ಲೇಖಕ: admin

ಮಡಿಕೇರಿ ಸೆ.17 NEWS DESK  : ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖರಾದ ಸರ್.ಎಂ.ವಿಶ್ವೇಶ್ವರಯ್ಯರವರು ಸಾಹಿತ್ಯ ಸಂಸ್ಕೃತಿಯನ್ನು ಬೆಳೆಸುವಲ್ಲಿ ದಾರ್ಶನಿಕರಾಗಿ ದುಡಿದವರು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಕರಲ್ಲಿ ಒಬ್ಬರಾದ ಸರ್.ಎಂ ವಿಶ್ವೇಶ್ವರಯ್ಯ ಅವರು 164ನೇ ಜನ್ಮದಿನಾಚರಣೆಯ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನವನ್ನು ಇಂಜಿನಿಯರ್ಸ್ ಡೇ – ಅಭಿಯಂತರರ ದಿನವನ್ನಾಗಿ ಕರ್ನಾಟಕ ಸರ್ಕಾರ ಆಚರಿಸುತ್ತಿದೆ. 15.09.1861ರಲ್ಲಿ ಶ್ರೀನಿವಾಸ ಶಾಸ್ತ್ರಿ ಮತ್ತು ವೆಂಕಟಲಕ್ಷ್ಮಮ್ಮ ದಂಪತಿಗಳ ಪುತ್ರನಾಗಿ ಇಂದಿನ ಕೋಲಾರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಜನ್ಮ ಪಡೆದರು. ಇವರು ಬೆಂಗಳೂರು ಮತ್ತು ಪೂನಾದಲ್ಲಿ ವಿದ್ಯಾಭ್ಯಾಸ ಪಡೆದು ಇಂಜಿನಿಯರ್ ಪದವೀಧರರಾದರು.ಮುಂಬೈ ಕರ್ನಾಟಕದ ಕುಡಿಯುವ ನೀರು ಯೋಜನೆ, ಹೈದರಾಬಾದ್ ನಿಜಾಮರ ಆಡಳಿತದಲ್ಲಿ ಹೈದರಾಬಾದಿಗೆ ಒಳಚರಂಡಿ ನಿರ್ಮಾಣ ಕಾರ್ಯ ರಚಿಸಿದರು.…

Read More

ಮಡಿಕೇರಿ NEWS DESK ಸೆ.16 : ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮಡಿಕೇರಿಯ ಬದ್ರಿಯಾ ಮಸೀದಿಯಲ್ಲಿ ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಅಮ್ಮನ ಕಾಲಡಿಯಲ್ಲಿ ಸ್ವರ್ಗವಿದೆ ಎಂದು ಕಲಿಸಿದ ಪ್ರವಾದಿ {ಸ} ಅವರ ಮಾರ್ಗದರ್ಶನವನ್ನು ನಾವು ಪಾಲಿಸಬೇಕು, ವಯಸ್ಸಾದ ತಂದೆ ತಾಯಿಯನ್ನು ಕಡೆಗಣಿಸಬಾರದು ಎಂದು ಪ್ರಮುಖರು ಕರೆ ನೀಡಿದರು. ಪ್ರಮುಖರಾದ ಖಾದರ್ ಬಾಖವಿ, ಜಾಮಿಯಾ ಮಸೀದಿ ಇಮಾಮ್ ಮೌ| ನಾಸಿರುದ್ದೀನ್ ಶಾ, ಜಾಮೀಯಾ ಮಸೀದಿ ಅಧ್ಯಕ್ಷ ನಝೀರ್ ಅಹಮದ್, ಬದ್ರಿಯಾ ಮಸೀದಿ ಅಧ್ಯಕ್ಷ ಅಮಿನ್ ಮೊಹ್ಸಿನ್, ನಗರಸಭಾ ಸದಸ್ಯ ಮನ್ಸೂರ್ ಅಹಮದ್, ಮದ್ರಸ ಮುಖ್ಯ ಉಪಾಧ್ಯಾಯ ಹನೀಫ್ ಪೈಝಿ ಉಪಸ್ಥಿತರಿದ್ದರು. ಈದ್ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Read More

ಮಡಿಕೇರಿ NEWS DESK ಸೆ.16 : ಕರ್ನಾಟಕ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕುಶಾಲನಗರ ಜ್ಞಾನಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಲ್.ಚಂದ್ರಕಲಾ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜು ಹೊರಟ್ಟಿ, ಸಚಿವರುಗಳಾದ ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಚಂದ್ರಕಲಾ ಪ್ರಶಸ್ತಿ ಪಡೆದರು.

