ಮಡಿಕೇರಿ NEWS DESK ಸೆ.23 : ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ ಸಂಘಟನೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಿಐಟಿಯು ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕ ಸಂಘಟನೆಗಳ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳುತ್ತಿದೆ. ವಾರ್ಷಿಕ ರಿಟರ್ನ್ಸ್ ಸಲ್ಲಿಸುವಲ್ಲಿ ಕಾರ್ಮಿಕ ಸಂಘಗಳು ವಿಳಂಬ ಮಾಡಿದರೆ ಸಂಘದ ನೋಂದಣಿಯನ್ನು ರದ್ದು ಮಾಡುವುದು ಅಥವಾ ಭಾರೀ ದಂಡ ವಿಧಿಸುವ ಮೂಲಕ ಸಂಘಟನೆಗಳ ಅಸ್ತಿತ್ವಕ್ಕೆ ದಕ್ಕೆ ತರುವ ಕೆಲಸ ಮಾಡುತ್ತಿದೆ. ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವಾಗಿ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕಾನೂನುಬಾಹಿರವೆಂದು ಪರಿಗಣಿಸುವ ಸಾಧ್ಯತೆ ಇದೆ ಎಂದು ಆರೋಪಿಸಿದರು. ಮತ್ತೊಂದೆಡೆ…
ಲೇಖಕ: admin
ಮಡಿಕೇರಿ ಸೆ.23 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಕರ್ನಾಟಕ ಮೆದುಳು ಅರೋಗ್ಯ ಉಪಕ್ರಮ, ರಾಷ್ಟ್ರೀಯ ಮಾನಸಿಕ ಅರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ಅಲ್ಝೈಮರ್ ದಿನ-2024“ಮರೆವಿನ ಕಾಯಿಲೆ, ಅಲ್ಝೈಮರ್ ರೋಗಗಳನ್ನು ನಿರ್ವಹಿಸಲು ಇದು ಸಕಾಲ”ಎಂಬ 2024ರ ಘೋಷ ವಾಕ್ಯದೊಂದಿಗೆ ವಿಶ್ವ ಅಲ್ಝೈಮರ್ ದಿನವನ್ನು ಆಚರಿಸಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಬೋಧಕ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KABHI) ಕ್ಲಿನಿಕ್ , ಸಾಮಾನ್ಯ ವೈದ್ಯ ಶಾಸ್ತ್ರ ವಿಭಾಗದಲ್ಲಿ ಹಾಗೂ ತನಲ್ ವೃದ್ಧಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ KaBHI ಕೊಡಗು ಜಿಲ್ಲಾ ಸಂಯೋಜಕ ಆರ್.ವಿಕ್ರಮ್ ಅಲ್ಝೈಮರ್ ಕಾಯಿಲೆ ಹಾಗೂ ಡಿಮೆಂಷಿಯ ಕಾಯಿಲೆಯ ಬಗೆಗೆ ಹಾಗೂ KaBHI ಕಾರ್ಯಕ್ರಮದ ಬಗೆಗೆ ನೆರೆದಿದ್ದ ವಯೋ ವೃದ್ಧರಿಗೆ ಹಾಗೂ ಜನರಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ (ಮನಶ್ಶಾಸ್ತ್ರಜ್ಞೆ) ರಾದ ಫಿರೋದೋಸ್ ಸುಲ್ತಾನ ಮಾತನಾಡಿ, ಡಿಮೆಂಷಿಯ ಕಾಯಿಲೆಯ…
ಮಡಿಕೇರಿ ಸೆ.23 NEWS DESK : ವಿರಾಜಪೇಟೆ ತಾಲ್ಲೂಕು ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವತಿಯಿಂದ ಸೆ.25 ರಂದು ಬೆಳಗ್ಗೆ 10.30 ಗಂಟೆಗೆ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಭಾರತೀಯ ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿರುವ ‘ಅಮರ್ ಜವಾನ್’ ಸ್ಮಾರಕದಲ್ಲಿ ಹುತಾತ್ಮ ದಿನಾಚರಣೆ ನಡೆಯಲಿದೆ. ಹಾಗೆಯೇ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ದಿವಂಗತ ಮಾಜಿ ಯೋಧರಿಗೆ ಶ್ರದ್ಧಾಂಜಲಿಯನ್ನು ಸಂಘದ ವತಿಯಿಂದ ಅರ್ಪಿಸಲಾಗುವುದು. ಕರ್ನಲ್ ಪುಟ್ಟಿಚಂಡ ಗಣಪತಿ, ಮಡಿಕೇರಿ ಗೋಲ್ಡನ್ ಫಾಮ್ ಕ್ಯಾಂಟಿನ್ ವ್ಯವಸ್ಥಾಪಕರಾದ ಲೆಫ್ಟಿನೆಂಟ್ ಕರ್ನಲ್ ಮುಲ್ಲೇರ ಕಾವೇರಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ರಾಮಚಂದ್ರ, ವಿರಾಜಪೇಟೆ ತಾ. ಡಿವೈಎಸ್ಪಿ ಮೋಹನ್ ಕುಮಾರ್, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಕೆಡಿಸಿಸಿ…
