ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಅಮ್ಮತ್ತಿ ಒಂಟಿಯಂಗಡಿ ಹಚ್ಚಿನಾಡು ಗ್ರಾಮದ ಜಿಲ್ಲಂಡ ಸಿ.ತನು ಭಾರತೀಯ ಸೇನೆಯಲ್ಲಿ ಸುಬೇಧಾರ್ ಆಗಿ ಬಡ್ತಿ ಹೊಂದಿದ್ದಾರೆ. ಭಾರತೀಯ ಸೇನೆಯ ಎಎಂಸಿಯಲ್ಲಿ ಕಳೆದ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ತನು, ದೆಹಲಿ, ಕೊಲ್ಕತ್ತಾ, ಜಮ್ಮು ಮಾತ್ರವಲ್ಲದೆ, ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಸುಬೇಧಾರ್ ಆಗಿ ಬಡ್ತಿ ಹೊಂದಿ ಮಹಾರಾಷ್ಟ್ರದ ಪುಣೆಯಲ್ಲಿ ಸೇವೆಯಲ್ಲಿದ್ದಾರೆ. ಜಿಲ್ಲಂಡ ಸಿ.ತನು ಅವರ ತಂದೆ ಹಚ್ಚಿನಾಡು ಗ್ರಾಮದ ಜಿಲ್ಲಂಡ ಸಿ.ಚಂಗಪ್ಪ, ತಾಯಿ ಸರೋಜ, ಪತ್ನಿ ಗಾಯತ್ರಿ, ಇಬ್ಬರು ಪುತ್ರರಾದ ಹರನ್ ಕಾಳಪ್ಪ ಹಾಗೂ ಸೋಹನ್ ಮಾದಪ್ಪ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತನು ಅವರು ಕೊಡಗಿನ ನಟಿ, ನಿರ್ಮಾಪಕಿ, ನಿರ್ದೇಶಕಿ, ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಅವರ ಸಹೋದರರಾಗಿದ್ದಾರೆ.
ಲೇಖಕ: admin
ಮಡಿಕೇರಿ ಸೆ5 NEWS DESK : ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ…
ಮಡಿಕೇರಿ NEWS DESK ಸೆ.5 : ಲೀಟಲ್ ಫ್ಲವರ್ ಶಾಲೆಯಲ್ಲಿ ಲೇಖನಿ ಅಭಿಯಾನ ಕಾರ್ಯಕ್ರಮ ನಡೆಯಿತು. ಅಭಿಯಾನದ ಸಂಚಾಲಕಿ ವಾತ್ಸಲ್ಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಲೇಖನಿ ಅಭಿಯಾನ 20 ಮಹತ್ವ ವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪಾರ್ವತಿ, ಶಿಕ್ಷಕಿ ಭಾರತಿ ಹಾಜರಿದ್ದರು.
