ಲೇಖಕ: admin

ನಾಪೋಕ್ಲು  ಸೆ.20 NEWS DESK : ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 43.55 ಲಕ್ಷ ರೂ. ನಿವ್ವಳ ಲಾಭಗಳಿಸಿ ಎ ಶ್ರೇಣಿ ಯಲ್ಲಿದೆ ಎಂದು ಸಂಘದ ಅಧ್ಯಕ್ಷ ಕೇಟೋಳಿರ ಎಸ್.ಹರೀಶ್ ಪೂವಯ್ಯ ತಿಳಿಸಿದರು. ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಘದಲ್ಲಿ ಒಟ್ಟು 2534 ಸದಸ್ಯರಿದ್ದಾರೆ. ಪಾಲು ಬಂಡವಾಳ 1.25 ಕೋಟಿ ರೂ. ಒಟ್ಟು ನಿಧಿ 3.30 ಕೋಟಿ ಇದೆ ಎಂದ ಅವರು, ಸದಸ್ಯರು 43.23 ಕೋಟಿ ರೂ.ಳನ್ನು ಠೇವಣಿ ಇರಿಸಿದ್ದು, ಸದಸ್ಯರಿಗೆ 40.18 ಕೋಟಿ ರೂ.ಗಳನ್ನು ಸಾಲ ರೂಪದಲ್ಲಿ ನೀಡಲಾಗಿದೆ. ದುಡಿಯುವ ಬಂಡವಾಳ 55 ಕೋಟಿ ಇದ್ದು, ಸಂಘವು ಪ್ರಸಕ್ತ 2023-24 ಸಾಲಿನಲ್ಲಿ ಒಟ್ಟು 187 ಕೋಟಿ ರೂ.ಗಳ ವಹಿವಾಟು ನಡೆಸುವುದರ ಮೂಲಕ 46.87 ಲಕ್ಷ ನಿವ್ವಳ ಲಾಭ ಗಳಿಸಿ ಎ. ಶ್ರೇಣಿಯಲ್ಲಿದೆ ಎಂದು ಮಾಹಿತಿ ನೀಡಿದರು. ಸದಸ್ಯರಿಗೆ ಈ ವರ್ಷ ಶೇ.14 ರಷ್ಟು ಡಿವಿಡೆಂಟ್ ನೀಡಲಾಗುವುದು. ಹಿರಿಯ ನಾಗರಿಕರಿಗೆ ಶೇ.8 ಹಾಗೂ…

Read More

ನಾಪೋಕ್ಲು ಸೆ.20 NEWS DESK : ಮನೆ ಸಂಸಾರವನ್ನು ನಿಭಾಯಿಸಿಕೊಂಡು ಸಮಾಜದಲ್ಲಿ ಸಾಧನೆ ಮಾಡುವುದು ಸುಲಭದ ಮಾತಲ್ಲ. ಮಹಿಳೆಯರು ಸಮಾಜದಲ್ಲೂ ಗುರುತರವಾದ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ನಾಪೋಕ್ಲುವಿನ ಮಹಿಳಾ ಸಮಾಜದ ಕಟ್ಟಡದಲ್ಲಿ ನಡೆದ ನಂ. 393ನೇ ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2023-24ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಸಂಘಟಿತರಾಗೀ ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದ ಅವರು, ಸಮಾಜದಲ್ಲಿ ಮುಂದೆ ಬರಬೇಕಾದರೆ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ಧ್ವನಿ ಎತ್ತಬೇಕು ಎಂದರು. ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಬೇಬ ಮಾತನಾಡಿ, ಸಮಾಜದ ಹಿರಿಯ ಮಹಿಳೆಯರು ಜ್ಞಾನ ವೃದ್ಧಿಸುವ ಕೆಲಸವನ್ನು ಮಾಡಿದ್ದಾರೆ. ಸಮಾಜದಿಂದ ಉತ್ತಮ ಕಾರ್ಯಗಳಾಗುತ್ತಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಸಮಾಜದ ಅಭಿವೃದ್ಧಿಗೆ ಎಲ್ಲರ ಸಲಹೆ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ…

