ಸುಂಟಿಕೊಪ್ಪ ಸೆ.18 NEWS DESK : ಸುಂಟಿಕೊಪ್ಪ ಜೆಸಿಐ ಸಂಸ್ಥೆ ಹಾಗೂ “ವಿಷನ್ ಸ್ಪ್ರಿಂಗ್” ಸಂಯುಕ್ತಾಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರದಲ್ಲಿ 162 ಮಂದಿ ತಪಾಸಣೆಗೆ ಒಳಗೊಂಡು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಪಡೆದರು. ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯನ ದೇಹದಲ್ಲಿ ಕಣ್ಣು ಪ್ರಧಾನ ಅಂಗವಾಗಿದ್ದು, ಅದನ್ನು ಸೂಕ್ಷ್ಮತೆಯಿಂದ ಕಾಪಾಡಿಕೊಳ್ಳಬೇಕು. ಕಣ್ಣಿನ ದೃಷ್ಟಿಯು ಸರಿಯಾಗಿದ್ದರೆ ಸ್ವತಂತ್ರವಾಗಿ ಜೀವಿಬಹುದೆಂದು ಅವರು ಹೇಳಿದರು. ಶಿಬಿರವನ್ನು ನಡೆಸಿಕೊಟ್ಟ ನೇತ್ರ ತಜ್ಞ ಡಾ.ಅವಿನಾಶ್ ಮಾತನಾಡಿ, ಸ್ವಯಂ ಸೇವ ಸಂಸ್ಥೆಗಳು ಸಮಾಜಮುಖಿಯಾಗಿ ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು. ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಸಂಪತ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದಲ್ಲಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಡೆನ್ನಿಸ್ ಡಿಸೋಜ, ಜಿ.ಬಿ.ಹರೀಶ್, ಹೆಚ್.ಆರ್.ಅರುಣ್ ಕುಮಾರ್, ಪ್ರೀತಂ ಪ್ರಭಾಕರ್ ಸದಸ್ಯ ನಿಯಾಜ್ ಸೇರಿದಂತೆ ಇತರರು ಹಾಜರಿದ್ದರು.
ಲೇಖಕ: admin
ಪೆರಾಜೆ ಸೆ.18 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸಹಕಾರ ಸಂಘವು ವರದಿ ವರ್ಷದಲ್ಲಿ 193 ಕೋಟಿ ವಾರ್ಷಿಕ ವ್ಯವಹಾರವನ್ನು ನಡೆಸಿ 38.47 ಲಕ್ಷ ಲಾಭಗಳಿಸಿದೆ. ವಿಶೇಷವಾಗಿ ರಬ್ಬರ್ ವ್ಯವಹಾರ ಮಾಡಿದ ಸದಸ್ಯರುಗಳಿಗೆ ಕೆ.ಜಿಗೆ ರೂ 2 ರಂತೆ ಪ್ರೋತ್ಸಾಹ ಧನವನ್ನು ನೀಡಲು 5.95 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ. ಸದಸ್ಯರಿಗೆ ಶೇ. 8 ರಂತೆ ಡಿವಿಡೆಂಡ್ ಘೋಷಿಸಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಉಪಾಧ್ಯಕ್ಷ ಪಿ.ಎಂ.ಅಶೋಕ, ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಪ್ರದೀಪ ಕೆ.ಎಂ, ದೀನರಾಜ್ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಪಿ.ಟಿ.ಜಯರಾಮ, ಕಿರಣ್ ಬಂಗಾರಕೋಡಿ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಕೆ.ಜಿ.ಶ್ರೀನಿವಾಸ್…
ಮಡಿಕೇರಿ ಸೆ.17 NEWS DESK : ಸಂಕಷ್ಟದ ಬದುಕು ಸವೆಸುತ್ತಿರುವ ಜಿಲ್ಲಾ ವ್ಯಾಪ್ತಿಯ ದುಡಿಯುವ ವರ್ಗಕ್ಕೆ ನಿವೇಶನ ಅಥವಾ ವಸತಿ ಒದಗಿಸುವಲ್ಲಿ ಅಧಿಕಾರಕ್ಕೆ ಬಂದ ಪ್ರತಿ ಸರ್ಕಾರಗಳು ವಿಫಲವಾಗುತ್ತಿವೆ. ನಿವೇಶನ ರಹಿತರ ಕಡೆಗಣನೆಯನ್ನು ಖಂಡಿಸಿ ಸೆ.23 ರಂದು ದಕ್ಷಿಣ ಕೊಡಗಿನ ಪೊನ್ನಂಪೇಟೆಯಲ್ಲಿ ಮತ್ತು ಅ.3 ರಂದು ಸೋಮವಾರಪೇಟೆ ತಾಲ್ಲೂಕು ಕಚೇರಿಯ ಎದುರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾ ಸಹ ಕಾರ್ಯದರ್ಶಿ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐ, ಕಾರ್ಮಿಕ ಸಂಘಟನೆ ಎಐಟಿಯುಸಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ 2002 ರಿಂದ ನಿರಂತರವಾಗಿ ನಿವೇಶನಕ್ಕಾಗಿ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಆರು ಸಾವಿರಕ್ಕೂ ಹೆಚ್ಚಿನ ಬಡ ಕೂಲಿ ಕಾರ್ಮಿಕ ಮಂದಿ ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೆ ಆಡಳಿತ ವ್ಯವಸ್ಥೆ ಇಲ್ಲಿಯವರೆಗು ಸ್ಪಂದಿಸಿಲ್ಲವೆಂದು ಆರೋಪಿಸಿದರು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ…
ಮಡಿಕೇರಿ ಸೆ.17 NEWS DESK : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನೇಮಕಾತಿ ಪರೀಕ್ಷೆಯು ಡಿ.8 ರಂದು ನಿಗಧಿಯಾಗಿದೆ. ಈ ನೇಮಕಾತಿ ಪರೀಕ್ಷೆಯ ತಯಾರಿಗಾಗಿ ಸೆಪ್ಟೆಂಬರ್, 23 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ನಲ್ಲಿ ಉಚಿತ ಕಾರ್ಯಾಗಾರ ಆಯೋಜಿಸಲಾಗಿದ್ದು, ನುರಿತ ವಿಷಯ ತಜ್ಞರಿಂದ ಮಾರ್ಗದರ್ಶನ ನೀಡಲಾಗುವುದು. ಆಸಕ್ತ ಪದವೀಧರ ವಿದ್ಯಾರ್ಥಿಗಳು ಈ ಅವಕಾಶದ ಉಪಯೋಗಪಡೆದುಕೊಳ್ಳಲು ಸೆ.22 ರೊಳಗೆ ಮೊಬೈಲ್ ಸಂಖ್ಯೆ 8660217739 ಸಂಪರ್ಕಿಸಿ ಈ ಉಚಿತ ಕಾರ್ಯಾಗಾರಕ್ಕೆ ಹೆಸರು ನೋಂದಣಿ ಮಾಡಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್ನ ಕಾರ್ಯದರ್ಶಿ ತಿಳಿಸಿದ್ದಾರೆ.
ಮಡಿಕೇರಿ ಸೆ.17 NEWS DESK : ಆಲೂರು ಸಿದ್ದಾಪುರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಗೋಣಿಮರೂರು ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಸೆಪ್ಟೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಾಣಾವರ, ಸಂಗಯ್ಯನಪುರ, ಭುವಂಗಾಲ, ಗೋಣಿಮರೂರು, ಗಣಗೂರು, ಉಂಜಿಗನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.17 NEWS DESK : ಸೋಮನಾಥಪುರ ದೇವಾಲಯ ಸೇರಿದಂತೆ ವಿವಿಧ ದೇವಾಲಯ ಹಾಗೂ ಮೂರ್ತಿ/ ಪ್ರತಿಮೆಗಳ ಕೆತ್ತನೆಯಲ್ಲಿ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ ಎಂದು ಸಾಹಿತಿ ಡಾ.ಜೆ.ಸೋಮಣ್ಣ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಂಸ್ಕೃತಿ, ಆಚಾರ-ವಿಚಾರದಲ್ಲಿ ಹಾಗೂ ಕುಲಕಸುಬುನಲ್ಲಿ ವಿಶ್ವಕರ್ಮ ಸಮಾಜದವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ಸೋಮಣ್ಣ ಹೇಳಿದರು. ಎಂಜಿನಿಯರ್ಗಳ ರೀತಿಯಲ್ಲಿ ವಿಶ್ವಕರ್ಮರು ಮರ, ಚಿನ್ನ ಕೆತ್ತನೆ, ಕಬ್ಬಿಣ ಕೆಲಸ ಹೀಗೆ ಹಲವು ರೀತಿಯ ವೃತ್ತಿ ಕೌಶಲ್ಯದಲ್ಲಿ ತೊಡಗಿಸಿಕೊಂಡು ಕಾಯಕವೇ ಕೈಲಾಸ ಎಂಬಂತೆ ವೃತ್ತಿಯನ್ನೇ ಕುಲಕಸುಬನ್ನಾಗಿ ಮಾಡಿಕೊಂಡು ಮುನ್ನಡೆಯುತ್ತಾರೆ ಎಂದು ಸೋಮಣ್ಣ ನುಡಿದರು. ಪ್ರಾಚೀನ ಕಾಲದಲ್ಲಿ ದೇವಾನುದೇವತೆಗಳ ಸೃಷ್ಠಿಕರ್ತರು ವಿಶ್ವಕರ್ಮರಾಗಿದ್ದಾರೆ. ಸಿಂಧೂ ಬಯಲಿನ ನಾಗರಿಕತೆಯಂತೆ ದೇಶದಲ್ಲಿ ಹಲವು ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ವೆಂಕಟ್ ರಾಜಾ…
