ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಇಂಟರ್ ಸ್ಕೂಲ್ ಚೆಸ್ ಪಂದ್ಯಾವಳಿಯು ನಗರದ ಕೊಡಗು ವಿದ್ಯಾಲಯದಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಜಿ.ವಿ.ಲಿಖಿತ್ ಒಟ್ಟು 8 ಪಂದ್ಯದಲ್ಲಿ 7 ಪಂದ್ಯಗಳನ್ನು ಗೆದ್ದು, 8ನೇ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಭಾಗವಹಿಸಿ 2ನೇ ಸ್ಥಾನ ಪಡೆದಿರುವುದು ಶಾಲೆಗೆ ಹಮ್ಮೆ ತಂದಿದೆ. ಆದ್ದರಿಂದ ವಿದ್ಯಾರ್ಥಿಗೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತರಬೇತುದಾರರಾದ ಈರಪ್ಪ ಹಾಗೂ ಶಾಲೆಯ ಪ್ರಾಂಶುಪಾಲರಾದ ಸವಿತ ಎಂ.ಜಿ. ಮತ್ತು ಮಾಸ್ಟರ್ ಮೈಂಡ್ ಚೆಸ್ ಶಾಲೆಯ ಆದರ್ಶ ಮಂಡಳಿಯವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಲೇಖಕ: admin
ಮಡಿಕೇರಿ ಸೆ.13 NEWS DESK : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಅಪ್ಪಯ್ಯ ಎಂ.ಕೆ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಜೆ.ಎಂ.ನಾಸಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಕಾರ್ಯದರ್ಶಿ ರಿಯಾಜ್ ಕೆ.ಹೆಚ್, ಜಿಲ್ಲಾ ಎಸ್.ಸಿ/ಎಸ್.ಟಿ. ಘಟಕದ ಅಧ್ಯಕ್ಷ ರಮೇಶ್ ಹೆಚ್.ಎ, ಸಾಮಾಜಿಕ ಜಾಲತಾಣದ ಜಿಲ್ಲಾ ಉಸ್ತುವಾರಿ ರಫೀಕ್ ಎಂ.ಇ, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಕೆ.ಪಿ.ಬಾಲಸುಬ್ರಹ್ಮಣ್ಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಯಾಜ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಎಂ.ಬೆಳ್ಳಿಯಪ್ಪ, ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶೀಲಾವತಿ ಹೆಚ್.ಎಸ್ ಹಾಗೂ ಜಿಲ್ಲಾ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷರನ್ನಾಗಿ ಅರುಣ ಎಸ್. ಅವರುಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷ ಅಪ್ಪಯ್ಯ ಎಂ.ಕೆ ಅವರು ಮಾತನಾಡಿ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಬಲವರ್ಧನೆಯೇ ನಮ್ಮ ಗುರಿಯಾಗಿರಬೇಕು, ಅನ್ಯಾಯ ಹಾಗೂ ಸಮಸ್ಯೆಗಳ…
