ಮಡಿಕೇರಿ ಡಿ.30 NEWS DESK : ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ವತಿಯಿಂದ ವಾಷಿ೯ಕವಾಗಿ ನೀಡಲಾಗುವ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿನ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿಯನ್ನು ಮಡಿಕೇರಿಯ ಪತ್ರಕತ೯ ಅನಿಲ್ ಹೆಚ್.ಟಿ. ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪತ್ರಿಕೋದ್ಯಮ, ಕೖಷಿ, ಸಾಹಿತ್ಯ, ಸಂಗೀತ, ವೈದ್ಯಕೀಯ, ಸಮಾಜಸೇವೆ, ಉದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. ಕೊಡಗು ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಅನಿಲ್ ಹೆಚ್.ಟಿ ಅವರಿಗೆ ಗಾಂಧಿ ಪ್ರಿಯ ಹೆಸರಿನ ವಾಷಿ೯ಕ ಪ್ರಶಸ್ತಿ ನೀಡಲಾಯಿತು. ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ವಿಜಯ್ ಸಮಥ೯ ಮಾತನಾಡಿ, ದೇಶದ ಮಹಾತ್ಮನ ಹೆಸರಿನಲ್ಲಿ ಸಾಮಾಜಿಕ ಸೇವಾ ಸಂಘಟನೆಗಳು ಮೀಸಲಾಗಿಟ್ಟಿರುವ ಪ್ರಶಸ್ತಿಗಳೇ ಕಡಮೆಯಾಗಿದೆ. ಗಾಂಧೀಜಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದಷ್ಟೇ ಅಲ್ಲ ಪತ್ರಿಕೋದ್ಯಮ, ಸಮಾಜಸೇವೆ ಸೇರಿದಂತೆ ಅನೇಕ…
ಲೇಖಕ: admin
ಬೆಂಗಳೂರು ಡಿ.30 NEWS DESK : ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ.
ವಿರಾಜಪೇಟೆ ಡಿ.30 NEWS DESK : ಪೆರಾಜೆ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಸರಕಾರ ವತಿಯಿಂದ ಈಗಾಗಲೇ ತಮ್ಮ ಅವಧಿಯಲ್ಲಿ ಪೆರಾಜೆ ಗ್ರಾಮಕ್ಕೆ ಸುಮಾರು 19 ಕೋಟಿಗೂ ಅಧಿಕ ಅನುದಾನ ಅಭಿವೃದ್ಧಿ ಕಾಮಗಾರಿಗಾಗಿ ನೀಡಲಾಗಿದೆ ಎಂದು ಹೇಳಿದರು.
ಸೋಮವಾರಪೇಟೆ NEWS DESK ಡಿ.30 : ಸೋಮವಾರಪೇಟೆಯ ಶ್ರೀ ಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶೃದ್ಧಾಭಕ್ತಿಯಿಂದ ಅಯ್ಯಪ್ಪ ವೃತಾಧಾರಿಗಳು ಹಾಗೂ ಭಕ್ತರ ಸಮ್ಮುಖದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು. ಅರ್ಚಕ ಜಗದೀಶ ಉಡುಪ ಅವರ ಪೌರೋಹಿತ್ಯದಲ್ಲಿ ಗಣಪತಿಹೋಮದೊಂದಿಗೆ ಪೂಜೆಗಳು ಆರಂಭಗೊಂಡಿತು. ನಂತರ ದೇವಾಲಯ ಸಮಿತಿ ಹಾಗೂ ಕ್ಷೇತ್ರದ ಭಕ್ತರು ಕಳೆದ ಐದು ದಿನಗಳಿಂದ ವೃತ ಮಾಡಿ ತಂದಿದ್ದ ಪವಿತ್ರ ತುಪ್ಪವನ್ನು ಅಯ್ಯಪ್ಪಸ್ವಾಮಿಯ ಮೂರ್ತಿಗೆ ವೆಂಕಟೇಶ್ ಅಯ್ಯರ್ ಅಭಿಷೇಕವನ್ನು ನೆರವೇರಿಸಿದರು. ಅದಕ್ಕೂ ಮುನ್ನ ಅಯ್ಯಪ್ಪಸ್ವಾಮಿಯ ಆಭರಣಗಳಿಗೆ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮೂರು ಸುತ್ತು ಪ್ರದಕ್ಷಿಣೆಯನ್ನು ದೇವಾಲಯ ಸಮಿತಿಯವರು ಶ್ರೀಮುತ್ತಪ್ಪಸ್ವಾಮಿ ಹಾಗೂ ಶ್ರೀಭುವನೇಶ್ವರಿ ದೇವಿಯವರ ಸನ್ನಿಧಿಯಲ್ಲಿ ಇರಿಸಿದ್ದ ಪವಿತ್ರ ತುಪ್ಪ ಹಾಗೂ ದೇವಾಲಯ ಸಮಿತಿಯ ಪದಾಧಿಕಾರಿಗಳು ಕಳೆದ ಐದು ದಿನಗಳಿಂದ ವೃತ ಮಾಡಿ ಶ್ರೀಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಇರಿಸಿದ್ದ ತುಪ್ಪದೊಂದಿಗೆ ಪ್ರದಕ್ಷಿಣೆ ನಡೆಸಿ ಮೊದಲಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಭಕ್ತರು ತಂದಿದ್ದ ತುಪ್ಪವನ್ನು ಅಭಿಷೇಕ ಮಾಡುವ ಮೂಲಕ ಪೂಜೆ ಸಲ್ಲಿಸಲಾಯಿತು. ನಂತರ ಉಚ್ಛ ಪೂಜೆಯಲ್ಲಿ…
