ಲೇಖಕ: admin

ಕುಶಾಲನಗರ NEWS DESK ಸೆ.20 : ಕುಶಾಲನಗರ ಪಟ್ಟಣ ಪಂಚಾಯಿತಿಯ 2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸೆ.25ರಂದು ನಿಗದಿಯಾಗಿದೆ. ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಹಶೀಲ್ದಾರ್ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರಮುಖರು ಹಾಗೂ ಪುರಸಭೆಯ ಬಿಜೆಪಿ ಸದಸ್ಯರು ತಾಲ್ಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಕುಶಾಲನಗರ ಬಿಜೆಪಿ ಅಧ್ಯಕ್ಷ ಎಂ.ಎಂ.ಚರಣ್ ಮಾತನಾಡಿ ನಾಮನಿರ್ದೇಶಿತ ಸದಸ್ಯರುಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ. ತಹಶೀಲ್ದಾರರು ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ.ಮನು ಮಾತನಾಡಿ, 2ನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನಿಯಮಬಾಹಿರವಾಗಿ ಮುಳ್ಳುಸೋಗೆ ಭಾಗದ ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವಂತೆ ತಿಳಿಸಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದ್ದು, ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ನಡುವೆ ಮಡಿಕೇರಿಗೆ ತೆರಳುತ್ತಿದ್ದ ವಿರೋಧ ಪಕ್ಷದ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್…

Read More

ಮಡಿಕೇರಿ NEWS DESK ಸೆ.20 : ಖ್ಯಾತ ನಿದೇರ್ಶಕ, ನಟ ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ನಿರ್ಮಾಣ ಮಾಡಿರುವ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಇದೀಗ ಕುಶಾಲನಗರ ಮತ್ತು ಸುಂಟಿಕೊಪ್ಪದ ಚಿತ್ರಮಂದಿರಗಳಲ್ಲಿ ಯಶಸ್ವೀ ಪ್ರದರ್ಶನ ಕಾಣುತ್ತಿದೆ. “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಪ್ರೇಮಕಾವ್ಯವಾಗಿದ್ದು, ಚಿತ್ರ ನೋಡಿದವರು ಹೃದಯಸ್ಪರ್ಶಿ ಪ್ರೇಮಕಥೆಯ ಕುರಿತು ಒಳ್ಳೆಯ ಮಾತುಗಳನ್ನಾಡುತ್ತಿದ್ದಾರೆ. ಕೊಡಗಿನ ಪೂಜಾರಿರ ಚಂದ್ರಜಿತ್ ಬೆಳ್ಯಪ್ಪ ನಿರ್ದೇಶಿಸಿರುವ “ಇಬ್ಬನಿ ತಬ್ಬಿದ ಇಳೆಯಲಿ” ಸಿನಿಮಾದಲ್ಲಿ ಸಿದ್ಧಾರ್ಥ್ ಅಶೋಕ್ ಆಗಿ ವಿಹಾನ್ ಗೌಡ, ಅನಹಿತಳಾಗಿ ಅಂಕಿತಾ ಅಮರ್, ಮಧುಮಿತಳಾಗಿ ಗಿರಿಜಾ ಶೆಟ್ಟರ್, ರಾಧಾ ಪಾತ್ರದಲ್ಲಿ ಮಯೂರಿ ನಟರಾಜ ನಟಿಸಿದ್ದಾರೆ. ಫರ್ಹಾನ್ ಆಗಿ ಶಂಕರ್ ಮೂರ್ತಿ ಎಸ್.ಆರ್, ಅಶೋಕ್ ನಾಚಪ್ಪ ಪಾತ್ರದಲ್ಲಿ ಸಲ್ಮಿನ್ ಶೆರಿಫ್ ನಟಿಸಿದ್ದಾರೆ. ಗಗನ್ ಬಡೇರಿಯಾ ಸಂಗೀತ ನೀಡಿದ್ದು, ಶ್ರೀನಿವಾಸನ್ ಸೆಲ್ವರಾಜನ್ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಕಾಪು ಸಂಕಲನ, ಶರತ್ ಕೆ.ವಿ ಪ್ರೊಡಕ್ಷನ್ ಡಿಸೈನರ್, ನವ್ಯಾ ಬಿ.ಆರ್ ವಸ್ತç ವಿನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದಾರೆ. “ಬ್ಲಾಗ್ ಬರವಣಿಗೆಯ ಕಾಲದಲ್ಲಿ 9 ವರ್ಷಗಳ…

