ಲೇಖಕ: admin

ನಾಪೋಕ್ಲು ಸೆ.9 NEWS DESK : ನಾಪೋಕ್ಲುವಿನ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಾಲ್ಕು ಗಣೇಶ ಸೇವಾ ಸಮಿತಿಗಳ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿಸಿ ವಾದ್ಯದೊಂದಿಗೆ ಸಂತೆ ಮೈದಾನದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿಸಿ ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಗಣೇಶೋತ್ಸವ ಸಮಿತಿಯ ಪ್ರಮುಖ ಕಲಿಯಂಡ ವಿಠಲ ಇಡುಗಾಯಿ ಹೊಡೆಯುವುದರ ಮೂಲಕ ಸಂತೆ ಮೈದಾನದಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ದೇಶ ಹಾಗೂ ಧರ್ಮಕ್ಕೆ ಯಾವುದೇ ಧಕ್ಕೆ ಬಾರದಂತೆ ದೇಶದ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ನಿಸ್ವಾರ್ಥ ಸೇವೆಯಿಂದ ಶ್ರಮಿಸುವಂತಾಗಬೇಕು. ಪಟ್ಟಣದಲ್ಲಿ 50 ವರ್ಷಗಳಿಂದ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ವರ್ಷವೂ ಐದು ವಿವಿಧ ಭಾಗಗಳಲ್ಲಿ ಗೌರಿ ಗಣೇಶ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆಗೊಳಿಸಲಾಗಿದೆ. ಎಲ್ಲಾ ಗಣೇಶೋತ್ಸವ ಸಮಿತಿಗಳಿಂದ ಪ್ರತಿಷ್ಠಾಪನೆಗೊಂಡ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿ ಇರಿಸಿ ವಿವಿಧ ಆಕರ್ಷಕ ಕಲಾ ತಂಡಗಳೊಂದಿಗೆ ಮೆರವಣಿಗೆ ತೆರಳಿ ಕಾವೇರಿ…

Read More

ನಾಪೋಕ್ಲು ಸೆ.9 NEWS DESK : ಚಾಲಕನ ನಿಯಂತ್ರಣ ತಪ್ಪಿದ ಜೀಪು ರಸ್ತೆಯಿಂದ ಕೆಳಗಡೆ ಉರುಳಿ ಬಿದ್ದ ಘಟನೆ ಮರಂದೋಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೋಯಮಾಡoಡ ಹರೀಶ್ ಮೊಣ್ಣಪ್ಪ ಎಂಬವರು ಮನೆ ಸಮೀಪದಲ್ಲಿ ಜೀಪು ಚಲಾಯಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆಯ ಕೆಳಗೆ ಉರುಳಿ ಬಿದ್ದಿದೆ. ಈ ಸಂದರ್ಭ ಜೀಪಿನಲ್ಲಿ ಹರೀಶ್ ಸಂಬಂಧಿಕರೂ ಇದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಜೀಪನ್ನು ಮೇಲೆಕೆತ್ತಲಾಯಿತು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.9 NEWS DESK : ನಾಪೋಕ್ಲುವಿನ ಮೇರಿ ಮಾತೆಯ ದೇವಾಲಯದಲ್ಲಿ ಮೇರಿ ಮಾತೆಯ ಜನ್ಮದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಸಲುವಾಗಿ ದೇವಾಲಯದ ಆವರಣದಲ್ಲಿ ಮೇರಿಮಾತೆಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ನವ ದಿನದ ನೋವೆನ ಪ್ರಾರ್ಥನೆ ನೆರವೇರಿಸಿ ಹಾಡಿನೊಂದಿಗೆ ಸಮುದಾಯ ಬಾಂಧವರು ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭ ಧರ್ಮ ಗುರುಗಳಾದ ಜ್ಞಾನ್ ಪ್ರಕಾಶ್ ಮಾತನಾಡಿ, ನಮ್ಮ ಬದುಕನ್ನು ಪರಿಪೂರ್ಣತೆಯಲ್ಲಿ ರೂಪಿಸಿಕೊಳ್ಳಬೇಕು. ಕ್ರಿಸ್ತನ ಹಿಂಬಾಲಕರಾದ ನಮಗೆ ಒಂದು ಗುರಿ ಇರಬೇಕು. ಪ್ರಾರ್ಥನೆ ದಾನ, ಧರ್ಮ, ಬೇರೆಯವರ ಕಷ್ಟಗಳನ್ನು ಅರ್ಥ ಮಾಡಿಕೊಂಡು, ಸಂತರ ಪುಸ್ತಕಗಳನ್ನು ಓದಿ ಅವರ ಪ್ರೇರಣೆ ಪಡೆದು ಬದುಕಬೇಕು ಎಂದರು. ಈ ಸಂದರ್ಭ ಕ್ರೈಸ್ತ ಭಕ್ತಾದಿಗಳು , ಪಾಲನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.

