ಲೇಖಕ: admin

ನಾಪೋಕ್ಲು ಸೆ.16 NEWS DESK : ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಕೆಪಿಎಸ್ ಶಾಲೆಯ ಎಸ್‍ಡಿಎಂಸಿ ಉಪಾಧ್ಯಕ್ಷ ಎನ್.ಎಸ್.ಉದಯಶಂಕರ್ ಹೇಳಿದರು. ಕೆಪಿಎಸ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ 2024-25ರ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ವಿಷಯಗಳಷ್ಟೇ ಪ್ರಾಮುಖ್ಯವಾಗಬಾರದು. ಪಠ್ಯೇತರ ಚಟುವಟಿಕೆಗಳಲ್ಲೂ ಉತ್ಸಾಹದಿಂದ ಪಾಲ್ಗೊಳ್ಳಬೇಕು. ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು. ಬಿ.ಆರ್.ಸಿ.ಮಂಜುಳ ಚಿತ್ರಾಪುರ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಜುಳ ಚಿತ್ರಾಪುರ ತಿಳಿಸಿದರು. ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ಕೆಪಿಎಸ್, ಶ್ರೀರಾಮ ಟ್ರಸ್ಟ್, ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸೇಕ್ರೆಡ್ ಹಾರ್ಟ್, ಎಮ್ಮೆಮಾಡು, ನೇತಾಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ನೃತ್ಯ, ಕವ್ವಾಲಿ, ರಸಪ್ರಶ್ನೆ, ಕಂಠಪಾಠ, ಮಣ್ಣಿನ ಮಾದರಿ ತಯಾರಿ, ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಮೆರೆದರು.…

Read More

ಸೋಮವಾರಪೇಟೆ ಸೆ.16 NEWS DESK : ತೋಳೂರು ಶೆಟ್ಟಳ್ಳಿ ಗ್ರಾಮದ ನಡ್ಲಕೊಪ್ಪ ಸಮಿತಿಯ ಸಭೆ ಗ್ರಾಮದ ಸಮುದಾನಭವನದಲ್ಲಿ ನಡೆಯಿತು. ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ಕೆ.ಮಾಚಯ್ಯ ಮಾತನಾಡಿ, ಕೃಷಿಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು. ವಿದ್ಯೆ ನಿಜವಾದ ಆಸ್ತಿಯಾಗಿದ್ದು, ವಿದ್ಯಾವಂತ ದೇಶದ ಸಂಪತ್ತು ಎಂದು ಅಭಿಪ್ರಾಯಿಸಿದರು. ಕುಡಿಯುವ ನೀರಿನ ವ್ಯವಸ್ಥೆ ತಲೆದೋರಿದೆ ಈ ಬಗ್ಗೆ ಶಾಸಕರ ಗಮನ ಸೆಳೆಯಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ, ವಿ.ವಿ.ಸೋಮಯ್ಯ ಖಜಾಂಚಿ ಎಂ.ಕೆ.ಧರ್ಮಪ್ಪ ಗ್ರಾಮದ ಪ್ರಮುಖರಾದ ಟಿ.ಕೆ.ಸುಬ್ಬಯ್ಯ, ಎಂ.ಬಿ.ರಾಜಪ್ಪ, ಹೆಚ್.ಎ. ಗಣೇಶ್, ಕುಮಾರಪ್ಪ, ಶಾಂತಪ್ಪ, ಶಿವಕುಮಾರ್ ಇದ್ದರು. ಸಭೆಯಲ್ಲಿ ಗ್ರಾಮ ನಿವಾಸಿ ಮಾಜಿ ಸೈನಿಕ ಹೆಚ್.ಎ.ವೆಂಕಟೇಶ್, ತೋಳೂರು ಶೆಟ್ಟಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಕೆ.ಶೇಖರ್, ಪ್ರಸಕ್ತ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಕಾಸ್ ಅವರುಗಳನ್ನು ಸನ್ಮಾನಿಸಿಗೌರ ವಿಸಲಾಂಯಿತು.

Read More

ಸೋಮವಾರಪೇಟೆ ಸೆ.16 NEWS DESK : ಶಿಕ್ಷಣದಿಂದ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ತೋಳೂರು ಶೆಟ್ಟಳ್ಳಿ ಗ್ರಾ.ಪಂ ಅಧ್ಯಕ್ಷರಾದ ಭವಾನಿ ಮಂಜುನಾಥ್ ಅಭಿಪ್ರಾಯಪಟ್ಟರು. ತೋಳೂರುಶೆಟ್ಟಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದ ಶಾಂತಳ್ಳಿ, ಗೌಡಳ್ಳಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವ ಮತ್ತು ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಲು ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಿಬೇಕು ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕು ಪ್ರಾಥಮಿಕ ಶಾಲೆಗಳ ಸಂಘದ ಉಪಾಧ್ಯಕ್ಷರಾದ ಎಲ್.ಎಂ.ಪ್ರೇಮ, ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ ರೆಡ್ಡಿ ಕಾರ್ಯಕ್ರಮದ ಉದ್ದೇಶದ ಕುರಿತು ಮಾತನಾಡಿದರು. ಪಂಚಾಯಿತಿ ಉಪಾಧ್ಯಕ್ಷೆ ಆರತಿ, ಕ್ಲಸ್ಟರ್ ಪ್ರಮುಖರಾದ ಚೈತ್ರ, ದೇವರಾಜೇಗೌಡ ಇದ್ದರು. ಸಮಾಜ ವಿಜ್ಞಾನ ಶಿಕ್ಷಕ ಶಬರಿಗಿರೀಶ್ ಸ್ವಾಗತಿಸಿದರು. ಶಿಕ್ಷಕಿಯರಾದ ಶಭಾನ ಕಾರ್ಯಕ್ರಮವನ್ನು ನಿರೂಪಿಸಿದರು. ಪೂಜಾ ವಂದಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.

