ಸೋಮವಾರಪೇಟೆ NEWS DESK ಸೆ.9 : ರಾಷ್ಟ್ರದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗದ ಕೊಡುಗೆ ಅಪಾರವಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ಗೌಡ ಅಭಿಪ್ರಾಯಿಸಿದರು. ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಷ್ಟದಲ್ಲಿರುವ ಪತ್ರಕರ್ತರನ್ನು ಕಾಪಾಡಿಕೊಳ್ಳಬೇಕಾದ ಕರ್ತವ್ಯ ಶಾಸಕಾಂಗದಲ್ಲಿ ಕೆಲಸ ಮಾಡುತ್ತಿರುವ ನಮ್ಮಂತವರ ಕರ್ತವ್ಯ ಎಂದು ಹೇಳಿದರು. ಪತ್ರಿಕೆ ಎಂದರೆ ಕೇವಲ ಸುದ್ದಿ ಸಮಾಚಾರಗಳನ್ನು ನೀಡುವ ಮಧ್ಯಮವಲ್ಲ. ತನ್ನದೆ ಆದ ಕರ್ತವ್ಯವನ್ನು ನಿಭಾಯಿಸುತ್ತಿದೆ. ಸಮಾಜದಲ್ಲಿರುವ ಅಂಕುಡೊಂಕನ್ನು ತಿದ್ದುವ ಕೆಲಸವನ್ನು ಮಾಡುತ್ತಿದೆ. ರಾಜಕಾರಣಿಗಳು ತಪ್ಪು ಮಾಡಿದಾಗ ಪತ್ರಿಕೆಗಳಲ್ಲಿ ಬರೆದು, ತಪ್ಪು ಹೆಜ್ಜೆಗಳನ್ನು ಇಡದಂತೆ ಎಚ್ಚರಿಸುವ ಕೆಲಸವನ್ನು ಮಾಡುತ್ತಿರುವುದು ನಮ್ಮ ಕಣ್ಣು ಮುಂದಿದೆ. ಪತ್ರಿಕೆ, ಮಾಧ್ಯಮಗಳ ಸಲಹೆಗಳನ್ನು ಜನಪ್ರತಿನಿಧಿಗಳು ಪಡೆದುಕೊಂಡರೆ ಉತ್ತನ ಜನಪರ ಕೆಲಸಗಳನ್ನು ಮಾಡಬಹುದು ಎಂದು ಹೇಳಿದರು. ಗ್ರಾಮೀಣ ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಿಸಲು ಸರ್ಕಾರದದೊಂದಿಗೆ…
ಲೇಖಕ: admin
ಮಡಿಕೇರಿ ಸೆ.9 NEWS DESK : ನಗರದ ಹೊಸಬಡಾವಣೆ ಅಂಗನವಾಡಿಯಲ್ಲಿ ಪ್ರಧಾನಮಂತ್ರಿ ಮಾತೃವಂದನ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮ ಹಾಗೂ ಪೋಷಣ್ ಅಭಿಯಾನ ಯೋಜನೆಯಡಿ ಪೂರಕ ಆಹಾರದ ಮಹತ್ವದ ಬಗ್ಗೆ ಕಾರ್ಯಕ್ರಮ ನೆರವೇರಿತು. ಸಹಾಯಕ ಶಿಶು ಅಭಿವೃದ್ಧಿ ಪ್ರಭಾರ ಮೇಲ್ವಿಚಾರಕ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಮಾತೃವಂದನಾ ಯೋಜನೆ ಅಡಿ ಮೊದಲನೇ ಮಗುವಿಗೆ ಎರಡು ಕಂತುಗಳಲ್ಲಿ 5 ಸಾವಿರ ಹಣವನ್ನು ಹಾಗೂ ಎರಡನೇ ಹೆಣ್ಣು ಮಗುವಿಗೆ ಒಂದೇ ಕಂತಿ ನಲ್ಲಿ ಆರು ಸಾವಿರ ಹಣವನ್ನು ಪಡೆಯಬಹುದಾಗಿದೆ ಎಂದರು. ತಾಯಿಯ ಆರೋಗ್ಯ ವರ್ಧನೆ ಹಾಗೂ ಪೂರಕ ಆಹಾರಕ್ಕಾಗಿ, ಆರೋಗ್ಯವಂತ ಮಗುವಿನ ಜನನಕ್ಕಾಗಿ ಸರ್ಕಾರದ ವತಿಯಿಂದ ನೀಡುವಂತಹ ಪ್ರೋತ್ಸಾಹ ಧನವಾಗಿರುತ್ತದೆ. ಈ ಮೊತ್ತವನ್ನು ನೇರ ನಗದು ವರ್ಗಾವಣೆಯ ಮೂಲಕ ಫಲಾನುಭವಿಯ ಆಧಾರ್ ನೋಂದಣಿಯಾದ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದು ಎಂದು ಸವಿತಾ ತಿಳಿಸಿದರು. ಈ ಸೌಲಭ್ಯವನ್ನು ಪಡೆಯಲು ಸರ್ಕಾರಿ ನೌಕರರಲ್ಲದ ಗರ್ಭಿಣಿ ಮಹಿಳೆಯು ಅಂಗನವಾಡಿ ಕಾರ್ಯಕರ್ತೆಯನ್ನು 180 ದಿನಗಳೊಳಗೆ ಸಂಪರ್ಕಿಸಲು ಹಾಗೂ ಎರಡನೇ ಹೆಣ್ಣು…
