ಮಡಿಕೇರಿ ಸೆ.21 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಉಪಾಧ್ಯಕ್ಷರಾಗಿ ಬೊಟ್ಟಂಗಡ ಗಣಪತಿ ಹಾಗೂ ಕಾರ್ಯದರ್ಶಿಯಾಗಿ ಚಂದನ್ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಹಳೆಯ ಅಧ್ಯಕ್ಷರಾಗಿದ್ದ ಪಾರ್ವತಿ ಅಪ್ಪಯ್ಯ ಹಾಗೂ ಬೊಳ್ಳಜಿರ ಬಿ.ಅಯ್ಯಪ್ಪ ಸ್ಪರ್ಧಿಸಿದ್ದು, ಚುನಾವಣೆಯಲ್ಲಿ 9-7 ಮತಗಳನ್ನ ಪಡೆಯುವ ಮೂಲಕ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಗೆಲುವು ಸಾಧಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬೊಟ್ಟಂಗಡ ಗಣಪತಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಚಂದನ್ ನಂದರಬೆಟ್ಟು ಸ್ಪರ್ಧಿಸಿದ್ದು, ಯಾರು ಸ್ಪರ್ಧಿಸದ ಹಿನ್ನಲೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮುಂದಿನ 5 ವರ್ಷ ಆಡಳಿತ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಮಾತನಾಡಿದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಹಿಂದಿನ ಆಡಳಿತ ಮಂಡಳಿಯ ಸದಸ್ಯರು ಸಾಕಷ್ಟು ಕೆಲಸಗಳನ್ನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಲೇಜನ್ನು ಉತ್ತಮ ಸ್ಥಾನಗಳಿಗೆ ತೆಗೆದುಕೊಂಡು ಹೊಗಲು ನಮ್ಮ ಆಡಳಿತ ಮಂಡಳಿ ಸಜ್ಜಾಗಿದೆ ಎಂದರು. ನಾನು ಆಡಳಿತ ಮಂಡಳಿಯಲ್ಲಿ ಇದ್ದುಕೊಂಡೆ ಕಾಲೇಜಿನ…
ಲೇಖಕ: admin
ನಾಪೋಕ್ಲು ಸೆ.21 NEWS DESK : ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 16 ಪ್ರಥಮ 16 ದ್ವಿತೀಯ ಹಾಗೂ 4 ತೃತೀಯ ಬಹುಮಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ಹಿಂದಿ ಕಂಠಪಾಠ ಕೆ.ಜಿ.ಜಿತಿನ್ ಪ್ರಥಮ, ಕನ್ನಡ ಕಂಠಪಾಠ ಅನ್ವಿತಾ ಸುದೀಪ್ ತೃತೀಯ, ಸಂಸ್ಕೃತ ಧಾರ್ಮಿಕ ಪಠಣ ತನ್ವಿತ ರಾಜೇಶ್, ಅರೇಬಿಕ್ ಧಾರ್ಮಿಕ ಪಠಣ ಶಾಜಿನ್ ದ್ವಿತೀಯ, ದೇಶಭಕ್ತಿಗೀತೆ ನಿಖಿಲ್ ನಂಜಪ್ಪ ಪ್ರಥಮ, ಕಥೆ ಹೇಳುವುದು ಎ.ಎನ್.ರಶ್ವಿನ್ ದ್ವಿತೀಯ, ಚಿತ್ರಕಲೆಯಲ್ಲಿ ಯಶಸ್ಸ್ ಮಂದಣ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಅಶುಭಾಷಣ ಸ್ಪರ್ಧೆಯಲ್ಲಿ ಕೆ.ಆರ್.ನಿಕ್ಷ ದ್ವಿತೀಯ, ಕನ್ನಡ ಕಂಠಪಾಠದಲ್ಲಿ ತನ್ವಿ ತೃತೀಯ, ಇಂಗ್ಲೀಷ್ ಕಂಠಪಾಠ ಎನ್.ಪಿ.ಧನ್ವಿ ದ್ವಿತೀಯ, ಹಿಂದಿ ಕಂಠಪಾಠ ಶಿಝ ಫಾತಿಮ ದ್ವಿತೀಯ, ಸಂಸ್ಕೃತ ಧಾರ್ಮಿಕ ಪಠಣ ಅಪ್ರಮೇಯ ಪ್ರಥಮ, ಅರೇಬಿಕಾ ಧಾರ್ಮಿಕ ಪಠಣ ಸುಹೈಬ್ ತೃತೀಯ, ದೇಶಭಕ್ತಿಗೀತೆ ಸಮೀಕ್ಷ ಪ್ರಥಮ, ಕಥೆ…
