ಮಡಿಕೇರಿ ಸೆ.14 NEWS DESK : ಪೊನ್ನಂಪೇಟೆಯ ನಿನಾದ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿಭಾಗದ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್.ಅನಲ್, ಜಶ್ವಂತ್ ಬೋಪಣ್ಣ, 9ನೇ ತರಗತಿಯ ವಿದ್ಯಾರ್ಥಿಗಳಾದ ವೃಶಾಂಕ್ ದೇವಯ್ಯ, ಯು.ಎಸ್.ಶ್ರೀವತ್ಸ, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಎಂ.ಎಸ್ ಬಿಶನ್ ಮುತ್ತಣ್ಣ ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿಯರು, ಸಹ ಶಿಕ್ಷಕರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರುಗಳಿಗೆ ದೈಹಿಕ ಶಿಕ್ಷಕಿಯರಾದ ಮೋನಿಕಾ ಕಾವೇರಿ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ಈ ಸಂದರ್ಭ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ಪೂರ್ವ ಪ್ರಾಥಮಿಕ ಸಂಯೋಜಕಿ ಅಮೃತ ಅರ್ಜುನ್, ದೈಹಿಕ ಶಿಕ್ಷಕಿಯರುಗಳಾದ ಶ್ರೀಮತಿ ಮೋನಿಕಾ ಕಾವೇರಿ ಹಾಗೂ ಲಾವಣ್ಯ ಹಾಜರಿದ್ದರು.
ಲೇಖಕ: admin
ನವದೆಹಲಿ NEWS DESK ಸೆ.14 : ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಗೋವು ಕರುವಿಗೆ ಜನ್ಮ ನೀಡಿದೆ. ಕರುವಿನ ಹಣೆಯ ಮೇಲೆ ಬೆಳಕಿನ ಗುರುತು ಇರುವುದರಿಂದ ಅದಕ್ಕೆ ಪ್ರಧಾನಿ ಮೋದಿ ಅವರು ʼದೀಪಜ್ಯೋತಿʼ ಎಂದು ಹೆಸರಿಟ್ಟಿದ್ದಾರೆ.
ಮಡಿಕೇರಿ NEWS DESK ಸೆ.14 : ನಗರದ ಅಶೋಕಪುರ ಗಣೇಶ ಉತ್ಸವ ಸಮಿತಿಯ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಿದೆ. 50ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸೆ.15 ರಂದು ಬೆಳಿಗ್ಗೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಅಶೋಕಪುರದ ನಿವಾಸಿಗಳಿಗೆ ಆಟೋಟ ಸ್ಪರ್ಧೆ, ಸೆ.16 ರಂದು ಅಂಬೇಡ್ಕರ್ ಭವನದಲ್ಲಿ ನಾಗರಹೊಳೆಯ ನಾಣಚ್ಚಿ ಹಾಡಿ ಕಲಾತಂಡದಿಂದ ನೃತ್ಯ ಕಾರ್ಯಕ್ರಮ, ಸೆ.17 ರಂದು ಸಭಾ ಕಾರ್ಯಕ್ರಮ ಹಾಗೂ ಅಶೋಕ ಪುರದ ನಿವಾಸಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಂ.ಜಿ. ಸುನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಫೆ.14 NEWS DESK : ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಮತ್ತು ಮೈಸೂರಿಗೆ ಹೆಚ್ಚಿನ ವಿಮಾನ ಸಂಪರ್ಕವನ್ನು ಕಲ್ಪಿಸಲು ಮೈಸೂರು – ಕೊಡಗು ಸಂಸದ ಯದುವೀರ್ ಒಡೆಯರ್ ಅವರು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಂಸದರು, ಉತ್ತಮ ವಾಯು ಸಂಪರ್ಕವನ್ನು ಹೊಂದುವುದರ ಮಹತ್ವವನ್ನು ವಿವರಿಸಿದರು. ಇದು ಕ್ಷೇತ್ರದಲ್ಲಿ ವ್ಯಾಪಾರ, ವ್ಯಾಪಾರ ಮತ್ತು ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸುತ್ತದೆ. ಇದು ನಮಗೆ ಪ್ರವಾಸೋದ್ಯಮಕ್ಕೆ ಉತ್ತಮ ಉತ್ತೇಜನವನ್ನು ನೀಡುತ್ತದೆ. ಕೊಚ್ಚಿ, ಗೋವಾ, ಮುಂಬೈ ಮತ್ತು ಹೈದರಾಬಾದ್ಗೆ ವಿಮಾನ ಸಂಪರ್ಕ ಕಲ್ಪಿಸುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ವಿಮಾನ ಸಂಪರ್ಕವನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸುಂಟಿಕೊಪ್ಪ ಸೆ.14 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮಮಂದಿರದಲ್ಲಿ ನಡೆಯುತ್ತಿರುವ 60ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ರಂಗೋಲಿ, ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮಿನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಯುವತಿಯರು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ರಂಗೋಲಿ ಸ್ಪರ್ಧೆಯಲ್ಲಿ ಸ್ವಾತಿ ಪ್ರಥಮ, ಲಿಖಿತ ದ್ವಿತೀಯ, ಮಡಿಕೆ ಒಡೆಯುವ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಮೌಲ್ಯ ಪ್ರಥಮ, ಮಹಿಳೆಯರ ವಿಭಾಗದಲ್ಲಿ ಲೀಲಾವತಿ ಪ್ರಥಮ ಬಹುಮಾನ ಪಡೆದುಕೊಂಡರು. ಸ್ಪೂನ್ ನಲ್ಲಿ ನಿಂಬೆಹಣ್ಣು ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ತನ್ವಿಕ ಪ್ರಥಮ, ಮೌಲ್ಯ ದ್ವಿತೀಯ, ವಂಶಿನಿ ತೃತೀಯ ಬಹುಮಾನ ಪಡೆದುಕೊಂಡರು. ಪ್ರೌಢಶಾಲಾ ವಿಭಾಗದಲ್ಲಿ ಲಿಖಿತ ಪ್ರಥಮ, ಡ್ಯಾನಿಲ್ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಜಯಶ್ರೀ ಪ್ರಥಮ, ಶೀಲಾ ದ್ವಿತೀಯ, ಅಶ್ವಿನಿ ತೃತೀಯ ಬಹುಮಾನವನ್ನು ಪಡೆದುಕೊಂಡರು.
ವಿರಾಜಪೇಟೆ ಫೆ.14 NEWS DESK : ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. 42ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಏಳು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನದಾನ ಸೇವೆಗಳು ಜರುಗಿತು ವಿಸರ್ಜನೋತ್ಸವದಂದು ಮುಂಜಾನೆಯಿಂದಲೇ ವಿವಿಧ ಪೂಜಾ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಸೇವೆಗಳು ನಡೆದವು. ನಂತರ ಧಾರ್ಮಿಕ ಕಾರ್ಯಕ್ರಮದ ಬಳಿಕ ಗೌರಿ ಗಣೇಶ ಮೂರ್ತಿಯನ್ನು ಹೂವಿನ ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಶೋಭಯಾತ್ರೆಯ ಮೂಲಕ ತೆರಳಿ ಸಮೀಪದ ಮೂಲೆ ಅಂಗಡಿ ಹೊಳೆಯಲ್ಲಿ ವಿಸರ್ಜಿಸಲಾಯಿತು. ಶೋಭಯಾತ್ರೆಯ ಸಂದರ್ಭದಲ್ಲಿ ರುದ್ರಂ ಚಂಡೆ ಬಳಗದವರಿಂದ ಚಂಡೆ ಸೇವೆ ಹಾಗೂ ದಕ್ಷಿಣ ಕನ್ನಡದ ಕಲಾವಿದರು, ಸ್ಥಳೀಯ ಕಲಾವಿದರಿಂದ ಆಕರ್ಷಕವಾಗಿ ಕುಣಿತ, ಭಜನೆಯು ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ಗ್ರಾಮಸ್ಥರು ಹಾಜರಿದ್ದರು.