Read More

ವಿರಾಜಪೇಟೆ ಸೆ.9 NEWS DESK : ಆರ್ಜಿ ಗ್ರಾಮದ ಕಲ್ಲುಬಾಣೆಯ ದಾರುಲ್ ಇಸ್ಲಾಂ ಮದ್ರಸದ ಹಳೆಯ ಮತ್ತು ಶೈಕಣಿಕ ಸಾಲಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ 1499ನೇ ಹುಟ್ಟಿದ ದಿನದ ಈದ್ ಮಿಲಾದ್ ಅಂಗವಾಗಿ ವಿರಾಜಪೇಟೆ ಮುಖ್ಯ ರಸ್ತೆಯಿಂದ ಕಲ್ಲುಬಾಣೆಯ ಮಸೀದಿವರೆಗೆ ರಸ್ತೆಯಲ್ಲಿ ಬೆಳೆದು ನಿಂತ ಕಾಡು ಗಿಡಗಂಟಿಗಳನ್ನು ತೆಗೆದು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಮಳೆಯಿಂದ ರಸ್ತೆಗಳಲ್ಲಿ ಉಂಟಾದ ಗುಂಡಿಗಳಿಗೆ ಕಲ್ಲು ಮಣ್ಣುಗಳನ್ನು ಹಾಕಿ ಮುಚ್ಚಿದರು. ಈ ಸಂದರ್ಭ ವಿದ್ಯಾರ್ಥಿಗಳಾದ ಶೀಯಾಜ್, ಅಜರುದ್ದಿನ್, ಯಾಯಿಯ, ರಷೀದ್, ಕುಟ್ಟಾಪಿ, ನಿಜಾಂ, ತಸ್ನಿಂ, ಆಲಿ, ಅಶ್ರಪ್, ಶಂಷಿರ್, ಶಮಿರ್, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಸೆ.9 NEWS DESK : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಂಸ್ಥೆಗೆ 2024-26 ನೇ ಶೈಕ್ಷಣಿಕ ಸಾಲಿಗೆ ದಾಖಲಾದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಮತ್ತು ಪೋಷಕರ ಸಭೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಕೆ.ವಿ.ಶ್ರೀಕಾಂತ್  ನೂತನ ತರಬೇತಿದಾರರಿಗೆ ಸಂಸ್ಥೆಯ ನೀತಿ ನಿಯಮಗಳ ಬಗ್ಗೆ ಮತ್ತು ಪೋಷಕರಿಗೆ ಅವರ ಜವಾಬ್ದಾರಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಸಂಸ್ಥೆ ಮತ್ತು ತರಬೇತಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಕೆ.ಸಿ.ಉದಯಕುಮಾರ್ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿ ಕೆ.ಜಿ.ಜಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Read More

