ಲೇಖಕ: admin

ಮಡಿಕೇರಿ ಸೆ.13 NEWS DESK : ವಿರಾಜಪೇಟೆ ಪಟ್ಟಣದಲ್ಲಿ ನಡೆಯಲಿರುವ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ.17 ರಂದು ಅಪರಾಹ್ನ 2 ಗಂಟೆಯಿಂದ ಸೆ.18 ಬೆಳಿಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ತಾತ್ಕಾಲಿಕ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಪೆರಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ವಿರಾಜಪೇಟೆ ತಾಲೂಕು ತಹಶೀಲ್ದಾರ್‍ರವರ ಕಛೇರಿಯ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್-ಬಾಳುಗೋಡು-ಬಿಟ್ಟಂಗಾಲ ಜಂಕ್ಷನ್-ಕೈಕೇರಿ ಜಂಕ್ಷನ್-ಸಿ.ಎಂ. ಪೂಣಚ್ಚನವರ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ-ಸಿದ್ದಾಪುರಕ್ಕೆ ಹೋಗುವುದು. ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ-ಬಿಟ್ಟಂಗಾಲ- ಬಾಳುಗೋಡು – ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು. ಮಡಿಕೇರಿಯಿಂದ ಕೇರಳದ…

Read More

ಮಡಿಕೇರಿ ಸೆ.13 NEWS DESK : “2024-25 ನೇ ಸಾಲಿನ ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯದಲ್ಲಿ ಸೆ.17 ರಂದು ಜರುಗುವ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ” ಕುರಿತು ಪೂರ್ವ ಸಿದ್ಧತೆ ಬಗ್ಗೆ ಚರ್ಚಿಸಲು ಸಲುವಾಗಿ ಸೆ.14 ರಂದು “ಅಪರಾಹ್ನ 3.30 ಗಂಟೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್. ಭೋಸರಾಜು ಅಧ್ಯಕ್ಷತೆಯಲ್ಲಿ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಆದುದರಿಂದ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – 2024” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ, ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ  ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು ಕೋರಿದ್ದಾರೆ.  

Read More

ಮಡಿಕೇರಿ NEWS DESK ಸೆ.12 : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಸೆ.14ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಗುಡ್ಡೆಹೊಸೂರು ಸಮುದಾಯ ಭವನದಲ್ಲಿ ಕುಶಾಲನಗರ ತಾಲೂಕಿನ ಐವರಿಗೆ ನೇಗಿಲಯೋಗಿ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ತೋಟಗಾರಿಕೆ ವಿಭಾಗದಿಂದ ಅರಿಶಿನಗುಪ್ಪೆ ಗ್ರಾಮದ ಶುಂಠಿ ಹಾಗೂ ಬೆಣ್ಣೆಹಣ್ಣು ಬೆಳೆಗಾರ ಎಂ.ಟಿ. ಬೇಬಿ, ಹೈನುಗಾರಿಕೆ ವಿಭಾಗದಿಂದ ಗುಡ್ಡೆಹೊಸೂರು ಗ್ರಾಮದ ಸಾಗರ್, ಸಮಗ್ರ ಕೃಷಿಕ ವಿಭಾಗದಿಂದ ನಾಕೂರು ಶಿರಂಗಾಲ ಗ್ರಾಮದ ಕೃಷಿಕ ಪಿ.ಎಂ. ಬಿಜು, ಮಹಿಳಾ ಕೃಷಿಕರು ವಿಭಾಗದಿಂದ ಗುಡ್ಡೆಹೊಸೂರಿನ ಕೊರವಂಡ ವಸಂತಿ ಪೊನ್ನಪ್ಪ, ಯುವ ಕೃಷಿಕ ವಿಭಾಗದಿಂದ ಅತ್ತೂರು ಗ್ರಾಮದ ಸಜಿತ್ ಅವರಿಗೆ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಂಬಿಬಾಣೆಯ ಕಾಫಿ ಬೆಳೆಗಾರ ಟಿ.ಕೆ.ಸಾಯಿಕುಮಾರ್ ಅವರು ತಮ್ಮ ತಂದೆ ದಿ. ಟಿ.ಕೆ. ಕುಮಾರನ್ ಹಾಗೂ ತಾಯಿ ಕೆ.ಎನ್. ಭಾರತಿ ಅವರ ನೆನಪಿಗಾಗಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಲ್ಲಿ ಅತ್ಯುತ್ತಮ ಕೃಷಿಕರಿಗಾಗಿ…

Read More

ಮಡಿಕೇರಿ NEWS DESK ಸೆ.12 : ರಾಜ್ಯದ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ಏರ್ಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಪಾಜೆಯಿಂದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಮಾನವ ಸರಪಳಿ ಏರ್ಪಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಶಾಲಾ-ಕಾಲೇಜಿನ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಎರಡನೇ ಸುತ್ತಿನ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸೆ.15 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಮಾನವ ಸರಪಳಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಕೋರಿದರು. ಸರ್ಕಾರವು ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ…