ಮೂರ್ನಾಡು ಸೆ.14 NEWS DESK : ಪಾಲೆಮಾಡುವಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಮೂರ್ತಿಯ ವಿಸರ್ಜನೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಪಾಲೆಮಾಡುವಿನ ಶ್ರೀ ಏಕದಂತ ಸೇವಾ ಸಮಿತಿಯ ವತಿಯಿಂದ 9ನೇ ವರ್ಷ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿಗೆ ಮೂರುದಿನಗಳ ಕಾಲ ವಿವಿಧ ಧಾರ್ಮಿಕ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕೃತ ಮಂಟಪದಲ್ಲಿ ಉತ್ಸವಮೂರ್ತಿಯನ್ನು ಪಾಲೆಮಾಡುವಿನ ಮುಖ್ಯಬೀದಿಗಳಲ್ಲಿ ಶೋಭಯಾತ್ರೆಯೊಂದಿಗೆ ಬಲಮುರಿಯ ಕಾವೇರಿನದಿಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ಏಕದಂತ ಸೇವಾ ಸಮಿತಿಯ ಅಧ್ಯಕ್ಷ ಎಂ.ಸಿ.ದಿನೇಶ್, ಉಪಾಧ್ಯಕ್ಷ ಶರವಣ, ಕಾರ್ಯದರ್ಶಿ ಟಿ.ಆರ್.ರಮೇಶ್, ಖಜಾಂಚಿ ಕಾಳಪ್ಪ ಹಾಗೂ ಸರ್ವಸದಸ್ಯರು, ಸುತ್ತಮುತ್ತಲಿನ ಗ್ರಾಮಸ್ಥರು ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು
ಮಡಿಕೇರಿ ಸೆ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ ಬೇಟಿ ಪಡಾವೋ” ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಕ್ಕಳ ತಜ್ಞ ಡಾ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪಾಲನೆ ಪೋಷಣೆಯಲ್ಲಿ ಪೋಷಕರ ಪಾತ್ರ ಮುಖ್ಯ. ಆದರೆ ಪ್ರಸ್ತುತ ದಿನಗಳಲ್ಲಿ ಪೋಷಕರು ಉದ್ಯೋಗದಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಳ್ಳುತ್ತಿರುವುದರಿಂದ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಮಕ್ಕಳನ್ನು ಶಾಂತವಾಗಿರಿಸಲು ಸಿಹಿತಿನಿಸು, ಬಿಸ್ಕೆಟ್, ಚಿಪ್ಸ್ ಇಂತಹ ಖರೀದಿಸಿದ ಪದಾರ್ಥ ನೀಡುತಿದ್ದಾರೆ. ಇದರಿಂದ ಮಕ್ಕಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಮಕ್ಕಳ ಎಲ್ಲಾ ತಾಯಂದಿರು ಮಕ್ಕಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಮನೆಯಲ್ಲಿ ತಯಾರಿಸಿದ ಆಹಾರ ಪಾದರ್ಥಗಳನ್ನು ನೀಡುವುದು ಉತ್ತಮ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ…
ಮಡಿಕೇರಿ ಸೆ.14 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೊಮ್ಮುವ ಎಫ್ 3 ಗದ್ದಿಗೆ, ಎಫ್11 ಗಾಳಿಬೀಡು ಹಾಗೂ ಎಫ್10 ಕುಂಡಾಮೇಸ್ತ್ರಿ ಫೀಡರ್ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಸೆಪ್ಟೆಂಬರ್, 17 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಂಪಿಗೆಕಟ್ಟೆ, ಎ.ವಿ.ಶಾಲೆ, ಆಜಾದ್ನಗರ, ತ್ಯಾಗರಾಜ ಕಾಲೋನಿ, ಮಾರ್ಕೆಟ್, ಭಗವತಿನಗರ, ಕಾನ್ವೆಂಟ್ ಜಂಕ್ಷನ್, ಐಟಿಐ ಹಿಂಭಾಗ, ಕಾವೇರಿ ಲೇಔಟ್, ಹೆಬ್ಬೆಟ್ಟಗೇರಿ, ದೇವಸ್ತೂರು, ಕೆ.ಬಾಡಗ, ಗಾಳಿಬೀಡು, ಕಾಲೂರು, ಸಿದ್ದಿಕಾಡು, ವಣಚಲು, ಕೆ.ನಿಡುಗಣೆ, ಕುಂಡಾಮೇಸ್ತ್ರಿ, ಕೂಟುಹೊಳೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ NEWS DESK ಸೆ.13 : ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತ್ವ ಅಭಿಯಾನ ಮತ್ತು ಕಾರ್ಯಕಾರಿಣಿ ಸಭೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯತ್ವ ಅಭಿಯಾನದೊಂದಿಗೆ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ, ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಂಯೋಜಕರಾಗಿ ವಸಂತ್ ಕುಮಾರ್ ಸಿದ್ದಾಪುರ, ಸಹ ಸಂಯೋಜಕರಾಗಿ ಸುರೇಶ್ ಬಿ.ಜೆ, ಕಾರ್ಯಕಾರಿಣಿ ಸದಸ್ಯರಾಗಿ ಅಕ್ಷಿತ್ ಪೂಜಾರಿ, ಪ್ರದೀಪ್ ಪೆರಾಜೆ ಹಾಗೂ ಸಾಮಾಜಿಕ ಜಾಲತಾಣದ ಮುಖ್ಯಸ್ಥರನ್ನಾಗಿ ವಿಠಲ್ ಪೂಜಾರಿ ಹಾಕತ್ತೂರು ಅವರನ್ನು ಆಯ್ಕೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು, ಸದಸ್ಯತ್ವವನ್ನು ಹೆಚ್ಚು ಮಾಡಬೇಕು ಎಂದು ಕರೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಮಾತನಾಡಿದರು. ಸಭೆಯಲ್ಲಿ ರಾಜ್ಯ…






