ಲೇಖಕ: admin

ಮಡಿಕೇರಿ ಸೆ.10 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನ ಮತ್ತು ಕಚೇರಿಯನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಹಾಗೂ ಮತ್ತಿತರ ಗಣ್ಯರು ಹಾಜರಿದ್ದರು. ವಾರ್ಷಿಕ ಮಹಾಸಭೆ : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ 7ನೇ ವಾರ್ಷಿಕ ಮಹಾಸಭೆಯು ಸೆ.17 ರಂದು ಪೆರಾಜೆ ಶ್ರೀ ಅನ್ನಪೂರ್ಣೆಶ್ವರಿ ಕಲಾ ಮಂದಿರದಲ್ಲಿ ಪೂರ್ವಾಹ್ನ 10.40ಕ್ಕೆ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಲೋಕೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.10 NEWS DESK : ಚೆಸ್ಕಾಂ ಮಡಿಕೇರಿ ಉಪವಿಭಾಗ ಮತ್ತು ಮಡಿಕೇರಿ ವಿಭಾಗದ ವತಿಯಿಂದ ವಿದ್ಯುತ್ ಗುತ್ತಿಗೆದಾರರ ಸಹಕಾರದೊಂದಿಗೆ 55ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ ಕ್ರೀಡಾಕೂಟ ನಡೆಯಿತು. ಚೆಸ್ಕಾಂ ಎಇಇ ವಿನಯ್ ಕುಮಾರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಕೆಗಳಲ್ಲಿ ಇಲಾಖಾ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಕೋರಿ ಶುಭ ಹಾರೈಸಿದರು. ಚೆಸ್ಕಾಂ ಸಹಾಯಕ ಇಂಜಿನಿಯರ್ ಸಂಪತ್ ಮಾತನಾಡಿ, ಈ ಹಿಂದಿನಿಂದಲು ಗಣೇಶೋತ್ಸವವನ್ನು ಇಲಾಖಾ ಸಿಬ್ಬಂದಿಗಳು ನಡೆಸಿಕೊಂಡು ಬರುತ್ತಿದ್ದು, ಅದನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಉತ್ಸವದ ಹಿನ್ನೆಲೆಯಲ್ಲಿ ಇಲಾಖಾ ಸಿಬ್ಬಂದಿಗಳಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಮುಂಗಾರಿನ ಅವಧಿಯಲ್ಲಿ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಲು ಅವಿಶ್ರಾಂತವಾಗಿ ಶ್ರಮಿಸಿದ್ದ ಸಿಬ್ಬಂದಿಗಳ ಮನರಂಜನೆಗಾಗಿ ಮತ್ತು ನಿತ್ಯದ ಒತ್ತಡಗಳಿಂದ ಹೊರ ಬರಲು ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ ಎಂದರು. ಕ್ರೀಡಾಕೂಟದಲ್ಲಿ ಚೆಸ್ಕಾಂ ಮಡಿಕೇರಿ ಉಪ ವಿಭಾಗದ ಸುಮಾರು 150 ಸಿಬ್ಬಂದಿಗಳು ಮತ್ತು ಮಡಿಕೇರಿ ವಿಭಾಗದ 50 ಕ್ಕೂ ಹೆಚ್ಚಿನ ಸಿಬ್ಬಂದಿಗಳು ಪಾಲ್ಗೊಳ್ಳುತ್ತಿರುವುದಾಗಿ ಮಾಹಿತಿ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ಚೆಸ್ಕಾಂ…