ಪೊನ್ನಂಪೇಟೆ, ಸೆ.5 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲ ವ್ಯಾಪ್ತಿಯ ಹಾತೂರು ಶಕ್ತಿ ಕೇಂದ್ರದ ಪ್ರಮುಖರಾಗಿ ಮುರುವಂಡ ಸವನ್ ಸೋಮಣ್ಣ ಹಾಗೂ ಪಡಿಕಲ್ ಯದುಕುಮಾರ್ ಆಯ್ಕೆಯಾಗಿದ್ದಾರೆ. ಹಾತೂರಿನಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರದ ಪುನರ್ ರಚನಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಹಾತೂರು ಬಿಜೆಪಿ ಶಕ್ತಿ ಕೇಂದ್ರದ ಸಹ ಪ್ರಮುಖರಾಗಿ ತೀತಮಾಡ ತಿಮ್ಮಯ್ಯ ಹಾಗೂ ಕಾಡ್ಯಮಾಡ ವಿನೋದ್ ಅವರನ್ನು ಆಯ್ಕೆಗೊಳಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ಮಂಡಲ ಬಿಜೆಪಿ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟಿರ ಕಿಲನ್ ಗಣಪತಿ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮುದ್ದಿಯಡ ಮಂಜು ಗಣಪತಿ, ಅಜಿತ್ ಕರುಂಬಯ್ಯ, ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ, ತಾಲೂಕು ಉಪಾಧ್ಯಕ್ಷ ಕಬೀರ್ ದಾಸ್, ಮಲ್ಲoಡ ಮಧು ಸೇರಿದಂತೆ ಪಕ್ಷದ ಹಿರಿಯರು, ಹಾತೂರು ಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಬೂತ್ ಸಮಿತಿ ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಸಮಿತಿ ಪ್ರಮುಖರು, ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು,…
ಮಡಿಕೇರಿ ಸೆ.5 NEWS DESK : ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆ ವತಿಯಿಂದ ನಾಲ್ವರು ಶಿಕ್ಷಕರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಗಮಂಡಲ ಕೆ.ವಿ.ಜಿ.ಐಟಿಐನ ಪದ್ಮಕುಮಾರ್ ರೈ, ನಾಪೋಕ್ಲು ಪಬ್ಲಿಕ್ ಶಾಲೆಯ ಉಷಾರಾಣಿ, ಪೆರಾಜೆ ಅಮೆಚೂರು ಪ್ರಾಥಮಿಕ ಶಾಲೆಯ ಲಾಲಿ ಮತ್ತು ಚೇರಂಬಾಣೆ ಅರುಣಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್, ದೇವಣಿರ ಕಿರಣ್, ನೆಶನ್ ಬಿಲ್ಡರ್ ಪ್ರಶಸ್ತಿಯ ಇತಿಹಾಸ ಮತ್ತು ಮಹತ್ವವನ್ನು ವಿವರಿಸಿದರು. ರೋಟರಿ ವುಡ್ಸ್ ಕ್ಲಬ್ ಈ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ವಲಯ ಸೇನಾನಿ ಅನಿತಾ ಪೂವಯ್ಯ ಮಾತನಾಡಿ ವುಡ್ಸ್ ಸಂಸ್ಥೆಯ ಪ್ರಮುಖ ಕಾರ್ಯಕ್ರಮಗಳನ್ನು ಶ್ಲಾಘಿಸುವ ಜೊತೆಗೆ ಪ್ರಶಸ್ತಿಗೆ ಭಾಜನರಾದ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸಿದರು. ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲ್ ಮಾತನಾಡಿ, ಅರ್ಹ ಶಿಕ್ಷಕರನ್ನು ಹುಡುಕಿ ರೋಟರಿ ವುಡ್ಸ್ ವತಿಯಿಂದ ಗೌರವಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕ್ಲಬ್…