ಮಡಿಕೇರಿ ಸೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ(ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹತ್ತಿರ) ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೊಡಗು…
ಮಡಿಕೇರಿ ಸೆ.23 NEWS DESK : ಆರವತ್ತರ ದಶಕದ ಆರಂಭದಿಂದಲೂ ಇ.ಎಂ.ಇ. ಹಾಕಿ ಕ್ಷೇತ್ರದಲ್ಲಿ ತನ್ನದೇ ಆದ ಖ್ಯಾತಿಯನ್ನು ಉಳಿಸಿಕೊಂಡಿದೆ. ಪ್ರಾರಂಭದ ದಿನಗಳಲ್ಲಿ ಸಾಮಾನ್ಯ ಆಟಗಾರರನ್ನು ಹೊಂದಿದ್ದ ತಂಡ ಕೆಲವೇ ವರ್ಷಗಳಲ್ಲಿ ಹಲವು ಪ್ರತಿಭಾನ್ವಿತ ಆಟಗಾರರೊಂದಿಗೆ ಕೆಲವು ಭರವಸೆಯ ಆಟಗಾರರ ಪಡೆಯನ್ನು ಸಿದ್ಧಪಡಿಸಿ ಸಾಂಘಿಕ ಹೋರಾಟದಲ್ಲಿ ಹೆಸರುಗಳಿಸುತ್ತಾ ಪ್ರವರ್ಧಮಾನಕ್ಕೆ ಬಂತು. ಪಂದ್ಯಗಳನ್ನು ಗೆಲ್ಲಿಸಿ ಕೊಡುವಂತಹ ಆತ್ಮವಿಶ್ವಾಸದ ಆಟಗಾರರು ತಂಡದಲ್ಲಿ ಕಾಣಿಸಿಕೊಂಡರು. ಇ.ಎಂ.ಇ ಇತಿಹಾಸ : : ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷ್ ಸರ್ಕಾರ ತಮ್ಮ ಆಡಳಿತದಲ್ಲಿ ಸೇನೆಯನ್ನು ಇನ್ನಷ್ಟು ಬಲಪಡಿಸಲು 1943ರಲ್ಲಿ ಕೋರ್ ಆಫ್ ರಾಯಲ್ ಬ್ರಿಟೀಷ್ ಆರ್ಮಿ ಎಕ್ಯೂಪ್ ಮೆಂಟ್ ಘಟಕವನ್ನು ಆರಂಭಿಸಿತು. ಇದರ ಕಾರ್ಯವೈಖರಿ ಏನೆಂದರೆ ಯುದ್ಧದಲ್ಲಿ ಬಳಸಿದ ಯುದ್ಧ ಸಾಮಗ್ರಿಗಳನ್ನು, ವಾಹನಗಳನ್ನು ರಿಪೇರಿ ಮಾಡುವುದು ಮತ್ತು ಅಭಿವೃದ್ಧಿಪಡಿಸುವುದು. ಸ್ವಾತಂತ್ರ್ಯ ನಂತರ ಬ್ರಿಟೀಷರು ದೇಶ ಬಿಟ್ಟು ಹೋದ ನಂತರ ಹಲವು ಬದಲಾವಣೆಯೊಂದಿಗೆ ಅಧಿಕೃತವಾಗಿ ಇ.ಎಂ.ಇ (ಎಲೆಕ್ಟ್ರಿಕ್ ಮೆಕ್ಯಾನಿಕ್ ಇಂಜಿನಿಯರ್ಸ್) ಎಂದು ನಾಮಕರಣ ಮಾಡಲಾಯಿತು. ಇದರ ಕೇಂದ್ರ ಕಚೇರಿ ಸಿಕಂದರಾಬಾದ್ ನಲ್ಲಿದೆ.…
ಮಡಿಕೇರಿ ಸೆ.23 NEWS DESK : ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಸಲ್ಲಿಸಲು ಹಾಗೂ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗಾಗಿ “ಹೊಯ್ಸಳ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಕರಣವು 01.08.2023 ರಿಂದ 31.07.2024 ರೊಳಗೆ ನಡೆದಿರಬೇಕು. ದಿನಾಂಕ: 01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ…
ಮಡಿಕೇರಿ ಸೆ.20 NEWS DESK : 66/11 ಕೆವಿ ವಿರಾಜಪೇಟೆ ವಿದ್ಯುತ್ ಉಪ-ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಕ.ವಿ.ಪ್ರ.ನಿ.