ಲೇಖಕ: admin

ಪುತ್ತೂರು ಸೆ.11 NEWS DESK : ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯಗಳ ಬಗ್ಗೆ ಆಳವಾದ ಅಧ್ಯಯನವನ್ನು ನಡೆಸಬೇಕು ಅದಕ್ಕಾಗಿ ಆ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವ ತಜ್ಞರ ಸಹಕಾರವನ್ನು ಪಡೆದುಕೊಳ್ಳಬೇಕು ಎಂದು ಎನ್‍ಐಟಿಕೆ ಸುರತ್ಕಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಅಣ್ಣಪ್ಪ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನಗಳ ಹೊಸಯುಗದ ಅನಾವರಣದ ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-2024 ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಪೋರೇಟ್ ಕಂಪೆನಿಗಳು ಅಂಕಗಳ ಪರಿಗಣನೆಗಿಂತ ನಿಗದಿತ ವಿಷಯಗಳ ಬಗ್ಗೆ ಹೊಂದಿರುವ ಪರಿಣತಿಯನ್ನು ಗಮನಿಸುತ್ತವೆ ಎಂದರು. ಇಂತಹ ಸಮ್ಮೇಳನಗಳು ಹೊಸ ಹೊಸ ವಿಷಯಗಳ ತಿಳುವಳಿಕೆಗೆ ಸಹಕಾರಿಯಾಗುತ್ತದೆ ಎಂದು ನುಡಿದರು. ಮಂಗಳೂರು ವಿನೀರ್ ಇಂಟರ್ನೇಶನಲ್ ಕನ್ಸಲ್‍ಟೆನ್ಸಿ ಯ ಸಹಸಂಸ್ಥಾಪಕ ಮೆಲ್ವಿನ್ ಸಿಕ್ವೇರಾ ಮಾತನಾಡಿ, ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನವನ್ನು ಕಲಿತುಕೊಳ್ಳುವುದು ಅತೀ ಅಗತ್ಯ ಇಲ್ಲವಾದರೆ ನಾವು ಬಹಳ ಹಿಂದುಳಿಯುತ್ತೇವೆ. ನಾವು ಕಲಿತುಕೊಂಡು ಅದನ್ನು ಸಮಾಜದ…

Read More

ಕುಶಾಲನಗರ ಸೆ.11 NEWS DESK : ಕೂಡುಮಂಗಳೂರು ಗ್ರಾ.ಪಂ ನ ಎರಡನೇ ವಾರ್ಡ್ ನ ವಿನಾಯಕ ಬಡಾವಣೆಯಲ್ಲಿ ನಡೆದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಹಾಗೂ ಪಿಡಿಓ ಸಂತೋಷ್ ಪರಿಶೀಲನೆ ನಡೆಸಿದರು.  ಈ ಸಂದರ್ಭ ಮಾತನಾಡಿದ ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ಕೂಡುಮಂಗಳೂರು ಗ್ರಾ.ಪಂ ನ‌ ವಿನಾಯಕ ಬಡಾವಣೆಯು ಅಭಿವೃದ್ಧಿ ಶೂನ್ಯವಾಗಿತ್ತು. ವಿನಾಯಕ ಬಡಾವಣೆಯ ಸೋಮಶೇಖರ್ ಹಾಗೂ ಆರಿಫಾ ರವರ ಮನೆವರೆಗೆ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ನಡೆಸಲಾಗಿದೆ. ನಮ್ಮ ಅವಧಿಯಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸವನ್ನು ಮಾಡಲಾಗಿದೆ. ಸಿಗುವ ಅನುದಾನವನ್ನು ಸಮಾನವಾಗಿ ಎಲ್ಲಾ ಗ್ರಾಮಗಳಿಗೂ ಮೀಸಲಿಟ್ಟು ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದರು. ವಾರ್ಡ್ ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಶಾಸಕರಾದ‌‌ ಡಾ.ಮಂತರ್ ಗೌಡರವರಿಗೆ ಮನವಿ ಪತ್ರ ನೀಡಲಾಗಿದೆ. ಶಾಸಕರು ಅನುದಾನ ನೀಡುವ ಭರವಸೆ ನೀಡಿದ್ದಾರೆ‌. ಶಾಸಕರ ಅನುದಾನ ಲಭಿಸಿದ್ದಲ್ಲಿ ವಾರ್ಡನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಈ ಸಂದರ್ಭ ವಿನಾಯಕ ಬಡಾವಣೆಯ ನಿವಾಸಿಗಳು ಇದ್ದರು.

