ಲೇಖಕ: admin

ಮಡಿಕೇರಿ ಅ.14 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಅ.17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತೀರ್ಥೋದ್ಭವ ನಡೆಯಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ತುಲಾ ಸಂಕ್ರಮಣ ಜಾತ್ರೆಯ ಪೂರ್ವಭಾವಿಯಾಗಿ ಸೆ.26 ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 8.35ಕ್ಕೆ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.4 ರಂದು ಬೆಳಿಗ್ಗೆ 10.21ಕ್ಕೆ ಆಜ್ಞಾ ಮುಹೂರ್ತ, ಅ.14 ರಂದು ಬೆಳಗ್ಗೆ 11.35 ಗಂಟೆಗೆ ಅಕ್ಷಯ ಪಾತ್ರೆ ಇಳಿಸುವುದು, ಸಂಜೆ 4.15 ಗಂಟೆಗೆ ಕಾಣಿಕೆ ಡಬ್ಬ ಇಳಿಸುವ ಕಾರ್ಯಕ್ರಮಗಳು ನಡೆಯಲಿದೆ.

Read More

ವಿರಾಜಪೇಟೆ ಸೆ.14 NEWS DESK : ವಿರಾಜಪೆಟೆಯ ಮೂರ್ನಾಡು ರಸ್ತೆಯಲ್ಲಿನ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ 34ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮತ್ತು ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಪ್ರೇಕ್ಷಕರನ್ನು ಮನಸೂರೆಗೊಳಿಸಿತು. ಗಣೇಶನ ಸ್ತೋತ್ರದ ನಾಟ್ಯದೊಂದಿಗೆ ಆರಂಭಗೊಂಡ ನೃತ್ಯ ವೈಭವ ರಾಮ ನೃತ್ಯ, ತೆಲುಗು ನೃತ್ಯ, ಶ್ಲೋಕಾಂಜಲಿ, ಶಿವ ತಾಂಡವ, ಭರತನಾಟ್ಯ, ಜಾನಪದ ನೃತ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪ್ರದರ್ಶನಗೊಂಡು ಹತ್ತಾರು ಸುಂದರ ವೈವಿದ್ಯಮಯ ಹಾಡಿಗೆ ವಿದ್ಯಾರ್ಥಿಗಳು ನೃತ್ಯ ಮಾಡಿ ಎಲ್ಲರನ್ನು ಮನರಂಜಿಸಿದರು. ಪುಟಾಣಿ ಮಕ್ಕಳ ಭರತನಾಟ್ಯ ಎಲ್ಲರ ಗಮನ ಸೆಳೆಯಿತು. ನಾಟ್ಯಾಂಜಲಿ ನೃತ್ಯ ಸಂಸ್ಥೆಯ ನೃತ್ಯ ಗುರುಗಳಾದ ಕಾವ್ಯಶ್ರೀ ತಮ್ಮ ಮನಮೋಹಕ ಭರತನಾಟ್ಯದ ಮೂಲಕ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ನಾಟ್ಯಾಂಜಲಿ ನೃತ್ಯ ಶಾಲೆಯ ಸಂಸ್ಥಾಪಕಿ ಹೇಮಾವತಿ ಕಾಂತರಾಜ್, ಕಾವೇರಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಆನಂದ್ ರಾಜಪ್ಪ,…

