ನಾಪೋಕ್ಲು ಸೆ.10 NEWS DESK : ಕಕ್ಕುಂದಕಾಡಿನ ಶ್ರೀ ವೆಂಕಟೇಶ್ವರ ಗಣಪತಿ ಸೇವಾ ಸಮಿತಿಯ ವತಿಯಿಂದ ಕಕ್ಕುಂದ ಕಾಡುವಿನಲ್ಲಿರುವ ಬಾಳೆಯಡ ಶ್ಯಾಮ್ ಮಂದಪ್ಪ ಅವರ ಗದ್ದೆಯಲ್ಲಿ ಸಾರ್ವಜನಿಕರಿಗೆ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ಬಾಳೆಯಡ ಶಾರದಾ ಸುಬ್ರಮಣಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಾರ್ವಜನಿಕರಿಗೆ ಆಯೋಜಿಸಿದ ಪುರುಷರ ಕಬಡ್ಡಿಯಲ್ಲಿ ಮೊದಲ ಬಹುಮಾನವನ್ನ ಬೆಟ್ಟಗೇರಿ ತಂಡ ಪಡೆದುಕೊಂಡರೆ, ದ್ವಿತೀಯ ಬಹುಮಾನವನ್ನು ಇಂದಿರಾನಗರದ ತಂಡ ಪಡೆದುಕೊಂಡಿತು. ಹಗ್ಗಜಗ್ಗಾಟದಲ್ಲಿ ಬೆಟ್ಟಗೇರಿ ತಂಡ ಮೊದಲ ಸ್ಥಾನ ಮತ್ತು ವೆಂಕಟರಮಣ ತಂಡ ಎರಡನೇ ಸ್ಥಾನವನ್ನ ಪಡೆದುಕೊಂಡಿತು. ಮಹಿಳಾ ಹಗ್ಗ ಜಗ್ಗಾಟದಲ್ಲಿ ಚೆರಿಯಾಪರಂಬು ತಂಡ ಮೊದಲ ಸ್ಥಾನ ಪಡೆದುಕೊಂಡರೆ, ವೆಂಕಟರಮಣ ತಂಡ ಎರಡನೇ ಸ್ಥಾನವನ್ನ ಪಡೆದುಕೊಂಡಿತು. ಕ್ರೀಡಾಕೂಟದಲ್ಲಿ ಪುರುಷರು, ಮಹಿಳೆಯರು ಹಾಗೂ ಯುವಕ ಯುವತಿಯರು ಮತ್ತು ಪುಟಾಣಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಗಣಪತಿ ಸೇವಾ ಸಮಿತಿ ಹಾಗೂ ಶ್ರೀ ವೆಂಕಟೇಶ್ವರ ದೇವಾಲಯದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು…
ಲೇಖಕ: admin
ಮಡಿಕೇರಿ ಸೆ.10 NEWS DESK : ಪ್ರಯಾಣಿಕರೊಬ್ಬರು ಬಿಟ್ಟು ಹೋದ ಮೊಬೈಲ್ನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಆಟೋ ಚಾಲಕ ಪ್ರಮಾಣಿಕತೆ ಮೆರೆದಿದ್ದಾರೆ. ಚಾಲಕ ಅಮಿತ್ ತನ್ನ ಆಟೋದಲ್ಲಿ ಮಡಿಕೇರಿಯ ಹಳೆ ಬಸ್ ನಿಲ್ದಾಣದಿಂದ ಪ್ರಯಾಣಿಕರೊಬ್ಬರನ್ನು ಹತ್ತಿಸಿಕೊಂಡು ಮಹದೇವಪೇಟೆಗೆ ಕರೆದೊಯ್ದಿದ್ದಾರೆ. ಆ ಪ್ರಯಾಣಿಕ ಆಟೋದಲ್ಲೇ ತಮ್ಮ ಮೊಬೈಲ್ನ್ನು ಬಿಟ್ಟುಹೋಗಿದ್ದಾರೆ. ಆಟೋ ಚಾಲಕ ಅಮಿತ್ ಅವರು ಮಾದಾಪುರಕ್ಕೆ ಬಾಡಿಗೆಗೆ ಹೋಗಿ ಹಿಂತಿರುಗಿ ಬರುವಾಗ ಆಟೋದಲ್ಲಿ ಮೊಬೈಲ್ ಕಂಡಿದೆ. ಇದೇ ಸಂದರ್ಭ ಮೊಬೈಲ್ಗೆ ಕರೆ ಬಂದಿದ್ದು, ಕರೆ ಸ್ವೀಕರಿಸಿ ಸರಿಯಾದ ಮಾಹಿತಿ ಪಡೆದು ಪ್ರಯಾಣಿಕರ ಮನೆಗೆ ತೆರಳಿ ಮೊಬೈಲ್ನ್ನು ಮರಳಿಸಿದ್ದಾರೆ. ಚಾಲಕನ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಸುಂಟಿಕೊಪ್ಪ ಸೆ.10 NEWS DESK : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸಭೆಯು ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್, ನೂತನ ಸಮಿತಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಸಭೆಯೊಂದನ್ನು ಏರ್ಪಡಿಸುವ ಮೂಲಕ ಶಾಸಕರ ಹಾಗೂ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲಿ ನೂತನವಾಗಿ ಆಯ್ಕೆ ಮಾಡಲಾಡಲಾದ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಅಲ್ಲದೇ ಪಕ್ಷದ ಸಂಘಟನೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು. ಇದೇ ಸಂದರ್ಭ ಸಮತಿಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಭಾವ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಪ್ಪನ್ ಹಾಗೂ ಸಮಿತಿಗೆ ನೂತನ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಸೆ.10 NEWS DESK : ಪೊನ್ನಂಪೇಟೆ 66/11 ಕೆವಿ ಹಾಗೂ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿರುವ ಹಿನ್ನೆಲೆ ಸೆಪ್ಟೆಂಬರ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ವಿದ್ಯುತ್ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗೋಣಿಕೊಪ್ಪ, ಪೊನ್ನಂಪೇಟೆ, ತಿತಿಮತಿ, ದೇವರಪುರ, ಮಾಯಮುಡಿ, ಕುಂದ, ಕಿರಗೂರು, ಹಾತೂರು, ಕಳತ್ಮಾಡು, ಹೊಸೂರು, ಬಾಳೆಲೆ, ದೇವನೂರು, ಕಾನೂರು, ಹುದಿಕೇರಿ, ಶ್ರೀಮಂಗಲ, ಕುಟ್ಟ, ಬಿರುನಾಣಿ, ಬೀರುಗ, ನಾಲ್ಕೇರಿ, ಟಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ನಾಪೋಕ್ಲು ಸೆ.10 NEWS DESK : ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ 25.04 ಲಕ್ಷ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕಲ್ಯಾಟಂಡ ಎ.ತಮ್ಮಯ್ಯ ತಿಳಿಸಿದರು. ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ 1137 ಜನ ಸದಸ್ಯರಿದ್ದು, 103.36 ಲಕ್ಷ ಪಾಲು ಹಣ ಇರುತ್ತದೆ. ಸಂಘದಲ್ಲಿ ಒಟ್ಟು ದುಡಿಯುವ ಬಂಡವಾಳ ರೂ.17 32.91 ಲಕ್ಷ ಗಳಾರುತ್ತವೆ ಎಂದ ಅವರು ಸಂಘದಿಂದ 339 ಜನ ರೈತರಿಗೆ ಕೆಸಿಸಿ ಸಾಲ 780.54 ಲಕ್ಷ ವಿತರಿಸಲಾಗಿದೆ. ಜಾಮೀನು ಸಾಲ 7450 ಲಕ್ಷ ರೂ,ಗೊಬ್ಬರ ಸಾಲ 35.66 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಟ್ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಗಿದ್ದು ಸಂಘದಲ್ಲಿ ಗ್ರಾಹಕರಿಗೆ ಗೊಬ್ಬರ, ಕೃಷಿ ಉಪಕರಣ ಮುಂತಾದ ಸಾಮಗ್ರಿಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು. ಸಂಘದ ಮಹಾಸಭೆಯು ಸೆ.23 ರಂದು ಸಂಘದ ಸಭಾಂಗಣದಲ್ಲಿ ಜರುಗಲಿದ್ದು, ಸಂಘದ…
