ಮಡಿಕೇರಿ ಫೆ.16 NEWS DESK : ಈದ್ ಮಿಲಾದ್ ಅಂಗವಾಗಿ ಮಡಿಕೇರಿಯ ಬದ್ರಿಯಾ ಜಮಾಅತ್ ಆಶ್ರಯದಲ್ಲಿ ನಗರದಲ್ಲಿ ಬೃಹತ್ ಮಿಲಾದ್ ರ್ಯಾಲಿ ನಡೆಯಿತು. ನಗರದ ಗದ್ದುಗೆ ಬಳಿಯಿಂದ ಆರಂಭಗೊಂಡ ಜಾಥಾ ಹಳೆ ಖಾಸಗಿ ಬಸ್ ನಿಲ್ದಾಣದ ಮಾರ್ಗವಾಗಿ ತೆರಳಿ ಜಮಾಅತ್ ಸಭಾಂಗಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ದಫ್ ಪ್ರದರ್ಶನ ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಶಾಂತಿ, ಸಂದೇಶಗಳನ್ನು ಸಾರಿದರು. ಬದ್ರಿಯಾ ಜಮಾಅತ್ ಅಧ್ಯಕ್ಷ ಅಮಿನ್ ಮೊಹ್ಸಿನ್ ಅಧ್ಯಕ್ಷತೆಯಲ್ಲಿ ನಡೆದ ಜಾಥದಲ್ಲಿ ಸಹಾಯಕ ಖದೀಬ್ ಹನಿಫ್ ಫೈಝಿ, ಜಮಾಅತ್ ಹಿಮಾಮ್ ನಜೀಮ್ ಅತ್ತರ್, ಸಮಿತಿ ಸದಸ್ಯ ಅಹಮ್ಮದ್, ಎಂ.ಎಂ.ಮಸೀದಿ ಕಾರ್ಯದರ್ಶಿ ಹಾರುಲ್ ಸೇರಿದಂತೆ ಮತ್ತಿತರರು ಇದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಮಹೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಲೇಖಕ: admin
ಮಡಿಕೇರಿ ಸೆ.16 NEWS DESK : ಒಕ್ಕಲಿಗ ಜನಾಂಗದ ವಿರುದ್ಧ ಹೇಳಿಕೆ ನೀಡಿರುವ ಮತ್ತು ಒಕ್ಕಲಿಗ ಮಹಿಳೆಯ ಬಗ್ಗೆ ಆಕ್ಷೇಪಾರ್ಹ ಪದ ಬಳಸಿರುವ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಸೋಮವಾರಪೇಟೆ ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ಅಧ್ಯಕ್ಷ ಎಂ.ಕೆ.ದಿನೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಒಕ್ಕಲಿಗ ಸಮುದಾಯದ ಬಗ್ಗೆ ಘರ್ಷಣೆಗೆ ಪ್ರಚೋದನೆ ಉಂಟು ಮಾಡುವ ರೀತಿಯಲ್ಲಿ ಮುನಿರತ್ನ ಅವರು ಮಾತನಾಡಿದ್ದಾರೆ ಮತ್ತು ಒಕ್ಕಲಿಗ ಮಹಿಳೆಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮೂಡಿಸುವ ಜವಾಬ್ದಾರಿ ಹೊತ್ತಿರುವ ಜನಪ್ರತಿನಿಧಿಯೊಬ್ಬರು ತಮ್ಮ ಲಾಭಕ್ಕಾಗಿ ಜನಾಂಗಗಳ ನಡುವೆ ದ್ವೇಷ ಹುಟ್ಟಿಸಲು ಮುಂದಾಗಿರುವುದು ಖಂಡನೀಯ. ಒಕ್ಕಲಿಗ ಸಮಾಜ ಮತ್ತು ಒಕ್ಕಲಿಗ ಮಹಿಳೆಯ ಬಗ್ಗೆ ಮುನಿರತ್ನ ಅವರು ನೀಡಿರುವ ಕೀಳು ಮಟ್ಟದ ಹೇಳಿಕೆಯನ್ನು ಯಾರೂ ಸಮರ್ಥಿಸಬಾರದು ಎಂದು ಒತ್ತಾಯಿಸಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿರುವುದು, ಎರಡು…
