ಮಡಿಕೇರಿ NEWS DESK ಸೆ.15 : ನಕಲಿ ಸಹಿ ಮಾಡಿದ ಆರೋಪಕ್ಕೊಳಗಾಗಿ ವಿಷ ಸೇವಿಸಿದ್ದ ಮಡಿಕೇರಿ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಹಶೀಲ್ದಾರರ ಸಹಿಯನ್ನು ನಕಲಿ ಮಾಡಿ ಖಜಾನೆಗೆ ಕಡತ ಕಳುಹಿಸಿದ್ದ ಆರೋಪವನ್ನು ಎದುರಿಸುತ್ತಿದ್ದ ಪ್ರಜ್ವಲ್ (38) ಮೃತ ಸಿಬ್ಬಂದಿಯಾಗಿದ್ದಾರೆ. ನಕಲಿ ಸಹಿ ಆರೋಪದಿಂದ ಸೆ.10 ರಂದು ಮಡಿಕೇರಿಯ ಮನೆಯಲ್ಲಿ ವಿಷ ಸೇವಿಸಿದ್ದ ಪ್ರಜ್ವಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟರು. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೇಖಕ: admin
ಮಡಿಕೇರಿ NEWS DESK ಸೆ.15 : ಮಹಿಳಾ ಕಾಂಗ್ರೆಸ್ ಸ್ಥಾಪನೆಯಾಗಿ ಸೆ.15ಕ್ಕೆ 40 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತು ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಕೊಡಗು ಮಹಿಳಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ ಮಡಿಕೇರಿಯಲ್ಲಿ ನಡೆಯಿತು. ನಗರದಲ್ಲಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಅವರು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕ ಲಂಬಾ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಸೂಚನೆ ಮೇರೆಗೆ ಅಭಿಯಾನವನ್ನು ನಡೆಸಲಾಗುತ್ತಿದ್ದು, ಪಕ್ಷದ ಬಲವರ್ಧನೆಗೆ ಇದು ಸಹಕಾರಿಯಾಗಿದೆ ಎಂದರು. ಜಿಲ್ಲೆಯ ಪ್ರತಿ ಬ್ಲಾಕ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ಮಹಿಳಾ ಘಟಕದ ಶಕ್ತಿ ಹೆಚ್ಚಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಶೈಲಾ ಕುಟ್ಟಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಧನ್ಯ ರವಿ, ಪ್ರೇಮ ಲಿಂಗಪ್ಪ, ರೇವತಿ ರಮೇಶ್, ಕೆ.ಎಂ.ಪುಷ್ಪಾ ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಸೆ.15 : ಕನ್ನಡ ಸಾಹಿತ್ಯದ ಬೆಳವಣಿಗೆಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಗ್ರಾಮೀಣ ಭಾಗದ ಸಾಹಿತಿಗಳ ಸಾಹಿತ್ಯ ಕೃಷಿಗೆ ಸಹಕಾರಿಯಾಗಿದೆ ಎಂದು ಮೂರ್ನಾಡು ಪದವಿ ಪೂರ್ವ ಕಾಲೇಜ್ ನ ಅಧ್ಯಕ್ಷ ಚೌರೀರ ಡಾ.ಜಗತ್ ತಿಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕಸಾಪ ಮತ್ತು ಮೂರ್ನಾಡು ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲೆಮರೆಯ ಕಾಯಿಯಂತಿರುವ ಕನ್ನಡದ ಬರಹಗಾರರನ್ನು ಗುರುತಿಸಿ ಸಾಹಿತ್ಯದ ಬೆಳವಣಿಗೆಗೆ ಪ್ರೇರಣೆ ನೀಡುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ ಗೆ ಇದೆ. ಜಿಲ್ಲೆಯ ಗ್ರಾಮೀಣ ಸಾಹಿತಿಗಳು ಇದರ ಲಾಭ ಪಡೆದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ ನ…