Read More

ಮಡಿಕೇರಿ ಸೆ.20 NEWS DESK  :  ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅ.8 ರಂದು 7 ನೇ ವಷ೯ದ ಮಹಿಳಾ ದಸರಾ ಆಯೋಜಿಸಲಾಗಿದ್ದು, ವೈವಿಧ್ಯಮಯ ಸ್ಪಧೆ೯ಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಮತ್ತು ಮಹಿಳಾ ದಸರಾ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ತಿಳಿಸಿದ್ದಾರೆ. ಅ.8 ರಂದು ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪಧೆ೯ಗಳು, ಕಾಯ೯ಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮಡಿಕೇರಿ ನಗರಸಭೆಯ ಸದಸ್ಯೆಯರು, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ ಇಲಾಖೆ ಸಹಯೋಗದಲ್ಲಿ ಆಯೋಜಿತವಾಗಿದೆ. ಸ್ಪಧೆ೯ಯ ವಿವರಗಳು  :: ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪಧೆ೯, ಒಂಟಿಕಾಲಿನ ಓಟ, ಕಪ್ಪೆ ಜಿಗಿತ, ಕೇಶವಿನ್ಯಾಸ, ಗಾಭ೯ ನೃತ್ಯ, ಸೀರೆಗೆ ನಿಖರ ಬೆಲೆ ಹೇಳುವುದು, 60 ವಷ೯ ಮೇಲ್ಪಟ್ಟವರಿಗೆ ಅಜ್ಜಿ ಜತೆ ಮೊಮ್ಮಕ್ಕಳ ನಡಿಗೆ, ವಾಲಗತ್ತಾಟ್, ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪಧೆ೯, ಬಾಂಬ್…

Read More

ಗೋಣಿಕೊಪ್ಪ ಸೆ.20 NEWS DESK : ಗೋಣಿಕೊಪ್ಪ ಸ್ನೇಹಿತರ ಬಳಗ ದಸರಾ ಸಮಿತಿಯ ಅಧ್ಯಕ್ಷರಾಗಿ ಸುದೀಶ್ ರೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಕಾರ್ಯದರ್ಶಿಯಾಗಿ ಪ್ರದೀಪ್, ಖಜಾಂಚಿಯಾಗಿ ಅನೀಶ್ ಆಯ್ಕೆಯಾಗಿದ್ದಾರೆ. ಕಾರ್ಯಧ್ಯಕ್ಷರಾಗಿ ಕಾಡ್ಯಮಾಡ ಚೇತನ್ ಕಾರ್ಯನಿರ್ವಹಿಸಲಿದ್ದಾರೆ. ಸಭೆಯಲ್ಲಿ ಸತೀಶ್ ರೈ, ಸುಹಾಸ್, ಥೋಮಸ್, ಶ್ರೀಧರ್ ರೈ, ಸುಧಾಕರ್, ಅಯ್ಯಪ್ಪ, ಕಾರ್ತಿಕ್ ರೈ, ಸುನೀಲ್ ರೈ ಮತ್ತು ಗಿರಿ ಇದ್ದರು.

Read More

ನಾಪೋಕ್ಲು ಸೆ.20 NEWS DESK : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಾಪೋಕ್ಲುವಿನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗವ ಮೂಲಕ ಸಾಧನೆ ಮಾಡಿದ್ದಾರೆ. ಮೂರ್ನಾಡು ಜ್ಞಾನ ಜ್ಯೋತಿ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಾಪೋಕ್ಲುವಿನ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಕಬಡ್ಡಿ ಮತ್ತು ಖೋ-ಖೋ ಪ್ರಥಮ, ಬಾಲಕಿಯರ ವಿಭಾಗದಲ್ಲಿ ಖೋ-ಖೋ ದ್ವಿತೀಯ,ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಖೋ-ಖೋ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕರ ವಿಭಾಗದ ಅಥೆಟಿಕ್ಸ್ 400 ಮೀ. ಓಟದಲ್ಲಿ ವಚನ್ ಪ್ರಥಮ, 1500 ಮೀ. ಓಟದಲ್ಲಿ ವಿ.ಕೆ.ವಿಕಾಸ್ ಪ್ರಥಮ, 1500 ಮೀ. ಓಟದ ಸ್ಪರ್ಧೆಯಲ್ಲಿ ಪಿ.ಯು.ಲಿತೇಶ್ ದ್ವಿತೀಯ, ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತದಲ್ಲಿ ಕೆ.ಎಂ.ಖುಶಿ ಪ್ರಥಮ, 4*400 ಮೀ. ರಿಲೇ ಬಾಲಕರ ತಂಡ ಪ್ರಥಮ, 4*100 ಮೀ.ರಿಲೇ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢ ಶಾಲಾ ಅಥ್ಲೆಟಿಕ್ಸ್ ಬಾಲಕಿಯರ ವಿಭಾಗದ 800 ಮೀ. ಪ್ರೀತಿಕ ದ್ವಿತೀಯ,…