ಸೋಮವಾರಪೇಟೆ ಸೆ.16 NEWS DESK : ಭಾರತದ ಸೈನ್ಯಕ್ಕೆ ಕೊಡವರ ಕೊಡುಗೆ ಅಪಾರ ಎಂದು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಹೇಳಿದರು. ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ನಡೆದ ಮಂಡೆಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿನಿಧಿ ಕಾರ್ಯಕ್ರಮದಲ್ಲಿ ಕೊಡವ ಸಂಸ್ಕೃತಿ , ಮಹಿಳೆ, ಸಾಹಿತ್ಯ, ಸಾಹಿತಿಗಳು, ಫಿ.ಮಾ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸಾಧನೆಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕೊಡವರು, ವೀರರು, ಶೂರರು ಎಂದು ಕರೆಯಬೇಕಾದರೆ ಕಾರಣವೂ ಇದೆ. ವಿಶ್ವ ಮಹಾಯುದ್ಧದ ಕಾಲದಲ್ಲೇ ಮನೆಗೊಬ್ಬರರಂತೆ ಸೈನ್ಯಕ್ಕೆ ಸೇರುತ್ತಿದ್ದರು. ಹುಟ್ಟಿನಿಂದಲೇ ಶೂರತ್ವ ಅವರಿಗೆ ಇದೆ. ಗಂಡು ಮಗು ಜನಿಸಿದರೆ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸುವುದು ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಮನೆಯಲ್ಲಿ ಇಬ್ಬರು ಗಂಡು ಮಕ್ಕಳು ಜನಿಸಿದರೆ, ಒಬ್ಬರನ್ನು ಸೈನ್ಯಕ್ಕೆ ಕಳುಹಿಸುತ್ತಿದ್ದರು ಎಂದು ಹೇಳಿದರು. ಕೊಡವರು ಪ್ರಕೃತಿ ಮತ್ತು ಆಗ್ನಿ ಅರಾಧಕರು, ಇವತ್ತಿಗೂ ಮದುವೆಯಂತಹ ಶುಭಕಾರ್ಯಗಳು ವೈದಿಕ ಪದ್ದತಿಯಂತೆ ನಡೆಯುವುದಿಲ್ಲ. ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶವನ್ನು ಕಲ್ಪಿಸಿರುವ ಜನಾಂಗವಾಗಿದೆ.…
ಮಡಿಕೇರಿ ಸೆ.16 NEWS DESK : ಮಲಯಾಳಿ ಸಮುದಾಯದ ಪ್ರಮುಖ ಹಬ್ಬವಾದ ತಿರು ಓಣಂ ಅನ್ನು ಜಿಲ್ಲೆಯಾದ್ಯಂತ ಮಲಯಾಳಿ ಸಮುದಾಯದವರು ಸಂಭ್ರಮದಿಂದ ಆಚರಿಸಿದರು. ಹೂವಿನ ರಂಗೋಲಿ (ಪೂಕಳಂ)ಯನ್ನು ಮನೆ ಎದುರು ರಚಿಸಿ ಮನೆ ಹಾಗೂ ದೇವಾಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಓಣಂ ಹಬ್ಬದ ವಿಶೇಷ ಖಾದ್ಯಗಳನ್ನು ಮಾಡಿ ಸವಿದು ಹಬ್ಬಾಚರಣೆ ಮಾಡಿದರು.