ಮಡಿಕೇರಿ NEWS DESK ಸೆ.14 : ಐತಿಹಾಸಿಕ ಮಡಿಕೇರಿ ದಸರಾ ಸೇರಿದಂತೆ ದಕ್ಷಿಣ ಕೊಡಗಿನ ಗೋಣಿಕೊಪ್ಪಲು ದಸರಾ ಉತ್ಸವವನ್ನು ಎಲ್ಲರೂ ಒಗ್ಗಟ್ಟಾಗಿ ಆಚರಿಸಬೇಕು. ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಯಶಸ್ವಿ ದಸರಾ ಆಚರಣೆಗೆ ಸರ್ಕಾರ ನಿಮ್ಮೊಂದಿಗೆ ಸದಾ ಇರಲಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎರಡೂ ಕಡೆಯ ದಸರಾ ಉತ್ಸವ ಆಚರಣೆಗೆ ಪೂರಕವಾಗಿ ಅಗತ್ಯ ಅನುದಾನವನ್ನು ಮುಂದಿನ ಎರಡು ಮೂರು ದಿನಗಳಲ್ಲೆ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಕಳೆದ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರ 95 ಲಕ್ಷ ರೂ. ಅನುದಾನವನ್ನು ಒದಗಿಸಿತ್ತು, ಈ ಬಾರಿ ಹೆಚ್ಚಿನ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ, ಈ ಬಾರಿ ಕಳೆದ ಬಾರಿಗಿಂತ ಒಂದಷ್ಟು ಹೆಚ್ಚಿನ ಅನುದಾನವನ್ನು ಒದಗಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ದಸರಾ ಉತ್ಸವಕ್ಕೆ ಕಳೆದ ಸಾಲಿನಂತೆಯೇ ಅಗತ್ಯ…
ಗುಡ್ಡೆಹೊಸೂರು NEWS DESK ಸೆ.14 : ಜೀವನ ಮೌಲ್ಯಗಳು ಕುಸಿಯುತ್ತಿರುವ ಕಾಲಘಟ್ಟದಲ್ಲಿ ನಾವಿದ್ದು, ಸಮಾಜದ 4ನೇ ಅಂಗ ಎನ್ನಿಸಿಕೊಂಡಿರುವ ಪತ್ರಿಕಾರಂಗ ಕೂಡ ನಾನಾ ಕಾರಣಗಳಿಂದ ಕಾವಲು ಹಾದಿಯಲ್ಲಿದೆ. ವಿಶ್ವಾಸರ್ಹತೆ ಕೂಡ ಕುಸಿಯುವ ಹಂತಕ್ಕೆ ಬಂದಿದ್ದು, ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಂಡು ಎಚ್ಚೆತುಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿAದ ಶನಿವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಆಯೋಜಿತಗೊಂಡ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಒಳ್ಳೆಯವರಿಗೆ ಮತ್ತು ಒಳ್ಳೆಯದಕ್ಕೆ ಅವಕಾಶ ಮತ್ತು ಪುರಸ್ಕಾರಗಳಿಲ್ಲ. ಬದಲಾಗಿ ಹಣ ಮತ್ತು ಅಧಿಕಾರ ಇರುವವರು ಅಪರಾಧಿಯೇ ಆಗಿದ್ದರೂ ಜೈಕಾರ ಹಾಕುವ ಸಂಕೀರ್ಣ ಕಾಲಘಟ್ಟದಲ್ಲಿದ್ದು, ಬಡವಾಳ ಶಾಹಿಗಳು ಮತ್ತು ಉದ್ಯಮಿಗಳ ಹಿಡಿತದಲ್ಲಿರುವ ಹೆಚ್ಚಿನ ಮುದ್ರಣ ಮತ್ತು ದೃಶ್ಯ ಮಾದ್ಯಮಗಳು ಅವರ ಅಭಿಪ್ರಾಯಗಳನ್ನು ಸಮಾಜದ ಮೇಲೆ ಹೆರುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಆತಂಕ…
