ಕುಶಾಲನಗರ ಸೆ.6 NEWS DESK : ಕೊಡಗು ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಮಡಿಕೇರಿ, ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಯ ವತಿಯಿಂದ ಕುಶಾಲನಗರ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಕಾವೇರಿ ಇಕೋ ಕ್ಲಬ್ ಹಾಗೂ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ಸಂಯುಕ್ತಾಶ್ರಯದಲ್ಲಿ ಗೋ ಗ್ರೀನ್ ಅಭಿಯಾನದಡಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಬಳಕೆಗೆ ಕುರಿತು ಜನಜಾಗೃತಿ ನಡೆಯಿತು. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಹಾಗೂ ಪರಿಸರ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್ , ಈ ಗಣೇಶೋತ್ಸವದಲ್ಲಿ ಬಣ್ಣದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ನಾವು ಪರಿಸರ ಮಾಲಿನ್ಯಕ್ಕೆ ನೇರವಾಗಿ ಕಾರಣರಾಗುತ್ತಿದ್ದೇವೆ. ಆಧುನಿಕತೆಯ ಭರಾಟೆ ನಡುವೆ ಮಾಲಿನ್ಯಕಾರಿ ಪಿಓಪಿ ಹಾಗೂ ರಾಸಾಯನಿಕ ಬಣ್ದ…
ಲೇಖಕ: admin
ಮಡಿಕೇರಿ ಸೆ.6 NEWS DESK : ಭಾಗಮಂಡಲ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ನುರಿತ ವೈದ್ಯರನ್ನು ನೇಮಕ ಮಾಡದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಅಯ್ಯಂಗೇರಿ ಘಟಕ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಯ್ಯಂಗೇರಿ ಘಟಕದ ಅಧ್ಯಕ್ಷ ಮುನೀರ್ ಭಾಗಮಂಡಲ ಆಸ್ಪತ್ರೆಯನ್ನು ವೈದ್ಯರು ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಇದೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಲಂಭಿಸಿದ್ದು, ಕಳೆದ 2 ವರ್ಷಗಳಿಂದ ವೈದ್ಯರಿಲ್ಲದೆ ರೋಗಿಗಳು ಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಚಿಕಿತ್ಸಾ ವಿಭಾಗವನ್ನು ಇಬ್ಬರು ಶುಶ್ರೂಷಕಿಯರು ನಿಭಾಯಿಸುತ್ತಿದ್ದಾರೆ. ವೈದ್ಯರ ಕೊರತೆ ಬಗ್ಗೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಆರೋಪಿಸಿದರು. ಭಾಗಮಂಡಲ ಪುಣ್ಯ ಕ್ಷೇತ್ರವಾಗಿದ್ದು, ದೇಶದ ವಿವಿಧ ಕಡೆಗಳಿಂದ ಭಕ್ತರು ಹಾಗೂ ಪ್ರವಾಸಿಗರು…