Read More

ಮಡಿಕೇರಿ ಸೆ.20 NEWS DESK : ಕೊಡಗು ಜಿಲ್ಲೆಯ 64 ಮಾರ್ಗಗಳಲ್ಲಿ ಕೆಎಸ್‍ಆರ್‍ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಲಿಖಿತವಾಗಿ ಮಾಹಿತಿ ಒದಗಿಸುವಂತೆ ಖಾಸಗಿ ಬಸ್ ಮಾಲೀಕರ ಸಂಸ್ಥೆಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರ ಬೇಡಿಕೆ ಸಂಬಂಧ ಈಗಾಗಲೇ ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಬಗ್ಗೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಸರ್ವೇ ಮಾಡಲಾಗಿದ್ದು, ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಖಾಸಗಿ ಬಸ್ ಸಂಸ್ಥೆಯವರು ಅಕ್ಟೋಬರ್ ಕೊನೆವಾರದಲ್ಲಿ ನಡೆಯುವ ಸಭೆಗೂ ಮುಂಚಿತವಾಗಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಖಾಸಗಿ ಬಸ್‍ಗಳ ಓಡಾಟಕ್ಕೆ ಯಾವ ರೀತಿ ತೊಂದರೆಯಾಗುತ್ತದೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸಬೇಕು. ಸಾರಿಗೆ ಸಂಪರ್ಕ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ. ಎಲ್ಲರೂ ಸಹಕಾರ ಮನೋಭಾವದಿಂದ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಬಸ್ಸು ಸಂಚಾರ…

Read More

ಮಡಿಕೇರಿ ಸೆ.20 NEWS DESK : ತಾಲ್ಲೂಕು ದಸರಾ ಕ್ರೀಡಾಕೂಟಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ಚಾಲನೆ ನೀಡಿದರು. ಅಥ್ಲೆಟಿಕ್ಸ್ ಸಂಬಂಧಿಸಿದಂತೆ 100, 200, 400, 800 ಹಾಗೂ 1500 ಹಾಗೂ 5 ಸಾವಿರ, 10 ಸಾವಿರ ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ತಟ್ಟೆ ಎಸೆತ, ರಿಲೇ, ಹಾಗೆಯೇ ವಾಲಿಬಾಲ್, ಕೋಕೋ, ಥ್ರೋಬಾಲ್, ಪುಟ್ಬಾಲ್ ಆಟಗಳು ನಡೆದವು. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಹಾಕಿ ಆಯ್ಕೆ ಪ್ರಕ್ರಿಯೆಯು ಕುಶಾಲನಗರ ಕೂಡಿಗೆಯ ಹಾಕಿ ಟರ್ಪ್ ಮೈದಾನದಲ್ಲಿ ಸೆಪ್ಟೆಂಬರ್ 21 ರಂದು ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು. ಸರ್ಕಾರ ದಸರಾ ಕ್ರೀಡಾಕೂಟಕ್ಕೆ ಅವಕಾಶ ಮಾಡಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳು ನಡೆಯಲಿದ್ದು, ಈ ಅವಕಾಶವನ್ನು ಕ್ರೀಡಾಪಟುಗಳು…

Read More

ಮಡಿಕೇರಿ ಸೆ.20 NEWS DESK  : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನಕ್ಕಾಗಿ ರಚಿತಗೊಂಡಿರುವ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕೊಡಗು ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೂತನ ಕಚೇರಿಯನ್ನು ಮಡಿಕೇರಿ ಶಾಸಕ  ಡಾ.ಮಂತರ್ ಗೌಡ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಆರಂಭಗೊಂಡಿರುವ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಜಿಲ್ಲೆಯಲ್ಲಿ ಪ್ರತಿಯೊಬ್ಬರಿಗೂ ಸರಕಾರದ ಗ್ಯಾರಂಟಿ ತಲುಪಿಸುವಲ್ಲಿ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು. ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಡಿ.ಕೆ.ಬ್ರಿಜೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರುಗಳು, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು ಹಾಗೂ ಪಕ್ಷದ ಪ್ರಮುಖರು, ಫಲಾನುಭವಿಗಳು ಹಾಜರಿದ್ದರು.