NEWS DESK :: ಕೊಡಗಿನಲ್ಲಿ ಹುಟ್ಟಿದವರಿಗೆ 3 ಗುಣಗಳು ರಕ್ತಗತವಾಗಿಯೇ ಬಂದಿರುತ್ತವೆ. ಇದರಲ್ಲಿ ಮೊದಲನೆಯದು ಸೈನ್ಯ, ಎರಡನೆಯದು ಹಾಕಿ ಹಾಗೂ ಮೂರನೆಯದು ಮದ್ಯಪಾನ. ಇದರಲ್ಲಿ ಮದ್ಯಪಾನವನ್ನು ದೂರವಿಟ್ಟು ಉಳಿದ ಎರಡರ ಮೇಲೆ ನಮ್ಮ ಗಮನವಿದ್ದರೆ ನಾವು ಅದನ್ನು ಸಾಧಿಸಬಹುದು ಎಂದು ನುಡಿಯುತ್ತಾರೆ ಅಯ್ಯುಡ ಗಣಪತಿಯವರು. ದಿವಂಗತ ಅಯ್ಯುಡ ಈರಪ್ಪ ಹಾಗೂ ಗೌರಮ್ಮ ದಂಪತಿಯರ ಪುತ್ರನಾಗಿ ಗಣಪತಿಯವರು ಬೆಟ್ಟಗೇರಿಯಲ್ಲಿ ಜನಿಸುತ್ತಾರೆ. ಇವರ ತಂದೆ ಈರಪ್ಪ ಕೊಡಗಿನ ಪ್ರಥಮ ಮಾಸ್ಟರ್ ಟೈಲರ್ ಎಂದೇ ಪ್ರಸಿದ್ಧರಾಗಿದ್ದರು. ಶಿಕ್ಷಣ ::  ಸೆಂಟ್ರಲ್ ಹೈ ಸ್ಕೂಲ್ ಮಡಿಕೇರಿಯಲ್ಲಿ ಶಿಕ್ಷಣ ಪಡೆದರು. ಓದುತ್ತಿರುವಾಗಲೇ ಕ್ರಿಕೆಟ್ ಹಾಗೂ ಅಥ್ಲೆಟಿಕ್ಸ್ ಚಾಂಪಿಯನ್ ಆಗಿದ್ದರು. 400 ಮೀಟರ್ ಓಟದಲ್ಲಿ ಚಾಂಪಿಯನ್ ಆಗಿದ್ದರು. ಇವರು ಕೊಡಗಿನ ಮಿಲ್ಕಾ ಸಿಂಗ್ ಎಂದೆ ಪ್ರಸಿದ್ಧಿ ಪಡೆದಿದ್ದರು ಅಂದಿನ ಭಾರತದ ಖ್ಯಾತ ತರಬೇತುದಾರರಾದ ಡಾ.ಕೋದಂಡ ಮುತ್ತಯ್ಯ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಶಹಭಾಶ್ ಎನಿಸಿಕೊಂಡರು. ಎನ್‌.ಸಿ.ಸಿ ಯ ಜೂನಿಯರ್ ಡಿವಿಜನ್ ಕೆಡೆಟ್ ಆಗಿ ದಿವಂಗತ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಂದ…