ಮಡಿಕೇರಿ ಸೆ.6 NEWS DESK : ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿಗೆ ರೂ.41.84 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ರಷ್ಟು ಡಿವಿಡೆಂಡ್ ನೀಡಲು ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಂದ್ರೀರ ಎನ್.ತೇಜಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬಿಳಿಗೇರಿ, ಹಾಕತ್ತೂರು, ಕಗ್ಗೋಡ್ಲು ಮತ್ತು ಮೇಕೇರಿ ಗ್ರಾಮಗಳ ವ್ಯಾಪ್ತಿ ಹೊಂದಿದ್ದು, 1333 ಸದಸ್ಯರನ್ನು ಒಳಗೊಂಡು ರೂ.1.69 ಕೋಟಿ ಪಾಲು ಬಂಡವಾಳ ಹಾಗೂ ರೂ.1.87 ಕೋಟಿ ಕ್ಷೇಮ ನಿಧಿಯನ್ನು, ರೂ.1.03 ಕೋಟಿ ಇತರೆ ನಿಧಿಯನ್ನು, ರೂ.14.02 ಕೋಟಿ ಠೇವಣಿಯನ್ನು ಸಂಗ್ರಹಿಸಿದೆ ಎಂದರು. ಸಂಘದ ವತಿಯಿಂದ ಸದಸ್ಯರಿಗೆ ವಿವಿಧ ರೀತಿಯ ಸಾಲವನ್ನು ವಿತರಿಸಲಾಗಿದ್ದು, 2023-24ನೇ ಸಾಲಿಗೆ ಕೆ.ಸಿ.ಸಿ.ಸಾಲ, ಮಧ್ಯಮಾವಧಿ ಸಾಲ, ಜಾಮೀನು ಸಾಲ, ವಾಹನ ಸಾಲ, ಚಿನ್ನಾಭರಣ ಸಾಲ ಹಾಗೂ ಸ್ವಸಹಾಯ ಸಾಲ ಸೇರಿದಂತೆ ಒಟ್ಟು ರೂ.17.41 ಕೋಟಿಯಷ್ಟು ಸಾಲವನ್ನು ಸದಸ್ಯರಿಗೆ ವಿತರಿಸಲಾಗಿದೆ.…
ಮಡಿಕೇರಿ ಸೆ.6 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.9 ನಾಪೋಕ್ಲು ಮತ್ತು ಸೆ.10ರಂದು ಚೇರಂಬಾಣೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಾಪೋಕ್ಲು ಮತ್ತು ಚೇರಂಬಾಣೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ…
ವಿರಾಜಪೇಟೆ ಸೆ.6 NEWS DESK : ವಿರಾಜಪೇಟೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮೂರ್ನಾಡು ಕಾರ್ಯಕ್ಷೇತ್ರದ ಬೋಪಣ್ಣ ಅವರ ಗದ್ದೆಯಲ್ಲಿ ಯಂತ್ರದ ಮೂಲಕ ಭತ್ತದ ನಾಟಿಯ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮ ನಡೆಯಿತು. ಗದ್ದೆಯ ಮಾಲೀಕರಾದ ಬೋಪಣ್ಣ ಯಂತ್ರದ ನಾಟಿಗೆ ಚಾಲನೆಯನ್ನು ನೀಡಿ ಮಾತನಾಡಿ, ಭತ್ತದ ನಾಟಿಯ ತರಬೇತಿ ಕಾರ್ಯಕ್ರಮವು ಜನರಿಗೆ ತುಂಬಾ ಸಹಕಾರಿಯಾಗಿದೆ. ಹೊಸ ಆವಿಸ್ಕಾರಗಳು ಕೃಷಿ ಕ್ಷೇತ್ರದಲ್ಲಿ ನಡೆದು ಉತ್ಪಾದಕತೆ ಹೆಚ್ಚಿಸುವ ಗುರಿಯನ್ನು ರೈತರು ಹೊಂದಬೇಕು ಎಂದರು. ಶ್ರೀ ಸಂಘದ ಮೇಲ್ವಿಚಾರಕ ಹರೀಶ್ ಮಾತನಾಡಿ, ಪ್ರಸ್ತುತ ವರ್ಷ ವಿರಾಜಪೇಟೆ ತಾಲೂಕಿನ ರೈತರಿಗೆ ಉಪಯೋಗವಾಗುವ ದೃಷ್ಟಿಯಲ್ಲಿ ಅಮ್ಮತ್ತಿಯಲ್ಲಿ ನಾಟಿ ಯಂತ್ರ ಬ್ಯಾಂಕ್ ನ್ನು ತೆರೆದಿದ್ದು, ಯಂತ್ರಗಳ ಅನುಷ್ಠಾನ ಬಳಕೆಯನ್ನು ವಿವಿಧೆಡೆ ಮಾಡಲಾಗುತ್ತಿದೆ ಎಂದರು. ಭತ್ತದ ನರ್ಸರಿ ವಿಧಾನ, ಭತ್ತದ ತಳಿಗಳು, ಮಣ್ಣಿನ ಸಂಗ್ರಹ ಟ್ರೇ ಗಳ ಬಳಕೆಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಮೂರ್ನಾಡು ವಲಯದ ಸಂಘದ ಮೇಲ್ವಿಚಾರಕ ಪ್ರತಾಪ್,…
ಮಡಿಕೇರಿ ಸೆ.6 NEWS DESK : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ “ಭಾರತೀಯತೆಯ ಹಿರಿಮೆ- ಗರಿಮೆ” ವಿಷಯದ ಕುರಿತಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹೆಚ್.ಎನ್.ಶೃತಿ ಪ್ರಥಮ, ಮದೆನಾಡಿನ ಮದೆಮಹೇಶ್ವರ ಪದವಿ ಪೂರ್ವ ಕಾಲೇಜಿನ ಮೇಘಶ್ರೀ ದ್ವಿತೀಯ ಹಾಗೂ ಸೋಮವಾರಪೇಟೆಯ ಸಂತ ಜೋಸೆಫರ ಪದವಿ ಕಾಲೇಜಿನ ಎ.ಪಿ.ಮೋನಿಷಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಡಿಕೇರಿ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾದ್ಯಾಪಕಿಯಾಗಿರುವ ಹೆಚ್.ಪಿ.ನಿರ್ಮಲಾ ತೀರ್ಪುಗಾರಿಕೆಯಲ್ಲಿ ಈ ಆಯ್ಕೆ ನಡೆಸಲಾಗಿದೆ. ಕೊಡಗಿನ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಈ ಪ್ರಬಂಧ ಸ್ಪರ್ಧೆಯಲ್ಲಿ ವಿಶೇಷವಾಗಿತ್ತು. ಸ್ಪರ್ಧೆಯನ್ನು ಅ.ಭಾ.ಸಾ.ಪ ನ ಮಾಧ್ಯಮ ಪ್ರಮುಖರಾದ ವಿನೋದ್ ಮೂಡಗದ್ದೆ ನಿರ್ವಹಿಸಿರುವುದಾಗಿ ಅ.ಭಾ.ಸಾ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಚಂದನ್ ನಂದರಬೆಟ್ಟು ತಿಳಿಸಿದರು.
ಮಡಿಕೇರಿ ಸೆ.6 NEWS DESK : ಮಣಿಪುರ ಮೈತೆಯಿ ಅಸೋಸಿಯೇಷನ್ ಆಫ್ ಬೆಂಗಳೂರು ವತಿಯಿಂದ ಶಾಂತಿ ಮತ್ತು ಶಾಂತಿಯನ್ನು ಉತ್ತೇಜಿಸುವ ಗುರಿಯೊಂದಿಗೆ ಬೆಂಗಳೂರಿನ ದೊಡ್ಡಕನ್ನೆ ಹಳ್ಳಿ “ಸಿಲ್ವರ್ ಜ್ಯೂಬಿಲಿ ಟರ್ಫ್ ಪಾರ್ಕ್” ನಲ್ಲಿ ನಡೆದ ಫುಟ್ ಬಾಲ್ ಕ್ರೀಡಾಕೂಟದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷ ಮೇಜರ್ ರಾಜ್ಕುಮಾರ್ ಜಲಜಿತ್ ಸಿಂಗ್ ಅವರ ಆಹ್ವಾನದ ಮೇರೆಗೆ ಮುಖ್ಯ ಅತಿಥಿಗಳಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪಾಲ್ಗೊಂಡರು. ಮಣಿಪುರದ ಆದಿಮಸಂಜಾತ ಮೈತೆಯಿ ಬುಡಕಟ್ಟು ಜನಾಂಗದ ಸಭೆಯಲ್ಲಿ ಉಪಸ್ಥಿತರಿದ್ದ ಅವರು ಮೈತೆಯಿ ಜನಾಂಗ ಹಾಗೂ ಕೊಡಗಿನ ಕೊಡವರು ಒಂದೇ ನೋವನ್ನು ಅನುಭವಿಸುತ್ತಿದ್ದಾರೆ ಎಂದರು. ಮಣಿಪುರದ ಆದಿಮಸಂಜಾತ ಮೈತೆಯಿ ಸಮುದಾಯವು ಕಳೆದ ಹಲವು ತಿಂಗಳುಗಳಿಂದ ತಮ್ಮ ಸ್ವಂತ ತಾಯ್ನಾಡಿನಲ್ಲಿ ಸಂಕಷ್ಟದಲ್ಲಿದೆ. ನೆರೆಯ ಮ್ಯಾನ್ಮಾರ್ನಿಂದ ಬಂದ ವಲಸಿಗರಿಂದ ಮೈತೆಯಿ ಸಮುದಾಯದ ಅಸ್ತಿತ್ವಕ್ಕೆ ಬೆದರಿಕೆ ಇದೆ. ವಲಸಿಗ ಕುಕಿಗಳು ಭೂಮಿಯನ್ನು ಕಸಿದುಕೊಳ್ಳಲು ಮತ್ತು ಆಕ್ರಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಪವಿತ್ರ ಯಾತ್ರಾಸ್ಥಳ ನೊಂಗ್ ಮೈಚಿಂಗ್ಗೆ ಪ್ರವೇಶಿಸದಂತೆ ತಡೆದಿದ್ದಾರೆ. ಸ್ಥಳೀಯ ಮೈತೆಯಿಗಳನ್ನು…
ಮಡಿಕೇರಿ NEWS DESK ಸೆ.6 : ಚೇರಂಬಾಣೆಯ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಬ್ಬದ ಸಂಭ್ರಮದಲ್ಲಿದೆ. 25ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಮಿತಿ ನಿರ್ಧರಿಸಿದೆ. ಸೆ.7 ರಂದು ಬೆಳಿಗ್ಗೆ ಗಣಪತಿ ಹೋಮ ಮತ್ತು ವಿಶೇಷ ಪೂಜೆಯೊಂದಿಗೆ 10.30 ಗಂಟೆಗೆ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಏಳು ದಿನಗಳ ಕಾಲ ಗಣೇಶೋತ್ಸವವನ್ನು ಆಚರಿಸಲಿರುವ ಸಮಿತಿ, ಪ್ರತಿದಿನ ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಮಾಡಲಿದೆ. ಸಂಜೆ 7.30 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಪ್ರಸಾದ ಮತ್ತು ಫಲಹಾರ ನೀಡಲಾಗುವುದು. ಚೇರಂಬಾಣೆಯ ಮೇಲಿನಪೇಟೆ ಕೇಸರಿಮಯವಾಗಿದ್ದು, ಆಕರ್ಷಕ ಪ್ರವೇಶ ದ್ವಾರ ಸರ್ವ ಭಕ್ತರನ್ನು ಸ್ವಾಗತಿಸುತ್ತಿದೆ. ಸೆ.13ರಂದು ಸಂಜೆ 4ಗಂಟೆಗೆ ಗಣೇಶ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ದು ಕೊಳಗದಾಳು ಗ್ರಾಮದ ಪಾಕ ಹೊಳೆಯಲ್ಲಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿ ಕೇರಳದ ಪುಕೋಡು ಬ್ಯಾಂಡ್ ಸೆಟ್ ಮತ್ತು ಕೊಡಗಿನ ಸಾಂಪ್ರದಾಯಿಕ ವಾಲಗ ಇರುತ್ತದೆ. ಮಂಗಳೂರಿನ ಶಾರದಾ ಎಲೆಕ್ಟಿçಕಲ್ಸ್ ಆಕರ್ಷಕ ಮಂಟಪಕ್ಕೆ ವಿದ್ಯುತ್ ದೀಪಗಳ…