Read More

ಮಡಿಕೇರಿ ಸೆ.20 NEWS DESK : ಕೆಪಿಸಿಸಿಯಿಂದ ನೂತನವಾಗಿ ಉಸ್ತುವಾರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಭೃಜೇಶ್  ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.  ನಂತರ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದಲೇ ಪುನರ್ ರಚಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರೊಂದಿಗೆ ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳಲ್ಲೂ ಮೇಲುಗೈ ಸಾಧಿಸುವಲ್ಲಿ ಶ್ರಮ ವಹಿಸಬೇಕೆಂದು ಕರೆ ನೀಡಿದರು. ಪಕ್ಷದ ಹೈಕಮಾಂಡ್ ನಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಗೆ ಬೇಕಾದಂತಹ ಎಲ್ಲಾ ಸಹಕಾರವನ್ನು ನೀಡುವುದರೊಂದಿಗೆ ಪಕ್ಷದ ಸಂಘಟನೆಯಲ್ಲಿ ತಾವು ಕೂಡ ಭಾಗಿಯಾಗುವುದಾಗಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪಕ್ಷದ ಶಿಷ್ಟಾಚಾರವನ್ನು ಯಾರೂ ಉಲ್ಲಂಘಿಸಬಾರದು. ಪಕ್ಷದಲ್ಲಿ ಯಾವುದೇ ರೀತಿಯ ಬೆಳವಣಿಗೆ ಆದರೂ ಪಕ್ಷದ ಜಿಲ್ಲಾಧ್ಯಕ್ಷರ ಗಮನಕ್ಕೆ ತರಬೇಕೆಂದು  ಮನವಿ ಮಾಡಿದರು. ಸಭೆಯಲ್ಲಿ ನೆರದಿದ್ದ ಹಲವು ಮುಖಂಡರು ಇದೇ ಸಂದರ್ಭ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಸಭೆಯಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ…

Read More

ಮಡಿಕೇರಿ ಸೆ.20 NEWS DESK : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು. ನಗರದ ಕೊಡವ ಸಮಾಜದಲ್ಲಿ ನಡೆದ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಸೂದನ ಈರಪ್ಪ ಅವರು ವರದಿ ಸಾಲಿನಲ್ಲಿ ಸಂಘವು 23,43,150 ರೂ. ವ್ಯಾಪರ ಲಾಭ ಗಳಿಸಿದ್ದು, 12,25,760 ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.25ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಳೆದ 39 ವರ್ಷಗಳಿಂದ ಸ್ಥಗಿತಗೊಂಡಿದ್ದ ಏಲಕ್ಕಿ ಖರೀದಿ ಮತ್ತು ಮುಂಗಡ ನೀಡಿ ಠೇವಣಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಕಳೆದ 2 ವರ್ಷಗಳಿಂದ ಆರಂಭಿಸಲಾಗಿದ್ದು, ಸಂಘದ ಸದಸ್ಯರು ಹಾಗೂ ಏಲಕ್ಕಿ ಬೆಳೆಗಾರರು ಇದರ ಸದುಪಯೋಗ ಪಡೆದು ತಮ್ಮ ಫಸಲಿಗೆ ಯೋಗ್ಯ ಬೆಲೆಯನ್ನು ಪಡೆಯಬೇಕೆಂದು ಕೋರಿದರು. ಎರಡು ವರ್ಷಗಳ ಹಿಂದೆ ಮಡಿಕೇರಿ ನಗರದಲ್ಲಿ ಆರಂಭವಾದ “ಉತ್ಪತ್ತಿ” ಮಳಿಗೆ (ಸ್ಪೈಸಸ್ ಮಳಿಗೆ) ರೈತರ ಹಾಗೂ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ರೈತರಿಗೆ ನಾವು ಉತ್ತಮ ದರ…

