ಮಡಿಕೇರಿ NEWS DESK ಸೆ.22 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘ 46 ನೇ ವರ್ಷದ ಅದ್ದೂರಿಯ ಗಣೇಶೋತ್ಸವಕ್ಕೆ ಸಂಭ್ರಮದ ಶೋಭಾಯಾತ್ರೆಯ ಮೂಲಕ ತೆರೆ ಎಳೆಯಿತು. “ಲೋಕ ಕಲ್ಯಾಣಕ್ಕಾಗಿ ಮಯೂರೇಶನಿಂದ ಸಿಂಧು ದೈತ್ಯ ರಾಜನ ಸಂಹಾರ” ಎಂಬ ಕಥಾವಸ್ತುವನ್ನು ಅಳವಡಿಸಿಕೊಂಡಿದ್ದ ವಿದ್ಯುತ್ ದೀಪಲಂಕೃತ ಮಂಟಪ ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿತು. ಅದ್ದೂರಿ ಶಬ್ಧ ಮತ್ತು ಬೆಳಕಿನ ಆಕರ್ಷಣೆ, ಬೃಹತ್ ಗಾತ್ರದ ದೃಶ್ಯಮೂರ್ತಿಗಳ ಚಲನವಲನ, ಆಕರ್ಷಕ ವೇದಿಕೆಯ ವಿನ್ಯಾಸ, ಕಥಾವಸ್ತುವನ್ನು ಪ್ರಸ್ತುತ ಪಡಿಸಿದ ರೀತಿ ಸಾವಿರಾರು ಜನರನ್ನು ಮಂತ್ರ ಮುಗ್ಧಗೊಳಿಸಿತು. ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಕೆ.ಹೆಚ್.ಚೇತನ್ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಹಾಗೂ ತಾಂತ್ರಿಕ ವರ್ಗ ಶ್ರಮವಹಿಸಿ ಕಾರ್ಯನಿರ್ವಹಿಸಿ ನಗರದ ಜನತೆಯ ಮೆಚ್ಚುಗೆಗೆ ಪಾತ್ರರಾದರು. ಶಿಸ್ತುಬದ್ಧ ಶೋಭಾಯಾತ್ರೆಯ ಮೂಲಕ ಇತರರಿಗೆ ಮಾದರಿಯಾದರು. ಮಹಾಪೂಜೆಯ ನಂತರ ನಗರದಲ್ಲಿ ಶ್ರೀಮಹಾಗಣಪತಿ ಮೂರ್ತಿಯ ಶೋಭಾಯಾತ್ರೆ ಸಾಗಿತು.
ಲೇಖಕ: admin
ಮಡಿಕೇರಿ NEWS DESK ಸೆ.22 : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ನಗರ ಸಂಚಾರ ಮಾಡಿದರು. ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಅವರು ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾರ್ಯವನ್ನು ದಸರಾ ಹಬ್ಬದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಇಂದಿರಾನಗರ ರಸ್ತೆ, ಶ್ರೀಕೋದಂಡರಾಮ ದೇವಾಲಯ ಬಳಿಯ ರಸ್ತೆ, ಭಗವತಿ ನಗರದ ಬಳಿಯ ಅಬ್ಬಿಫಾಲ್ಸ್ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳ ರಸ್ತೆ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು. ಗೌಳಿಬೀದಿ ಸೇರಿದಂತೆ ವಿವಿಧೆಡೆ ಅಪೂರ್ಣಗೊಂಡಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು ಗುತ್ತಿಗೆದಾರರೊಂದಿಗೆ ಚರ್ಚಿಸಿದರು. ದಸರಾ ಹಬ್ಬ ಸಮೀಪಿಸುತ್ತಿದೆ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗಬಾರದು. ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಹಬ್ಬದ ಸಂದರ್ಭ ನಗರದ ರಸ್ತೆಗಳು ಉತ್ತಮ ಸ್ಥಿತಿಯಲ್ಲಿರಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಡಾ.ಮಂತರ್ ಗೌಡ ತಿಳಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಸದಸ್ಯರುಗಳಾದ ಆರ್.ಪಿ.ಚಂದ್ರಶೇಖರ್, ಮಿನಾಜ್ ಪ್ರವೀಣ್, ನಗರಸಭೆಯ ಮಾಜಿ…
ಮಡಿಕೇರಿ NEWS DESK ಸೆ.22 : ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೊಡಗು ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ ನೀಡಿದೆ. ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಪ್ರಶಸ್ತಿ ಸ್ವೀಕರಿಸಿದರು.