ಮಡಿಕೇರಿ ಸೆ.13 NEWS DESK : ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಪದವಿ ಕಾಲೇಜುಗಳ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಅಂತರ್ ಕಾಲೇಜು ಸಮೂಹ ಗಾಯನ ಸ್ಪರ್ಧೆ ನಡೆಯಿತು. ಕೊಡ್ಲಿಪೇಟೆಯ ಪ್ರಥಮ ದರ್ಜೆ ಕಾಲೇಜು, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜು, ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜು, ವಿರಾಜಪೇಟೆಯ ಕಾವೇರಿ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳು ಸಮೂಹ ಗಾಯನ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು(ಪ್ರಥಮ), ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜು(ದ್ವಿತೀಯ), ಗೋಣಿಕೊಪ್ಪ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳು (ತೃತೀಯ) ಸ್ಥಾನ ಪಡೆದರು. ಸಮೂಹ ಗಾಯನ ಸ್ಪರ್ಧಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.…
ವಿರಾಜಪೇಟೆ ಸೆ.13 NEWS DESK : ವಿರಾಜಪೇಟೆಯ ಇತಿಹಾಸ ಪ್ರಸಿದ್ದ ಗಣಪತಿ ದೇವಾಲಯದ ಸಭಾಂಗಣದಲ್ಲಿ ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳ ಭಜನಾ ನೃತ್ಯ ಸಂಕೀರ್ತನೆಗಳು ಪ್ರೇಕ್ಷಕರನ್ನು ರಂಜಿಸಿತು. ಗಣಪತಿ ದೇವಾಲಯದ ಆವರಣದಲ್ಲಿ ಗಣೇಶನ ಮೂರ್ತಿಯ ಪ್ರತಿಷ್ಠಾಪನೆ ವೇಳೆ ಭಜನ ನೃತ್ಯ ಪ್ರದರ್ಶನ ನಡೆದು ಬಳಿಕ ಮೆರವಣಿಗೆ ಮುಖಾಂತರ ನೃತ್ಯ ತಂಡ ಸಾಗಿ ವಿಘ್ನ ವಿನಾಶಕನನ್ನು ದೇವಾಲಯಕ್ಕೆ ತರಲಾಯಿತು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು, ನೂರಾರು ಸಂಖ್ಯೆಯಲ್ಲಿ ಭಕ್ತರು, ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಭಜನಾ ನೃತ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿದ್ಯಾರ್ಥಿಗಳಿಗೆ ನೃತ್ಯ ಶಾಲೆಯ ಗುರುಗಳಾದ ಹೇಮಾವತಿ ಕಾಂತರಾಜ್, ಕು. ಕಾವ್ಯಶ್ರೀ ಮಾರ್ಗದರ್ಶನ ನೀಡಿದ್ದರು.
ಮಡಿಕೇರಿ ಸೆ.13 NEWS DESK : ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ನಡೆಯಿತು. ತಾಳತ್ತಮನೆ ಆಟದ ಮೈದಾನದಲ್ಲಿ ನಡೆದ ಶಿಬಿರದಲ್ಲಿ ಪಶುವೈದ್ಯಾಧಿಕಾರಿಗಳಾದ ಡಾ. ಎಂ.ಸಿ.ಲತಾ , ಡಾ. ಸಿ. ಎಸ್.ಶಿಲ್ಪಶ್ರೀ, ಎನ್.ಕೆ.ಮೋಹನ್ ಕುಮಾರ್, ಜಾನುವಾರು ಅಭಿವೃದ್ಧಿ ಅಧಿಕಾರಿ ಎಸ್.ನವೀನ್ ಕುಮಾರ್ ಸಾಕು ಪ್ರಾಣಿಗಳಿಗೆ ಲಸಿಕೆ ನೀಡಿ ಸಮಾಲೋಚನೆ ನೀಡಿದರು. ಮಡಿಕೇರಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಕೆ.ಎ.ಪ್ರಸನ್ನ ರೇಬಿಸ್ ಕುರಿತು ಮಾಹಿತಿ ನೀಡಿದರು. ಶಿಬಿರದಲ್ಲಿ 99 ನಾಯಿ ಹಾಗೂ 11 ಬೆಕ್ಕು ಗಳಿಗೆ ಲಸಿಕೆ ಹಾಕಲಾಯಿತು.
