ಲೇಖಕ: admin

ಸುಂಟಿಕೊಪ್ಪ ಸೆ.23 NEWS DESK : ಜಿಲ್ಲಾ ಮಟ್ಟದ 14ರ ವಯೋಮನದ ಟೇಬಲ್ ಟೆನ್ನಿಸ್  ಪಂದ್ಯಾವಳಿಯಲ್ಲಿ ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಗೆಲುವು ಸಾಧಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅರ‍್ವತೋಕ್ಲುವಿನ ಸರ್ವೂದೈವತ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿದ್ಯಾ ಸಂಸ್ಥೆಯ ಬಾಲಕಿಯರಾದ ನಿಬ್ರ ಫಾತೀಮಾ, ಅಹಾಲ್ಯ, ಸಮೀಕ್ಷ ಅನುಷ್ಕ, ಚೈತನ್ಯ ಸ್ಪರ್ಧಿಸಿದರು. ಪೈನಲ್ ಪಂದ್ಯದಲ್ಲಿ ಅರ‍್ವತೋಕ್ಲುವಿನ ಸರ್ವೂದೈವತ ಶಾಲೆಯ ತಂಡವನ್ನು ಮಣಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ತರುಬೇತುದಾರರಾಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಕಾರ್ಯನಿರ್ವಹಿಸಿದರು. ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡದ ಕ್ರೀಡಾ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್, ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಸೇಲ್ವರಾಜ್ ಪ್ರಶಂಸಿದ್ದಾರೆ.

Read More

ಪುತ್ತೂರು ಸೆ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಸಿಎ ವಿಭಾಗದ ನಿರ್ದೇಶಕಿಯಾಗಿ ಡಾ.ಜ್ಯೋತಿಮಣಿ.ಕೆ ಪದ ಸ್ವೀಕಾರ ಮಾಡಿದ್ದಾರೆ. ಇವರು ಎಂಸಿಎ ಮತ್ತು ಎಂಎಸ್‍ಸಿ ಪದವಿಯನ್ನು ಪಡೆದುಕೊಂಡು ಡಾಟಾ ಮೈನಿಂಗ್ ಹಾಗೂ ಮೆಷಿನ್ ಲರ್ನಿಂಗ್ ವಿಭಾಗದಲ್ಲಿ ಸಂಶೋಧನೆಯನ್ನು ಮಾಡಿ ಡಾಕ್ಟರೇಟ್ ಪದವಿಯನ್ನು ಗಳಿಸಿಕೊಂಡಿದ್ದಾರೆ. ಹದಿನೆಂಟು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.23 NEWS DESK  : ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ ನಾಪೋಕ್ಲುವಿನಲ್ಲಿ ನಡೆಯಿತು.ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಸಮಾವೇಶಕ್ಕೆ ಜುಮುಅ ನಮಾಜ್‍ನ ನಂತರ ನಾಪೋಕ್ಲು ಟೌನ್ ಮುಹಿಯದ್ದೀನ್ ಸುನ್ನಿ ಮುಸ್ಲಿಂ ಜಮಾಅತ್‍ನ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್  ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ  ನೀಡಿದರು. ಮದದೇ ಮದೀನಾ 2024 ಮಿಲಾದ್ ಸಮಾವೇಶದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಉತ್ತಮ ಕೆಲಸವನ್ನು ಮಾಡುತ್ತಿರುವ ಸಂಘಟನೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಕಾಣುತ್ತಾ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗಲಿ ಎಂದು ಹಾರೈಸಿದರು. ಇದೇ ಸಂದರ್ಭ ಶಾಸಕರನ್ನು  ಜಮಾಅತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read More

ಸೋಮವಾರಪೇಟೆ ಸೆ.23 NEWS DESK : ಚೌಡ್ಲು ವಿಶ್ವ ಮಾನವ ಕುವೆಂಪು ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿ ಲಾಂಚನ್ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಗೋಣಿಕೊಪ್ಪಲು ಅರ್ವತ್ತೂಕ್ಲುವಿನಲ್ಲಿ ನೆಡದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಆಯ್ಕೆಯಾಗಿದ್ದು, ಅಕ್ಟೊಂಬರ್ ತಿಂಗಳಲ್ಲಿ ಹಾವೇರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.

