ಲೇಖಕ: admin

ಸುಂಟಿಕೊಪ್ಪ ಸೆ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾನ್‍ಬೈಲ್ ಒಕ್ಕೂಟ, ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಸೇವಾ ಭಾರತಿ ಸಹಯೋಗದೊಂದಿಗೆ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ಸ್ತ್ರೀರೋಗ, ತಜ್ಞರು ಮಧುಮೇಹ, ರಕ್ತದೊತ್ತಡ, ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದ ನುರಿತ ತಜ್ಞರುಗಳಿಂದ ತಪಾಸಣೆ ನಡೆಸಿ ಜೌಷಧಿಗಳನ್ನು ನೀಡಲಾಯಿತು. ಸೇವಾ ಭಾರತೀಯ ಅಧ್ಯಕ್ಷ ಚಂದ್ರನ್ ಹಾಗೂ ತಿಮ್ಮಪ್ಪ ಅವರ ನೇತೃತ್ವದಲ್ಲಿ ಡಾ.ಶಶಾಂಕ್, ಡಾ.ನಾರಾಯಣ್ ತಂಡದವರು ಆಗಮಿಸಿ 100ಕ್ಕೂ ಹೆಚ್ಚು ಮಂದಿಯನ್ನು ತಪಾಸಣೆ ನಡೆಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡಿಸಿಕೊಂಡರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ಒಕ್ಕೂಟ ಹಾಗೂ ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಸಿದ್ದಾಪುರ NEWS DESK ಸೆ.24 : ಸೂರಿಗಾಗಿ ಸಮರ ಘೋಷವಾಕ್ಯದೊಂದಿಗೆ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯ ವ್ಯಾಪಿ ನಡೆಸುತ್ತಿರುವ ಹೋರಾಟದ ಭಾಗವಾಗಿ ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಕಛೇರಿ ಎದುರು ಪಕ್ಷದ ಕೊಡಗು ಘಟಕ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿರುವ ಬಡವರಿಗೆ ನಿವೇಶನ ನೀಡಬೇಕು. ವಸತಿ ರಹಿತರ ನೋಂದಣಿ ಕಾರ್ಯ ಸ್ಥಗಿತಗೊಂಡಿದ್ದು, ಇದನ್ನು ಪುನರಾರಂಭಿಸಬೇಕು ಎಂದು ಹೊರಾಟಗಾರರು ಒತ್ತಾಯಿಸಿದರು. ನಗರದ ಬಸ್ ನಿಲ್ದಾಣದಿಂದ  ತಾಲ್ಲೂಕು ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಿವೇಶನ ರಹಿತರು, ಕಮ್ಯುನಿಷ್ಟ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಭಾರತ ಕಮ್ಯುನಿಷ್ಟ್ ಪಕ್ಷದ ರಾಜ್ಯ ಸಹ ಕಾರ್ಯದರ್ಶಿ ಬಿ.ಅಮ್ಜದ್ ಮಾತನಾಡಿ ಸೂರಿಗಾಗಿ ಸಮರ ಘೋಷಣೆಯಲ್ಲಿ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ  ನಿವೇಶನ ಒದಗಿಸುವಂತೆ ಪಕ್ಷದ ವತಿಯಿಂದ ರಾಜ್ಯವ್ಯಾಪ್ತಿ ಹೋರಾಟ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಒತ್ತುವರಿದಾರರಿಗೆ ಭೋಗ್ಯಕ್ಕೆ ಸರ್ಕಾರಿ ಜಮೀನು ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ಇದು ನಿವೇಶನ ರಹಿತ ಬಡವರ ವಿರೋಧಿ ನೀತಿಯಾಗಿದೆ ಎಂದು ಆರೋಪಿಸಿದರು. ಮೊದಲು  ಬಡವರಿಗೆ ನಿವೇಶನ…