ಮಡಿಕೇರಿ ಸೆ.13 NEWS DESK : ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ದ.ಸಂ.ಸ.ಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಗಾಯತ್ರಿ ನರಸಿಂಹ, ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಬದ್ಧವಾದ ಅಧಿಕಾರ ಇದೆ ಮತ್ತು ಈ ಆದೇಶವನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ನ್ಯಾಯಾಲಯವೇ ಐತಿಹಾಸಿಕ ತೀರ್ಪು ನೀಡಿದೆ. ಇದು ಕಳೆದ 30 ವರ್ಷಗಳಿಂದ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದರು. ಪರಿಶಿಷ್ಟ ಜಾತಿಯ ಕೆಲವು ಉಪಜಾತಿಗಳಿಗೆ ಮೀಸಲಾತಿಯ ಪ್ರಯೋಜವನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಇಂತಹ ಉಪಜಾತಿಗಳು…
ನಾಪೋಕ್ಲು ಸೆ.13 NEWS DESK : ಗೌರಿ-ಗಣೇಶೋತ್ಸವದ ಅಂಗವಾಗಿ ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿಗಣೇಶ ಮೂರ್ತಿಗಳ ವಿಸರ್ಜನೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಕಕ್ಕುಂದ ಕಾಡಿನ ವೆಂಕಟರಮಣ ದೇವಸ್ಥಾನದ ಗಣಪತಿ ಸೇವಾ ವತಿಯಿಂದ 19ನೇ ವರ್ಷದ ಅದ್ಧೂರಿ ಗೌರಿ ಗಣೇಶ ಉತ್ಸವ ಸಮಿತಿ ವತಿಯಿಂದ ಮಹಾ ಪೂಜೆಯ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಗದಗದ ಮಹಿಳಾ ತಂಡದಿಂದ ಡೊಳ್ಳು ಕುಣಿತ, ಉಡುಪಿಯ ಕೀಲು ಗೊಂಬೆಗಳು ಸೇರಿದಂತೆ ಇತರ ಕಲಾತಂಡದೊಂದಿಗೆ ಪಟ್ಟಣದಲ್ಲಿ ಅಲಂಕೃತ ಮಂಟಪ ದೊಂದಿಗೆ ಸಾಗಿದ ಮೆರವಣಿಗೆಯಲ್ಲಿ, ಕಲಾತಂಡಗಳ ನೃತ್ಯ ಜನಮನ ರಂಜಿಸಿತು. ಇಂದಿರಾನಗರದ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 19ನೇ ವರ್ಷದ ದ್ಧೂರಿ ಗೌರಿ ಗಣೇಶ ಉತ್ಸವದಲ್ಲಿ ಸ್ಥಳೀಯರಿಂದ ಹಾಡುಗಾರಿಕೆ, ರವಿ ಬಳಗದಿಂದ ಸಂಗೀತ ಸಂಜೆ, ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸಂಜೆ ಅತ್ಯಾಕರ್ಷಕ ಕೇರಳದ ಕೊಯ್ಕೋಡ್ ನ ಲೈಟಿಂಗ್ಸ್ ವೇಷಭೂಷಣ ತೊಟ್ಟ ದೇವಕನ್ಯೆಯರಿಂದ ನೃತ್ಯ, ಶಬರಿಮಲೆ ಅಯ್ಯಪ್ಪನ ಬೃಹತ್ ಆಕಾರದ ಪ್ರತಿರೂಪ ದೊಂದಿಗೆ ಆಕರ್ಷಕ…
ಮಡಿಕೇರಿ ಸೆ.13 NEWS DESK : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬೀದರ್ನಿಂದ ಚಾಮರಾಜನಗರದವರೆಗೆ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಸರ್ಕಾರಿ ನೌಕರರು ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಲ್.ಜನಾರ್ಧನ್ ಹಾಗೂ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಪ್ರಜಾಪ್ರಭತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಮನವರಿಕೆ ಮಾಡಿಕೊಡಲು ಮುಂದಾಗಿದೆ. ಈ ಹಿಂದೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಿಗೆ ಅರಿವಾಗುವಂತೆ “ಸಂವಿಧಾನ ಜಾಥಾ” ಕಾರ್ಯಕ್ರಮ ಮಾಡಿ ಯಶಸ್ವಿಯಾಗಿತ್ತು ಎಂದು ತಿಳಿಸಿದ್ದಾರೆ. ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಹಿನ್ನೆಲೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿದರೆ ದೇಶದ…
ಮಡಿಕೇರಿ ಸೆ.13 NEWS DESK : ಚೆನ್ನೈನಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯ ಜೂನಿಯರ್ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್ಶಿಪ್ ನ 100 ಮೀಟರ್ ಹರ್ಡಲ್ಸ್ ನಲ್ಲಿ ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ ಚಿನ್ನದ ಪದಕ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಉನ್ನತಿ ಅಯ್ಯಪ್ಪ ರಾಷ್ಟ್ರೀಯ ಅಥ್ಲೆಟ್ ಕೋಚ್ ಬೊಳ್ಳಂಡ ಅಯ್ಯಪ್ಪ ಹಾಗೂ ಮಾಜಿ ಒಲಂಪಿಯನ್ ಪ್ರಮೀಳಾ ದಂಪತಿಯ ಪುತ್ರಿ.
ಮಡಿಕೇರಿ NEWS DESK ಸೆ.13 : ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.16ರಂದು ಹುದಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹುದಿಕೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.…