Read More

ವಿರಾಜಪೇಟೆ ಸೆ.9 NEWS DESK : ವಿರಾಜಪೇಟೆ ಪಟ್ಟಣದ ಪುರಾತನ ಕ್ರೈಸ್ತ ದೇವಾಲಯವಾದ ಸಂತ ಅನ್ನಮ್ಮ ಚರ್ಚ್ ನಲ್ಲಿ ಮೇರಿ ಮಾತೆಯ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ರೆ.ಫಾ.ಜೇಮ್ಸ್ ಡೊಮಿನಿಕ್ ಹಾಗೂ ಸಂತ ಅನ್ನಮ್ನ ಪಿ.ಯು. ಕಾಲೇಜಿನ ಪ್ರಾಂಶುಪಾಲರು ಹಾಗೂ ಧರ್ಮಗುರುಗಳಾದ ರೆ.ಫಾ. ಮದಲೈ ಮುತ್ತು ಅವರ ನೇತೃತ್ವದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ದಿವ್ಯ ಪ್ರಾರ್ಥನೆ ಹಾಗೂ ಧರ್ಮಗುರುಗಳಿಂದ ಪ್ರವಚನವು ನಡೆಯಿತು. ಗಾಯನ ವೃಂದದವರು ಪ್ರಾರ್ಥನೆಯನ್ನು ಮಾಡಿದರು. ಧರ್ಮಗುರುಗಳು ಲೋಕದಾದ್ಯಂತ ಸುಖ, ಶಾಂತಿ, ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು. ಚರ್ಚ್ ನ ಬಲಿಪೀಠದ ಬಳಿ ಹೂವುಗಳಿಂದ ಅಲಂಕರಿಸಲಾಗಿತ್ತು. ವಿಶೇಷ ಪ್ರಾರ್ಥನೆಯ ಬಳಿಕ ಧರ್ಮಗುರುಗಳ ಸಮ್ಮುಖದಲ್ಲಿ ಭಕ್ತರು ಚರ್ಚ್ ಅವರಣದಲ್ಲಿರುವ ಮೇರಿ ಮಾತೆಯ ಮೂರ್ತಿಗೆ ಪುಷ್ಪರ್ಚನೆ ಯನ್ನು ಮಾಡಿದರು. ಈ ಸಂದರ್ಭ ಚರ್ಚ್ ಪಾಲನಾ ಸಮಿತಿಯವರು, ಕನ್ಯಾ ಸ್ತ್ರೀಯರು, ಭಕ್ತಾದಿಗಳು ಉಪಸ್ಥಿತರಿದ್ದರು. ಹಬ್ಬದ ಪ್ರಯುಕ್ತ ನೆರೆದಿದ್ದ ಭಕ್ತರಿಗೆ ಅನ್ನದಾನ ಜರುಗಿತು. ಹಬ್ಬದ ಪ್ರಯುಕ್ತ…

Read More

ಕುಶಾಲನಗರ ಸೆ.9 NEWS DESK : ಕುಶಾಲನಗರದ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ನಾಡು ಕಂಡ ಹಿರಿಯ ಸಾಹಿತಿ, ಸಂಶೋಧಕ, ಪಕ್ಷಿ, ಪರಿಸರ ರಕ್ಷಕ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರ ಸ್ಮರಣೆ ಕಾರ್ಯಕ್ರಮ ಕೂಡ್ಲೂರು ಗ್ರಾಮದ ಟಿ.ಆರ್.ಶರವಣಕುಮಾರ್ ಅವರ ನಿವಾಸ “ಚಂದ್ರ ಕುಟೀರ” ದಲ್ಲಿ ನಡೆಯಿತು. ಈ ಸಂದರ್ಭ ವಿಚಾರವಾದಿ ಹಾಗೂ ವಾಗ್ಮಿ ವಿ.ಪಿ.ಶಶಿಧರ್ ಮಾತನಾಡಿ, ಕುವೆಂಪು ಕಾಲಘಟ್ಟದಲ್ಲಿ ಕನ್ನಡ ನಾಡು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಂಡಷ್ಟು ಇತ್ತೀಚಿನ ದಶಕಗಳಲ್ಲಿ ಕಾಣುತ್ತಿಲ್ಲ. ಕುವೆಂಪು ಸಾಹಿತ್ಯಿಕವಾಗಿ ಗಗನದ ಎತ್ತರಕ್ಕೇರಿದಾಗ್ಯೂ ಅವರ ಪುತ್ರ ಪೂರ್ಣಚಂದ್ರ ತೇಜಸ್ವಿ ಅಪ್ಪನ ನೆರಳಿನಿಂದ ಹೊರಬಂದು ಸ್ವತಃ ತಾವೇ ಸಾಹಿತ್ಯ ರಚನೆಗಳಲ್ಲಿ ತೊಡಗಿಸಿಕೊಂಡು ಹೆಸರು ಮಾಡಿದವರು. ಸಾಹಿತ್ಯದಷ್ಟೇ ಪಕ್ಷಿಗಳ ವೈವಿಧ್ಯತೆ ಹಾಗೂ ಪರಿಸರದ ಬಗ್ಗೆಯೂ ತೇಜಸ್ವಿ ಹೆಚ್ಚಿನ ಒಲವು ಹೊಂದಿದ್ದರು. ತೇಜಸ್ವಿ ಒಡನಾಡಿಗಳು ಹಳ್ಳಿಗಳನ್ನು ತೊರೆದು ನಗರಗಳಿಗೆ ಆಕರ್ಷಿತರಾದರೆ ತೇಜಸ್ವಿ ನಗರ ತೊರೆದು ಹಳ್ಳಿಯ ಸುಂದರ ಪರಿಸರದತ್ತ ಒಲವು ಹೊಂದಿದ್ದರು. ತಮ್ಮ ತೋಟದಲ್ಲಿ ಬೆಳೆದ ಯಾವ ಬೆಳೆಗಳೂ ಆದಾಯ ತಂದು ಕೊಡದ್ದರಿಂದ…