ನಾಪೋಕ್ಲು ಸೆ.10 NEWS DESK : ಭಾಗಮಂಡಲ ಸ. ಹಿ. ಪ್ರಾ. ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ (ಎಇಒS) ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 1 ರಿಂದ 4ನೇ ತರಗತಿಯ ವಿಭಾಗದಲ್ಲಿ ಹಮ್ನ (ಮಣ್ಣಿನ ಮಾದರಿ ತಯಾರಿ ), ಹವ್ಯ (ಕಥೆ ಹೇಳುವುದು ), ಪ್ರಣಾಮ್ಯ (ಚಿತ್ರಕಲೆ ), ತನ್ವಿಕ ( ಛದ್ಮವೇಷ ), ನೆಬೀಲ್ ( ಹಿಂದಿ ಕಂಠಪಾಠ ) ದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ನಿಕ್ಕಿ ನಂಜಪ್ಪ (ಆಶುಭಾಷಣ ), ಮಿಸ್ಬ ( ಧಾರ್ಮಿಕ ಪಠಣ ಅರೇಬಿಕ್ ) ದ್ವಿತೀಯ ಬಹುಮಾನವನ್ನೂ, ಪೊನ್ನಮ್ಮ ( ಅಭಿನಯ ಗೀತೆ ), ದೀಪಾಲಿ ( ಭಕ್ತಿ ಗೀತೆ )ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಹಾಗೆಯೇ 5ರಿಂದ 7ನೇ ತರಗತಿ ವಿಭಾಗದಲ್ಲಿ ರೀತಿಶ್ರೀ ( ಭಾವಗೀತೆ ), ಯುಕ್ತ ( ಮಿಮಿಕ್ರಿ ) ಯಲ್ಲಿ ಪ್ರಥಮ ಬಹುಮಾನವನ್ನನ್ನೂ, ಮೇಘನಾ ( ಚಿತ್ರಕಲೆ…
ಮಡಿಕೇರಿ ಸೆ.10 NEWS DESK : ಪ್ರಸಕ್ತ (2024-25) ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟಿಷಿಯನ್, ಚಾಟ್ಸ್ ತಯಾರಿಕೆ ತರಬೇತಿ ಶಿಬಿರಗಳನ್ನು ಇಲಾಖೆ ವತಿಯಿಂದ ಆಯೋಜಿಸಲಾಗಿದೆ. ತರಬೇತಿಯ ವಿವರ ಇಂತಿದೆ. ಸೆಪ್ಟೆಂಬರ್, 19 ರಿಂದ ಅಕ್ಟೋಬರ್, 03 ರವರೆಗೆ ಜಿಮ್/ ಫಿಟ್ನೆಸ್ ತರಬೇತಿ ಶಿಬಿರ(15 ದಿನಗಳು). ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 18 ರಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕಸ್ತೂರಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಪ್ಟೆಂಬರ್, 21 ರಿಂದ ಅಕ್ಟೋಬರ್, 03 ರವರೆಗೆ ಬ್ಯೂಟೀಷಿಯನ್ ತರಬೇತಿ ಶಿಬಿರ(13 ದಿನಗಳು) ನಡೆಯಲಿದ್ದು, ಎಸ್ಎಸ್ಎಲ್ಸಿ(ಪಾಸ್/ಫೇಲ್) ಮಹಿಳೆಯರಿಗೆ ಮಾತ್ರ. ಕನಿಷ್ಠ 18 ವರ್ಷದಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಕ್ಟೋಬರ್, 04 ರಿಂದ 09 ರವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ನಡೆಯಲಿದೆ. ಎಸ್ಎಸ್ಎಲ್ಸಿ(ಪಾಸ್/ಫೇಲ್) ಕನಿಷ್ಠ 18 ರಿಂದ 40 ವರ್ಷದೊಳಗಿರಬೇಕು. ತರಬೇತಿಯು ಬೆಂಗಳೂರಿನ ಕೋರಮಂಗಲ…
ಮಡಿಕೇರಿ ಸೆ.9 NEWS DESK : ಪ್ರಸಕ್ತ (2024-25) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, 2024-25 ನೇ ಸಾಲಿಗೆ 6ನೇ ತರಗತಿಯಿಂದ 10ನೇ ತರಗತಿ ವರೆಗೆ ಆಂಗ್ಲ ಭಾಷಾ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುತ್ತದೆ). ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ಶಾಲೆ ಶಾಲಾ ವಿಭಾಗ ಇಲ್ಲಿಗೆ ಆಂಗ್ಲ ಭಾಷೆ ಶಿಕ್ಷಕರು(01 ಹುದ್ದೆ) ಬಿಎ ಮತ್ತು ಬಿ.ಎಡ್ (ಇಂಗ್ಲೀಷ್) ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ 08272 225528, 9686138688 ಹಾಗೂ ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ,ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ…