Read More

ಮಡಿಕೇರಿ ಸೆ.14 NEWS DESK  : ಮಡಿಕೇರಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಹೆಚ್.ಆರ್.ರಮೇಶ್ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.  ಕರ್ತವ್ಯದಲ್ಲಿದ್ದ ವಿಜಯ ಅವರನ್ನು ಸಕ್ಷಮ ಪ್ರಾಧಿಕಾರಕ್ಕೆ ಹಿಂಪಡೆದ ಹಿನ್ನೆಲೆ ತೆರವಾದ ಸ್ಥಾನಕ್ಕೆ ರಮೇಶ್ ಅವರನ್ನು ನಿಯೋಜಿಸಲಾಗಿದೆ. ರಮೇಶ್ ಅವರು ಈ ಹಿಂದೆ ಮಡಿಕೇರಿ ನಗರಸಭೆಯಲ್ಲಿ ಆರೋಗ್ಯಾಧಿಕಾರಿ, ಕಂದಾಯಾಧಿಕಾರಿಯಾಗಿ, ಸೋಮವಾರಪೇಟೆ, ವಿರಾಜಪೇಟೆ ತಾಲ್ಲೂಕು ಸ್ಥಳೀಯಾಡಳಿತದ ಮುಖ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ಹುಣಸೂರು ನಗರಸಭೆ ಕಮೀಷನರ್ ಆಗಿ, ಮೈಸೂರು ಕಾರ್ಪೋರೇಷನ್ ನೋಡೆಲ್ ಅಧಿಕಾರಿಯಾಗಿ, ದಕ್ಷಿಣ ಕನ್ನಡದ ವಿಟ್ಲ ಪುರಸಭೆಯ ಮುಖ್ಯಾಧಿಕಾರಿಯಾಗಿ, ಸಕಲೇಶಪುರ ನಗರಸಭೆಯಲ್ಲಿ ಕಮೀಷನರ್ ಆಗಿ ಕೆಲಸ ಮಾಡಿ ಇದೀಗ ನಗರಸಭೆಯ ಪೌರಾಯುಕ್ತರಾಗಿ ನೇಮಕಗೊಂಡಿದ್ದಾರೆ. ವಿಜಯ ಅವರ ವರ್ಗಾವಣೆಗೆ ಈ ಹಿಂದೆ ನಗರಸಭೆಯ ಎಲ್ಲಾ ಸದಸ್ಯರು ಒಮ್ಮತದ ನಿರ್ಣಯ ಕೈಗೊಂಡಿದ್ದರು.

Read More

ಮಡಿಕೇರಿ ಸೆ.14 NEWS DESK : ನಲ್ವತ್ತೋಕ್ಲು ಚೋಕಂಡಳ್ಳಿ ಕಂದೂರಿ ಹಜ್ರತ್ ಮುಹಮ್ಮದ್ ಪೈಗಂಬರ್‍ರ ಮುಹ್‍ಜಿಸತ್ತಿನಿಂದ ಪ್ರಸಿದ್ಧಿ ಹೊಂದಿರುವ ಕಂದೂರಿ ಈದ್ ಮಿಲಾದ್ ನ್ನು ಸೆ.21 ಮತ್ತು 22 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದು ಈದ್ ಮಿಲಾದ್ ಸಂರಕ್ಷಣಾ ಸಮಿತಿ ಕಾರ್ಯದರ್ಶಿ ಪಿ.ಎ.ಸಿರಾಜುದ್ದೀನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎರಡು ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ಸೆ.21 ರಂದು ಅಸರ್ ನಮಾಜಿನ ಬಳಿಕ ಈದ್ ಮಿಲಾದ್ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಎಂ.ರಫಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಸಂಜೆ 7 ಗಂಟೆಗೆ ಅಬ್ದುಲ್ ಲತೀಫ್ ಸಖಾಫಿ ಕಾಂದಪುರಂ ನೇತೃತ್ವದಲ್ಲಿ ಮದನೀಯಂ ಸದಸ್ಸ್ ಮತ್ತು ನಸೀಹತ್ ನಡೆಯಲಿದ್ದು, ಕಾರ್ಯಕ್ರಮವನ್ನು ಸೈಯದ್ ಮಹದಿ ತಂಗಳ್ ಉದ್ಘಾಟಿಸಲಿದ್ದಾರೆ. ಮುಬಶ್ಯಿರ್ ಅಹ್ಸನಿ ಅಲ್ ಕಾಮಿಲ್ ಪ್ರಾರ್ಥನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಲ್ವತೋಕ್ಲು ಚೋಕಂಡಳ್ಳಿ ಜುಮಾ ಮಸೀದಿ ಅಧ್ಯಕ್ಷ ಪಿ.ಎ.ಹನೀಫ್, ಕೊಡವ ಮುಸ್ಲಿಂ ಅಸೊಶಿಯೇಶನ್ ಅಧ್ಯಕ್ಷ ಡಿ.ಹೆಚ್.ಸೂಪಿ ಹಾಜಿ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ…

