ಲೇಖಕ: admin

ಮಡಿಕೇರಿ ಸೆ.18 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು, 2023-24ನೇ ಸಾಲಿನಲ್ಲಿ 33.09 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಮಹಾಸಭೆ ಸೆ.21 ರಂದು ನಗರದ ಕೊಡವ ಸಮಾಜದಲ್ಲಿ ನಡೆಯಲಿದೆಯೆಂದು ಸಂಘದ ಅಧ್ಯಕ್ಷರಾದ ಜಿ.ಎಂ.ಸತೀಶ್ ಪೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನಿಂದ ಗ್ರಾಹಕರುಗಳಿಗೆ 2847.48 ಲಕ್ಷ ರೂ. ವಿವಿಧ ರೂಪದ ಸಾಲಗಳನ್ನು ವಿತರಿಸಿದೆ. ಇದರಲ್ಲಿ ಜಾಮೀನು ಸಾಲವಾಗಿ 579.98 ಲಕ್ಷ, ಮನೆ ಆಧಾರ ಸಾಲ 959.04 ಲಕ್ಷ, ಚಿನ್ನಾಭರಣ ಈಡಿನ ಸಾಲವಾಗಿ 1,048 ಲಕ್ಷ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಒಟ್ಟು 481.23 ಲಕ್ಷ ವಹಿವಾಟು ನಡೆಸಿದೆ. ಸಾಲ ವಸೂಲಾತಿಯ ಪ್ರಮಾಣ ಶೇ.95.50 ರಷ್ಟು ಇರುವುದಾಗಿ ತಿಳಿಸಿದರು. ಬ್ಯಾಂಕಿನ ಜನರಲ್ ತಿಮ್ಮಯ್ಯ ರಸ್ತೆಯಲ್ಲಿನ ಶಾಖೆಯಲ್ಲಿ 106.15 ಲಕ್ಷ ಒಟ್ಟು ವ್ಯವಹಾರ ನಡೆಸಲಾಗಿದ್ದು, 16.50 ಲಕ್ಷ ಲಾಭ ಗಳಿಸಿದೆ ಹಾಗೂ 620.67 ಲಕ್ಷ ರೂ.ಗಳನ್ನು ವಿವಿಧ ರೂಪದ ಸಾಲವಾಗಿ ವಿತರಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ…

Read More

ಮಡಿಕೇರಿ ಸೆ.18 NEWS DESK : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ 2023-24ನೇ ಸಾಲಿನಲ್ಲಿ ದಶಕಗಳಿಂದ ಬಾಕಿ ಉಳಿದಿರುವ ಸಾಲಗಳನ್ನು ಹೊರತು ಪಡಿಸಿದಂತೆ 28.90 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆಯೆಂದು ಸಂಘದ ಅಧ್ಯಕ್ಷ ಎಂ.ಬಿ.ದೇವಯ್ಯ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘಕ್ಕೆ ಸಾಲದ ಹೊರೆಯೂ ಇದೆ. ಜಿಲ್ಲಾ ಕೇಂದ್ರ ಸಹಕಾರ ಸಂಘಕ್ಕೆ 114.47 ಲಕ್ಷ ರೂ. ಸಾಲ ಮರುಪಾವತಿ ಬಾಕಿ ಇದ್ದರೆ, ಸರಕಾರದ ಸಾಲ 203.94 ಲಕ್ಷ ರೂ.ಗಳಿದೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗೆ ಪ್ರತಿ ತಿಂಗಳು 3.11 ಲಕ್ಷ ರೂ. ಮರು ಪಾವತಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸಂಘವು ಪೆಟ್ರೋಲ್ ಬಂಕು ವ್ಯವಹಾರವನ್ನು ನಡೆಸುತ್ತಿದ್ದು, ಹುಣಸೂರು ಬಂಕ್‍ನಿಂದ 42.54 ಲಕ್ಷ ಮತ್ತು ಹೆಬ್ಬಾಲೆ ಬಂಕ್‍ನಿಂದ 14.12 ಲಕ್ಷ ಆದಾಯ ಬಂದಿದೆ. ಕಾಫಿ ಪುಡಿ ಮಾರಾಟ ವ್ಯವಹಾರದಲ್ಲಿ ಒಟ್ಟು 7486 ಕೆ.ಜಿ. ಕಾಫಿ…

Read More

ಬೆಂಗಳೂರು ಸೆ.18 NEWS DESK : ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಾದಕ ವಸ್ತುಗಳ ಮಾರಾಟ ಜಾಲವನ್ನು ಬುಡಸಮೇತ ಕಿತ್ತೆಸೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು…

Read More

ದೆಹಲಿ ಸೆ.18 NEWS DESK  : ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕನಿಷ್ಠ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರೋಲ್ ಬಾಗ್‌ನ ಪ್ರಶಾದ್ ನಗರದಲ್ಲಿ ಮನೆಯೊಂದು ಕುಸಿದಿರುವ ಬಗ್ಗೆ ಇಲಾಖೆಗೆ ಬೆಳಿಗ್ಗೆ 9.12 ಕ್ಕೆ ಕರೆ ಬಂದಿತು, ನಂತರ ಐದು ಅಗ್ನಿಶಾಮಕ ವಾಹನಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದವು. ಮೂರು ಅಂತಸ್ತಿನ ಹಳೆಯ ಕಟ್ಟಡದ ಕೆಲವು ಭಾಗವು ಬೆಳಿಗ್ಗೆ ಕುಸಿದಿದೆ ಎಂದು ತಿಳಿದುಬಂದಿದೆ. “ಹಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ, ನಂತರ ಅವರನ್ನು ರಕ್ಷಿಸಲಾಗಿದೆ” ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗರ್ಗ್ ಹೇಳಿದ್ದಾರೆ. ನಾವು ಇಲ್ಲಿಯವರೆಗೆ 12 ಜನರನ್ನು ರಕ್ಷಿಸಿದ್ದೇವೆ, ಇನ್ನೂ ಕೆಲವರು ಸಿಕ್ಕಿಬಿದ್ದಿರುವ ಸಾಧ್ಯತೆಯಿದೆ ಎಂದು ಡಿಸಿಪಿ ಹೇಳಿದರು, ಸ್ಥಳೀಯ ಪೊಲೀಸರು ಮತ್ತು ಇತರ ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಎಂ.ಹರ್ಷವರ್ಧನ್…

Read More

ಮಡಿಕೇರಿ ಸೆ.18 NEWS DESK : ಯು.ಎಸ್.ಎ.ಯ ಸ್ಕ್ಯಾನ್‌ ಫೋರ್ಡ್‌ ವಿವಿ ಮತ್ತು ಎಲ್ಸ್‌ ವಿಯರ್  ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ ಅವರು ಸತತ 5ನೇ ಬಾರಿ ಸ್ಥಾನ ಪಡೆದಿದ್ದಾರೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ.ಮಂಜುನಾಥ ಅವರು “Analytical Chemistry and Energy” ವಿಷಯಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2024ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 8257ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿಜೀವಮಾನ ಸಾಧಕರ ಪಟ್ಟಿಯಲ್ಲಿ 65119ನೇ ಸ್ಥಾನವನ್ನು ಪಡೆದಿದ್ದಾರೆ (ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ). ಇವರು 194 ಅಂತರಾಷ್ಟ್ರೀಯ ಲೇಖನಗಳನ್ನು ಅತ್ಯಂತ ಪ್ರತಿಷ್ಟಿತ ಜರ್ನಲ್‌ಗಳಲ್ಲಿ ಪ್ರಕಟಿಸಿದ್ದು, 25 ಪುಸ್ತಕಗಳನ್ನು ಹೊರ ತಂದಿದ್ದಾರೆ. 27 ಜರ್ನಲ್‌ಗಳಲ್ಲಿ ಎಡಿಟೋರಿಯಲ್ ಬೋರ್ಡ್‌ ಮೆಂಬರ್ ಆಗಿಯೂ ಹಾಗೂ Sensing technology (Taylor and francis) ಜರ್ನಲ್‌ನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇವರ ಈ…

