ಲೇಖಕ: admin

ವಿರಾಜಪೇಟೆ ಸೆ.20 NEWS DESK : ಚಿಕ್ಕಪೇಟೆ ಯೂನಿಯನ್ ಬ್ಯಾಂಕ್ ವತಿಯಿಂದ ಪಿಂಚಣಿದಾರರಿಗೆ ಪಿಂಚಣಿ ವ್ಯವಸ್ಥೆಯ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಬ್ಯಾಂಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಖಾ ವ್ಯವಸ್ಥಾಪಕ ಕೆ.ನಾಗರಾಜು ಪಿಂಚಣಿದಾರರಿಗೆ ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಪಡೆದುಕೊಂಡರು. ಪಿಂಚಣಿದಾರರ ಪಿಂಚಣಿ ಖಾತೆಯಿಂದ ತೆರಿಗೆ ಕಟಾವು ಆಗಿರುವುದು, ಪಿಂಚಣಿದಾರರು ಮೃತಪಟ್ಟಲ್ಲಿ ಕುಟುಂಬದವರು ನೀಡಬೇಕಾದ ದಾಖಲೆಗಳ ವಿವರ, 80 ವರ್ಷ ಮೇಲ್ಪಟ್ಟ ಪಿಂಚಣಿದಾರರ ಪಿಂಚಣಿಯ ಪರಿಷ್ಕರಣೆಯ ಬಗ್ಗೆ ಮರು ಪರಿಶೀಲನೆ ಮಾಡುವುದು ಇನ್ನಿತರ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಪಿಂಚಣಿದಾರರು ಪಡೆಯುವ ಪಿಂಚಣಿ ವ್ಯವಸ್ಥೆಯಲ್ಲಿ ಏನಾದರೂ ಸಮಸ್ಯೆಯಾದಲ್ಲಿ ಕೂಡಲೇ ಮುಖ್ಯ ವ್ಯವಸ್ಥಾಪಕರ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಪಿಂಚಣಿದಾರರು ಕೂಡ ಬ್ಯಾಂಕ್ ಸಿಬ್ಬಂದಿಗಳ ಜೊತೆಗೆ ಅನೇಕ ಸಂದೇಹಗಳನ್ನು ಬಗೆಹರಿಸಿಕೊಂಡರು. ಈ ಸಭೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರದ 75 ಕ್ಕೂ ಅಧಿಕ ಪಿಂಚಣಿದಾರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳಾದ ಜೇಮ್ಸ್ ಮೆನೇಜಸ್, ನಿರೀಕ್ಷಾ, ವೆಂಕಟೇಶ್, ಗೌರಿ, ಕಿರಣ್ ಹಾಗೂ…

Read More

ಬೆಂಗಳೂರು NEWS DESK ಸೆ.20  ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಜಿ ಸಚಿವ ಮುನಿರತ್ನ ಅವರ ಮೇಲಿನ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್.ಐ.ಟಿ) ರಚಿಸುವಂತೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸೇರಿದಂತೆ ಸಚಿವರು ಹಾಗೂ ಶಾಸಕರು ಇದ್ದರು.

Read More

ನಾಪೋಕ್ಲು ಸೆ.20 NEWS DESK : ಪಶು ಪಾಲನ ಇಲಾಖೆ, ಕಕ್ಕಬೆ ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಮರoದೋಡ ಗ್ರಾಮದಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಮುಂಜಾಗ್ರತ ಲಸಿಕೆ ನೀಡಲಾಯಿತು. ಗ್ರಾ.ಪಂ ಸದಸ್ಯ ಚೋಯಮಾಡಾಂಡ ಮೊಣ್ಣಪ್ಪ, ಪಶುವೈ ಧ್ಯಾಧಿಕಾರಿ ಡಾ.ಶಿಲ್ಪಾ ಶ್ರೀ, ಪಶು ವ್ಯೆದ್ಯ ಪರೀಕ್ಷ ಸುನಿಲ್, ಗುರುರಾಜ್ ಹಾಗೂ ಪಶು ಸಖಿ ಸುಧಾ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಶಿಬಿರದಲ್ಲಿ ಮರoದೋಡ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ಆಗಮಿಸಿ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸಿದರು. ವರದಿ : ದುಗ್ಗಳ ಸದಾನಂದ. 

Read More

ಕುಶಾಲನಗರ, ಸೆ.20 NEWS DESK : ಭಾರತ್ ಸ್ಕೌಟ್ಸ್, ಗೈಡ್ಸ್ ನ ಜಿಲ್ಲಾ ಸಂಸ್ಥೆಯ ವತಿಯಿಂದ ಕುಶಾಲನಗರ ತಾಲ್ಲೂಕು ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‌ಏರ್ಪಡಿಸಿದ್ದ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ತಾಲ್ಲೂಕು ಸ್ಥಳೀಯ ಸಂಸ್ಥೆಯ ಸಭೆಯಲ್ಲಿ ಸಂಸ್ಥೆಯ ಕುಶಾಲನಗರ ತಾಲ್ಲೂಕು ಸ್ಥಳೀಯ ಅಧ್ಯಕ್ಷರಾಗಿ ಆಯ್ಕೆಗೊಂಡ ದೇವರಗುಂಡ  ಡಾ.ಪ್ರವೀಣ್ ಸೋಮಪ್ಪ ಅವರಿಗೆ ಸ್ಕೌಟ್ಸ್, ಗೈಡ್ಸ್ ನ ಕೊಡಗು ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಅಧಿಕಾರ ಹಸ್ತಾಂತರ ಮಾಡಿದರು. ನಂತರ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಕೆ.ಟಿ.ಬೇಬಿಮ್ಯಾಥ್ಯೂ , ವಿಶ್ವವ್ಯಾಪಿಯಾಗಿರುವ ಸ್ಕೌಟ್ ಚಳುವಳಿಯು ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯಲ್ಲಿ ಶಿಸ್ತು- ಸಂಯಮ ಹಾಗೂ ಉತ್ತಮ ನಾಯಕತ್ವ ಗುಣ ಬೆಳೆಸುವುದರೊಂದಿಗೆ ಅವರಲ್ಲಿ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಹೊಂದಲು ಸಹಕಾರಿಯಾಗಿದೆ. ಈ ಚಳುವಳಿಯ ಆರಂಭ ಹಾಗೂ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಬೇಬಿಮ್ಯಾಥ್ಯೂ ಅವರು, ಈ ಚಳುವಳಿಯನ್ನು 1907 ರಲ್ಲಿ…

Read More

ವಿರಾಜಪೇಟೆ  ಸೆ.20 NEWS DESK : ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಜಡ್ಜ್ ಬಿ ಪರೀಕ್ಷೆಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿ ಚರೀಷ್ ಪೊನ್ನಣ್ಣ ಉತ್ತೀರ್ಣನಾಗುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವಂತಹ ಕರಾಟೆ ಸ್ಪರ್ಧೆಗಳ ತೀರ್ಪುಗಾರನಾಗುವ ಅರ್ಹತೆಯನ್ನು ಪಡೆದುಕೊಂಡಿದ್ದಾನೆ. ಈ ಅರ್ಹತಾ ಪರೀಕ್ಷೆಯಲ್ಲಿ ಕೊಡಗಿನಿಂದ ಎಂಟು ಜನರು ಪಾಲ್ಗೊಂಡಿದ್ದು, ಇದರಲ್ಲಿ ಮೂರು ಜನ ಉತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಒಟ್ಟು 270 ಪ್ರಶ್ನೆಗಳಿದ್ದು, ಇದರಲ್ಲಿ 200 ಪ್ರಶ್ನೆಗಳಿಗೆ ಉತ್ತರಿಸಿ ಹಾಗೂ ಒಂದು ಪ್ರಾಯೋಗಿಕ ಸ್ಪರ್ಧೆಯ ತೀರ್ಪುಗಾರನಾಗಿ ಈ ಸಾಧನೆಯನ್ನು ಮಾಡಿದ್ದಾನೆ. ಚರೀಷ್ ವಿರಾಜಪೇಟೆಯ ಬೋಪಯ್ಯ ಹಾಗೂ ಪುಷ್ಪಾ ದಂಪತಿಯ ಪುತ್ರ. ಚಿಕ್ಕಪೇಟೆಯಲ್ಲಿನ ಸೋಮಣ್ಣ ಸಿನ್ಸೆ ಅವರ ವಿದ್ಯಾರ್ಥಿ.

Read More

ಪುತ್ತೂರು ಸೆ.20 NEWS DESK : ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತಾಡಿದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಮಾತನಾಡಿ, ಸಮಯ ನಿರ್ವಹಣೆಯ ಕಲೆ ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾದದ್ದು. ಸಿಕ್ಕಿದ ಸಮಯವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಕೆಲಸಗಳನ್ನು ಪೂರೈಸಿಕೊಳ್ಳಬೇಕು ಎಂದರು. ಆಡಳಿತ ಮಂಡಳಿಯ ಇನ್ನೋರ್ವ ನಿರ್ದೇಶಕ ಸತ್ಯನಾರಾಯಣ…