Read More

ಬೆಂಗಳೂರು ಸೆ.14 NEWS DESK : ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ “ಪತ್ರಿಕಾ ವಿತರಕರ ಬಂಧು” ಎನ್ನುವ ಬಿರುದು ನೀಡಿ ಸನ್ಮಾನಿಸಿತು.  ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ ಈ ಬಿರುದು ನೀಡಲಾಗಿದ್ದು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗದ ಕಾರಣ ಇಂದು ಕಾವೇರಿ ನಿವಾಸ ಕ್ಕೆ ಬಂದು ಗೌರವಿಸಲಾಯಿತು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಬುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಂಗ್ರೆಸ್ ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲ್ ಅವರು ಉಪಸ್ಥಿತರಿದ್ದು ಪತ್ರಿಕಾ ವಿತರಕ ಸಮುದಾಯಕ್ಕೆ ಸರ್ಕರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.

Read More

ನಾಪೋಕ್ಲು  ಸೆ.14 NEWS DESK : ಮೂರ್ನಾಡುವಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೆ.ಆರ್.ಯಶಿಕಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸ್ಪರ್ಧೆಯ ಪ್ರೌಢಶಾಲಾ ಬಾಲಕಿಯರ ವಿಭಾಗದ 100 ಮೀಟರ್ ಓಟದ ಸ್ಪರ್ಧೆ ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕೆ.ಆರ್.ಯಶಿಕಾ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 4*200 ರಿಲೇ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ವನ್ನು ಪಡೆದುಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಮಾರ್ಗದರ್ಶ ನೀಡಿದರು.

Read More

ಮಡಿಕೇರಿ NEWS DESK ಸೆ.14 : ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಪ್ರಯತ್ನದ ಫಲವಾಗಿ ಈ ವರ್ಷದಿಂದ ಮಡಿಕೇರಿ ದಸರಾ ಉತ್ಸವಕ್ಕೆ ಕಾಫಿ ದಸರಾ ಸೇರ್ಪಡೆ ಆಗಿದೆ. ಕೊಡಗು ಕಾಫಿ ಕೃಷಿ ಜಿಲ್ಲೆ ಆಗಿರುವುದರಿಂದ ಕಾಫಿ ಕೃಷಿಕರಿಗೆ ಸೂಕ್ತ ಮಾಹಿತಿ, ಕಾಫಿಯ ಪ್ರಯೋಜನ, ತೋಟಗಾರಿಕಾ ಕೃಷಿ ಮಾಹಿತಿ ಸಂಬಂಧಿತ 20 ಮಳಿಗೆಗಳು ಕಾಫಿ ದಸರಾ ದಲ್ಲಿ ಇರುತ್ತವೆ. ಮೊದಲ ದಿನ ಕಾಫಿ ಕೃಷಿ ಬಗ್ಗೆ ಮಾಹಿತಿ ಕಾರ್ಯಾಗಾರ ಕೂಡ ಜರುಗಲಿದ್ದು ಕರ್ನಾಟಕ ಬೆಳೆಗಾರರ ಒಕ್ಕೂಟ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್, ಕಾಫಿ ಮಂಡಳಿ ಸಹಕಾರವನ್ನು ಕೊಡಲಾಗುತ್ತದೆ. ಅಕ್ಟೋಬರ್ 6 ಮತ್ತು 7 ರಂದು ಈ ಕಾರ್ಯಕ್ರಮ ಆಯೋಜಿತ ಆಗಿದೆ. ಕಾಫಿ ಕೃಷಿಕರಿಗೆ ಸೂಕ್ತ ಮಾಹಿತಿ ನೆರವು ದೊರಕಬೇಕು ಎಂಬ ನಿಟ್ಟಿನಲ್ಲಿ ಶಾಸಕ ಮಂತರ್ ಗೌಡ ಅವರ ವಿಶೇಷ ಪ್ರಯತ್ನ ಈ ಕಾಫಿ ದಸರಾ ಆಗಿದೆ. ಮಕ್ಕಳ ದಸರಾ 11 ವರ್ಷ, ಮಹಿಳಾ ದಸರಾ 7 ವರ್ಷ, ಜನಪದ ದಸರಾ 5 ವರ್ಷ ಪೂರೈಸುತ್ತಿದ್ದು, ಮಡಿಕೇರಿ ದಸರಾಕ್ಕೆ ಮತ್ತೊಂದು ಪ್ರಯತ್ನವಾಗಿ ಕಾಫಿ…