Read More

ಮಡಿಕೇರಿ NEWS DESK ಸೆ.12 : ವಿವಿಧ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಸಂಘಟನೆಗಳಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಸದಸ್ಯರ ದತ್ತಾಂಶವನ್ನು ಪಡೆಯಲು ಸಮಾಲೋಚನಾ ಸಭೆ ನಡೆಯಿತು. ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಯತ್ನಟ್ಟಿ ಅವರು 23 ಅಸಂಘಟಿತ ವರ್ಗಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಪರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ ಟೆಂಟ್/ ಪೆಂಡಾಲ್‌ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಹಾಗೂ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರು(ಮೆಕ್ಯಾನಿಕ್…

Read More

ಮಡಿಕೇರಿ NEWS DESK ಸೆ.12 : ಪ್ರಜಾಪ್ರಭುತ್ವ ಬಲಪಡಿಸಲು ಸಾಕ್ಷರತೆ ಒಂದು ಪ್ರಮುಖ ಸಾಧನವಾಗಿದೆ ಎಂದು ಕೂಡಿಗೆಯ ಪ್ರಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅಂತರಾಷ್ಟ್ರೀಯ ಸಾಕ್ಷರತೆ ದಿನಾಚರಣೆ ಮತ್ತು ಸಪ್ತಾಹವನ್ನು ಜಿಲ್ಲಾ ವಯಸ್ಕರ ಶಿಕ್ಷಣ ಸಹಯೋಗದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಗುರುವಾರ ಆಚರಿಸಲಾಯಿತು. ಸಾಕ್ಷರತೆಯ ಮಹತ್ವ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಆದ್ದರಿಂದ ಪ್ರತೀ ವರ್ಷ ವಿಶ್ವ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ ಎಂದರು. ‘ಆಲೋಚನೆಗಳು ಮತ್ತು ಭಾವನೆಗಳನ್ನು ಓದುವ ಮತ್ತು ಬರವಣಿಗೆ ಮೂಲಕ ತಿಳಿಸಲು ಸಾಕ್ಷರತೆ ಅತ್ಯವಶ್ಯಕವಾಗಿದೆ. ಸಾಮಾಜಿಕ ಮತ್ತು ಮಾನವೀಕ ಅಭಿವೃದ್ಧಿಗೆ ಸಾಕ್ಷರತೆ ಒಂದು ಶಕ್ತಿಯಾಗಿದೆ ಎಂದು ಎಂ.ಚಂದ್ರಕಾಂತ್ಅವರು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರೂ ಸಾಮಾಜಿಕ, ಆರ್ಥಿಕ ಹಾಗೂ ವೈಯಕ್ತಿಕವಾಗಿ ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಎಂ.ಚಂದ್ರಕಾಂತ್ ಅವರು ಹೇಳಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಡಿವೈಎಸ್‌ಪಿ…

Read More

ಮಡಿಕೇರಿ NEWS DESK ಸೆ.12 : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಗಲಭೆ ನಡೆಸಿ ಮೆರವಣಿಗೆಗೆ ತಡೆಯೊಡ್ಡಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಕುಕ್ಕೇರ ಅಜಿತ್ ಮಾತನಾಡಿ ಗಣೇಶೋತ್ಸವ ಆಚರಣೆ ಹಿಂದೂ ರಾಷ್ಟç ಭಾರತದ ರಾಷ್ಟ್ರೀಯ ಹಬ್ಬವಾಗಿದೆ. ಇದನ್ನು ತಡೆಯಲು ಯತ್ನಿಸಿದರೆ ಸಹಿಸಲು ಸಾಧ್ಯವಿಲ್ಲವೆಂದರು. ನಾಗಮAಗಲದಲ್ಲಿ ನಡೆದ ಅಹಿತಕರ ಘಟನೆ ಇಡೀ ಹಿಂದೂ ಸಮಾಜವನ್ನು ಜಾಗೃತಗೊಳಿಸಿದೆ. ಮುಂದಿನ ದಿನಗಳಲ್ಲಿ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಬಹುದು. ಏನೇ ಅನಾಹುತ ಸಂಭವಿಸಿದರೂ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಮಾಜದಲ್ಲಿ ಅಶಾಂತಿ ಮೂಡಿಸುವ ದುಷ್ಕರ್ಮಿಗಳಿಗೆ ರಾಜ್ಯ ಸರ್ಕಾರ ಓಟ್…