ಕುಶಾಲನಗರ ಸೆ.16 NEWS DESK : ಪ್ರವಾದಿ ಮುಹಮ್ಮದ್ ಪೈಗಂಬರ್ ರ 1499ನೇ ವರ್ಷದ ಜನ್ಮ ದಿನಾಚರಣೆ ಹಿನ್ನಲೆ ಕುಶಾಲನಗರದ ಮುಸಲ್ಮಾನ ಸಹೋದರರಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೌಹಾರ್ದ ಜಾಥಾ ನಡೆಯಿತು. ಮೆರವಣಿಗೆಯಲ್ಲಿ ಶಾಂತಿ ಸೌಹಾರ್ದತೆಯ ಘೋಷಣೆಗಳನ್ನು ಕೂಗುವ ಮೂಲಕ ಸಮಾಜಕ್ಕೆ ಸಾಹೋದರ್ಯತೆ ಹಾಗೂ ಸಾಮರಸ್ಯದ ಸಂಕೇತವನ್ನು ಸಾರಿದರು. ದಾರುಲ್ ಉಲೂಂ ಮದ್ರಸದ ವಿದ್ಯಾರ್ಥಿಗಳಿಂದ ವಿವಿಧ ಬಗೆಯ ದಫ್ ಪ್ರದರ್ಶಿಸಲಾಯಿತು. ಮೆರವಣಿಗೆಯು ದಾರುಲ್ ಮದ್ರಸದಿಂದ ಪ್ರಾರಂಭವಾಗಿ ಕಾರ್ಯಪ್ಪ ವೃತ್ತದ ಮೂಲಕ ಹಾದುಹೋಗಿ, ದಂಡಿನಪೇಟೆಗೆ ತೆರಳಿ ನಂತರ ದಾರುಲ್ ಉಲೂಂ ಮದ್ರಸಕ್ಕೆ ಹಿಂದಿರುಗಲಾಯಿತು. ಈ ಸಂದರ್ಭ ದಾರುಲ್ ಉಲೂಂ ಮದ್ರಸದ ಅಧ್ಯಕ್ಷರು, ಪದಾಧಿಕಾರಿಗಳು, ದಾರುಲ್ ಉಲೂಂ ಮದ್ರಸದ ಅಧ್ಯಾಪಕರು, ನೂರುಲ್ ಇಹ್ಸಾನ್ ಯೂತ್ ಕಮಿಟಿ ಬಾರವಾಹಿಗಳು, ಊರಿನ ಪ್ರಮುಖರು ಹಾಗೂ ಮುಸಲ್ಮಾನ ಸಹೋದರರು ಇದ್ದರು.
ಮಡಿಕೇರಿ ಸೆ.16 NEWS DESK : ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ ಜನ್ಮ ದಿನಾಚರಣೆಯ ಈದ್ ಮಿಲಾದನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪೊನ್ನಂಪೇಟೆ ಸೆ.16 NEWS DESK : ವಿರಾಜಪೇಟೆ ತಾಲೂಕು ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ.) ಸಮಿತಿಗೆ ನೂತನ ಸದಸ್ಯರಾಗಿ ಕಾಂಗ್ರೆಸ್ ಪಕ್ಷದ 6 ಪ್ರಮುಖರನ್ನು ಸರ್ಕಾರದಿಂದ ನಾಮನಿರ್ದೇಶನಗೊಳಿಸಲಾಗಿದೆ. ಕೆದಮುಳ್ಳೂರು ಗ್ರಾಮದ ಮಾಳೇಟ್ಟಿರ ಪ್ರಶಾಂತ್ ಉತ್ತಪ್ಪ, ವಿರಾಜಪೇಟೆ ವಿಜಯನಗರದ ಮರ್ವಿನ್ ಲೋಬೊ (ಸಾಮಾನ್ಯ), ಐಮಂಗಲ ಗ್ರಾಮದ ಕೋಳುಮಂಡ ರಫೀಕ್ (ಅಲ್ಪಸಂಖ್ಯಾತ), ಆರ್ಜಿ ಗ್ರಾಮದ ಪಿ.ಎನ್. ಶಶಿಧರನ್ (ಹಿಂದುಳಿದ ವರ್ಗ), ಚೆನ್ನಯ್ಯನಕೋಟೆಯ ಹೆಚ್.ಬಿ. ಗಣೇಶ್ (ಪರಿಶಿಷ್ಟ ಜಾತಿ)ಮತ್ತು ವಿರಾಜಪೇಟೆಯ ತೋರೆರ ಜಿ.ಪೊನ್ನಕ್ಕಿ (ಮಹಿಳೆ) ಸರ್ಕಾರದಿಂದ ನಾಮ ನಿರ್ದೇಶನಗೊಂಡ ಕೆಡಿಪಿ ಸದಸ್ಯರಾಗಿದ್ದಾರೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಸರಕಾರದ 20 ವಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಈ ಸಮಿತಿ ಕಾರ್ಯನಿರ್ವಹಿಸಲಿದ್ದು, ಈ ಸಮಿತಿಗೆ ಇವರನ್ನು ಅಧಿಕಾರೇತರ ಸದಸ್ಯರಾಗಿ ಸರ್ಕಾರ ನಾಮನಿರ್ದೇಶನಗೊಳಿಸಲಾಗಿದೆ. ಈ ಕುರಿತು ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ ಅವರು ಅಧಿಕೃತ ಆದೇಶ ಹೊರಡಿಸಿದ್ದು, ಸೆ.11 ರಿಂದ ಜಾರಿಗೆ ಬರುವಂತೆ ಇವರ ಅಧಿಕಾರಾವಧಿ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ನಾಪೋಕ್ಲು ಸೆ.16 