Read More

ಮಡಿಕೇರಿ ಸೆ.20 NEWS DESK : ಕೊಡಗಿನ ಕ್ರೀಡಾರಂಗದಲ್ಲಿ ಹಲವು ಆಟಗಾರರು ಸಾಧನೆಗಳನ್ನು ಮಾಡಿದ್ದಾರೆ. ಆದರೆ ಒಂದಕ್ಕಿಂತ ಹೆಚ್ಚು ಕ್ರೀಡೆಯಲ್ಲಿ ಹೆಸರು ಮಾಡಿದವರು ಬಹು ವಿರಳ. ಹೀಗಿರುವಾಗ ಹಾಕಿ ಹಾಗೂ ಫುಟ್ ಬಾಲ್ ಎರಡೂ ಕ್ರೀಡೆಯಲ್ಲೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕೊಡಗಿನ ಏಕೈಕ ಆಟಗಾರ ಕಳ್ಳಿಚಂಡ ಪ್ರಸಾದ್. ದಿವಂಗತ ಕಳ್ಳಿಚಂಡ ಕರುಂಬಯ್ಯ ಸೋಮಯ್ಯ ಹಾಗೂ ನೀಲಮ್ಮ( ತಾಮನೆ ಕರ್ತಮಾಡ) ದಂಪತಿಯರ ಪುತ್ರನಾಗಿ ಪ್ರಸಾದ್ ಅವರು 1950ರಲ್ಲಿ ಸುಳುಗೋಡು ಗ್ರಾಮದಲ್ಲಿ ಜನಿಸಿದರು. ಶಿಕ್ಷಣ :: ಪ್ರಾಥಮಿಕ ಶಿಕ್ಷಣವನ್ನು ಸುಳುಗೋಡು ಹಾಗೂ ಮಾಯಮುಡಿಯಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ಮೈಸೂರು ದಳವಾಯಿ ಪ್ರೌಢಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಮೈಸೂರು ಯುವರಾಜ ಕಾಲೇಜಿನಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿಯನ್ನು 1972 ಪಡೆದರು. ಕ್ರೀಡಾ ಲೋಕಕ್ಕೆ ಪಾದಾರ್ಪಣೆ :: ಪ್ರಸಾದ್ ಅವರು ಬಾಲ್ಯದಿಂದಲೂ ಕ್ರೀಡೆಯನ್ನು ಆಡುತ್ತಿದ್ದರೂ, ಹಾಕಿ ಹಾಗೂ ಫುಟ್ ಬಾಲ್ ನಲ್ಲಿ ವಿಶೇಷ ಒಲವಿತ್ತು. ಇದು ಅವರು ಕ್ರೀಡಲೋಕಕ್ಕೆ ಪಾದಾರ್ಪಣೆ ಮಾಡಲು ನಾಂದಿ ಹಾಡಿತು. ಮೈಸೂರು…

Read More

ಮಡಿಕೇರಿ ಸೆ.20 NEWS DESK : ಭಾಗಮಂಡಲ ಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಯ್ಯಂಗೇರಿ ಘಟಕ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದು, ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ನುರಿತ ವೈದ್ಯರನ್ನು ನೇಮಕ ಮಾಡಬೇಕು ಎಂದು ಪಕ್ಷದ ಪ್ರಮುಖರು ಮನವಿ ಮಾಡಿದರು. ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಇದೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಭಿಸಿದ್ದು, ವೈದ್ಯರಿಲ್ಲದೆ ರೋಗಿಗಳು ಕಷ್ಟ ಅನುಭವಿಸುತ್ತಿದ್ದಾರೆ. ಭಾಗಮಂಡಲ ಮತ್ತು ತಲಕಾವೇರಿ ಪುಣ್ಯ ಕ್ಷೇತ್ರಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಮಡಿಕೇರಿ ಆಸ್ಪತ್ರೆಯನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ವೈದ್ಯರ ಕೊರತೆ ಕುರಿತು ಈಗಾಗಲೇ ವಿರಾಜಪೇಟೆ ಕ್ಷೇತ್ರದ ಶಾಸಕರಿಗೂ ಮನವಿ ಸಲ್ಲಿಸಲಾಗಿದೆ. ತಕ್ಷಣ ವೈದ್ಯರನ್ನು ನೇಮಕ ಮಾಡುವ ಮೂಲಕ ಆರೋಗ್ಯಾಧಿಕಾರಿಗಳು ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಬೇಕೆಂದು…

Read More

ನಾಪೋಕ್ಲು ಸೆ.20 NEWS DESK : ನಾಪೋಕ್ಲುವಿನ ಶ್ರೀ ರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಶಾಂತಿಗಾಗಿ ಲೇಖನಿ ಅಭಿಯಾನ ನಡೆಯಿತು. ಪ್ರಾಂಶುಪಾಲರಾದ ಶಾರದ ಲೇಖನಿ ಅಭಿಯಾನದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಕ ಕಾಳಯ್ಯ ಮಾತನಾಡಿ, 25 ಅಂಶ ವಿರುವ ಲೇಖನಿ ಮಹತ್ವ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ತನುಜಾ, ಚಂದ್ರಕಲಾ, ಶೋಭ, ಶಾಲಾ ಸಿಬ್ಬಂದಿ ವರ್ಗದವರಿದ್ದರು. ಲೇಖನಿ ಅಭಿಯಾನದ ಸಂಚಾಲಕಿ ಕೆ.ಟಿ.ವಾತ್ಸಲ್ಯ ತಯಾರಿಸಿದ ಲೇಖನಿಯನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.

Read More