ಚೆಟ್ಟಳ್ಳಿ ಡಿ.29 NEWS DESK : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಸಂಭ್ರಮದ ಪುತ್ತರಿ ನಮ್ಮೆರ ಊರೊರ್ಮೆ ಕೂಟ ನಡೆಯಿತು. ಕೊಡವ ಸಂಪ್ರದಾಯದ ದುಡಿಕೊಟ್ಟ್ ನೊಂದಿಗೆ ಸಭಾಂಗಣಕ್ಕೆ ತೆರಳಲಾಯಿತು. ಪುರುಷ, ಮಹಿಳೆಯರಿಗೆ ಹಾಗೂ ದಂಪತಿಗಳಿಗೆ ವಿವಿಧ ಮನೋರಂಜನಾ ಕ್ರೀಡೆಯನ್ನು ಆಯೋಜಿಸಲಾಗಿತ್ತು. ಮಹಿಳೆಯರ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಮುಳ್ಳಂಡ ರತ್ತುಚಂಗಪ್ಪ ಮಾತನಾಡಿ, ಕೊಡವ ಜನಾಂಗ ಉಳಿವು ಐನ್ ಮನೆಯಿಂದಲೇ ಪ್ರಾರಂಭಗೊಳ್ಳಬೇಕು. ಒಡಹುಟ್ಟಿದ ಸಹೋದರು, ಕುಟುಂಬದವರು ಒಗ್ಗಟ್ಟಾಗಿದ್ದಾಗ ಮಾತ್ರವೇ ಕೊಡವರ ಉಳಿವು ಸಾಧ್ಯವೆಂದರು. ಎಲ್ಲರು ಒಗ್ಗಟ್ಡಿನಿಂದ ಸಮಾಜದ ಅಭಿವೃದ್ಧಿಗೆ ಸಹಕರಿಸ ಬೇಕೆಂದರು. ನಿರ್ದೇಶಕರಾದ ಬಟ್ಟೀರ ರಕ್ಷುಕಾಳಪ್ಪ ಪುತ್ತರಿ ಹಬ್ಬದ ವಿಶೇಷತೆಯ ಬಗ್ಗೆ ವಿವರಿಸಿದರು. ನಂತರ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾಜದ ಉಪಾಧ್ಯಕ್ಷ ಬಿದ್ದಂಡ ಮಾದಯ್ಯ, ಕಾರ್ಯದರ್ಶಿ ಪುತ್ತರಿರ ಕಾಳಯ್ಯ, ಜಂಟಿಕಾರ್ಯದರ್ಶಿ ಮುಳ್ಳಂಡ ಶೋಭಾಚಂಗಪ್ಪ, ಖಜಾಂಚಿ ಕೆಚ್ಚೆಟ್ಟೀರ ರತಿ ಕಾರ್ಯಪ್ಪ, ಜಂಟಿ ಕಾರ್ಯದರ್ಶಿ ಐಚೆಟ್ಟೀರ ಮಾಚಯ್ಯ, ಕಾನೂನು ಸಲಹೆಗಾರರಾದ ಕಡೇಮಡ…
ವಿರಾಜಪೇಟೆ ಡಿ.29 NEWS DESK : ವಿರಾಜಪೇಟೆ ತಾಲ್ಲೂಕಿನ ಅರೇಮೇರಿ ಎಸ್ಎಂಎಸ್ ವಿದ್ಯಾಪೀಠ ಶಾಲೆಯಲ್ಲಿ ವಸುದೈವ ಕುಟುಂಬಕಂ ಎಂಬ ದ್ಯೇಯ ವಾಕ್ಯದಡಿ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಗಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ವಾರ್ಷಿಕೋತ್ಸವವು, ಸಂಸ್ಥೆಯ ವಿಶಾಲ ಮನೋಭಾವ ಹಾಗೂ ಧ್ಯೇಯವನ್ನು ಸಾರುತ್ತದೆ ಹಾಗೂ ಪ್ರಪಂಚವೇ ಒಂದು ಕುಟುಂಬ ಎಂದು ಸಾರುವ ಈ ಧ್ಯೇಯ ವಾಕ್ಯವು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದಶಕಗಳಿಂದ ಅರಮೇರಿ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುತ್ತ ವಿದ್ಯಾರ್ಜನೆ ಮಾಡುತ್ತಾ ಬಂದಿದೆ. ಇಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಈಗಾಗಲೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹೆಸರನ್ನು ಪಡೆದು, ನಾಡಿನ ಒಳಿತಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ…
ಮಡಿಕೇರಿ ಡಿ.29 NEWS DESK : ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ಅಂಬೇಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಕೂಟುಹೊಳೆಯಲ್ಲಿರುವ ಆಹನ್ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸದಸ್ಯರು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ ಮಾತನಾಡಿ , ಔಷಧ ನಿಯಂತ್ರಣ ಇಲಾಖೆ ಸಾರ್ವಜನಿಕ ಹಿತದೃಷ್ಟಿಯಿಂದ ಹೊರ ತರುತ್ತಿರುವ ಹೊಸ ಕಾನೂನುಗಳ ಬಗ್ಗೆ ಸೂಕ್ತರೀತಿಯಲ್ಲಿ ಅರಿತುಕೊಳ್ಳುವುದರ ಮೂಲಕ ಕಾನೂನು ಪಾಲನೆ ಅತ್ಯಗತ್ಯ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ (Antibiotics) ಔಷಧಗಳು ದುರ್ಭಳಕೆಯಾಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಗಳು ಬರುತ್ತಿದ್ದು ಆ ಬಗ್ಗೆ ಜನಜಾಗೃತಿ ಮತ್ತು ನಾರ್ಕೋಟಿಕ್ ( ಅಮಲು ಭರಿಸುವ ಔಷಧಗಳು) ಔಷಧಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಔಷಧಿ ವ್ಯಾಪಾರಸ್ಥರು ಮುಂದಾಗಬೇಕು, ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ…
ಮಡಿಕೇರಿ ಡಿ.29 NEWS DESK : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕವಿ ಕುವೆಂಪು ಅವರ ದೊಡ್ಡ ಕಂಚಿನ ಪ್ರತಿಮೆಯನ್ನು ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಸರಳ ವಿವಾಹವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಬದುಕು ಕಾಣಬಹುದು. ಕುವೆಂಪು ಅವರ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು ಸೇರಿದಂತೆ ಹಲವು ಕೃತಿಗಳನ್ನು ಅಧ್ಯಯನ ಮಾಡಬೇಕು. ಮುಂದಿನ ಬಾರಿ ಕುಶಾಲನಗರದಲ್ಲಿ ಕಾರ್ಯಕ್ರಮ ಆಯೋಜಿಸಬೇಕು…
ಮಡಿಕೇರಿ ಡಿ.29 NEWS DESK : ವಸ್ತುಗಳು ಮತ್ತು ತಂತ್ರಜ್ಞಾನಗಳಲ್ಲಿನ ಪ್ರಗತಿಗಳು: ಉಷ್ಣ, ಯಾಂತ್ರಿಕ ಮತ್ತು ಕ್ರಯೋಜೆನಿಕ್ ಅನ್ವಯಿಕೆಗಳು” ಎಂಬ ವಿಷಯದ ಕುರಿತು 6 ದಿನಗಳ AICTE ಪ್ರಾಯೋಜಿತ ಆಫ್ಲೈನ್ ATAL ಫ್ಯಾಕಲ್ಟಿ ಅಭಿವೃದ್ಧಿ ಕಾಯಾ೯ಗಾರವನ್ನು ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ಸೋಮವಾರ ಆಯೋಜಿಸಿತ್ತು. ಉದ್ಘಾಟನಾ ಅಧಿವೇಶನವು ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿದ್ದ ಕಾನ್ಪುರದ ಐಐಟಿ ಯ ಪ್ರಾಧ್ಯಾಪಕ ಡಾ. ಕಾಂತೇಶ್ ಬಲಾನಿ ವೃತ್ತಿಪರ ಜೀವನದಲ್ಲಿ ನೈತಿಕತೆ, ಸಮಗ್ರತೆ, ದೃಷ್ಟಿಕೋನ, ಸಹಾನುಭೂತಿ ಮತ್ತು ನೈತಿಕ ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಒತ್ತಿ ಹೇಳುವ ಮುಖ್ಯ ಭಾಷಣ ಮಾಡಿದರು. ಅಧ್ಯಕ್ಷೀಯ ಭಾಷಣದಲ್ಲಿ, ಕೊಡವ ಶಿಕ್ಷಣ ಸಂಘದ ಅಧ್ಯಕ್ಷ ಡಾ. ಎಂ. ಸಿ. ಕಾರಿಯಪ್ಪ , ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳ ಹೆಚ್ಚುತ್ತಿರುವ ಮಹತ್ವದ ಬಗ್ಗೆ ಮಾಹಿತಿ ನೀಡಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ನೆಟ್ವರ್ಕಿಂಗ್, ಮಾನ್ಯತೆ ಮತ್ತು ಒಟ್ಟಾರೆ ಶೈಕ್ಷಣಿಕ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವುಗಳ ಪಾತ್ರವನ್ನು ಅವರು ವಿವರಿಸಿದರು. ಅಸೋಸಿಯೇಟ್ ಪ್ರೊಫೆಸರ್ ಮತ್ತು…
ಮಡಿಕೇರಿ.ಡಿ.29 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಡಿ.30 ರಂದು ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಅದಿವಾಸ ಹೋಮ, ಕಲಶ ಪೂಜೆ, ಕಲಶ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ದೇವಾಲಯದ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