NEWS DESK : ಎಮ್ಮೆಮಾಡು ವ್ಯಾಪ್ತಿಯಲ್ಲಿನ ಅರಬ್ ಒಕ್ಕೂಟ ದಿಂದ ದುಬೈ ನಲ್ಲಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈದ್ ಆಚರಣೆಯಲ್ಲಿ ಪ್ರವಾದಿಯ ಜೀವನದ ಕುರಿತು ಹಾಜಿ ಅಹ್ಮದ್ ಉಸ್ತಾದ್ ಜಲೀಲ್ ನಿಝಾಮಿ ಹಂಝ ಬಾರಕೊಲ್ಲಿ ಸಂದೇಶ ಭಾಷಣ ಮಾಡಿದರು. ನಂತರ ಎಮ್ಮೆಮಾಡು ವಿನ ದಫ್ ತಂಡದಿಂದ ದಫ್ ಪ್ರದರ್ಶನ ನೀಡಿಸಲಾಯಿತು. ಈ ಸಂದರ್ಭ ಈ.ಸಿ.ಕಾರ್ಗೋ ಮಾಲೀಕ ಕೆ.ಎಂ.ಅಶ್ರಫ್, ಅಧ್ಯಕ್ಷರಾದ ಬಿ.ಯು.ಹಂಝ ಸೇರಿದಂತೆ ಎಮ್ಮೆಮಾಡು ವಿನ ಅನಿವಾಸಿ ಒಕ್ಕೂಟದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.16 NEWS DESK : ಸೋಮವಾರಪೇಟೆ ಯ ಚೌಡ್ಲು ಸ.ಹಿ.ಪ್ರಾ. ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಬಡ್ದಿ ತಿರ್ಪೂಗಾರರಾದ ಯಡೂರು ಆನಂದ ಅವರನ್ನು ಸನ್ಮಾನಿಸಲಾಯಿತು. ಚೌಡ್ಲು ಸಾಂದೀಪಿನಿ ಶಾಲೆಯಲ್ಲಿ ನಡೆದ ಸೋಮವಾರಪೇಟೆ ವಲಯ ಮಟ್ಟದ ಕ್ರೀಡಾಕೂಟದ ಸಭಾ ಕರ್ಯಕ್ರಮದಲ್ಲಿ ಗಣ್ಯರು ಹಾಗೂ ಶಿಕ್ಷಕರು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸಾಂದೀಪನಿ ಶಾಲೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರುಗಳು, ಶಿಕ್ಷಕ ವೃಂದ, ಚೌಡ್ಲು ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ವಲಯದ ಅಧ್ಯಕ್ಷರು, ಕಾರ್ಯದಶಿ೯, ದೈಹಿಕ ಶಿಕ್ಷಣ ಶಿಕ್ಷಕರು ಮಾತನಾಡಿ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.16 NEWS DESK : ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ತೊರೆನೂರು ಹಾಗೂ ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಯಿತು. ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜ್, ಸಹಾಯಕ ಕೃಷಿ ಅಧಿಕಾರಿ ವೀರಣ್ಣ ಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾಯಕ್ , ಪಿಡಿಓ ಎಂ.ಆರ್. ಸಂತೋಷ್ ಹಾಗೂ ಸಿ.ಆರ್.ಪಿ.ಶಾಂತಕುಮಾರ್ ಅವರ ನೇತೃತ್ವದಲ್ಲಿ ಹಾಗೂ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೂಡಿಗೆ ಡಯಟ್ ಪ್ರಾಂಶುಪಾಲ ಎಂ.ಚಂದ್ರಕಾಂತ್, ಬಿಇಓ ಎಸ್.ಭಾಗ್ಯಮ್ಮ, ಗ್ರಾ.ಪಂ.ಅಧ್ಯಕ್ಷ ಗಿರೀಶ್, ಪಿಡಿಓ ಮಂಜುಳಾ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಚುರಪಡಿಸಲಾಯಿತು. ಗ್ರಾ.ಪಂ. ಸದಸ್ಯರು ಮತ್ತು ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಕಾಲೇಜಿನ ಮುಖ್ಯಸ್ಥರು, ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಜತೆಗೂಡಿ ಮಾನವ ಸರಪಳಿ ರಚಿಸಿದರು.…