Read More

ಮಡಿಕೇರಿ ಸೆ.24 NEWS DESK : ಗೊಣಿಕೊಪ್ಪಲು ಕಾಫಿ ಮಂಡಳಿ ವತಿಯಿಂದ ನಿಟ್ಟೂರು ಗ್ರಾ.ಪಂ ಸಹಯೋಗದೊಂದಿಗೆ ಬೆಳೆಗಾರರಿಗೆ ಗ್ರಾಮ ಮಟ್ಟದ ಕಾಫಿ ಕಾರ್ಯಾಗಾರ ನಡೆಯಿತು. ನಿಟ್ಟೂರು ಗ್ರಾ.ಪಂ ಸಮುದಾಯ ಭವನದಲ್ಲಿ ಕಾರ್ಯಾಗಾರದಲ್ಲಿ ಕಾಫಿ ಮಂಡಳಿಯ ಉಪನಿರ್ದೇಶಕರಾದ ಡಾ.ಶ್ರೀದೇವಿ ಮತ್ತು ಗೊಣಿಕೊಪ್ಪಲು ಕಾಫಿ ಮಂಡಳಿಯ ಸಂಪರ್ಕಾಧಿಕಾರಿ ಮುಖಾರೀಬ್ ಮಾತನಾಡಿ, ಬೆಳೆಗಾರರಿಗೆ ಅತೀ ಹೆಚ್ಚಿನ ಮಳೆಯಿoದಾಗಿ ಕಾಫಿ ಗಿಡಗಳಲ್ಲಿ ಕೊಳೆರೋಗ ನಿರ್ವಹಣೆ ಮತ್ತು ಕಾಫಿ ಉದುರುವುದರ ಬಗ್ಗೆ ಹಾಗೂ ಮರು ನಾಟಿ, ಗೋಡೌನ್, ಕಾಫಿ ಕಣ, ಹೊಸ ಕೆರೆ, ಬಾವಿ, ಸ್ಪ್ರಿಂಕ್ಲರ್ ಉಪಕರಣ, ಮೋಟಾರ್, ಮಿನಿ ಟ್ರ್ಯಾಕ್ಟರ್ ಮುಂತಾದವುಗಳಿಗೆ ಸಬ್ಸಿಡಿಯನ್ನು ಕಾಫಿ ಮಂಡಳಿಯಿಂದ ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಅಮ್ಮುಣಿ, ಉಪಾಧ್ಯಕ್ಷ  ಚಕ್ಕೇರ ಸೂರ್ಯ ಅಯ್ಯಪ್ಪ, ಸದಸ್ಯರಾದ ಕಾಟಿ ಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಗ್ರಾ.ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಾದ ಸುರೇಶ್, ಪ್ರಮುಖರಾದ ಪಾರುವಂಗಡ ಪವನ್, ಮುಕ್ಕಾಟಿರ ಪ್ರಿಸ್ಸ್ ಮುಂತಾದವರು ಹಾಜರಿದ್ದರು.

Read More

ಮಡಿಕೇರಿ ಸೆ.24 NEWS DESK : ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ‌ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಬಾಲಕರ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಫೈನಲ್ ಪಂದ್ಯದಲ್ಲಿ ಮಡಿಕೇರಿಯ ಸಂತ ಮೈಕಲರ ಪಿಯು ಕಾಲೇಜು ತಂಡವನ್ನು 2-0 ನೇರ ಸೆಟ್ ಗಳಿಂದ ಮಣಿಸಿ ರಾಫೆಲ್ಸ್ ಪಿಯು ಕಾಲೇಜು ‌ತಂಡವು ಪ್ರಶಸ್ತಿ ಗೆದ್ದಿತ್ತು. ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಕಾವೇರಿ ಕಾಲೇಜು ತಂಡವನ್ನು 2-1 ಸೆಟ್ ಗಳ ಅಂತರದಿಂದ ಸೋಲಿಸಿತು. ಕ್ವಾಟರ್ ಫೈನಲ್ ‌ಪಂದ್ಯದಲ್ಲಿ ಅರುಣ ಪದವಿ ಪೂರ್ವ ಕಾಲೇಜು ಚೇರಂಬಾಣೆ ತಂಡವನ್ನು 2-0 ನೇರ ಸೆಟ್ ಗಳಿಂದ ಸೋಲಿಸಿತ್ತು. ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ತಂಡವು ಸತತ ಮೂರನೇ ಬಾರಿಗೆ ಮಡಿಕೇರಿ ತಾಲೂಕಿನ ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕರ ವಾಲಿಬಾಲ್ ‌ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದು,ಕಳೆದ ವರ್ಷ ಹಾಸನದಲ್ಲಿ ನಡೆದ…