Read More

ಮಡಿಕೇರಿ ಸೆ.10 NEWS DESK : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ಚಾಲಕನ ಕಾಲಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೇಕೇರಿ ಸಮೀಪದ ಬಿಳಿಗೇರಿಯಲ್ಲಿ ನಡೆದಿದೆ.  ಆಂಬುಲೆನ್ಸ್ ನಲ್ಲಿ ಇದ್ದ ಮಹಿಳೆಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.  ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಸೆ.10 NEWS DESK : ಬ್ರಿಟಿಷ್ ಅಧಿಕಾರಿಗಳು ಭೇಟಿ ಮಾಡಿದ ಜ್ಞಾಪಕಾರ್ಥವಾಗಿ ವಿರಾಜಪೇಟೆ ಎಂದು ಅಂದು ನಾಮಕರಣಗೊಂಡ ವಿರಾಜಪೇಟೆಯನ್ನು ಮೂಲ ಹೆಸರಿನ ಮೂಲಕ ಅಧಿಕೃತವಾಗಿ ಗುರುತಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ವಿರಾಜಪೇಟೆ ಕ್ಷೇತ್ರದ ಶಾಸಕರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುಮಾರು 18ನೇ ಶತಮಾನದ ನಂತರ ಈಗ ಇರುವ ಪುರಕ್ಕೆ ಅಂದಿನ ಕೊಡಗು ಆಡಳಿತಗಾರರನ್ನು ಬ್ರಿಟಿಷ್ ಅಧಿಕಾರಿಗಳು ಭೇಟಿ ಮಾಡಿದ ಜ್ಞಾಪಕಾರ್ಥವಾಗಿ ವಿರಾಜಪೇಟೆ ಎಂದು ಹೆಸರು ನೀಡಲಾಯಿತು. ಇದಕ್ಕೂ ಮೊದಲು ಈ ಪಟ್ಟಣಕ್ಕೆ ಬೇರೆಯದ್ದೇ ಹೆಸರಿತ್ತು ಎನ್ನುವುದು ಹಿರಿಯರ ವಾದವಾಗಿದೆ. ಜನರ ಭಾವನೆಗಳಿಗೆ ದಕ್ಕೆಯಾಗದಂತೆ ಸ್ಪಂದಿಸುವುದರೊಂದಿಗೆ ತಪ್ಪು ಸಂದೇಶವನ್ನು ದೂರ ಮಾಡಬೇಕು. ಇತಿಹಾಸ ತಜ್ಞರಿಂದ ಅಭಿಪ್ರಾಯ ಸಂಗ್ರಹಿಸಿ ಸರಿಯಾದ ವರದಿಯನ್ನು ಪ್ರಸ್ತುತಪಡಿಸಿ ಸರ್ಕಾರದ ವತಿಯಿಂದ ಮತ್ತೆ ಮೂಲ ಹೆಸರಿಗೆ ಬದಲಾವಣೆ ಮಾಡಬೇಕು…

Read More

ಮಡಿಕೇರಿ NEWS DESK ಸೆ.10 : ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಸ್ಟುಡಿಯೋ 5ನೇ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಂಡಿತು. ಸಂಸ್ಥೆಯ ಸ್ಥಾಪಕರು, ನಿರ್ದೇಶಕರು ಹಾಗೂ ನೃತ್ಯ ಸಂಯೋಜಕರಾದ ಪ್ರೀತಾ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜ್ ನ ಉಪನ್ಯಾಸಕರಾದ ಜಯಲಕ್ಷ್ಮಿ ಕೆ. ಅವರು ಮನಸ್ಸು ಮತ್ತು ದೇಹದ ಸದೃಢತೆಗೆ ನೃತ್ಯ ಸಹಕಾರಿಯಾಗಿದೆ ಎಂದರು. ನಿಷ್ಠೆಯೊಂದಿಗೆ ಕಠಿಣ ಪರಿಶ್ರಮದಿಂದ ಮಕ್ಕಳು ಹಾಗೂ ಮಹಿಳೆಯರಲ್ಲಿ ಜೀವನೋತ್ಸಾಹ ತುಂಬುತ್ತಿರುವ ಪ್ರೀತಾ ಕೃಷ್ಣ ಅವರ ಸಾಧನೆ ಶ್ಲಾಘನೀಯ ಮತ್ತು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಸ್ಟುಡಿಯೋದ ಸಂಗೀತ ಗುರುಗಳಾದ ಹರಿಚಂದ್ರ ಮಾತನಾಡಿ ಸಂಗೀತದ ಪ್ರಕಾರಗಳ ಬಗ್ಗೆ ವಿವರಿಸಿದರು. ::: ಬಹುಮಾನ ವಿತರಣೆ ::: “ವೈಟ್ ಲಾಸಿಂಗ್ ಮಂತ್” ಸ್ಪರ್ಧೆಯಲ್ಲಿ ವಿಜೇತರಾದ ಚೇತನಾ ಪೂಜಾರಿ ಹಾಗೂ ಪ್ರತಿಮಾ ಅವರಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು. ::: ನೃತ್ಯ ವೈವಿಧ್ಯ :::…