Read More

ಮಡಿಕೇರಿ ಸೆ.12 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬೇಂಗ್‍ನಾಡ್ ಕೊಡವ ಸಮಾಜದ ಸಹಯೋಗದಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಗಳ 157ನೇ ಜನ್ಮದಿನಾಚರಣೆಯ ಪ್ರಯುಕ್ತ ಸೆ.28 ರಂದು ಚೇರಂಬಾಣೆಯಲ್ಲಿ “ಕೊಡವ ಸಾಹಿತ್ಯ ನಾಳ್” ಕಾರ್ಯಕ್ರಮ ನಡೆಯಲಿದೆ. ಚೇರಂಬಾಣೆಯ ಕೊಡವ ಸಮಾಜದಲ್ಲಿ ಶಾಸಕರುಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ವಿಧಾನ್ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಸಾಹಿತ್ಯ ನಾಳ್, ಕೊಡವ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಬೇಂಗ್‍ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ ಉಸ್ತುವಾರಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೇಂಗ್‍ನಾಡ್ ಭಾಗದ ಕಾರುಗುಂದ, ಐವತ್ತೋಕ್ಲು, ಕಡಿಯತ್ತೂರು, ಬೇಂಗೂರು, ಬಾಡಗ, ಕೊಳಗದಾಳು, ಕೋಪಟ್ಟಿ, ಚೆಟ್ಟಿಮಾನಿ ಹಾಗೂ ಬೆಟ್ಟತ್ತೂರು ಗ್ರಾಮಸ್ಥರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವು ಬೆಳಗ್ಗೆ 9 ಗಂಟೆಗೆ ಚೇರಂಬಾಣೆ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಶುಭಾರಂಭಗೊಳ್ಳಲಿದ್ದು, ಕೊಂಬ್-ಕೊಟ್ಟ್, ದುಡಿಕೊಟ್ಟ್ ಪಾಟ್, ತಳಿಯತಕ್ಕಿ ಬೊಳ್‍ಚ, ವೀರ ಕೊಡವರ ಸಾಂಪ್ರದಾಯಿಕ ಉಡುಗೆಯೊಂದಿಗೆ ಬೀಕಚಂಡ…

Read More

ಸಿದ್ದಾಪುರ NEWS DESK  ಸೆ.12 : : ಕರಡಿಗೋಡು ಆರೆಂಜ್ ಕೌಂಟಿ ಇವಾಲ್ವ್ ಬ್ಯಾಕ್ ರೆಸಾರ್ಟ್ ಸಂಸ್ಥೆ ವತಿಯಿಂದ ನೂತನ ತಂಗುದಾಣವನ್ನು ಕೊಡುಗೆಯಾಗಿ ನಿರ್ಮಿಸಿಕೊಡಲಾಯಿತು. ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ತೂಬನಕೊಲ್ಲಿ ಬಳಿ ಅಂದಾಜು 5 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ತಂಗುದಾಣವನ್ನು ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಹಾಗೂ ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿಸ್ವಾಮಿ ಸೇರಿದಂತೆ ಮತ್ತಿತರರು ಸೇರಿ ಉದ್ಘಾಟನೆ ಮಾಡಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ ಹಲವು ವರ್ಷಗಳ ಹಿಂದೆ ಕರಡಿಗೋಡು ಗ್ರಾಮದಲ್ಲಿ ಆರೆಂಜ್ ಕೌಂಟಿ ಎಂಬ ರೆಸಾರ್ಟ್ ಸಂಸ್ಥೆಯನ್ನು ಪ್ರಾರಂಭಿಸಿ ಸಂಸ್ಥೆ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹಲವು ಯೋಜನೆಗಳನ್ನು ರೂಪಿಸಿ ಗ್ರಾಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಕರಡಿಗೋಡು ಸರ್ಕಾರಿ ಶಾಲೆ ದತ್ತು ಸ್ವೀಕಾರ, ಗ್ರಾಮ ವ್ಯಾಪ್ತಿಯಲ್ಲಿ ಸೋಲಾರ್ ದೀಪ ಅಳವಡಿಕೆ, ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಹೈಮಾಸ್ಟ್ ಲೈಟ್ ಅಳವಡಿಕೆ, ಶುಚಿತ್ವಕ್ಕೆ ಆದ್ಯತೆ, ಶಾಲಾ ಮಕ್ಕಳ ಶಿಕ್ಷಣಕ್ಕೆ ನೆರವು, ಸಿದ್ದಾಪುರ ಎಸ್ಎನ್‌ಡಿಪಿ…

Read More

ಮಡಿಕೇರಿ ಸೆ.12 NEWS DESK : ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬುವವರೇ ಕಕ್ಕಬ್ಬೆ ಬ್ಯಾಂಕ್ ನಲ್ಲಿ ನೇಣಿಗೆ ಶರಣಾದ ವ್ಯಕ್ತಿ. ಇವರು ಮೂಲತ: ಕೇರಳದ ಆಲಪುಯ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More