Read More

ವಿರಾಜಪೇಟೆ ಸೆ.18 NEWS DESK : ವಿರಾಜಪೇಟೆ ಐತಿಹಾಸಿಕ ಶ್ರೀ ಗೌರಿ ಗಣೇಶ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಹೊತ್ತ ವಿದ್ಯುತ್ ಅಲಂಕೃತಗೊಂಡ 22 ಮಂಟಪಗಳ ಶೋಭಾಯಾತ್ರೆಯು ನಗರದ ಮುಖ್ಯ ಬೀದಿಯಲ್ಲಿ ಮಳೆಯ ನಡುವೆಯೂ ಮೆರವಣಿಗೆ ನಡೆಸಿ ಪವಿತ್ರ ಗೌರಿ ಕೆರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ವಿಸರ್ಜಿಸಲಾಯಿತು. ಸೆ.7 ರಂದು ನಗರದ 22 ಸಮಿತಿಗಳ ಮೂಲಕ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶನಿಗೆ 10 ದಿನಗಳ ಕಾಲ ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆ ಸಲ್ಲಿಸಿ ಸೆ,17 ರಂದು ವಿದ್ಯುತ್ ದೀಪಾಲಂಕೃತ ಹೂವಿನ ಭವ್ಯ ಮಂಟಪದಲ್ಲಿ ವಿಶೇಷ ವಾಧ್ಯಗೋಷ್ಠಿಯೋಂದಿಗೆ ಮಂಟಪಗಳು ಮೆರವಣಿಗೆಯಲ್ಲಿ ಸಾಗಿ ಬಂದವು. ನಗರದ ಶ್ರೀ ಗಣಪತಿ ದೇವಸ್ಥಾನ ಗಡಿಯಾರ ಕಂಬದ ಬಳಿ, ಜೈನರ ಬೀದಿ ಶ್ರೀ ಬಸವೇಶ್ವರ ದೇವಸ್ಥಾನ, ವಿಘ್ನೇಶ್ವರ ಸೇವಾ ಸಮಿತಿ ಅರಸುನಗರ, ವಿನಾಯಕ ಯುವಕ ಭಕ್ತ ಮಂಡಳಿ ಅಂಗಾಳ ಪರಮೇಶ್ವರಿ ದೇವಸ್ಥಾನ, ವಿಜಯ ವಿನಾಯಕ ಉತ್ಸವ ಸಮಿತಿ ದಕ್ಕನಿಮೊಹಲ್ಲಾ, ಕಾವೇರಿ ಗಣೇಶ ಉತ್ಸವ ಸಮಿತಿ…

Read More

ಮಡಿಕೇರಿ NEWS DESK ಸೆ.18 : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಸಂಘದ ಕುಶಾಲನಗರ ತಾಲ್ಲೂಕು ಘಟಕವನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಪೀಟರ್ ಕೆ.ಎ ಕೂಡಿಗೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪೌಲ್ಸನ್ ಜಾಯ್ ಕುಶಾಲನಗರ ಆಯ್ಕೆಯಾದರು. ರೋಮನ್ ಕ್ಯಾಥೋಲಿಕ್ ಸಂಘದ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಬಿ.ಎಸ್.ಶಾಂತಪ್ಪ, ಗೌರವ ಸಲಹೆಗಾರರಾಗಿ ಡೆನಿಲ್ ನರೋನ, ಸಹ ಕಾರ್ಯದರ್ಶಿಯಾಗಿ ರೀಟಾ ಮೆನೆಜಸ್ ಕೂಡಿಗೆ, ಉಪಾಧ್ಯಕ್ಷರುಗಳಾಗಿ ಗ್ರೇಸಿ ಸುಂಟಿಕೊಪ್ಪ, ಬ್ಲೇಜಿ ಕ್ರಾಸ್ತಾ ಕುಶಾಲನಗರ, ಸಿಸಿಲಿ ಜೋಸೆಫ್ ಕೂಡಿಗೆ, ಸಾಜಿ ಬೈಲಿ ಚೆಟ್ಟಳ್ಳಿ, ಅಲೆಕ್ಸ್ 7ನೇ ಹೊಸಕೋಟೆ, ಖಜಾಂಜಿಯಾಗಿ ಆಲ್ಬರ್ಟ್ ಗಾನ್ಸ್ವೆಲ್ಸ್, ಮಹಿಳಾ ಪ್ರತಿನಿಧಿಯಾಗಿ ಜಾನ್ಸಿ ಪೀಟರ್ ಕೂಡಿಗೆ, ಸಾಮಾಜಿಕ ಜಾಲತಾಣದ ಪ್ರಮುಖರಾಗಿ ರೇಷ್ಮಾ ವಿ. ಪ್ರಸಾದ್ ಕೂಡಿಗೆ ಆಯ್ಕೆಗೊಂಡರು. ಸುಂಟಿಕೊಪ್ಪ, ಕುಶಾಲನಗರ, ಚೆಟ್ಟಳ್ಳಿ, ಕೂಡಿಗೆ ಮತ್ತು 7ನೇ ಹೊಸಕೋಟೆ ಈ 5 ಧರ್ಮಕೇಂದ್ರಗಳಿಂದ ಸದಸ್ಯರುಗಳನ್ನು ಆಯ್ಕೆ ಮಾಡಿ ನೂತನ ಕುಶಾಲನಗರ ತಾಲ್ಲೂಕು ಘಟಕದ ಸಮಿತಿಯನ್ನು…