ನಿ ರವರ ಕೋರಿಕೆಯಂತೆ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ 66/11ಕೆವಿ ವಿರಾಜಪೇಟೆ,33/11 ಕೆವಿ ಮೂರ್ನಾಡು ಹಾಗೂ 33/11 ಕೆವಿ ಸಿದ್ದಾಪುರ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರೀ, ಕಡಂಗಮರೂರು ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.23 NEWS DESK : `ಕನ್ನಡ ಭಾಷಾ ಬೋಧಕರು ಕೇವಲ ಬೋಧಕರಲ್ಲ. ಅವರು ಸಮಾಜವನ್ನು ತಿದ್ದುವ ರಾಯಭಾರಿಗಳು. ವಿದ್ಯಾರ್ಥಿಗಳಲ್ಲಿ ಅವರು ಸಾಹಿತ್ಯದ ಮೂಲಕ ಸಾಮಾಜಿಕ ಮೌಲ್ಯಗಳನ್ನು ಬಿತ್ತಬೇಕು’ ಎಂದು ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರಕುಮಾರ್ ತಿಳಿಸಿದರು. ದಲಿತ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕನ್ನಡ ಭಾಷಾ ಬೋಧಕರಿಗಾಗಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಭಾವನಾಜೀವಿಗಳೂ ಆಗಿರುವ ಅವರು ಸೋಮಾರಿತನ ತೋರದೇ ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. `ಗೈಡ್’ ಮೇಲೆ ಅವಲಂಬಿತರಾಗದೇ ಪಠ್ಯವನ್ನು ಆಳವಾಗಿ ಅಧ್ಯಯನ ಮಾಡಬೇಕು ಎಂದು ಕರೆ ನೀಡಿದರು. `ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು’ ವಿಷಯ ಕುರಿತು ಸುದೀರ್ಘ ಉಪನ್ಯಾಸ ನೀಡಿದ ಅವರು, `ಪಂಪ ಹೇಳಿದ `ಮನುಷ್ಯಜಾತಿ ತಾನೊಂದೆ ವಲಂ’ ಮಾತಿನಿಂದ ಹಿಡಿದು ದೇವನೂರ ಮಹಾದೇವ ಅವರ `ಸಂಬಂಜ ಅನ್ನೋದು ದೊಡ್ಡದು ಕಣಾ’ ಎಂಬ ಮಾತಿನವರೆಗೆ ಅನೇಕ ಕವಿವಾಣಿಗಳನ್ನು ಉಲ್ಲೇಖಿಸಿ ಗಮನ ಸೆಳೆದರು.…
ಸುಂಟಿಕೊಪ್ಪ,ಸೆ.23 NEWS DESK : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ತೋರುವುದರೊಂದಿಗೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 15 ವರ್ಷದ ವಿಭಾಗದ ಟಾಟಾ ಸ್ಪರ್ಧೆಯಲ್ಲಿ ವಿಕೆ ಹರಿಪ್ರಿಯಾ ಪ್ರಥಮ, 14 ವರ್ಷದ ವಿಭಾಗದಲ್ಲಿ ಎಂ.ಎಸ್.ದಿಗಂತ್ ಕುಳಿತೆ ಹಾಗೂ ಕಾಟಾ ವಿಭಾಗದಲ್ಲಿ ಪ್ರಥಮ, 13 ವರ್ಷದ ವಿಭಾಗದಲ್ಲಿ ಆರ್.ಜೀವಿಕ ಕುಮಿತೆ ಹಾಗೂ ಕಾಟಾ ಪ್ರಥಮ, 12 ವರ್ಷ ವಿಭಾಗ ದಲ್ಲಿ ವಿ.ಕೆ.ಚೈತನ್ಯ ಕುಳಿತೆ ಪ್ರಥಮ ಹಾಗೂ ಕಾಟಾ ವಿಭಾಗದಲ್ಲಿ ದ್ವಿತೀಯ, 12 ವರ್ಷ ವಿಭಾಗದಲ್ಲಿ ದಿವಿನ್ ಕಮಿತೆ ಹಾಗೂ ಕಾಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಸೀನಿಯರ್ ವಿಭಾಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಎಸ್.ಅಕ್ಷಯ್ ಹಾಗೂ ಎ.ಅಂಕಿತ್ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಕರಾಟೆ ತರಬೇತುದಾರರಾದ ರೇನ್ಸಿ ಮುಖೇಶ್ ಅವರ ಶಿಷ್ಯರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಸಂತ ಮೇರಿ ಆಂಗ್ಲ…
ಬೆಂಗಳೂರು NEWS DESK ಸೆ.23 : ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬಳಿ ನೂತನ ಆಂಬ್ಯುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಡಿದರು. ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು. ::: ಲೈಸೆನ್ಸ್ ರದ್ದು ::: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿ…