Read More

ಮಡಿಕೇರಿ NEWS DESK ಸೆ.23 : ವಿರಾಜಪೇಟೆ ತಾಲ್ಲೂಕಿನ ಬೆಳ್ಳರಿಮಾಡು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿ ಬೆಳೆ ನಷ್ಟ ಮಾಡುತ್ತಿರುವ ಗಜಪಡೆ ಮನೆಯಂಗಳಕ್ಕೂ ಬಂದು ಆತಂಕ ಮೂಡಿಸುತ್ತಿವೆ. ಗ್ರಾಮದ ಪುಟ್ಟಿಚಂಡ ಪದ್ಮಿನಿ ಮುದ್ದಪ್ಪ ಅವರ ಕಾಫಿ ತೋಟಕ್ಕೆ ತಡರಾತ್ರಿ ನಾಲ್ಕು ಕಾಡಾನೆಗಳು ದಾಳಿ ಮಾಡಿವೆ. ಬೆಳೆ ಹಾನಿ ಮಾಡಿದ್ದು, ಕಾಡನೆಗಳ ಸಂಚಾರದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಅನೇಕ ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಿಂಡು ಉಪಟಳ ನೀಡುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಪಾರ ಬೆಳೆ ನಷ್ಟವಾಗುತ್ತಿರುವುದಲ್ಲದೆ, ಮನೆಯಿಂದ ಹೊರಗೆ ಬರಲು ಭಯವಾಗುತ್ತಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

Read More

ಸಿದ್ದಾಪುರ NEWS DESK ಸೆ.23 : ತೋಟದಲ್ಲಿ ಬೀಡುಬಿಟ್ಟಿದ್ದ ಸುಮಾರು 15 ಕಾಡಾನೆಗಳನ್ನು ಕಾರ್ಮಿಕರೇ ಕಾಡಿಗಟ್ಟಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟವೊಂದರಲ್ಲಿ ನಡೆದಿದೆ. ಪ್ರತಿದಿನದಂತೆ ಇಂದು ಕೂಡ ಕೆಲಸಕ್ಕೆಂದು ಬಂದ ಕಾರ್ಮಿಕರಿಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿತ್ತು. ತೋಟದೊಳಗಿದ್ದ ಕಾಡಾನೆಗಳನ್ನು ಹೇಗಾದರೂ ಮಾಡಿ ಓಡಿಸಬೇಕೆಂದು ಧೈರ್ಯ ಮಾಡಿಕೊಂಡ ಕಾರ್ಮಿಕರು ಮರವೊಂದರ ಮೇಲೆ ಹತ್ತಿ ಜೋರಾಗಿ ಕಿರುಚಿದರು, ಶಬ್ಧ ಮಾಡಿದರು, ಆನೆಗಳನ್ನು ಬೆದರಿಸಿದರು. ಕಾಫಿ ತೋಟದಿಂದ ಚಿಕ್ಕನಹಳ್ಳಿ ಮಾರ್ಗವಾಗಿ ಒಂದು ಕಿಲೋಮೀಟರ್ ವರೆಗೆ ಆನೆಗಳನ್ನು ಓಡಿಸಿ ಅರಣ್ಯ ಸೇರುವಂತೆ ಮಾಡಿದರು. (ವರದಿ : ಕೃಷ್ಣ ಸಿದ್ದಾಪುರ)