Read More

ಮಡಿಕೇರಿ NEWS DESK ಸೆ.16 : ಕೊಡಗು ಜಿಲ್ಲೆಯಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಮಾಜ ಸೇವೆಯ ಮುಖವಾಡ ತೊಟ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಶೀಘ್ರ ತಡೆಯದಿದ್ದಲ್ಲಿ ಕೇರಳದ ವಯನಾಡು ಮಾದರಿಯ ಪ್ರಾಕೃತಿಕ ದುರಂತ ಇಲ್ಲಿಯೂ ಸಂಭವಿಸಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಹುದಿಕೇರಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಮಾಜ ಸೇವೆಯ ಮುಖವಾಡ ತೊಟ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಕಪ್ಪುಹಣವನ್ನು ಬಿಳಿ ಮಾಡುವುದಕ್ಕಾಗಿ ಕೊಡಗಿನ ಪ್ರಕೃತಿಯ ಮೇಲೆ ದಾಳಿ ನಡೆಸಿ ರೆಸಾರ್ಟ್, ವಿಲ್ಲಾ, ಟೌನ್…

Read More

ಗೋಣಿಕೊಪ್ಪ ಸೆ.16 NEWS DESK : ಎರಡು ಕೋಟಿ ಅನುದಾನದಲ್ಲಿ ನಡೆಯುತ್ತಿರುವ ಗೋಣಿಕೊಪ್ಪ ಬಸ್ ನಿಲ್ದಾಣದ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು.   ಈ ಸಂದರ್ಭ ಮಾತನಾಡಿದ ಶಾಸಕರು, ಕಳೆದ ಹತ್ತು ವರ್ಷಗಳಿಂದ ಜನರ ಬಹು ಬೇಡಿಕೆಯಾಗಿದ್ದ ಬಸ್ ನಿಲ್ದಾಣ ಇದಾಗಿದ್ದು, ನೂತನ ವರ್ಷಾರಂಭದಲ್ಲಿ ನಾಗರಿಕರ ಸೇವೆಗೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು. ಈ ಸಂದರ್ಭ ಪಕ್ಷದ ಮುಂಡರು ಹಾಜರಿದ್ದರು.

Read More

ಮಡಿಕೇರಿ ಸೆ.16 NEWS DESK :  ಎತ್ತಿನಗಾಡಿ ಬಿದ್ದು ಮೃತಪಟ್ಟ ತೊರೆನೂರು ಗ್ರಾಮದ ಟಿ.ಎಂ.ತರುಣ್ ಎಂಬ ಶಾಲಾ ಬಾಲಕ ಮನೆಗೆ ಶಾಸಕ ಡಾ.ಮಂತರ್ ಗೌಡ  ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ  ಕುಶಾಲನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಸ್ಥಳೀಯ ಮುಖಂಡರುಗಳು, ಗ್ರಾಮಸ್ಥರು ಹಾಜರಿದ್ದರು.

Read More

ಸೋಮವಾರಪೇಟೆ ಸೆ.16 NEWS DESK : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಕ್ಕೆಹೊಳೆ ಜಂಕ್ಷನ್‍ನಿಂದ ಜೇಸಿವೇದಿಕೆಯ ವರಗೆ ಮಾನವ ಸರಪಳಿ ರಚಿಸಿ ಭಾರತ ಸಂವಿಧಾನ ಪ್ರಸ್ತಾವನೆ ಓದಲಾಯಿತು. ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ, ನಾಡಗೀತೆ ಹಾಡಿದರು. ಬಾಣಾವರ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಪ್ರತಿಮೆಯ ಪಕ್ಕದಲ್ಲಿ ಸಸಿಯನ್ನು ನೆಡಲಾಯಿತು. ಈ ಸಂದರ್ಭ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಪ.ಪಂ ಮುಖ್ಯಾಧಿಕಾರಿ ನಾಚಪ್ಪ, ಎಸಿಎಫ್ ಗೋಪಾಲ್, ಪ್ರಮುಖರಾದ ಬಿ.ಇ.ಜಯೇಂದ್ರ, ಡಿ.ಎಸ್.ನಿರ್ವಾಣಪ್ಪ, ಹೊನ್ನಪ್ಪ ಇದ್ದರು.