Read More

ಸುಂಟಿಕೊಪ್ಪ ಸೆ.10 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಂಘದ ಗೌರಿ ಗಣೇಶ ಮೂರ್ತಿಯನ್ನು ಕೊಡಗರಹಳ್ಳಿ ಪ್ರಮುಖ ಬೀದಿಯಲ್ಲಿ ವಿದ್ಯುತ್ ದೀಪ ಅಲಂಕೃತ ಭವ್ಯ ಮಂಟಪದಲ್ಲಿ ಭವ್ಯ ಶೋಭಯಾತ್ರೆ ನಡೆಸಿ ನಂತರ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು. ಸುತ್ತಮುತ್ತಲಿನ ನೂರಾರು ಮಂದಿ ಮಳೆಯ ನಡುವೆ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು. ಸೌಹಾರ್ದ ಸಾರಿದ ಮುಸ್ಲಿಂ ಕುಟುಂಬ : ಕೊಡಗರಹಳ್ಳಿಯ ಬೈತೂರಪ್ಪ ದೇವಾಲಯದ ಬಳಿಯ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯ ವೇಳೆ ಸ್ಥಳೀಯ ರಫೀಕ್ ಮತ್ತು ಇಬ್ರಾಹಿಂ ಕುಟುಂಬಸ್ಥರು ಹಿಂದೂಗಳಿಗೆ ಸಿಹಿ ಮತ್ತು ತಂಪು ಪಾನೀಯ ಹಂಚಿ ಸೌಹಾರ್ದತೆ ಮೆರೆದರು. ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಪಿಸಿದ್ದ ಗೌರಿ ಗಣೇಶ ಮೂರ್ತಿಗೆ ಮಹಾಪೂಜೆ ನೆರವೇರಿಸಿ ನಂತರ ಹರದೂರು ಹೊಳೆಯಲ್ಲಿ ವಿಸರ್ಜಿಸಲಾಯಿತು. ಚಿಣ್ಣರಿಂದ ಗಣೇಶ ಮೂರ್ತಿಯ…

Read More

ಗೋಣಿಕೊಪ್ಪ ಸೆ.10 NEWS DESK : ಗೋಣಿಕೊಪ್ಪ ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ (ಕೆ.ಎನ್.ಎಸ್.ಎಸ್) ನೂತನ ಅಧ್ಯಕ್ಷರಾಗಿ ವೇಣುಗೋಪಾಲ್ ಮೆನೋನ್, ಕಾರ್ಯದರ್ಶಿಯಾಗಿ ಸರಳ ಮಣಿ ಲಾಲ್ ಆಯ್ಕೆಯಾಗಿದ್ದಾರೆ. ಗೋಣಿಕೊಪ್ಪ ಹೋಟೆಲ್ ಪ್ರಕಾಶ್ ಇಂಟನ್ರ್ಯಾಷನಲ್ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಿ.ಮೋಹನ್, ಜಂಟಿ ಕಾರ್ಯದರ್ಶಿ ಬಿ.ಎಸ್.ವಿಜಯಕುಮಾರ್, ಖಜಾಂಚಿಯಾಗಿ ಉತ್ತಮನ್, ನಿರ್ದೇಶಕರುಗಳಾಗಿ. ಪಿ.ಭಾಸ್ಕರ್, ಅಜಿತ್ ವೇಣುಕಣ್ಣನ್, ಉಣ್ಣಿ ಕೃಷ್ಣನ್, ಟಿ.ವಿ.ವಿಜಯಕುಮಾರ್, ಪಿ.ವಿ.ಚಂದ್ರ, ವಿನೋದ್‍ಕುಮಾರ್, ಸುರೇಶ್ ಬಾಬು, ರಾಧಾ ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.