Read More

ಸೋಮವಾರಪೇಟೆ ಸೆ.23 NEWS DESK : ವಿಶ್ವಕರ್ಮ ಸಮಾಜದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಬಿ.ಯಶ್ವಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೋಮವಾರಪೇಟೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಘದ ಹೆಸರಿನಲ್ಲಿ ಸ್ಥಳ ಖರೀದಿಸಿದ್ದು, ಇಲ್ಲಿಯವರೆಗೂ ಕಟ್ಟಡ ನಿರ್ಮಾಣಕ್ಕೆ ಮುಂದಾಗಿಲ್ಲ. ಎಲ್ಲ ಸದಸ್ಯರು ಸಹಕಾರ ಪಡೆದುಕೊಂಡು ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸದಸ್ಯರು ಹೇಳಿದರು. ಸಭೆಯಲ್ಲಿ 2024-25ನೇ ಸಾಲಿನ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಎನ್.ಅಜಯ್, ಉಪಾಧ್ಯಕ್ಷರಾಗಿ ಎನ್.ಪಿ.ರಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎ.ಲೋಹಿತಾಶ್ವ, ಉಪ ಕಾರ್ಯದರ್ಶಿಯಾಗಿ ಕೆ.ವಿ.ಯೋಗೇಶ್, ಖಜಾಂಚಿಯಾಗಿ ಎಸ್.ಜೆ.ದೇವದಾಸ್ ಆಯ್ಕೆಯಾದರು. ಮಹಿಳಾ ಘಟಕದ ಅಧ್ಯಕ್ಷರಾಗಿ ರೇಷ್ಮಾ ನಿಖಿಲ್, ಉಪಾಧ್ಯಕ್ಷರಾಗಿ ಶುಭಾ ಬಾಬುರಾಯ ಹಾಗೂ ಕಾರ್ಯದರ್ಶಿಯಾಗಿ ಸರಿತಾ ಅಜಯ್ ಆಯ್ಕೆಯಾದರು.

Read More

ಸಿದ್ದಾಪುರ ಸೆ.23 NEWS DESK : ಜಿಲ್ಲಾ ಕೃಷಿ ವಿಜ್ಞಾನ ಸಂಸ್ಥೆಯ ಹಾಗೂ ಓ.ಡಿ.ಪಿ ಸಂಸ್ಥೆ  ಸಹ ಭಾಗಿತ್ವದಲ್ಲಿ ರೈತ ಮಹಿಳೆಯರಿಗೆ ಒಂದು ದಿನದ ಕೃಷಿ ಚಟುವಟಿಕೆಗಳ ತರಬೇತಿ ಶಿಬಿರ ನಡೆಯಿತು. ಸಿದ್ದಾಪುರ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಗ್ರಾ.ಪಂ ಅಧ್ಯಕ್ಷೆ ಪ್ರೇಮಾ ಗೋಪಾಲ ಉದ್ಘಾಟಿಸಿದರು. ನಂತರ ಕೃಷಿ ವಿಸ್ತರಣಾ ಶಿಕ್ಷಣ ಘಟಕದ ಪ್ರಾಧ್ಯಾಪಕ ಡಾ.ದೇವರಾಜ್ ಮಾತನಾಡಿ, ಜಿಲ್ಲೆಯಾದ್ಯಂತ ಪೌಷ್ಠಿಕ ಕೃಷಿ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ರೈತ ಮಹಿಳೆಯರು ತಮ್ಮ ಕೈತೋಟದಲ್ಲಿ ಪೌಷ್ಠಿಕವಾಗಿ ತಾಜಾ ತರಕಾರಿ ಬೆಳೆಗಳನ್ನು ಯಾವ ರೀತಿ ಬೆಳೆಯುವ ಬಗ್ಗೆ ಮಾಹಿತಿ ನೀಡಿದರು. ಕೃಷಿ ಇಲಾಖೆಯ ಸ್ವರ್ಣ ಮಾತನಾಡಿ, ಆಧುನಿಕ ಕೃಷಿ ಪದ್ಧತಿ ಬೇಸಾಯ ಹೊಸ ತಳಿಗಳ ಬಗ್ಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಹಳ್ಳಿಗಳಿಗೆ ಭೇಟಿ ನೀಡಿ ಮಾಹಿತಿ ನೀಡಲಾಗುತ್ತಿದ್ದು, ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ತೋಟಗಾರಿಕೆ ವಿಸ್ತರಣೆ ವಿಭಾಗದ ಲತ ಮಾತನಾಡಿ ಬೆಳೆಗಳಿಗೆ ಬರುವ ರೋಗಗಳು, ಕೀಟನಾಶಕ ಹಾಗೂ ಆರ್ಥಿಕ…