ಕುಶಾಲನಗರ NEWS DESK ಸೆ.9 : ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ಮಹಾವಿದ್ಯಾಲಯಗಳಾದ ಸರ್ವೋದಯ ಬಿಎಡ್ ಕಾಲೇಜು ಮತ್ತು ಸಾಯಿ ಶಂಕರ ಬಿಎಡ್ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎಡ್ ಪ್ರಶಿಕ್ಷಣಾರ್ಥಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶವನ್ನು ದಿನಾಂಕ:09.09.2024ರ ಸೋಮವಾರದಂದು ಪ್ರಕಟಿಸಲಾಗಿದೆ. ಕೊಡಗು ವಿಶ್ವವಿದ್ಯಾಲಯವು ಸ್ನಾತಕ ಪದವಿಗಳ ಫಲಿತಾಂಶವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಕಟಿಸಿದಂತೆಯೇ ಬಿಎಡ್ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಯುಜಿಸಿ ನಿಯಮಾನುಸಾರ ಕೂಡ ಶೀಘ್ರವಾಗಿ ಪ್ರಕಟಿಸುವ ಮೂಲಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಕೊಡಗು ವಿಶ್ವವಿದ್ಯಾಲಯದ ಚೊಚ್ಚಲ ಪ್ರಶಿಕ್ಷಣಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಪ್ರೊ. ಸುರೇಶ್ ಎಂ ಅವರು, ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಸಂಯೋಜಕರಾದ ಪ್ರೊ. ರವಿಶಂಕರ್ ಅವರು, ಯಯುಸಿಎಂಎಸ್ ನೋಡಲ್ ಅಧಿಕಾರಿ ಗಗನ್ ಹೆಚ್.ಎಸ್. ಅವರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಸೆ.9 : ವಲಸೆ ಕಾರ್ಮಿಕರಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕಳ್ಳತನಗಳು ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ತೋಟದಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕರ ವಿವರಗಳನ್ನು ಇಲಾಖೆಗೆ ನೀಡಲು ವಿಫಲವಾದರೆ ಮುಂದೆ ತಮ್ಮ ಕಾರ್ಮಿಕರಿಂದ ನಡೆಯಬಹುದಾದ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ. ಆದ್ದರಿಂದ ಕೊಡಗಿನ ಬೆಳೆಗಾರರು ತಮ್ಮಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರ ವಿವರಗಳನ್ನು ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ಸಲ್ಲಿಸಿ ಆ ಮೂಲಕ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸುತ್ತಿದೆ ಎಂದು ಕೊಡಗು ಪ್ಯಾಂಟರ್ಸ್ ಅಸೋಸಿಯೇಷನ್ ತಿಳಿಸಿದೆ. ನಿಗದಿತ ನಮೂನೆಯಲ್ಲಿ ಪೊಲೀಸ್ ಇಲಾಖೆಗೆ ಸಲ್ಲಿಸಬೇಕಾದ ವಿವರಗಳೆಂದರೆ, ವಲಸೆ ಕಾರ್ಮಿಕರ ಹೆಸರು ಮತ್ತು ವಿಳಾಸ, ಅವರ ವಿಳಾಸದ ಹತ್ತಿರದ ಪೊಲೀಸ್ ಠಾಣೆ, ಅವರ ಕೆಲಸದ ವಿವರಗಳು, ಕುಟುಂಬದ ಸದಸ್ಯರ ವಿವರಗಳು, ಪ್ರಸ್ತುತ…