ನಾಪೋಕ್ಲು ಸೆ.21 NEWS DESK : ಅವಂದೂರು ಗ್ರಾಮದ ಗೋಪಾಲಕೃಷ್ಣ ಯುವ ಸಂಘದ ಆಶ್ರಯದಲ್ಲಿ ಅ.6 ರಂದು ಪ್ರಥಮ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ. ಅವಂದೂರಿನ ಅನಂತ ಹೋಂಸ್ಟೇ ಬಳಿ ಸ್ಪರ್ಧೆ ಆಯೋಜಿಸಲಾಗಿದ್ದು, 0.22 ರೈಫಲ್, ತೋಟದ ಕೋವಿ ಮತ್ತು ಏರ್ ರೈಫಲ್ ವಿಭಾಗಗಳಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಕೀರ್ತನ್ ದೇವಾಯಿರ -9591094700, ಹರ್ಷಿತ್ ಉರೋಳನ-9845033429, ಮಧು ಕಾಳೇರಮ್ಮನ-8792004031, ದೇವಾಯಿರ ಅರುಣ-8861142814 ಸಂಪರ್ಕಿಸಬಹುದಾಗಿದೆ ಎಂದು ಸಂಘದ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.21 NEWS DESK : ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರ ನಗದು ವರ್ಗಾವಣೆ) ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಸಹಾಯಧನವನ್ನು ಪಡೆಯಲು ಜಿಲ್ಲೆಯ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆ ಪೂರಕ ವೃತ್ತಿಯನ್ನು ಅವಲಂಬಿಸಿರುವ ಎಲ್ಲಾ ನೇಕಾರರು ಈ ಯೋಜನೆಯಡಿ ರೂ. 5 ಸಾವಿರ ಗಳ ವಾರ್ಷಿಕ ಒಂದು ಬಾರಿಯ ಸಹಾಯಧನ ಪಡೆಯಲು ಅರ್ಹರಿದ್ದು, ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಕಚೇರಿಯಿಂದ ಪಡೆದು ಸಂಘದ ಮೂಲಕ ಸಲ್ಲಿಸಬೇಕಿದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ. ಕೈಮಗ್ಗ ನೇಕಾರರಿಂದ ಸಲ್ಲಿಸಬೇಕಾದ ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ/ ಪೆಹಚಾನ್ ಕಾರ್ಡ್, ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಪಾಸ್ಬುಕ್…
ಮಡಿಕೇರಿ ಸೆ.21 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2022 ಮತ್ತು 2023 ನೇ ವರ್ಷದ ‘ಗೌರವ ಪ್ರಶಸ್ತಿ’ ಗೆ ಅರ್ಜಿ ಆಹ್ವಾನಿಸಲಾಗಿದೆ. ಅರೆಭಾಷೆ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು 2022 ಮತ್ತು 2023 ನೇ ವರ್ಷದ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ 3 ಜನ ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸ್ವತ: ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಹರಾಗಿರುವವರ ಕುರಿತಾಗಿ ಹೆಚ್ಚಿನ ಅಥವಾ ವಿಶೇಷ ಮಾಹಿತಿ ಇದ್ದಲ್ಲಿ ಅಕಾಡೆಮಿಗೆ ಒದಗಿಸಬಹುದು. ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಜೊತೆ ಎಲ್ಲಾ ಮಾಹಿತಿಯನ್ನು ಅಕಾಡೆಮಿಯ ನಿಗದಿತ ಅರ್ಜಿ ನಮೂನೆಯಲ್ಲಿಯೇ ಕಳುಹಿಸಬೇಕು. ಇದಕ್ಕೆ ಸಂಬಂಧಿಸಿ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಯೊಂದಿಗೆ…
ಮಡಿಕೇರಿ ಸೆ.21 NEWS DESK : ಕೆ.ಪಿ.ಎಸ್.ಸಿ ಯಿಂದ ನೂತನವಾಗಿ ಸಹಾಯಕ ನಗರ ಆಯೋಜಕರಾಗಿ ನೇಮಕಗೊಂಡಿರುವ ಅಭ್ಯರ್ಥಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. 20-3-2024 ರಂದು ರಾಜ್ಯಾದ್ಯಂತ 60 ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದು ದಿನಾಂಕ 1-2-2023 ರ ಸರ್ಕಾರದ ಸುತ್ತೋಲೆ ಅನ್ವಯ ಹುದ್ದೆ ಪಡೆಯಲು ಕಾನೂನು ತೊಡಕು ಉಂಟಾದ ಹಿನ್ನಲೆ ಎ.ಎಸ್.ಪೊನ್ನಣ್ಣರಿಗೆ ಕಾನೂನು ತೊಡಕನ್ನು ಪರಿಹರಿಸಲು ಮನವಿ ಮಾಡಿದ್ದಾರೆ.
ಸುಂಟಿಕೊಪ್ಪ ಸೆ.21 NEWS DESK : ಮಾದಾಪುರ ಎಸ್ಜೆಎಮ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಎಸ್ಜೆಎಮ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮುರುಗ ಮಠ ಮೋಕ್ಷ ಪತಿ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯಾಗಿದೆ. ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಜಿಲ್ಲೆ ರಾಜ್ಯ ಮಟ್ಟದಲ್ಲಿ ಪ್ರತಿಭೆಗಳು ಬೆಳಗಲೆಂದು ಶುಭ ಹಾರೈಸಿದರು. ರಮಾನಾಥಪುರ ಆಯುರ್ವೇದಿಕ್ ಆಸ್ಪತ್ರೆಯ ಡಾ.ಹರ್ಷ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಸಂದರ್ಭದಲ್ಲಿ ಅತಿಥಿಗಳು, ಶಿಕ್ಷಕರು ಹಾಗೂ ಪೋಷಕರು ಹೇಳುವ ಮಾತುಗಳಿಂದ ಕಿರಿ ಕಿರಿ ಉಂಟಾಗುವ ಭಾವನೆ ನಿಮ್ಮಲ್ಲಿ ಮೂಡುತ್ತದೆ ಆದರೆ ಮುಂದಿನ ಭವಿಷ್ಯದಲ್ಲಿ ಈ ಮಾತುಗಳು ಬದುಕಿನ ದಾರಿ ದೀಪವಾಗಲಿದೆ ಎಂದು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಉಪನ್ಯಾಸಕ ಪೆಮ್ಮಯ್ಯ, ಪ್ರೊ.ಕಬ್ಬಡ್ಡಿ ಆಟಗಾರ ಅವಿನಾಶ್, ಸುಂಟಿಕೊಪ್ಪ ಉದ್ಯಮಿ ಅನೂಪ್, ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಮಂಜುನಾಥ್, ಮುಖ್ಯ ಶಿಕ್ಷಕಿ ಪ್ರಜ್ಞಾ, ಶಾಲಾ ಆಡಳಿತ ಮಂಡಳಿಯ ಅನಿಶಕುಮಾರ್, ಕುಮಾರ್,…
ಮಡಿಕೇರಿ ಸೆ.21 NEWS DESK : 2024ನೇ ಸಾಲಿನ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಗರದ ದಸರಾ ಸಮಿತಿ ಕಚೇರಿಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಎ.ಮುನೀರ್ ಮಾಚರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಸಲಹೆಗಾರರಾಗಿ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎನ್.ಭರತ್, ಕಾರ್ಯದರ್ಶಿಯಾಗಿ ಲಿಲ್ಲಿಗೌಡ, ಸಹ ಕಾರ್ಯದರ್ಶಿಯಾಗಿ ಜಿ.ಎನ್.ಪುನೀತ್, ಖಜಾಂಚಿಯಾಗಿ ರಫೀಕ್ ( ದಾದಾ ) ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ರವಿಗೌಡ ಸ್ವಾಗತಿಸಿದರು. ಭರತ್ ವಂದಿಸಿದರು.