Read More

ಮಡಿಕೇರಿ NEWS DESK ಸೆ.10 : ಬೆಂಗಳೂರಿನ ಗ್ಲೋಬಲ್ ಜ್ಞಾನ್ ಅಕಾಡೆಮಿಯ 5 ನೇ ಜಾಗತಿಕ ಅತ್ಯುತ್ತಮ ಸಮುದಾಯ ಶಿಕ್ಷಕಿ ಪ್ರಶಸ್ತಿಗೆ ಮಡಿಕೇರಿಯ ವಿ.ಎ.ನಮ್ರೀನ್ ಆಸಿಫ್ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ವಿ.ಎ.ನಮ್ರೀನ್ ಆಸಿಫ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಉಪಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ, ಗ್ಲೋಬಲ್ ಜ್ಞಾನ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ರುಕ್ಸಾನಾ ಹಾಸನ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಸುಮಾರು ಒಂದು ಸಾವಿರ ಶಿಕ್ಷಕರಲ್ಲಿ 100 ಮೆರಿಟ್ ಲಿಸ್ಟ್ ನಲ್ಲಿ ಸ್ಥಾನ ಪಡೆದುಕೊಂಡ ವಿ.ಎ.ನಮ್ರೀನ್ ಆಸಿಫ್ ಅವರು, ಇದರಲ್ಲಿ ಆಯ್ಕೆಯಾದ 15 ಅತ್ಯುತ್ತಮ ಶಿಕ್ಷಕರಲ್ಲಿ ಮೊದಲ ಸ್ಥಾನ ಗಳಿಸಿದರು. ನಮ್ರೀನ್ ಆಸಿಫ್ ಅವರು ದಕ್ಷಿಣ ಕನ್ನಡ ಮಂಗಳೂರು ಶ್ರೀನಿವಾಸ್ ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ವಾಂಸಕಿಯಾಗಿದ್ದು, ಇವರು ಮಡಿಕೇರಿಯ ಕೊಹಿನೂರು ರಸ್ತೆ ನಿವಾಸಿ ವಿ.ಎಸ್.ಮೊಹಮ್ಮದ್ ಆಸಿಫ್ ಹಾಗೂ ವಿ.ಎಸ್.ನಸೀಮಾ ದಂಪತಿಗಳ ಪುತ್ರಿ.