ಮಡಿಕೇರಿ NEWS DESK ಸೆ.14 : ಇದೇ ಅಕ್ಟೋಬರ್, 17 ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ತೀರ್ಥೋದ್ಭವ ಸಂಬAಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪವಿತ್ರ ತೀರ್ಥೋದ್ಭವ ಸಂಬಂಧ ತಲಕಾವೇರಿಯಲ್ಲಿ ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದAತೆ ಅಧಿಕಾರಿಗಳು ಗಮನಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಈ ಬಾರಿ ಅಕ್ಟೋಬರ್, 17 ರಂದು ಬೆಳಗ್ಗೆ 7.40 ಗಂಟೆಗೆ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿAದ ರಾತ್ರಿ ವೇಳೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಸಚಿವರು ಸೂಚಿಸಿದರು. ಮಳೆ ಕಡಿಮೆಯಾಗಿದ್ದು, ಕೂಡಲೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ರಸ್ತೆ ಬದಿ ಕಾಡನನ್ನು ಕಡಿಬೇಕು. ಗಿಡ ಗಂಟೆ ಸಂಬAಧ ಅರಣ್ಯ ಅಧಿಕಾರಿಗಳು ತಗಾದೆ ತೆಗೆಯಬಾರದು ಎಂದು ನಿರ್ದೇಶನ ನೀಡಿದರು. ಪೊಲೀಸ್…
*ಓಣಂ ಹಬ್ಬದ ಶುಭಾಶಯಗಳು*
*ಓಣಂ ಹಬ್ಬದ ಶುಭಾಶಯಗಳು*
ಮಡಿಕೇರಿ ಸೆ.14 NEWS DESK : ರಾಷ್ಟ್ರೀಯ ಮಟ್ಟದ ಇನ್ಪೆರ್ ಮಾನಕ್ ಅವಾರ್ಡ್ ಸ್ಪರ್ಧೆಗೆ ಎಂ.ಎಸ್.ದೇಚಮ್ಮ ಆಯ್ಕೆಯಾಗಿದ್ದಾಳೆ. ಕೊಡಗು ವಿದ್ಯಾಲಯ ಶಾಲೆಯಲ್ಲಿ 2022-23ರ ಸಾಲಿನಲ್ಲಿ 10ನೇ ತರಗತಿ ಓದುತ್ತಿದ್ದ ಎಂ.ಎಸ್.ದೇಚಮ್ಮ ಅವರು ವಿಜ್ಞಾನ ಶಿಕ್ಷಕಿ ಪೊನ್ನಮ್ಮ ಪಿ. ಎಸ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ಓವರ್ ಹೆಡ್ ಟ್ಯಾಂಕ್ ಕ್ಲಿನರ್ ಪರಿಕಲ್ಪನೆಯು ರಾಷ್ಟ್ರೀಯ ಮಟ್ಟದ ಇನ್ಪೆರ್ ಮಾನಕ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದೆ. ಈ ಪರಿಕಲ್ಪನೆಯ ಸಾಧನವು ನೀರಿನ ತೊಟ್ಟಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ ದೈನಂದಿನ ಜೀವನದಲ್ಲಿ ಸೃಜನ ಶೀಲ ಸಮಸ್ಯೆ ಪರಿಹರಿಸುವ ಸಾಮರ್ಥ್ಯವನ್ನು ಕೂಡ ಇದು ಹೊಂದಿದೆ. ದೇಚಮ್ಮ ಪ್ರಸ್ತುತ ನಳಂದ ಗುರುಕುಲ ಕಾಲೇಜಿನಲ್ಲಿ ದ್ವೀತಿಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ತನ್ನ, ಪರಿಕಲ್ಪನೆಯು ಯಶಸ್ಸು ಗಳಿಸಲು ಬೆನ್ನೆಲುಬಾಗಿ ಸಹಕರಿಸಿದ ಮಾರ್ಗದರ್ಶಕರು, ಕೊಡಗು ವಿದ್ಯಾಲಯ ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಕುಟುಂಬದವರು ಹಾಗೂ ಗೆಳೆಯರ ಸಹಾಯವನ್ನು ಸ್ಮರಿಸಿದಳು. ಎಂ.ಎಸ್.ದೇಚಮ್ಮಅರ್ಪಟ್ಟು ಮುಕ್ಕಾಟ್ಟಿರ ಪಿ ಸುಬ್ರಮಣಿ ಮತ್ತು ಅಂಜು ಸುಬ್ರಮಣಿ (ತಾಮನೆ ಅಮ್ಮಂಡ )…
ಮಡಿಕೇರಿ ಸೆ.14 NEWS DESK : ಕುಶಾಲನಗರ ಜ್ಞಾನಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಲ್.ಚಂದ್ರಕಲಾ ಅವರು ಕರ್ನಾಟಕ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ಉತ್ತಮ ಶಿಕ್ಷಕಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಇಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಿ.ಎಲ್.ಚಂದ್ರಕಲಾ ಅವರು ಗುಮ್ಮನಕೊಲ್ಲಿ ನಿವಾಸಿ ದಿ.ಜಿ.ಕೆ.ರವೀಂದ್ರ ಅವರ ಪತ್ನಿ.