ಮಡಿಕೇರಿ ಸೆ.21 NEWS DESK : ಚೆಟ್ಟಿಮಾನಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಸಂಪಾಜೆಗೆ ಒಳಪಟ್ಟ ಶಾಲಾ ಕಾಲೇಜುಗಳ ಕಬ್, ಬುಲ್ ಬುಲ್, ಸ್ಕೌಟ್ಸ್, ಗೈಡ್ಸ್, ರೋವರ್ಸ್ ಮತ್ತು ರೆಂಜರ್ಸ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಜನಪದ ಗೀತೆ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಕುಂದಚೇರಿ ಗ್ರಾ.ಪಂ ಅಧ್ಯಕ್ಷರು ಹಾಗೂ ಮಾಜಿ ಸೈನಿಕ ಪೊಡನೊಳನ ದಿನೇಶ್ ಉದ್ಘಾಟಿಸಿ, ಪ್ರತಿಯೊಬ್ಬರು ಶಿಸ್ತು ಮತ್ತು ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಂಡಾಗ ನಮ್ಮ ಬದುಕು ಸುಂದರವಾಗಿರುತ್ತದೆ. ಇಂತಹ ಕಾರ್ಯಕ್ರಮ ಇದಕ್ಕೆ ಪೂರಕವಾಗಿದ್ದು, ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷ ಕೆ.ಎಸ್.ಅಣ್ಣಯ್ಯ ಮಾತನಾಡಿ, ನಮ್ಮ ದೇಶ ನಮ್ಮ ಹೆಮ್ಮೆ. ಸದಾ ನಾವು ದೇಶ ಪ್ರೇಮಿಗಳಾಗಿಯೇ ಬದುಕಿದಾಗ ಉತ್ತಮ ರಾಷ್ಟ್ರ ನಿರ್ಮಾಣ ಆಗುತ್ತದೆ. ಆಗ ಈ ರೀತಿಯ ಕಾರ್ಯಕ್ರಮಕ್ಕೆ ಅರ್ಥ ಬರಲು ಸಾಧ್ಯ ಎಂದು ಹೇಳಿದರು. ಸಭಾ ಅಧ್ಯಕ್ಷತೆಯನ್ನು ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಧನಂಜಯ…
ಮಡಿಕೇರಿ NEWS DESK ಸೆ.20 : ಮಡಿಕೇರಿ ನಗರಸಭೆಯ ನೂತನ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಹೆಚ್.ಆರ್.ರಮೇಶ್ ಅವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘ, ವಿಷ್ಣುಸೇನಾ ಸಮಿತಿ, ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಪ್ರಮುಖರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭ ಮಡಿಕೇರಿ ನಗರದ ಸಮಸ್ಯೆಗಳಾದ ರಸ್ತೆ, ಬೀದಿ ದೀಪಗಳ ಅವ್ಯವಸ್ಥೆ, ಅವೈಜ್ಞಾನಿಕ ರೂಪದ ಕಸ ವಿಲೇವಾರಿ, ಅಶುಚಿತ್ವದ ಸಾರ್ವಜನಿಕ ಶೌಚಾಲಯಗಳು, ವಿಳಂಬವಾಗುತ್ತಿರುವ ಕಡತಗಳ ವಿಲೇವಾರಿ ಮತ್ತಿತರ ವಿಚಾರಗಳನ್ನು ಪೌರಾಯುಕ್ತರ ಗಮನಕ್ಕೆ ತಂದರು. ಕೊಡಗು ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಅಧ್ಯಕ್ಷ ಎಂ.ಎ.ಮುನೀರ್ ಮಾಚರ್, ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿಯ ಜಿಲ್ಲಾಧ್ಯಕ್ಷ ರಫೀಕ್ (ದಾದಾ) ಕರ್ನಾಟಕ ರಕ್ಷಣಾ ವೇದಿಕೆಯ ಮಡಿಕೇರಿ ನಗರಾಧ್ಯಕ್ಷ ಭರತ್, ಹಿತರಕ್ಷಣಾ ವೇದಿಕೆಯ ಲಿಲ್ಲಿಗೌಡ, ಸದಸ್ಯರುಗಳಾದ ಪುನೀತ್, ಹರ್ಷಿತ್ ಮತ್ತಿತರರು ಇದ್ದರು.