Read More

ಮಡಿಕೇರಿ ಸೆ.20 NEWS DESK : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಡಿ.ಎಸ್ ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹವಲು ವಿಚಾರಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾತನಾಡಿ, ಸಂಘವು ಈ ಸಾಲಿನಲ್ಲಿ 3.ಲಕ್ಷ ದ 2.ಸಾವಿರಗಳಷ್ಟು ನಿವ್ವಳ ಲಾಭಾಂಶ ಗಳಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿ ಪೂರಕವಾದ ಯೋಜನೆಗಳಿಗೆ ಒಕ್ಕೂಟದ ವತಿಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಒಕ್ಕೂಟದ ವಿಸ್ತಾರಣಾಧಿಕಾರಿ ವೀಣಾ ಮಾತನಾಡಿ, ಪಶುಪಾಲನೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.  ಸಂಘದ ಉಪಾಧ್ಯಕ್ಷ ಆರ್.ಕುಮಾರಸ್ವಾಮಿ, ನಿರ್ದೇಶಕರಾದ ರಾಮಣ್ಣ ರೈ, ಪುಟ್ಟೆಗೌಡ, ದೇವೆಗೌಡ, ಗುಜೇಂದ್ರ, ಪುಟ್ಟಯ್ಯ, ಅಶ್ವಿನಿ ಕುಮಾರ್, ಗೋವಿಂದ ಶೆಟ್ಟಿ, ಪುರುಷೋತ್ತಮ, ಪುಷ್ಪಲತಾ,…

Read More

ಮೈಸೂರು ಸೆ.20 NEWS DESK : ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು. ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದರು.

Read More

ಮೈಸೂರು ಸೆ.20 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ನಡೆದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. “ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ, ಗ್ಯಾರಂಟಿ ಅನುಷ್ಠಾನ‌ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಮುಕ್ತ ವಿವಿ‌ ಕುಲಪತಿಗಳಾದ ಪ್ರೊ.ಶರಣಪ್ಪ ವಿ.ಹಲ್ಸೆ, ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ವಿಧಾನ ಪರಿಷತ್ ಸದಸದಯರಾದ ಡಾ.ತಿಮ್ಮಯ್ಯ, ಅರ್ಧ ಶತಮಾನದಿಂದ ಕನ್ನಡದ ವಿವೇಕವನ್ನು ವಿಸ್ತರಿಸುತ್ತಿರುವ ಹಿರಿಯ ಸಾಹಿತಿಗಳು, ಬರಹಗಾರರು, ಲೇಖಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ನಾನಾ ಚಳವಳಿಗಳ ಕಾರ್ಯಕರ್ತರು, ಮುಖಂಡರುಗಳು ಚಿಂತನಾ…

Read More

ನಾಪೋಕ್ಲು ಸೆ.20 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮ ಮದ್ಯವರ್ಜನ ಶಿಬಿರ ಸಾಮಾಜಿಕ ಬದಲಾವಣೆಗೆ ಸಹಕಾರಿ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಮಡಿಕೇರಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಬೆಟ್ಟಗೇರಿ ವಲಯ, ತಾಲೂಕು ಸಮಿತಿಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಸಹಯೋಗದೊಂದಿಗೆ ಚೇರಂಬಾಣೆ ಗೌಡ ಸಮಾಜ, ಬೆಟ್ಟಗೇರಿ ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬೆಟ್ಟಗೇರಿ ಗ್ರಾ.ಪಂ, ಬೇಂಗೂರು – ಚೇರಂಬಾಣೆ ಗ್ರಾ.ಪಂ, ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗಮಂಡಲ ಆರಕ್ಷಕ ಇಲಾಖೆ, ಮಡಿಕೇರಿ ನವಜೀವನ ಸಮಿತಿ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ…

Read More

ನಾಪೋಕ್ಲು ಸೆ.20 NEWS DESK : ಚೇರಂಬಾಣೆ ಕ್ಲಸ್ಟರ್ ನ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾ.ಪಂ ಅಧ್ಯಕ್ಷೆ ಮಿಲನ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವೀಣಾ ರೈ ಪ್ರಾಸ್ತವಿಕ ಮಾತನಾಡಿ, ಪ್ರತಿಭಾ ಕಾರಂಜಿಯೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗಾಗಿ ಇಲಾಖೆಯೂ ರೂಪಿಸಿದ ಒಂದು ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿವಿಧ ಸ್ಪರ್ಧೆಯಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದು, 47 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದರು. ಕಾರ್ಯಕ್ರಮವನ್ನು ಪಿ.ಎಸ್.ಸುಬ್ಬಯ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪಾಕ ದೇವಸ್ಥಾನದ ಅಧ್ಯಕ್ಷರ ಎಂ.ಎನ್.ಮಾದಪ್ಪ, ವಾಹನ ಮಾಲೀಕರ ಸಂಘದ ಅಧ್ಯಕ್ಷ ರವಿ, ಮಸೀದಿ ಅಧ್ಯಕ್ಷ ಹಸೈನಾರ್, ಗ್ರಾ.ಪಂ ಸದಸ್ಯ ಬಶೀರ್, ನಿವೃತ್ತ ಹಿರಿಯ ಶಿಕ್ಷಕಿ ಬಡ್ಡಿರ ನಳಿನಿ, ಕಾಲೇಜಿನ ಪ್ರಶುಪಾಲ ಡಿ.ಪಿ.ರಾಮಕೃಷ್ಣ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಲೋಕೇಶ್, ಸೇರಿದರಿದಂತೆ ಕ್ಲಸ್ಟರ್ ನ…

Read More