ಮಡಿಕೇರಿ ಸೆ.9 NEWS DESK : ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಗಳಿಗಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ತರಬೇತಿ ಶಿಬಿರದಲ್ಲಿ ಮಡಿಕೇರಿಯ ಗೃಹ ರಕ್ಷಕ ದಳದ ಸಿಬ್ಬಂದಿ ಲವಿ ಅವರು ಬೆಳ್ಳಿ ಪದಕ ಪಡೆದಿದ್ದಾರೆ. ಪ್ರಸ್ತುತ ಇವರು ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲವಿ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ನಗರ ಸಂಚಾರಿ ಠಾಣೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಂಚಾರಿ ಠಾಣಾಧಿಕಾರಿ ಶ್ರೀಧರ್, ತಮ್ಮಯ್ಯ, ಎಎಸ್ಐ ನಂದ ಐ.ಪಿ ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಸೆ.9 NEWS DESK : ಸ್ಥಳೀಯ ಕೊಡವತಿಯರು ನಡೆಸುವ ಪರಿಸರ ಸ್ನೇಹಿ, ಜನಪದ ಸ್ನೇಹಿ ಹೋಂಸ್ಟೇ ಗಳನ್ನು ಧಮನಿಸಲು ಮತ್ತು ಕೊಡವ ರೈತರನ್ನು ಹಣಿಯಲು ಸಂಚು ರೂಪಿಸಲಾಗುತ್ತಿದೆ. ಹೊರಗಿನ ಬಂಡವಾಳಶಾಹಿಗಳ ಪ್ರಕೃತಿ ವಿನಾಶಕ ರೆಸಾರ್ಟ್ಗಳಿಗೆ, ದೊಡ್ಡ ದೊಡ್ಡ ಕಂಪೆನಿಗಳ ಯೋಜನೆಗಳಿಗೆ ಅನುಮತಿ ನೀಡುವ ಮೂಲಕ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ನಾಪೋಕ್ಲುವಿನಲ್ಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ, ಭೂವಿಲೇವಾರಿ ಮಾಫಿಯಾಗಳು ಹಾಗೂ ಕಪ್ಪುಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್ ನ್ನು ನಾಶ ಮಾಡುತ್ತಿದ್ದಾರೆ…
ಮಡಿಕೇರಿ ಸೆ.9 NEWS DESK : ಹಾಲು ಉತ್ಪಾದಕರಿಂದ ಸಂಗ್ರಹಿಸಿದ ಹಾಲನ್ನು ಹಾಲು ಡೈರಿಯಿಂದ ಮದರ್ ಡೈರಿಗೆ ಸಾಗಿಸುವ ಕಾಲಾವಧಿ ಹೆಚ್ಚಾಗಿದ್ದು, ಇದರಿಂದ ಹಾಲು ಕೆಡುವ ಸಾಧ್ಯತೆಗಳು ಹೆಚ್ಚು ಆದ್ದರಿಂದ ಸಂಘದ ವತಿಯಿಂದ ಜಾಗದ ವ್ಯವಸ್ಥೆ ಮಾಡಿದರೆ, ಮಿನಿ ಹಾಲು ಶೀತಲೀಕರಣಕ್ಕೆ ವೆಚ್ಚ ಭರಿಸುವುದಾಗಿ ಹಾಲು ಒಕ್ಕೂಟದ ಕೂಡಿಗೆ ವೃತ್ತದ ವಿಸ್ತರಣಾಧಿಕಾರಿ ಬಿ.ವಿ.ವೀಣಾ ಹೇಳಿದರು. ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ 2023 -24ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಬಿ.ಎಂ.ಸಾಗರ್, ಸಂಘದ ಸದಸ್ಯರ ಅಹವಾಲು ಆಲಿಸಿ ಸೂಕ್ತ ಪರಿಹಾರ ಸೂಚಿಸಿದರು. ಸಭೆಯಲ್ಲಿ ಹಾಸನ ಹಾಲು ಒಕ್ಕೂಟದ ನಿರ್ದೇಶಕ ಹೇಮಂತ್ ಕುಮಾರ್, ಗುಡ್ಡೆಹೊಸೂರು ಹಾಲು ಒಕ್ಕೂಟದ ಉಪಾಧ್ಯಕ್ಷ ಎನ್.ಪಿ.ಸುಲೋಚನ, ನಿರ್ದೇಶಕರುಗಳಾದ ಯತೀಶ್ ಮೋಹನ ಕುಮಾರ್, ಪಳಂಗಪ್ಪ, ಗುರುಪ್ರಸಾದ್, ಕಾಶಿ, ಶುಭಶೇಖರ, ಅಭಿಷೇಕ್, ಕಮಲ, ಕಮಲಾಕ್ಷಿ, ಬಸಮ್ಮ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀನ್ ನಿರೂಪಿಸಿದರು. ನಿರ್ದೇಶಕ ಧನ್ ಪಾಲ್ ವಂದಿಸಿದರು. ಸನ್ಮಾನ…