Read More

ನಾಪೋಕ್ಲು ಸೆ.9 NEWS DESK : ಯಾವುದೇ ಜನಾಂಗ ಭೌತಿಕವಾಗಿ ಅಭಿವೃದ್ಧಿ ಹೊಂದುವುದಕ್ಕಿಂತಲೂ ಬೌದ್ಧಿಕವಾಗಿ ಅಭಿವೃದ್ಧಿ ಹೊಂದಲು ಗಮನಹರಿಸಬೇಕು. ಬೌದ್ಧಿಕವಾಗಿ ಅಭಿವೃದ್ಧಿ ಹೊಂದಿದಾಗ ಮುಂದಿನ ತಲೆಮಾರು ಸುಸಂಸ್ಕೃತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಭಿಪ್ರಾಯಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಸಮಾಜದ ಸಭಾಂಗಣದಲ್ಲಿ ನಡೆದ ಕೈಲ್ ಮುಹೂರ್ತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗೌಡ ಜನಾಂಗಕ್ಕೆ ವಿಶಿಷ್ಟವಾದ ಭಾಷೆ ಇರುವುದೇ ಹೆಮ್ಮೆ. ಅಂತಹ ಭಾಷೆಯನ್ನು ಉಳಿಸಿ ಬೆಳೆಸಲು ವೈಜ್ಞಾನಿಕ ಕ್ರಮಗಳನ್ನು ಅಳವಡಿಸುವ ಅವಶ್ಯಕತೆ ಇದೆ ಎಂದರು. ಮಡಿಕೇರಿ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ದಯಾನಂದ ಮಾತನಾಡಿ, ಕೊಡಗಿನ ಸಾಂಪ್ರದಾಯಿಕ ಹಬ್ಬ ಕೈಲ್ ಮುಹೂರ್ತವನ್ನು ಕೊಡಗಿನ ಹೊರಗಡೆ ನೆಲೆಸಿರುವ ಗೌಡ ಸಮಾಜದವರು ಆಚರಿಸಿಕೊಂಡು ಬರುವುದರಿಂದ ಸಮುದಾಯದ ಜನರಲ್ಲಿ ಬಾಂಧವ್ಯ ಬೆಳೆಸಲು ಸಾಧ್ಯವಾಗುತ್ತದೆ ಎಂದರು. ಗೌಡ ಸಮಾಜದ ಹಿರಿಯರು ಬೇರೆ ಬೇರೆ ಊರುಗಳಲ್ಲಿ ಸಮಾಜ ಕಟ್ಟಡಗಳನ್ನು ಕಟ್ಟಿಸಿದ್ದಾರೆ. ಅದರ…

Read More

ನಾಪೋಕ್ಲು ಸೆ.10 NEWS DESK : ಬಕ್ಕದ ಕೈಲ್‍ಮುಹೂರ್ತ (ಕೈಲ್‍ಪೊಳ್ದ್) ಕ್ರೀಡಾ ಮಂಡಳಿ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಕೈಲ್‍ಮುಹೂರ್ತ (ಕೈಲ್‍ಪೊಳ್ದ್) ಕ್ರೀಡಾಕೂಟವನ್ನು ಸೆ.29 ರಂದು ಬಕ್ಕದಲ್ಲಿ ನಡೆಸಲು ತಿರ್ಮಾನಿಸಲಾಗಿದೆ. ಕ್ರೀಡಾಮಂಡಳಿ ವತಿಯಿಂದ ಕ್ರೀಡಾ ಮಂಡಳಿಯ ಅಧ್ಯಕ್ಷರಾದ ಬೈತಡ್ಕ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಬಕ್ಕದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಅಂದು ಬೆಳಿಗ್ಗೆ 10 ಗಂಟೆಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು. ಕ್ರೀಡಾಕೂಟದಲ್ಲಿ ಕಿರಿಯರಿಂದ ವಯಸ್ಕರ ವರೆಗೆ ವಿವಿಧ ಆಟೋಟ ಸ್ಪರ್ಧೆಗಳು, ಸಾಧಕರಿಗೆ ಸನ್ಮಾನ, ಸಮಾರೋಪ ಸಮಾರಂಭ , ಬಹುಮಾನ ವಿತರಣೆ ನಡೆಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಹಿರಿಯರಾದ ಹೊಸೊಕ್ಲು ಮೊಣ್ಣಪ್ಪ, ನೈಯ್ಯಣಿ ಹೇಮಕುಮಾರ್, ಹೊಸೊಕ್ಲು ಕಿಶೋರ್, ಯಶೋದ, ಪುದಿಯನೆರವನ ವೆಂಕಟೇಶ್, ಸದ, ಅರುಣ, ನೈಯ್ಯಣಿ ಶಾರದಾ ,ಶಾಂತಿ, ಉಮೇಶ್ ನೆಯ್ಯಣಿ, ಸೂದನ ಸುಜಿ , ಕುಂಜಿಲನ ಲೋಕನಾಥ್, ಬಾಡನ ಸತೀಶ್, ಕಡ್ಲೇರ ತುಳಸಿ ಮೋಹನ್ , ಸ್ಥಳೀಯ ಸ್ವಸಹಾಯ ಸಂಘಗಳು ಸ್ತ್ರೀ…

Read More