Read More

ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜನ್ಮದಿನಾಚರಣೆಯನ್ನು ಕ್ರಿಶ್ಚಿಯನ್ ಬಾಂಧವರು ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ವಿವಿಧ ಚರ್ಚ್‍ಗಳಲ್ಲಿ ಈ ಸಂಬಂಧ ವಿಶೇಷ ಪ್ರಾರ್ಥನೆ, ಬಲಿಪೂಜೆಗಳು ನಡೆದವು. ಕಳೆದ ಒಂದು ವಾರದಿಂದ ಪ್ರಾರ್ಥನೆಗಳ ಮೂಲಕ ವಿಶೇಷ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದ ಜನಾಂಗ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.  ಮಡಿಕೇರಿಯ ಸಂತ ಮೈಕಲರ ದೇವಾಲಯದಲ್ಲಿ ಹಬ್ಬದ ಆಡಂಬರದ ಗಾಯನ, ಬಲಿಪೂಜೆ ನಡೆಯಿತು. ಫಾ.ದೀಪಕ್ ಬಲಿಪೂಜೆ ನೆರವೇರಿಸಿ ದಿನದ ಮಹತ್ವದ ಸಂದೇಶ ನೀಡಿದರು. ಬಲಿಪೂಜೆ ಬಳಿಕ ಮಾತೆ ಮರಿಯಮ್ಮನವರ ಪಲ್ಲಕ್ಕಿಯೊಂದಿಗೆ ಮೆರವಣಿಗೆ ನಡೆಯಿತು. ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಾತೆ ಮಾರಿಯಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಆರಾಧಿಸಲಾಯಿತು. ಸುಂಟಿಕೊಪ್ಪದ ಸಂತ ಅಂತೋಣಿ  ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ನೇರವೇರಿಸಿದರು. ದೇವಾಲಯದಿಂದ ಮಾತೆ ಮರಿಯಮ್ಮನವರ ಮೂರ್ತಿಯನ್ನು ಮೆರವಣಿಗೆಯ ಮೂಲಕ  ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ಪುಷ್ಪನಮನ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ  ಕ್ರೈಸ್ತ ಬಾಂಧವರು…

Read More

ಬೆಂಗಳೂರು ಸೆ.9 NEWS DESK  : ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59)  ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್‌ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.  ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ. ಸುಮಾರು ಮೂವತ್ತು ವರ್ಷಗಳಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ ನಾಡಿಗೇರ, ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಪನ್‌ ಹೆಡ್ಡಿಂಗ್‌ಗಳ ಮೂಲಕವೇ ಕನ್ನಡ ಪತ್ರಿಕೋದ್ಯಮದಲ್ಲಿ ಖ್ಯಾತಿ ಪಡೆದಿದ್ದರು. ಸರಳ, ಸಜ್ಜನಿಕೆಯ ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ. ವಿಶ್ವವಾಣಿ ನಂತರ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ…

Read More