ಪುತ್ತೂರು ಸೆ.6 NEWS DESK : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ, ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್, ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಶಿಕ್ಷಕರು ಜ್ಞಾನವನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಾರೆ. ಪಠ್ಯಪುಸ್ತಕಗಳನ್ನು ಮೀರಿದ ಮೌಲ್ಯಗಳನ್ನು ತುಂಬುತ್ತಾರೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕರ ಪಾತ್ರವು ಇನ್ನಷ್ಟು ಹೆಚ್ಚಿನದ್ದಾಗಿದೆ. ನೈಜ ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಕೌಶಲ್ಯ ಮತ್ತು ಮನಸ್ಥಿತಿಯನ್ನು ಅಭಿವೃದ್ಧಿಪಡಿಸಲು ಶಿಕ್ಷಕರು ಸಹಾಯ ಮಾಡುತ್ತಾರೆ. ಶಿಕ್ಷಕರ ಸಮರ್ಪಣೆ, ತಾಳ್ಮೆ ಮತ್ತು ಬೆಂಬಲದಿಂದಾಗಿ ಸಂಸ್ಥೆ ಅಭಿವೃದ್ಧಿ ಹೊಂದಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಾದ ನೇಹಾ, ವಿದ್ಯಾರಣ್ಯ ಶರ್ಮ, ವರ್ಷಾ ನಾಯಕ್, ಸೀಮಾಲಹರಿ, ಸ್ಫೂರ್ತಿ ಲಕ್ಷ್ಮಿ, ಅಶ್ವಿನಿ ಪ್ರಾರ್ಥಿಸಿದರು. ಸ್ವಸ್ತಿಕ ಕಾರ್ಯಕ್ರಮ ನಿರ್ವಹಿಸಿದರು.
ಮಡಿಕೇರಿ ಸೆ.6 NEWS DESK : ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಡ್ಯಾನ್ಸ್ ಮತ್ತು ಫಿಟ್ನೆಸ್ ಸ್ಟುಡಿಯೋದಲ್ಲಿ ಮಹಿಳೆಯರಿಗಾಗಿ ಫಿಟ್ನೆಸ್ ಕ್ಲಾಸ್ ನಡೆಯುತ್ತಿದೆ. ಪ್ರತಿ ವಾರ ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5.30 ರಿಂದ 7 ಗಂಟೆಯವರೆಗೆ ಯೋಗ, ಜುಂಬಾ, ಭಾಂಗ್ರ ಹಿಟ್, ಕಾರ್ಡಿಯೋ ತರಬೇತಿ ನೀಡಲಾಗುತ್ತಿದೆ. ಆಸಕ್ತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಲಾಭ ಪಡೆದುಕೊಳ್ಳುವಂತೆ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಹಾಗೂ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 96329 76833 ನ್ನು ಸಂಪರ್ಕಿಸಬಹುದಾಗಿದೆ. ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಹಲವು ವಿದ್ಯಾರ್ಥಿಗಳು ಹಿಪ್ಹಾಪ್, ಸೆಮಿ ಕ್ಲಾಸಿಕಲ್, ಕಥಕ್, ಜಾನಪದ ಇತ್ಯಾದಿ ಚಟುವಟಿಕೆಗಳಲ್ಲಿ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ ವಿಜೇತರಾರುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಡಿಕೆಡಿ ಮತ್ತು ಅನೇಕ ಟಿವಿ ಶೋಗಳಲ್ಲಿ ಕೂಡ ಭಾಗವಹಿಸಿ ಗಮನ ಸೆಳೆದಿದ್ದಾರೆ ಎಂದು ಪ್ರೀತಾ ಕೃಷ್ಣ ತಿಳಿಸಿದ್ದಾರೆ.