Read More

ಮಡಿಕೇರಿ NEWS DESK ಸೆ.23  : ಹಚ್ಚ ಹಸಿರಿನ ಕಾಫಿ ತೋಟಗಳ ನಡುವಿನ ಗದ್ದೆಯಲ್ಲಿ ಆಯೋಜಿಸಿದ್ದ ವಿವಿಧ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮರಾಟಿ ಸಮುದಾಯ ಬಾಂಧವರು ಮಿಂದೆದ್ದರು. ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಸಮುದಾಯ ಬಾಂಧವರಿಗಾಗಿ ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿಯ ಮರಾಟಿ ಸೋಮಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ ಗ್ರಾಮೀಣ ಗುಡ್ಡಗಾಡು ಕೆಸರು ಗದ್ದೆ ಕ್ರೀಡಾಕೂಟ ಗಮನ ಸೆಳೆಯಿತು. ಕ್ರೀಡಾ ಪ್ರೇಮಿಗಳು ತಮ್ಮ ಕ್ರೀಡಾ ಪ್ರತಿಭೆಯನ್ನು ಹೊರ ಹಾಕಿದರು. ಕೆಸರಿನಲ್ಲಿ ಆಟಗಾರರ ಏಳುಬೀಳುಗಳು ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣವನ್ನು ನೀಡಿತು. ಚುಮು ಚುಮು ಚಳಿಯ ನಡುವೆ ಮಳೆಯ ಸಿಂಚನ ಕೂಡ ಕೀಡಾಪಟುಗಳಿಗೆ ಮತ್ತಷ್ಟು ಉತ್ತೇಜನ ನೀಡಿತು. ಮೊಣಕಾಲಿನ ವರೆಗೆ ನೀರು ತುಂಬಿದ ಕೆಸರು ಗzಯಲ್ಲಿ ಹಗ್ಗಜಗ್ಗಾಟ, ಹಿಮ್ಮುಖ ಓಟ, ಗೂಟ ಓಟ, ಮಡಿಕೆ ಹೊಡೆಯುವುದು, ಪಾಸಿಂಗ್ ದಿ ಬಾಲ್, ಕೆಸರುಗದ್ದೆ ವಾಲಗ ಕುಣಿತ ಸ್ಪರ್ಧೆ ರೋಚಕವಾಗಿತ್ತು. ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ವಾಮನ ನಾಯ್ಕ್ ಕ್ರೀಡಾಕೂಟವನ್ನು…

Read More

ಮಾಲ್ದಾರೆ NEWS DESK ಸೆ.23 : ತಟ್ಟಳ್ಳಿ ಗ್ರಾಮ, ಮಾಲ್ದಾರೆ ಹಾಡಿಯಲ್ಲಿ ಆಯೋಜಿಸಿದ್ದ ಶ್ರೀ ಗೌರಿ ಗಣೇಶ ಉತ್ಸವದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡರು. ಹಾಡಿವಾಸಿಗಳು ತಮ್ಮ ಸಂಪ್ರದಾಯದಂತೆ ಶಾಸಕರನ್ನು ಗೌರವದಿಂದ ಸ್ವಾಗತಿಸಿದರು. ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಹಾಡಿಯ ಜನರು ಆಯೋಜಿಸುವ ಕಾರ್ಯಕ್ರಮಗಳಿಗೆ ಅನುಕೂಲ ಆಗಲಿ ಎಂದು ತಮ್ಮ ಸ್ವಂತ ವೆಚ್ಚದಲ್ಲಿ ಸೌಂಡ್ ಸಿಸ್ಟಮ್ ಕೊಡುಗೆಯಾಗಿ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹಾಡಿ ಮುಖಂಡರು ಹಾಜರಿದ್ದರು.