ಮಡಿಕೇರಿ ಸೆ.9 NEWS DESK : ರಾಜ್ಯವು ‘ಕರ್ನಾಟಕ’ವೆಂದು ನಾಮಕರಣಗೊಂಡು 5 ದಶಕಗಳು ಪೂರೈಸಿದ ಹಿನ್ನೆಲೆ ರಾಜ್ಯ ಸರ್ಕಾರ ಚಾಲನೆ ನೀಡಿರುವ ‘ಕರ್ನಾಟಕ ಸುವರ್ಣ ಸಂಭ್ರಮ ರಥ’ಕ್ಕೆ ಮಡಿಕೇರಿಯಲ್ಲಿ ಜಿಲ್ಲಾಡಳಿತ, ಕಸಾಪ ಹಾಗೂ ವಿವಿಧ ಸಂಘಟನೆಗಳಿಂದ ಭವ್ಯ ಸ್ವಾಗತ ಕೋರಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಆಗಿಮಿಸಿದ ರಥಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪುಷ್ಪರ್ಚನೆ ಮಾಡಿ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಕನ್ನಡ ನಾಡು ನುಡಿ, ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಹೇಳಿದರು. ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಕರ್ನಾಟಕ ರಾಜ್ಯವೆಂದು ನಾಮಕರಣವಾಗಿದೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದರು. ಸುವರ್ಣ ಸಂಭ್ರಮ 50 ರ ರಥ ಯಾತ್ರೆಯು ಗೋಣಿಕೊಪ್ಪ-ಪೊನ್ನಂಪೇಟೆ-ವಿರಾಜಪೇಟೆ ಮೂಲಕ ಮಡಿಕೇರಿಗೆ ಆಗಮಿಸಿದೆ. ಸೆಪೆಂಬರ್, 10 ರಂದು ಸೋಮವಾರಪೇಟೆ…
ನಾಪೋಕ್ಲು ಸೆ.9 NEWS DESK : ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಥ್ರೋಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ನಿಶಾ ಭಾವನ ಪಾಲ್ಗೊಂಡು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವಳು ಬೇತು ಗ್ರಾಮದ ಆಲಚಂಡ ಅನಿಲ್ ತಮ್ಮಯ್ಯ ಮತ್ತು ಮೀರಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.9 NEWS DESK : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ಮುಸ್ಲಿಂ ಜಮಾಯತ್, ಎಸ್.ಜೆ.ಎಮ್, ಎಸ್.ವೈ.ಎಸ್, ಎಸ್.ಎಸ್.ಎಫ್ ಸಂಯುಕ್ತ ಆಶ್ರಯದಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥಾ ನಾಪೋಕ್ಲು ಪಟ್ಟಣದಲ್ಲಿ ನಡೆಯಿತು. ಪಟ್ಟಣದಸಂತೆ ಮೈದಾನದಲ್ಲಿ ಆಯೋಜಿಸಿದ ಸಭೆಯಲ್ಲಿ ಕೊಡಗು ಜಿಲ್ಲಾ ಎಸ್.ವೈ.ಎಸ್ ಮಾಧ್ಯಮ ಕಾರ್ಯದರ್ಶಿ ಶಾಫಿ ಸಹದಿ ಭಾಗ ವಹಿಸಿ ಮಾತನಾಡಿ, ನಾವು ಎಲ್ಲದಕ್ಕಿಂತ ಹೆಚ್ಚಾಗಿ ಪ್ರೀತಿಸುವುದು ಪ್ರವಾದಿಯನ್ನು. ನಾವು ಎಲ್ಲಾ ಧರ್ಮದವರೊಂದಿಗೆ ಸೌಹಾರ್ದತೆಯಿಂದ ಬಾಳಬೇಕು ಎಂಬುದನ್ನು ಅವರು ಪ್ರತಿಪಾದಿಸಿದ್ದಾರೆ. ಆದುದರಿಂದ ಪರಸ್ಪರ ಸೌಹಾರ್ದತೆ ಅಗತ್ಯ, ಮಹಮದ್ ಪೈಗಂಬರರು ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇಸ್ಲಾಂ ಬಗ್ಗೆ ತಪ್ಪು ಸಂದೇಶಗಳನ್ನು ರವಾನಿಸುತ್ತಿರುವುದು ಸರಿಯಲ್ಲ ಎಂದರು. ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಅಫಿಲ್ ಸಹದಿ ಕೊಳಕೇರಿ, ಕರ್ನಾಟಕ ಮುಸ್ಲಿಂ ಜಮಾಯತ್ತಿನ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ, ಕೊಡಗು ಜಿಲ್ಲಾ ಸಂಯುಕ್ತ ಜಮಾಯತ್ ಅಧ್ಯಕ್ಷ ಉಸೈನ್ ಸಖಾಫಿ ಎಮ್ಮೆಮಾಡು, ನಾಪೋಕ್ಲು ಮಸೀದಿಯ ಖತೀಬರದ ಅಬ್ದುಲ್ ಸಖಾಫಿ,…
ನಾಪೋಕ್ಲು ಸೆ.9 NEWS DESK : ನಾಪೋಕ್ಲುವಿನ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಾಲ್ಕು ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿಸಿ ವಾದ್ಯದೊಂದಿಗೆ ಸಂತೆ ಮೈದಾನದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿಸಿ ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಗಣೇಶೋತ್ಸವ ಸಮಿತಿಯ ಪ್ರಮುಖ ಕಲಿಯಂಡ ವಿಠಲ ಇಡುಗಾಯಿ ಹೊಡೆಯುವುದರ ಮೂಲಕ ಸಂತೆ ಮೈದಾನದಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ದೇಶ ಹಾಗೂ ಧರ್ಮಕ್ಕೆ ಯಾವುದೇ ಧಕ್ಕೆ ಬಾರದಂತೆ ದೇಶದ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ನಿಸ್ವಾರ್ಥ ಸೇವೆಯಿಂದ ಶ್ರಮಿಸುವಂತಾಗಬೇಕು. ಪಟ್ಟಣದಲ್ಲಿ 50 ವರ್ಷಗಳಿಂದ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ವರ್ಷವೂ ಐದು ವಿವಿಧ ಭಾಗಗಳಲ್ಲಿ ಗೌರಿ ಗಣೇಶ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆಗೊಳಿಸಲಾಗಿದೆ. ಎಲ್ಲಾ ಗಣೇಶೋತ್ಸವ ಸಮಿತಿಗಳಿಂದ ಪ್ರತಿಷ್ಠಾಪನೆಗೊಂಡ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿ ಇರಿಸಿ ವಿವಿಧ ಆಕರ್ಷಕ ಕಲಾ ತಂಡಗಳೊಂದಿಗೆ ಮೆರವಣಿಗೆ ತೆರಳಿ ಕಾವೇರಿ…
ನಾಪೋಕ್ಲು ಸೆ.9 NEWS DESK : ಚಾಲಕನ ನಿಯಂತ್ರಣ ತಪ್ಪಿದ ಜೀಪು ರಸ್ತೆಯಿಂದ ಕೆಳಗಡೆ ಉರುಳಿ ಬಿದ್ದ ಘಟನೆ ಮರಂದೋಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೋಯಮಾಡoಡ ಹರೀಶ್ ಮೊಣ್ಣಪ್ಪ ಎಂಬವರು ಮನೆ ಸಮೀಪದಲ್ಲಿ ಜೀಪು ಚಲಾಯಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆಯ ಕೆಳಗೆ ಉರುಳಿ ಬಿದ್ದಿದೆ. ಈ ಸಂದರ್ಭ ಜೀಪಿನಲ್ಲಿ ಹರೀಶ್ ಸಂಬಂಧಿಕರೂ ಇದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಜೀಪನ್ನು ಮೇಲೆಕೆತ್ತಲಾಯಿತು. ವರದಿ : ದುಗ್ಗಳ ಸದಾನಂದ.