Read More

ಮಡಿಕೇರಿ NEWS DESK ಸೆ.20 : ಕಳೆದ 25 ವರ್ಷಗಳಿಂದ ನಾಡಿನ ಗ್ರಾಹಕರ ಹಾಗೂ ಚಿನ್ನಾಭರಣ ಪ್ರಿಯರ ವಿಶ್ವಾಸ ಗಳಿಸಿರುವ ಕುಶಾಲನಗರದ ಬೈಚನಹಳ್ಳಿಯ ಬಿ.ಎಂ.ರಸ್ತೆಯ ವಿಲ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆಯಲ್ಲಿ ಹಬ್ಬಗಳ ಕೊಡುಗೆಯಾಗಿ 10 ಗ್ರಾಂ ಚಿನ್ನಾಭರಣಗಳನ್ನು ಖರೀದಿಸುವವರಿಗೆ ಚಿನ್ನದ ನಾಣ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ. ಕೊಡಗಿನ ಸಾಂಪ್ರದಾಯಿಕ ಆಭರಣಗಳು ಸೇರಿದಂತೆ ಎಲ್ಲರೂ ಮೆಚ್ಚುವ ವಿವಿಧ ವಿನ್ಯಾಸದ ಅತ್ಯಾಕರ್ಷಕ ಚಿನ್ನಾಭರಣಗಳು ವಿಲ್ಕೋ ಗೋಲ್ಡ್ ಚಿನ್ನಾಭರಣ ಮಳಿಗೆಯಲ್ಲಿ ಲಭ್ಯವಿದೆ. ಚಿನ್ನಾಭರಣ ಪ್ರಿಯರು ಭೇಟಿ ನೀಡಿ ಚಿನ್ನದ ನಾಣ್ಯವನ್ನು ಉಚಿತವಾಗಿ ಪಡೆದುಕೊಳ್ಳುವಂತೆ ವಿಲ್ಕೋ ಗೋಲ್ಡ್ ಆಡಳಿತ ಮಂಡಳಿ ಮನವಿ ಮಾಡಿದೆ.

Read More

ಕುಶಾಲನಗರ ಸೆ.20 NEWS DESK :  ನದಿ ಮೂಲ, ಜಲ ಮೂಲಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಮೀರ್ ಅಹ್ಮದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದ ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ 163ನೇ ಮಹಾಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೀರಿನ ಮೌಲ್ಯದ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು. ಆ ಮೂಲಕ ಜಲ ಮೂಲಗಳ ಸಂರಕ್ಷಣೆ ಅಗತ್ಯವಾಗಿದೆ ಎಂದರು. ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಕೆ.ಎಸ್.ಕೃಷ್ಣೇಗೌಡ ಅವರು ಮಾತನಾಡಿ, ನದಿ ತೊರೆಗಳ ಸ್ವಚ್ಛತಾ ಕಾಯಕ ಪ್ರತಿ ಪಂಚಾಯತ್ ಮಟ್ಟದಲ್ಲಿ ನಡೆಯಬೇಕಾಗಿದೆ. ಈ ಸಂಬಂಧ ಶಾಸಕರು ಸರ್ಕಾರದ ಮೂಲಕ ಗಮನ ಸೆಳೆಯಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹರಿಯುವ ಸ್ಥಳಗಳ ಬಗ್ಗೆ ಸರ್ವ ಕಾರ್ಯ ನಡೆಸಿ ಸಂರಕ್ಷಣೆಗೆ ಯೋಜನೆ ರೂಪಿಸಬೇಕಾಗಿದೆ ಎಂದರು. ಕಾವೇರಿ ನದಿ ಸ್ವಚ್ಛತಾ ಸಮಿತಿ ಮೂಲಕ ನಡೆಯುತ್ತಿರುವ ಅಭಿಯಾನದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೃಷ್ಣೇಗೌಡ ಅವರು ಕಳೆದ…

Read More

ಸಿದ್ದಾಪುರ ಸೆ.20 NEWS DESK : ನೆಲ್ಯಹುದಿಕೇರಿಯ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ವಿ.ಕೆ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

Read More

ಬೆಳ್ತಂಗಡಿ ಸೆ.20 NEWS DESK : ಬೆಳ್ತಂಗಡಿ ತಾಲ್ಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಲೋಗೋವನ್ನು ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅನಾವರಣಗೊಳಿಸಿದರು. ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರುಗಳಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ರಾಜ್ ಗೌಡ ವಳಂಬ್ರ, ಸೌಮ್ಯಲತಾ ಗೌಡ ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷ ರಂಜನ್ ಜಿ.ಗೌಡ , ಅಧ್ಯಕ್ಷ  ಮೋಹನ್ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷ ಶ್ರೀನಿವಾಸ್ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಗಳಾದ  ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ  ರಂಜನ್ ಜಿ ಗೌಡ, ವಿಜಯ ಗೌಡ ವೇಣೂರು, ಕೆ.ಜಯಂತ ಗೌಡ ಗುರಿಪಳ್ಳಾ, ಶ್ರೀನಿವಾಸ್ ಗೌಡ ಬೆಳಾಲು, ಮೋಹನ್ ಕುಮಾರ್ ಕಲ್ಮಂಜ, ಭರತ್ ಕುಮಾರ್ ಬಂಗಾಡಿ,…

Read More