ಕುಶಾಲನಗರ, ಸೆ.17 NEWS DESK : ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕೂಡಿಗೆ ಕ್ಲಸ್ಟರ್ ನ ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲ್ಲೂಕುಮಟ್ಟದ ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಸಂತಸದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿಜ್ಞಾನ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಲು ಇಂತಹ ವಿಜ್ಞಾನ ಸ್ಪರ್ಧೆಗಳು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಕುತೂಹಲ ಹಾಗೂ ಮಹತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ವಸ್ತು ಪ್ರದರ್ಶನಗಳು ಪ್ರಮುಖ ಪಾತ್ರ ವಹಿಸುತ್ತದೆ. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ…
ಮಡಿಕೇರಿ ಸೆ.17 NEWS DESK : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಕೊಡಗು ಘಟಕದ ವತಿಯಿಂದ ಮಡಿಕೇರಿಯ ಆರೋಹಣ ಯೋಗ ಮತ್ತು ಚಾರಣಿಗರ ತಂಡದ 31 ಸದಸ್ಯರು ಚಾರ್ ಧಾಮ್ ಯಾತ್ರೆ ಕೈಗೊಂಡಿದ್ದಾರೆ. ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಭಾಸ್ಕರ್ ಮತ್ತು ಭಾರತೀಯ ವಿದ್ಯಾ ಭವನದ ಕಾರ್ಯದರ್ಶಿ ಬಾಲಾಜಿ ಕಶ್ಯಪ್ , ಯೂತ್ ಹಾಸ್ಟೆಲ್ ಅಸೋಸಿಯೇಶನ್ ನ ಅಧ್ಯಕ್ಷ ಅಯ್ಯಣ್ಣ, ರಾಜಶೇಖರ್, ಯೂತ್ ಹಾಸ್ಟೆಲ್ ನ ಪ್ರಧಾನ ಕಾರ್ಯದರ್ಶಿ ಅಯ್ಯಣ್ಣ, ಹಿರಿಯ ವೈದ್ಯರಾದ ಡಾ.ಮನೋಹರ್ ಜಿ.ಪಾಟ್ಕರ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಸದಸ್ಯರು, ಆರೋಹಣ, ಯೋಗ ತಂಡದ ಸದಸ್ಯರು ಹಾಗೂ ಮತ್ತಿತರರು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭ ಆರೋಹಣ ಚಾರಣ ತಂಡದ ಸಂಸ್ಥಾಪಕರು, ಚಾರ್ ಧಾಮ್ ಯಾತ್ರೆಯ ನೇತೃತ್ವ ವಹಿಸಿರುವ ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.
ಮಡಿಕೇರಿ ಸೆ.17 NEWS DESK : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಗುತ್ತಿದ್ದು, ನ.25ರ ಒಳಗೆ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.80 ಕ್ಕಿಂತ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿಯುಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿ.ಇ.ಟಿ ಯಲ್ಲಿ 1000 ರ್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ (ನೀಟ್) ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು. ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ನ.25ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು ಎಂದು ಹೇಳಿದ್ದಾರೆ. ವೈದ್ಯಕೀಯ,…
ಸಿದ್ದಾಪುರ ಸೆ.17 NEWS DESK : ಅಮ್ಮತ್ತಿಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪಾಲ್ಗೊಂಡು ಪ್ರಥಮ, ದ್ವಿತೀಯ ಸ್ಥಾನ ಗಳಿಸುವ ಮೂಲಕ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.






