ ಅಂದವನ್ನು ಹೆಚ್ಚಿಸಿದವು. ರಂಗುರಂಗಿನ ಕಾಗದದ ಸ್ಪೋಟಕಗಳು, ಚಿಮ್ಮುವ ಬೆಂಕಿ, ಪಟಾಕಿಗಳು ಮೈನವಿರೇಳುವಂತೆ ಮಾಡಿದವು. ಗಜಾನನನಿಂದ ಶತಮಹಿಷಿಯ ಸಂಹಾರ ಕಥಾ ಸಾರಾಂಶವನ್ನು ಸಮಿತಿ ಮನಮೋಹಕವಾಗಿ ಪ್ರಸ್ತುತಪಡಿಸಿತು. ಅಶೋಕಪುರದಿಂದ ಹೊರಟ ಮಂಟಪ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಇಂದಿರಾಗಾಂಧಿ ವೃತ್ತದಲ್ಲಿ ಜನರಿಗೆ ಪ್ರದರ್ಶನ ನೀಡಿತು. ಅದ್ದೂರಿಯಾಗಿ ನಡೆದ ಗಣೇಶ ವಿಜರ್ಸನೆ ಶೋಭಾಯಾತ್ರೆಗೆ ನಗರ ಸೇರಿದಂತೆ ವಿವಿಧೆಡೆಗಳಿಂದ ಜನರು ಆಗಮಿಸಿ ಕಟ್ಟಡ,…