Read More

ಕೂಡಿಗೆ ಸೆ.11 NEWS DESK : ಮೈಸೂರು ರಾಜ್ಯವು ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು 50 ವರ್ಷಗಳು ಸಂದ ಹಿನ್ನೆಲೆಯಲ್ಲಿ “ಕರ್ನಾಟಕ ಸುವರ್ಣ ಸಂಭ್ರಮ:50” ರ ಅಂಗವಾಗಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥ‌ಯಾತ್ರೆಗೆ  ಕೂಡುಮಂಗಳೂರು ಗ್ರಾಮ ಪಂಚಾಯತಿ ಹಾಗೂ ವಿವಿಧ ಶಾಲಾ- ಕಾಲೇಜುಗಳ ವತಿಯಿಂದ ಕೂಡಿಗೆ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಸೋಮವಾರಪೇಟೆ ತಾಲ್ಲೂಕಿನಿಂದ ಕುಶಾಲನಗರ ತಾಲ್ಲೂಕಿಗೆ ಆಗಮಿಸಿದ ಕನ್ನಡ ರಥವನ್ನು ಗ್ರಾ.ಪಂ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್  ರಥಕ್ಕೆ ಪುಷ್ಪ ಅರ್ಪಿಸಿ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಕನ್ನಡ ನಾಡು- ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿರುವ ಈ ರಥವು ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿದಿದೆ. ನಾವೆಲ್ಲರೂ ಕನ್ನಡ ನಾಡು- ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿಯಲು ಪಣ ತೊಡಬೇಕು ಎಂದು ಮನವಿ ಮಾಡಿದರು. ಕರ್ನಾಟಕ ಸುವರ್ಣ ಸಂಭ್ರಮದ ಮಹತ್ವ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್…

Read More

ಮಡಿಕೇರಿ ಸೆ.11 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಇವರ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ  ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಡಿಸಿಎಫ್ ಭಾಸ್ಕರ್ ಹುತಾತ್ಮರನ್ನು ಸ್ಮರಿಸಿದರು. ಪೊಲೀಸ್ ತಂಡದವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಿದರು. ಈ ಸಂದರ್ಭ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಟಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಸೇರಿದಂತೆ ಇತರರು ಇದ್ದರು.

Read More

ಮಡಿಕೇರಿ ಸೆ.11 NEWS DESK : ಕತ್ತಲೆಕಾಡು, ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 18ನೇ ವರ್ಷದ ಗೌರಿ-ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತ್‌ ಮಾತಾ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಗಣೇಶ ಮೂರ್ತಿಯನ್ನು ಟ್ರಸ್ಟ್‌ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಜೆ ಸ್ಥಳೀಯ ವಿದ್ಯಾರ್ಥಿಗಳು, ಸ್ಥಳೀಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಿತು. ಮಡಿಕೇರಿಯ ರಾಮಾಂಜನೇಯ ಭಜನಾ ಮಂಡಳಿ ಸದಸ್ಯರು ಭಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ಮಹಾಪೂಜೆ ಬಳಿಕ ವಿದ್ಯುತ್‌ ದೀಪಾಲಂಕೃತ ಮಂಟಪದಲ್ಲಿ ಗ್ರಾಮದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ಬಳಿಕ ಕ್ಲೋಸ್‌ಬರ್ನ್‌ ಕೆರೆಯಲ್ಲಿ ವಿಸರ್ಜಿಸಲಾಯಿತು. ಬಿಡುವು ನೀಡದೆ ಸುರಿದ ಮಳೆಯ ನಡುವೆಯೂ ಸಾರ್ವಜನಿಕರು ಅತ್ಯುತ್ಸಾಹದಿಂದ ಗಣೇಶನ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಬ್ಬರದ ಸಂಗೀತಕ್ಕೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಅರ್ಚಕ ಯೋಗೇಶ್‌ ಭಟ್‌ ಪೂಜಾ ಕಾರ್ಯ ನಡೆಸಿಕೊಟ್ಟರು. ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ, ಉಪಾಧ್ಯಕ್ಷ ಚಂದ್ರಶೇಖರ ರೈ, ಕಾರ್ಯದರ್ಶಿ ಬ್ರಿಜೇಶ್ ಖಜಾಂಚಿ ನವೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಶೋಕ, ಖಜಾಂಚಿ…