Read More

ಮಡಿಕೇರಿ NEWS DESK ಸೆ.15 : ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕರೆ ನೀಡಿದ್ದಾರೆ. ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ  ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಭಾನುವಾರ ನಡೆದ ಮಾನವ ಸರಪಳಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ನಂತರ ನಾಗರಿಕರ ಬದುಕು ಸುಧಾರಿಸುತ್ತಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ ಎಂದು ಎನ್.ಎಸ್.ಭೋಸರಾಜು ಅವರು ಹೇಳಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ ಮತ್ತು ಸಹೋದರತೆ… ಈ ಅಂಶಗಳು ಪ್ರಜಾಪ್ರಭುತ್ವದ ಆಶಯಗಳಾಗಿವೆ ಎಂದು ಸಚಿವರು ತಿಳಿಸಿದರು. ಜಾತಿ, ಮತ, ಲಿಂಗ, ಧರ್ಮ ಹಾಗೂ ಯಾವುದೇ ರೀತಿಯ ಭೇದಭಾವ ಇಲ್ಲದೆ, ಸರ್ವರಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ, ಆರ್ಥಿಕ…

Read More

ಮಡಿಕೇರಿ NEWS DESK ಸೆ.15 : ಕೊಡಗಿನ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದವರಾದ, ಕೃಷಿ ಮತ್ತು ತಂತ್ರಾಗಮ ಹಾಗೂ ಜ್ಯೋತಿಷ್ಯ ಶಾಸ್ತ್ರ ಪ್ರವೀಣರಾದ ಹುಲಿತ್ತಾಳ ಉದಯ ಕುಮಾರ್‌ರಿಗೆ ಹಾಸನದ ಅರಸೀಕೆರೆ ತಾಲ್ಲೂಕಿನ ಕುರುವಂಕ ಗ್ರಾಮದ ಶಾನ್‌ಬೋಗ್ ಶ್ರೀ ದಾಸಪ್ಪ ದತ್ತಿ ನಿಧಿಯಿಂದ ‘ಪ್ರೊ. ಜ್ಯೋತಿಷ್ಯ ರತ್ನಾಕರ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಆಯೋಜಿತ ಸಮಾರಂಭದಲ್ಲಿ ಕೊಡಗಿನ ‘ಶಕ್ತಿ’ ಪತ್ರ‍್ರಿಕೆಯ ಸಂಪಾದಕರಾದ ಜಿ. ರಾಜೇಂದ್ರ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ಸತ್ಯ ವಾಗೀಶ್ವರ, ಡಾ.ರಾಜಾರಾಮ್ ಎ.ಆರ್., ಬಾಳಿಲದ ವಿದ್ಯಾ ಬೋಧಿನಿ ಶಾಲೆಯ ಸಂಸ್ಕೃತ ಶಿಕ್ಷಕರಾದ ವೆಂಕಟೇಶ್ ಕುಮಾರ್, ಕೊಡಗು ಹವ್ಯಕ ಸಂಘದ ವಲಯಾಧ್ಯಕ್ಷರಾದ ಸುಬ್ರಹ್ಮಣ್ಯ ಕುಮಾರ್ ಅವರು ಶಾಲು ಹೊದಿಸಿ, ಫಲ ತಾಂಬೂಲವನ್ನಿತ್ತು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸಮಾಜ ಸೇವೆಗೆ ಶಕ್ತಿ ನೀಡುವಂತದ್ದೆ ಜ್ಯೋತಿಷ್ಯ- ಸಮಾರಂಭವನ್ನು ದೀಪ ಜ್ವಲನದ ಮೂಲಕ ಉದ್ಘಾಟಿಸಿದ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ ಅವರು ಮಾತನಾಡಿ, ಸಾಧನೆಯ ಹಾದಿಯಲ್ಲಿ…

Read More

ಮಡಿಕೇರಿ NEWS DESK ಸೆ.15 : ಶುಂಠಿ ತುಂಬಿದ ಎತ್ತಿನ ಗಾಡಿ ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ತೊರೆನೂರು ಗ್ರಾಮದಲ್ಲಿ ನಡೆದಿದೆ. ತೊರೆನೂರು ಗ್ರಾಮದ ಟಿ.ಆರ್.ಮಧು ಹಾಗೂ ಅನು ದಂಪತಿಯ ಮೊದಲ ಪುತ್ರ ಟಿ.ಎಂ.ತರುಣ್ (7) ಮೃತ ದುರ್ದೈವಿ. ಭಾನುವಾರ ಬೆಳಿಗ್ಗೆ ಮನೆಯ ಬಳಿ ಶುಂಠಿ ತುಂಬಿದ್ದ ಎತ್ತಿನ ಗಾಡಿ ಭಾರ ಹೆಚ್ಚಾಗಿ ಮಗುಚಿಕೊಂಡಿತು. ಈ ಸಂದರ್ಭ ಪಕ್ಕದಲ್ಲೇ ಇದ್ದ ತರುಣ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದೆ. ತಕ್ಷಣ ಬಾಲಕನನ್ನು ಕುಶಾಲನಗರ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ತರುಣ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತ ಬಾಲಕ ತರುಣ್ ಕೂಡಿಗೆಯ ವಿದ್ಯಾನಿಕೇತನ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More