Read More

ನವದೆಹಲಿ NEWS DESK ಸೆ.18 ; ಕೊಡಗು ಮತ್ತು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕಾಡಾನೆಗಳ ನಿರಂತರ ದಾಳಿಯಿಂದ ಕೃಷಿ ಕ್ಷೇತ್ರಕ್ಕೆ ನಷ್ಟವಾಗುತ್ತಿದೆ ಮತ್ತು ಮಾನವರ ಮೇಲೂ ದಾಳಿಗಳಾಗುತ್ತಿದೆ. ಆದ್ದರಿಂದ ಕಾಡಾನೆಗಳು ಕಾಡು ಬಿಟ್ಟು ನಾಡಿಗೆ ಲಗ್ಗೆ ಇಡುವುದನ್ನು ತಡೆಯಲು ಹೆಚ್ಚಿನ ಪ್ರಮಾಣದ ರೈಲ್ವೆ ಬ್ಯಾರಿಕೇಡ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸಂಸದರು ಸಚಿವರಲ್ಲಿ ಮನವಿ ಮಾಡಿದರು.

Read More

ಮಡಿಕೇರಿ ಸೆ.18 NEWS DESK : ಪರಿಸರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಿಡ ನೆಡುವ ಮೂಲಕ ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಸ್ವಚ್ಛತಾಹೀ ಸೇವಾ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅ.2 ರ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. “ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ” ಘೋಷ ವಾಕ್ಯದೊಂದಿಗೆ ಈ ಬಾರಿಯ ಸ್ವಚ್ಛತಾಹೀ ಸೇವಾ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಅವರು ತಿಳಿಸಿದರು. ಕೊಡಗು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಈ ಅಭಿಯಾನವೂ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ‌ ಮಾಡಿಕೊಡುತ್ತದೆ ಎಂದರು. ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಭಾಗವಹಿಸುವಿಕೆಯೊಂದಿಗೆ ಸ್ಥಳವನ್ನು ಸ್ವಚ್ಛ…

Read More

ಮಡಿಕೇರಿ NEWS DESK ಸೆ.18 : ಮೈಸೂರು-ಕೊಡಗು ರೈಲು ಮಾರ್ಗದ ಅಭಿವೃದ್ಧಿಯ ಕುರಿತು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜಿ. ಅವರನ್ನು ಭೇಟಿಯಾಗಿ ಚರ್ಚಿಸಿದರು. ತಿರುಪತಿಯಿಂದ ಬೆಂಗಳೂರು ಮತ್ತು ಮೈಸೂರಿಗೆ ಮಾರ್ಗ ಸಂಪರ್ಕಿಸುವುದರಿಂದ ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರಸ್ತಾವಿತ ಅಭಿವೃದ್ಧಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ವಿನಂತಿಸಿಕೊಂಡ ಸಂಸದರು, ಇದರಿಂದ ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಿದಂತಾಗುತ್ತದೆ ಎಂದು ತಿಳಿಸಿದರು. ಮಹಾರಾಜ ಕೋಚ್ ನ್ನು ಮೈಸೂರಿಗೆ ಸ್ಥಳಾಂತರಿಸುವುದು ಮತ್ತು ಪಾರಂಪರಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸೂಕ್ತ ಎಂದು ವಿವರಿಸಿದರು.

Read More