ಮಡಿಕೇರಿ NEWS DESK ಸೆ.22 : ಕುಶಾಲನಗರ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರರನ್ನು ನಿಂಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಕಾಂಗ್ರೆಸ್ನ ಐಎನ್ಟಿಯುಸಿ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಡಿ.ಅಣ್ಣಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪುರಸಭೆಗೆ ನಾಮನಿರ್ದೇಶಿತಗೊಂಡಿರುವ ಇಬ್ಬರು ಸದಸ್ಯರುಗಳಿಗೆ ನಿಯಮಾನುಸಾರ ಮತ ಚಲಾಯಿಸುವ ಹಕ್ಕು ಇದೆ. ಈ ವಿಚಾರದಲ್ಲಿ ಕಾನೂನಿನ ಆದೇಶದಂತೆ ತಹಶೀಲ್ದಾರ್ ನಡೆದುಕೊಂಡಿದ್ದಾರೆ. ಆದರೆ ಕಾನೂನಿನ ಬಗ್ಗೆ ಅರಿವಿಲ್ಲದ ಬಿಜೆಪಿ ಮಂದಿ ಪ್ರತಿಭಟನೆ ನಡೆಸಿ ಗೊಂದಲ ಸೃಷ್ಟಿಸಿದ್ದಾರೆ. ಸ್ಥಳಕ್ಕೆ ಬಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಮ್ಮ ಸ್ಥಾನದ ಘನತೆಯನ್ನು ಮರೆತು ತಹಶೀಲ್ದಾರರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದರು. ವಿರೋಧ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಎಂಬುವುದನ್ನು ಮೊದಲು ಅರಿತುಕೊಳ್ಳಲಿ. ನಾಮನಿರ್ದೇಶಿತ ಸದಸ್ಯರಿಗೆ ಇರುವ ಮತದಾನದ ಹಕ್ಕಿನ ಕುರಿತು ಜಾರಿಯಲ್ಲಿರುವ ಆದೇಶವನ್ನು ಅಧ್ಯಯನ ಮಾಡಲಿ ಎಂದು ಒತ್ತಾಯಿಸಿದರು. ಕೊಡಗು…
ಮಡಿಕೇರಿ NEWS DESK ಸೆ.22 : ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ಗಳಲ್ಲಿ ಕೃಷಿಕರಿಗೆ ಸರ್ಕಾರದ ನಿರ್ದೇಶನದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ “ಉನ್ನತಿ ಭವನ”ದ ದಿ:ಪಂದ್ಯAಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಶನಿವಾರ ನಡೆದ ಬ್ಯಾಂಕಿನ 99 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು. ‘ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಕೃಷಿ ಅಲ್ವಾವಧಿ ರೂ.5 ಲಕ್ಷಕ್ಕೆ ಏರಿಸಿದೆ. ಹಾಗೆಯೇ ಮಧ್ಯಮಾವಧಿ ಬಡ್ಡಿ ರಿಯಾಯಿತಿ ಯೋಜನೆಯಡಿ ಗರಿಷ್ಠ ಮಿತಿ ರೂ.15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೊಡಗು…
ಮಡಿಕೇರಿ NEWS DESK ಸೆ.21 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ ವತಿಯಿಂದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಸೆಪ್ಟೆಂಬರ್, 26 ರಂದು ಬೆಳಗ್ಗೆ 8.35 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು. ಅಕ್ಟೋಬರ್, 04 ರಂದು ಬೆಳಗ್ಗೆ 10.21 ನಿಮಿಷಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’, ಅಕ್ಟೋಬರ್, 14 ರಂದು ಬೆಳಗ್ಗೆ 11.35 ನಿಮಿಷಕ್ಕೆ ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ ಇರಿಸುವುದು’, ಅಕ್ಟೋಬರ್, 14 ರಂದು ಸಂಜೆ 4.15 ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ‘ಕಾಣಿಕೆ ಡಬ್ಬಿ ಇಡುವುದು’. ಅಕ್ಟೋಬರ್, 17 ರಂದು ಬೆಳಗ್ಗೆ 7.40 ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜರುಗಲಿದೆ.
ಮಡಿಕೇರಿ ಸೆ.21 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಸೋಮವಾರಪೇಟೆ ಗೆಜ್ಜೆ ಹಣಕೋಡು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ ಕಾರ್ಯಕ್ರಮವು ಶನಿವಾರ ನಡೆಯಿತು. ಗ್ರಾ.ಪಂ. ಅಧ್ಯಕ್ಷರಾದ ಗೋಪಾಲಕೃಷ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಉತ್ತಮವಾದ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು ಇಂದು ನಮ್ಮ ಆರೋಗ್ಯ ನಮ್ಮ ಕೈನಲ್ಲಿ ಹಿಡಿದಿಟ್ಟುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಸಾಧ್ಯವಾದಷ್ಟು ಮನೆಯ ಹಿತ್ತಲಿನಲ್ಲಿ ಬೆಳೆದ ತರಕಾರಿಗಳನ್ನು ಸೆವಿಸೋದು ಉತ್ತಮ ಎಂದರು. ಹಾಗೆಯೇ ಇಲಾಖಾ ವತಿಯಿಂದ ದೊರೆಯುವ ಹಲವಾರು ಯೋಜನೆಯ ಕುರಿತು ತಿಳಿದುಕೊಂಡು ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಮಾಹಿತಿಯ ಅವಶ್ಯಕತೆ ಇದೆ. ಈ ಕಾರ್ಯಕ್ರಮದ ಮುಖಾಂತರ ಎಲ್ಲಾ ಜನರ ಮನೆಗಳಿಗೆ ಮಾಹಿತಿ ಪಸರಿಸಲಿ, ಉತ್ತಮ ಸಮಾಜ ನಿರ್ಮಾಣವಾಗಲಿ ಎಂದು ತಿಳಿಸಿದರು. ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ ಪೋಷಣ್…
ಮಡಿಕೇರಿ NEWS DESK ಸೆ.21 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸುಮನ್ ಅವರು, ಸಂಘವು ಪ್ರಸ್ತುತ ಸಾಲಿನಲ್ಲಿ ಕೆಸಿಸಿ ಫಸಲು ಸಾಲ, ಆಭರಣ ಸಾಲ, ಗೊಬ್ಬರ ಖರೀದಿ ಸಾಲ ಇನ್ನಿತರ ಸಾಲಗಳು ಸೇರಿ ಒಟ್ಟು 13 ಕೋಟಿ ರೂ. ಸಾಲ ವಿತರಣೆ ಮಾಡಿದ್ದು, ವರ್ಷಾಂತ್ಯಕ್ಕೆ 5.29 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಸಂಘವು ಆಡಿಟ್ A ವರ್ಗೀಕರಣದಲ್ಲಿ ಮುಂದುವರೆದಿದ್ದು, 2023-24 ನೇ ಸಾಲಿನಲ್ಲಿ ನಿವ್ವಳ ರೂ.28.62 ಲಕ್ಷ ಲಾಭ ಗಳಿಸಿದ್ದು, ಸಂಘದ ಸದಸ್ಯರುಗಳಿಗೆ ಶೇ.13 ಡಿವಿಡೆಂಟ್ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದರು. ಸAಘದ ಸದಸ್ಯರುಗಳು ಸಂಘದ ಅಭಿವೃದ್ಧಿಗಾಗಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. 10ನೇ ತರಗತಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳ ವಿದ್ಯಾಭಾಸಕ್ಕೆ ಸಂಘದ ವತಿಯಿಂದ ಪ್ರೋತ್ಸಾಹ ಧನ…