Read More

ಮಡಿಕೇರಿ NEWS DESK ಸೆ.23 : ಅಕ್ಟೋಬರ್  10 ರಂದು  ನಡೆಯುವ ಯುವ ದಸರಾ ಕಾರ್ಯಕ್ರಮದಲ್ಲಿ ಯುವ ಜನರನ್ನು ರಂಜಿಸುವುದರ ಜೊತೆಗೆ, ಉತ್ಸಾಹ, ಮಾರ್ಗದರ್ಶನ ನೀಡುವಲ್ಲಿ ಪ್ರಖ್ಯಾತ ಚಲನಚಿತ್ರ ನಟರು ಹಾಗೂ ನಿರ್ದೇಶಕನ್ನು ಈ ಬಾರಿ ಆಹ್ವಾನಿಸಲಾಗಿದೆ.  ಆ ದಿಸೆಯಲ್ಲಿ *ಮಾದಕ ವ್ಯಸನ ನಿರ್ಮೂಲನೆಯಲ್ಲಿ ಯುವಜನರ ಪಾತ್ರ*  ಕುರಿತು ಹೆಸರಾಂತ ನಟ ಹಾಗೂ ನಿರ್ದೇಶಕರಾದ ದುನಿಯಾ ವಿಜಯ್ ಅವರು ಯುವ ಜನರ ಕುರಿತು ಮಾತನಾಡಲಿದ್ದಾರೆ.  ಹಾಗೆಯೇ ಯುವ ಸಮೂಹವು ಸರಿಯಾದ ಮಾರ್ಗದಲ್ಲಿ ಮುನ್ನಡೆಯುವ ಬಗ್ಗೆ ಹೆಸರಾಂತ ನಟ ಹಾಗೂ ನಿರ್ದೇಶಕರಾದ ಉಪೇಂದ್ರ ಅವರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಮಡಿಕೇರಿ ದಸರಾ ಸಮಿತಿ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ NEWS DESK ಸೆ.23 : ನಗರದ ಜನತೆಯ ಕುಡಿಯುವ ನೀರಿನ ಸಮಸ್ಯೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ವಿಶೇಷ ಪ್ರಯತ್ನದಿಂದ ಮುಕ್ತಿ ದೊರಕಿದಂತಾಗಿದೆ. ಸುಮಾರು 35 ಸಾವಿರ ಜನಸಂಖ್ಯೆ ಹೊಂದಿರುವ ಮಡಿಕೇರಿ ನಗರದ ಜನತೆಗೆ ಕುಡಿಯುವ ನೀರನ್ನು ಪೂರೈಸುವ ಕೂಟು ಹೊಳೆ ಘಟಕದಲ್ಲಿ 300 ಹೆಚ್.ಪಿ ಯ ಎರಡು ಮೋಟಾರು ಪಂಪ್ ಇದ್ದು ಹನ್ನೆರಡರಿಂದ ಹದಿನಾರು ಗಂಟೆಗಳ ಕಾಲ ಚಾಲನೆ ಮಾಡುವ ಸಾಮರ್ಥ್ಯ ಹೊಂದಿತ್ತು. ಕೆಲವೊಮ್ಮೆ ಒಂದು ಮೋಟಾರ್ ಕೆಟ್ಟು ನಿಂತಾಗ ಕೇವಲ 8 ಗಂಟೆಗಳ ಕಾಲ ಪಂಪ್ ಮಾಡುವುದರಿಂದ ನೀರು ಪೂರೈಕೆಯಲ್ಲಿ ವ್ಯತಯ ಉಂಟಾಗುತ್ತಿತ್ತು. ಇದನ್ನು ಕಳೆದ ವರ್ಷ ಗಮನಿಸಿದ ಮಂತರ್ ಗೌಡ ರವರು ನಗರ ಸಭೆಯಿಂದ ವೆಚ್ಚ ಭರಿಸುವುದು ಅಸಾಧ್ಯ ವಾದ ಹಿನ್ನಲೆಯಲ್ಲಿ ವಿಶೇಷವಾಗಿ ಅನುದಾನ ಬಳಕೆಗೆ ನಿರ್ಧರಿಸಿದ್ದರು.ಹಾಗಾಗಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 46 ಲಕ್ಷ ರೂಗಳ ವೆಚ್ಚದಲ್ಲಿ ನೂತನ 300 ಹೆಚ್.ಪಿ ಸಾಮರ್ಥ್ಯ ದ ಪಂಪ್ ಅಳವಡಿಕೆಗೆ ನಿರ್ದೇಶನ ನೀಡಿದ…

Read More