Read More

ಮಡಿಕೇರಿ ಸೆ.16 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅಕ್ಟೋಬರ್ 5 ರಂದು ನಗರದ ಗಾಂಧಿ ಮೈದಾನದಲ್ಲಿ 11 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ವಿದ್ಯಾಥಿ೯ಗಳಿಗಾಗಿ ಮಕ್ಕಳ ದಸರಾ ಸ್ಪಧೆ೯ಗಳು ಅ. 5 ರಂದು ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ. ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ ::  ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾಥ೯ಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ. ಮಕ್ಕಳ ಮಂಟಪ :: 10 ನಿಮಿಷದ ಪ್ರದಶ೯ನಾವಧಿಯುಳ್ಳ ಮಂಟಪ ಸ್ಪಧೆ೯ಯಲ್ಲಿ…

Read More

ಸೋಮವಾರಪೇಟೆ ಸೆ.16 NEWS DESK : ಮಲಯಾಳಿ ಬಾಂಧವರ ಪ್ರಮುಖ ಹಬ್ಬವಾದ ಓಣಂ ಅನ್ನು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಮನೆ ಮನೆಗಳಲ್ಲಿ ಸಂಭ್ರಮದಿಂದ ಆಚರಿಸಿದರು. ಮಹಿಳೆಯರು ಮನೆಯ ಎದುರು ಹೂವುಗಳಿಂದ ಪೂಕಳಂ ರಚಿಸಿ ಸಂಭ್ರಮಿಸಿದರು. ಪುರುಷರೂ ಸಹ ಶ್ವೇತ ವರ್ಣದ ವಸ್ತ್ರಗಳನ್ನು ಧರಿಸಿ ಪೂಕಳಂ ಹಾಕುವುದರಲ್ಲಿ ಭಾಗಿಯಾದರು. ಹಬ್ಬದ ವಿಶೇಷ ಖಾದ್ಯಗಳನ್ನು ಮಾಡಿ ಸವಿದ ಹಬ್ಬಾಚರಣೆ ಮಾಡಿದರು. ಸೋಮವಾರಪೇಟೆ ತಾಲ್ಲೂಕಿನ ಐಗೂರು ಗ್ರಾಮದ ಪದ್ಮಾವತಿ ಮತ್ತು ಮೊಮ್ಮಕ್ಕಳು ವಿವಿಧ ಹೂವಿನ ಪೂಕಳಂ ಬಿಡಿಸಿ ಓಣಂ ಆಚರಿಸಿದರು.

Read More

ಸೋಮವಾರಪೇಟೆ ಸೆ.16 NEWS DESK : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ 1.19 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ರೂಪಾ ಸತೀಶ್ ಹೇಳಿದರು. ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಂಘದಲ್ಲಿ 5209 ಮಂದಿ ಸದಸ್ಯರಿದ್ದು, ಪ್ರಸಕ್ತ ಅವಧಿಯಲ್ಲಿ 300 ಮಂದಿ ನೂತನವಾಗಿ ಸದಸ್ಯರಾಗಿದ್ದಾರೆ. 380 ಕೋಟಿ ರೂ., ವ್ಯವಹಾರ ಮಾಡಲಾಗಿದೆ. ಸದಸ್ಯರಿಗೆ ಶೆ.22 ಲಾಭಾಂಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಸಂಘದ ಒಟ್ಟು ದುಡಿಯುವ ಬಂಡವಾಳ 77.26 ಕೋಟಿ ರೂ., ಆಗಿದ್ದು, ಸಂಘದಲ್ಲಿ ಜಾಮೀನು ಸಾಲದ ವಿಮಾ ಯೋಜನೆ, ಪಿಗ್ಮಿ ಓವರ್‍ಡ್ರಾಫ್ಟ್ ಸಾಲದ ವಿಮಾ ಯೋಜನೆ, ಸ್ವಸಹಾಯ ಮತ್ತು ಜಂಟಿ ಭಾದ್ಯತಾ ಗುಂಪುಗಳ ಯೋಜನೆಯನ್ನು ರೂಪಿಸಲಾಗಿದೆ. ಹಿಂದಿನಿಂದ ಇಲ್ಲಿಯವರೆಗೂ ಸಂಘವು ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ಎ. ತರಗತಿಯನ್ನು ಪಡೆದುಕೊಂಡಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಸಂಘದಲ್ಲಿ ಯಶಸ್ವಿನಿ ರೈತರ ವಿಮಾ ಯೋಜನೆ ಜಾರಿಯಲ್ಲಿದ್ದು, 2023-24ನೇ…

Read More