ಮಡಿಕೇರಿ ಸೆ.21 NEWS DESK : ವಚನ ಸಾಹಿತ್ಯವೂ ಸದಾಚಾರ ಹಾಗೂ ಸದ್ವಿಚಾರಗಳ ಮೂಲಕ ಮನುಷ್ಯ ತನ್ನ ಅಮೂಲ್ಯ ಜೀವನವನ್ನು ಕಟ್ಟಿಕೊಳ್ಳಲು ಪ್ರೇರೇಪಿಸುವ ಸಂಜೀವಿನಿ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಮಡಿಕೇರಿಯ ಶರಣ ಮುರುಗೇಶ್ ಅವರು ಸ್ಥಾಪಿಸಿರುವ ಲಿಂ.ಹೆಚ್.ಬಿ.ಶೀಲವಂತ ಹಾಗೂ ಸಿದ್ದಲಿಂಗಪ್ರಸಾದ್ ದತ್ತಿ ಶರಣ ಸಂಸ್ಕೃತಿ ಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಚನ ಸಾಹಿತ್ಯ ಪ್ರತಿಪಾದಿಸುವ ಸರ್ವಸ ಮಾನತೆಯ ಮತ್ತು ಮಾನವ ಸಮಾಜದ ಸರ್ವಾಂಗೀಣ ಪ್ರಗತಿಯ ಪರಿಕಲ್ಪನೆಗಳು ಜಗತ್ತಿನ ಇಡೀ ಮನುಕುಲಕ್ಕೆ ಮಾರ್ಗದರ್ಶಿಯಾಗಿವೆ. ಹನ್ನೆರಡನೇ ಶತಮಾನದಲ್ಲಿ ತಾಂಡವಿಸಿದ್ದ ಮೂಢನಂಬಿಕೆ, ಅಂಧಶ್ರದ್ಧೆ ಹಾಗೂ ಮೂಲಭೂತವಾದಗಳನ್ನು ಪ್ರಶ್ನಿಸಿ ಪ್ರಗತಿಪರ ಚಿಂತನೆಗಳನ್ನು ಮೊಳಗಿಸಿದ ಕೀರ್ತಿ ವಚನಕಾರರದ್ದು ಎಂದು ಬಣ್ಣಿಸಿದ ಅನಂತಶಯನ, ಬಸವಣ್ಣ ಅವರು ನಾಡಿಗೆ ನೀಡಿರುವ ಸಪ್ತಸೂತ್ರಗಳ ವಚನ ಕಲಬೇಡ, ಕೊಲಬೇಡ, ಹುಸಿಯನುಡಿಲು ಬೇಡ ಎಂಬ ವಚನವನ್ನು ಎಲ್ಲರೂ…
ಮಡಿಕೇರಿ ಸೆ.21 NEWS DESK : ಕೊಡಗು ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ, ಸೋಮವಾರಪೇಟೆ ತಾ. ಸಮೂಹ ಸಂಪನ್ಮೂಲ ಕೇಂದ್ರ, ನಂಜರಾಯಪಟ್ಟಣದ ಸಂಯುಕ್ತಾಶ್ರಯದಲ್ಲಿ ಬಸನಳ್ಳಿಯ ಸರ್ಕಾರಿ ವಾಲ್ಮೀಕಿ ಶಾಲೆಯಲ್ಲಿ 2024-25ನೇ ಸಾಲಿನ “ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕ ರವಿ, ಪ್ರತಿಭಾ ಕಾರಂಜಿ ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು. ಗುಡ್ಡೆಹೊಸೂರು ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪಟ್ಟು ಮಾದಪ್ಪ, ಸದಸ್ಯರಾದ ಉಮಾ ಹಾಗೂ ಸೌಮ್ಯ, ಸಿ ಒ ಸಿ ಸಿ ನಿರ್ದೇಶಕ ವಸಂತ್, ಪ್ರಾಥಮಿಕ ಶಾಲಾ ಶಕ್ಷಕರ ಸಂಘದ ಪದಾಧಿಕಾರಿ ಸುರೇಶ್,…