Read More

ಮಡಿಕೇರಿ NEWS DESK ಸೆ.14 : ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ವಕ್ಫ್ ಬಿಲ್-2024 ನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಕ್ಫ್ ತಿದ್ದುಪಡಿ ಬಿಲ್ ವಿರುದ್ಧ ಆಕ್ಷೇಪಣೆ ವ್ಯಕ್ತಪಡಿಸಿ ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೊತ್ತಾಯ ಮಂಡಿಸಿದರು. ಎಸ್‌ಡಿಪಿಐ ಮುಖಂಡ ಹಾಗೂ ನಗರಸಭಾ ಸದಸ್ಯ ಅಮಿನ್ ಮೊಹ್ಸಿನ್ ಮಾತನಾಡಿ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರ ವಕ್ಫ್ ಬಿಲ್ 2024 ನ್ನು ಜಾರಿಗೆ ತಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗಾಗಿ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಅಜೆಂಡವಾಗಿದೆ. ಹಾಲಿ ಇರುವ ವಕ್ಫ್ ಕಾಯ್ದೆಗೆ ಸುಮಾರು 40 ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ್ ಕಾಯ್ದೆಯನ್ನೆ ನಾಶಗೊಳಿಸಲು ಪ್ರಯತ್ನಿಸಲಾಗಿದೆ. ಇದು…

Read More

ನಾಪೋಕ್ಲು ಫೆ.14 NEWS DESK : ಮೂರ್ನಾಡುವಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಶಾಲೆಯ ವಿದ್ಯಾರ್ಥಿನಿ ಪಿ.ಕೆ.ಫಜ್ಞ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೂಡಿಗೆಯ ಟರ್ಫ್ ಮೈದಾನದಲ್ಲಿ ನಡೆದ ಬಾಲಕಿಯರ ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಶಾಲೆ ಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು  ಸೆ.14 NEWS DESK : ಕೂವಲೆ ಪುಟ್ಟ್, ಮದ್ದ್ ಪುಟ್ಟ್, ಬಾಳೆನುರ್ಕ್, ಬಡವಕಜ್ಜಾಯ, ಕೇಂಬು ಕರಿ, ಕಾಡು ಮಾಂಗೆ ಕರಿ, ಕುರುಕರಿ, ಚಕ್ಕೆಕುರು ಪಜ್ಜಿ ಒಂದೇ ಎರಡೇ ಹತ್ತು ಹಲವು ಕೊಡವ ಜನಾಂಗದ ತಿಂಡಿ ತಿನಿಸುಗಳು ನೆರೆದಿದ್ದವರ ಬಾಯಲ್ಲಿ ನೀರೂರಿಸಿದವು. ಕೈಲ್ ಪೊಳ್ದ್ ತೀನಿ ನಮ್ಮೆಯ ವೈವಿಧ್ಯಮಯ ಕಾರ್ಯಕ್ರಮಗಳಿಗೆ ನಾಪೋಕ್ಲು ಕೊಡವ ಸಮಾಜ ಸಾಕ್ಷಿಯಾಯಿತು. ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಕೈಲ್ ಪೊಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜ ಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ಪೊಳ್ದ್ (ತೀನಿ) ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡೀರ ಸರೋಜ ದೇವಯ್ಯ ಉದ್ಘಾಟಿಸಿದರು. ನಾಪೋಕ್ಲು ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಕೊಡವ ಜನಾಂಗ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಆಗಷ್ಟೇ ಜನಾಂಗದ ಅಭಿವೃದ್ಧಿ ಸಾಧ್ಯ ಎಂದರು. ಸಂಸ್ಕೃತಿ, ಆಚಾರ, ವಿಚಾರಗಳನ್ನು ಯುವ ಜನಾಂಗ ರೂಡಿಸಿಕೊಳ್ಳಬೇಕು ಎಂದ ಅವರು…

Read More