Read More

ಮಡಿಕೇರಿ ಸೆ.11 NEWS DESK : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ಕೊಡುಗೆಯಾಗಿ ನೀಡಿದರು. ‎ ಕುಟ್ಟ ನಿವಾಸಿ ರಾಘವನ್  ಈ ಬಗ್ಗೆ ಶಾಸಕ ಪೊನ್ನಣ್ಣ ಅವರಿಗೆ ಹೇಳಿಕೊಂಡಿದ್ದು, ತಕ್ಷಣವೇ ಸ್ಪಂದಿಸಿದ ಶಾಸಕರು ಅಗತ್ಯವಿರುವ ಆಕ್ಸಿಜನ್ ಕಾನ್ಸಂಟ್ರೇಟರನ್ನು ವಿತರಿಸಿದರು. ಈ ಸಂದರ್ಭ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಕಾಳಿಮಾಡ ಪ್ರಶಾಂತ್, ಕಲಿಯಂಡ ಸಂಪನ್ ಅಯ್ಯಪ್ಪ, ನಿಶ್ಚಲ್ ದಂಬೆಕೋಡಿ, ವಿನಿಲ್ ಸೋಮಣ್ಣ ಮತ್ತಿತರು ಹಾಜರಿದ್ದರು.

Read More

ನಾಪೋಕ್ಲು ಸೆ.11 NEWS DESK : ಭಾಗಮಂಡಲ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಚೇರಂಬಾಣೆ ಯ ಕೊಟ್ಟೂರು ಶ್ರೀ ರಾಜ ರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ ಮಾಡಿದ್ದಾರೆ. ಬಾಲಕರ ವಿಭಾಗದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕೆ ಆಯ್ಕೆ ಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದ ಥ್ರೋ ಬಾಲ್ ಸ್ಪರ್ಧೆಯಲ್ಲಿ ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಬಾಲಕ, ಬಾಲಕಿಯರು ಪ್ರಥಮ, ಎತ್ತರ ಜಿಗಿತ ಬಾಲಕರ ವಿಭಾಗ ಪ್ರಥಮ, ಬಾರದ ಗುಂಡು ಎಸೆತ ಬಾಲಕರ ಹಾಗೂ ಬಾಲಕಿಯರು ದ್ವಿತೀಯ, ಜಾವಲಿನ್ ಬಾಲಕಿಯರ ಎಸೆತದಲ್ಲಿ ದ್ವಿತೀಯ, 100×4 ಮೀಟರ್ ರಿಲೇ ಓಟದಲ್ಲಿ ಪ್ರಥಮ, 4×400 ಮೀಟರ್ ರೀಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. 100 ಮೀಟರ್ ಓಟ ಸ್ಪರ್ಧೆಯಲ್ಲಿ ಬಾಲಕರು ಪ್ರಥಮ, 200 ಮೀಟರ್ ಓಟದಲ್ಲಿ ಬಾಲಕರು ಪ್ರಥಮ, 1500 ಮೀಟರ್ ಓಟದಲ್ಲಿ ಬಾಲಕರು ತೃತೀಯ, ತಟ್ಟೆ ಎಸೆತದಲ್ಲಿ ಬಾಲಕರು ಹಾಗೂ ಬಾಲಕಿಯರು ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ದೈಹಿಕ…

Read More

ನಾಪೋಕ್ಲು ಸೆ.11 NEWS DESK : ಕೊಡಗು ಬ್ರಹ್ಮಗಿರಿ ಸಹೋದಯದ ಕ್ಲಸ್ಟರ್ ವತಿಯಿಂದ ಅಂಕುರ್ ಪಬ್ಲಿಕ್ ಶಾಲೆಯ ವತಿಯಿಂದ ಪಾಲಿಬೆಟ್ಟ ಚೆಶೈರ್ ಹೋಂ ಅಧ್ಯಕ್ಷೆ ಗೀತ ಚಂಗಪ್ಪ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ವತಿಯಿಂದ ನಾಪೋಕ್ಲು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಗೀತ ಚಂಗಪ್ಪ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಶಾಲೆಯ ಶಿಕ್ಷಕರು, ಗಣ್ಯರು ಸನ್ಮಾನಿಸಿ ಗೌರವಿಸಿದರು. ನಾಪೋಕ್ಲು ಅಂಕುರ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೇಟೋಳಿರ ರಾಜಚರ್ಮಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಹಾಗೂ ಬ್ರಹ್ಮಗಿರಿ ಸಹೋದಯದ ಖಜಾಂಚಿ ರತ್ನ ಚರ್ಮಣ, ಅರಮೆರಿ ಎಸ್ಎಂಎಸ್ ಶಾಲೆಯ ಪ್ರಾಂಶುಪಾಲ ಕುಸುಮ್ ಟಿಟೋ, ಬ್ರಹ್ಮಗಿರಿ ಸಹೋದಯದ ಕಾರ್ಯದರ್ಶಿ , ಮಡಿಕೇರಿ ಎ.ಎಲ್.ಜಿ ಶಾಲೆಯ ಪ್ರಾಂಶುಪಾಲ ಜಾಯ್ಸಿ , ಮಡಿಕೇರಿ ಕೊಡಗು ವಿದ್ಯಾಲಯ ಶಾಲೆಯ ಪ್ರಾಂಶುಪಾಲೆ ಸುಮಿತ್ರ, ಪಾಲಿಬೆಟ್ಟ ಜ್ಞಾನಗಂಗಾ ಶಾಲೆಯ ಪ್ರಾಂಶುಪಾಲರಾದ ಸುಲೋಚನ, ಗೋಣಿಕೊಪ್ಪ ನ್ಯಾಷನಲ್ ಅಕಾಡೆಮಿ ಶಾಲೆಯ ಪ್ರಾಂಶುಪಾಲರಾದ ಪುಷ್ಪ, ಅಂಕುರ್ ಪಬ್ಲಿಕ್ ಶಾಲೆಯ ನಿರ್ದೆಶಕಿ…

Read More

ಮಡಿಕೇರಿ ಸೆ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕಸಾಪ ಮತ್ತು ಮೂರ್ನಾಡು ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮೂರ್ನಾಡು ಪದವಿ ಪೂರ್ವ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಡಾ.ಚೌರೀರ ಜಗತ್ ತಿಮ್ಮಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ನಿಯೋಜಿತ ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಪುಸ್ತಕ ಬಿಡುಗಡೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ.ದೇವಕ್ಕಿ, ಸಾಹಿತಿ ಗೌರಮ್ಮ ಮಾದಮಯ್ಯ ವಿಷಯ ಸಂಕಲನ ಲೇಖಕರು, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷ ಪಿ.ಅನೂಪ್ ಮಾದಪ್ಪ “ಸಂಚಾರ ನಿಯಮ ಹಾಗೂ ಕಾನೂನು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದು, ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ…

Read More

ಮಡಿಕೇರಿ ಸೆ.11 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಮೂರ್ನಾಡು ಪಂಚಾಯಿತಿ ಸದಸ್ಯ  ಮುಂಡಾಂಡ ವಿಜು ಹಾಗೂ ಕಸಪಾ ಮೂರ್ನಾಡು ಘಟಕದ ಪದಾಧಿಕಾರಿಗಳು  ಕನ್ನಡ ರಥದ ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಕಸಪಾ ಮೂರ್ನಾಡು ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಸಂಘಟನೆ ಕಾರ್ಯದರ್ಶಿ ಜಾಶೀರ್ , ಸದಸ್ಯ ಕೊಳುಮಾಡಾಂಡ ಮಣಿ ಚೆಂಗಪ್ಪ ಹಾಗೂ ಇತರ ಸದಸ್ಯರು ಹಾಜರಿದ್ದರು.

Read More