Read More

ನವದೆಹಲಿ NEWS DESK ಸೆ.23 : ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು.

Read More

  ಕುಶಾಲನಗರ, ಸೆ.23 NEWS DESK : ವಿದ್ಯಾರ್ಥಿಗಳಲ್ಲಿ  ವೈಜ್ಞಾನಿಕ ಪ್ರತಿಭೆ ಮತ್ತು ಹವ್ಯಾಸ ಅನ್ವೇಷಣೆಗಳನ್ನು ಗುರುತಿಸಲು ಮತ್ತು ಪ್ರಶಂಸಿಸಲು ವಿಜ್ಞಾನ ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪ್ರಾಂಶುಪಾಲ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಎಂ.ಚಂದ್ರಕಾಂತ್ ಹೇಳಿದರು. ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕೂಡಿಗೆ ಡಯಟ್ ಸಂಸ್ಥೆಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಮತ್ತು ಗಣಿತ ಸಂಘದ‌ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಶಕ್ತಿ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದರು. ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರತಿಭೆಯ ಅನಾವರಣಕ್ಕೆ ಉತ್ತಮ‌ ವೇದಿಕೆಯ ಅವಕಾಶವನ್ನು…

Read More

ಮಡಿಕೇರಿ NEWS DESK ಸೆ.22 : ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯಿತು. ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಅವರು, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಲಬ್ ನ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪ್ರಮಾಣ ವಚನ ಬೋಧಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಪಾಲ್ಗೊಂಡಿದ್ದರು.

Read More

ಮಡಿಕೇರಿ NEWS DESK ಸೆ.22 : ಐತಿಹಾಸಿಕ ಮಡಿಕೇರಿ ದಸರಾವನ್ನು ಈ ಬಾರಿ ವಿಜ್ರಂಭಣೆಯಿAದ ಆಚರಿಸಲಾಗುವುದು. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ ನೀಡಲಾಗುವುದು ಎಂದು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಾಡಹಬ್ಬ ಮಡಿಕೇರಿ ದಸರಾ ಕಚೇರಿಯನ್ನು ಉದ್ಘಾಟಿಸಿ ಮತ್ತು ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು ಅದ್ದೂರಿ ದಸರಾ ಆಚರಣೆಗೆ ಸರ್ಕಾರದಿಂದ ಅಗತ್ಯ ಅನುದಾನದ ನೆರವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ ಮಡಿಕೇರಿ ದಸರಾ ಹಬ್ಬವನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮಕ್ಕಳ ದಸರಾ, ಮಹಿಳಾ ದಸರಾ, ಜಾನಪದ ಮತ್ತು ಯುವ ದಸರಾದೊಂದಿಗೆ ಕಾಫಿ ದಸರಾವನ್ನೂ ಕೂಡ ಆಯೋಜಿಸಲಾಗಿದೆ. ಕಾಫಿ ಬೆಳೆಗಾರರಿಂದ ಇದಕ್ಕೆ ಉತ್ತಮ ಸ್ಪಂದನ ಕೂಡ ದೊರಕಿದೆ ಎಂದರು. ದಶಮಂಟಪಗಳ ಶೋಭಾಯಾತ್ರೆಯೊಂದಿಗೆ 9 ದಿನಗಳ ಕಾಲ ನಗರದಲ್ಲಿ ನಡೆಯುವ ಅರ್ಥಪೂರ್ಣ ದಸರಾ ಉತ್ಸವ ಆಯೋಜನೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಡಾ.ಮಂತರ್ ಗೌಡ ಹೇಳಿದರು. ದಸರಾ…

Read More