ಮಡಿಕೇರಿ NEWS DESK ಸೆ.5 : ಖ್ಯಾತ ನಿದೇರ್ಶಕ, ನಟ ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ನಿರ್ಮಾಣ ಮಾಡಿರುವ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ರಾಜ್ಯಾದ್ಯಂತ ಇಂದು ಚಿತ್ರಮಂದಿರಗಳಲ್ಲಿ ತೆರೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಡಿಕೇರಿ ನಿವಾಸಿ, ನಿವೃತ್ತ ಸುಬೇದಾರ್ ಮೇಜರ್ ಪೂಜಾರೀರ ಬೆಳ್ಯಪ್ಪ ಹಾಗೂ ವೇದಾವತಿ ದಂಪತಿಯ ಪುತ್ರ ಪೂಜಾರೀರ ಬಿ.ಚಂದ್ರಜಿತ್ ಈ ಚಿತ್ರವನ್ನು ನಿರ್ದೇಶಿಸಿರುವುದು ವಿಶೇಷ. ಚಿತ್ರದ ಕಥೆ ಮತ್ತು ಹಾಡುಗಳನ್ನು ಇವರೇ ಬರೆದಿದ್ದು, ಈಗಾಗಲೇ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸಿನಿ ವಿಮರ್ಶಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. “ಬ್ಲಾಗ್ ಬರವಣಿಗೆಯ ಕಾಲದಲ್ಲಿ ಒಂಬತ್ತು ವರ್ಷಗಳ ಹಿಂದೆ ಚಂದ್ರಜಿತ್ ನೀಡಿದ್ದ ಲಿಂಕ್ ಇಂದು ಸಿನಿಮಾವಾಗಿದೆ. ಆ ಬರಹ ತುಂಬಾ ವಿಶೇಷವಾಗಿತ್ತು. ಅದೇ ಬ್ಲಾಗ್ ಕಥೆ ಇಂದು ಸಿನಿಮಾವಾಗಿದೆ. ಈ ರೀತಿಯ ಕಥೆ ಇರುವ ಸಿನಿಮಾ ಈ ಹಿಂದೆ ಬಂದಿರಬಹುದು. ಆದರೆ, ಇಂತಹ ನಿರೂಪಣೆಯ ಚಿತ್ರ ಸ್ಯಾಂಡಲ್ವುಡ್ನಲ್ಲಿ ಬಂದಿಲ್ಲ ಎಂದು ರಕ್ಷಿತ್ ಶೆಟ್ಟಿ ಅವರು ಪೂಜಾರೀರ ಚಂದ್ರಜಿತ್…
ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ನೀಲಗಿರಿ ಎಂ.ತಳವಾರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂದರ್ರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಇತರರು ಪಾಲ್ಗೊಂಡಿದ್ದರು. ಪ್ರಶಸ್ತಿ ಪ್ರದಾನ :: ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ…
ಮಡಿಕೇರಿ ಸೆ.5 NEWS DESK : ವಿರಾಜಪೇಟೆ ಕ್ರಿಕೆಟ್ ಹಬ್ಬ (ವಿ.ಸಿ.ಎಫ್)ದ ಲೋಗೋ ವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಬಿಡುಗಡೆಗೊಳಿಸಿದರು. ವಿರಾಜಪೇಟೆಯ ಶಾಸಕ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಪಂದ್ಯಾವಳಿಯ ಆಯೋಜಕರಾದ ಮಾದಂಡ ತಿಮ್ಮಯ್ಯ, ನಿತಿನ್ ಲೇಪು, ಆತಿಪ್ ಮನ್ನಾ ಹಾಗೂ ತಂಡದ ಮಾಲೀಕರು ಹಾಜರಿದ್ದರು.
ಮಡಿಕೇರಿ ಸೆ.5 NEWS DESK : ಪ್ರಸಕ್ತ (2024-25) ಸಾಲಿನ ದೀನದಯಾಳ ಅಂತ್ಯೋದಯ ಯೋಜನೆ ನಲ್ಮ್ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯಮಶೀಲತೆ ಮತ್ತು ಎಸ್ಎಚ್ಜಿ ಗುಂಪು ರಚನೆಗಾಗಿ ಮಡಿಕೇರಿ ನಗರ ಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಉದ್ದೇಶಿಸಿರುವ ಚಟುವಟಿಕೆಯ ಬಗ್ಗೆ ಅನುಭವ ಹೊಂದಿದ್ದರೆ/ ತರಬೇತಿ ಪಡೆದಿದ್ದರೆ ಪ್ರಮಾಣ ಪತ್ರ, ಯೋಜನಾ ವರದಿ, ಬಿಪಿಎಲ್ ಪಡಿತರ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ, ವೈಯಕ್ತಿಕ ಉಳಿತಾಯ ಖಾತೆಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ, ಅಂಗವಿಕಲರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ರೂ.20 ಛಾಪಾ ಕಾಗದದ ಮೇಲೆ ನಲ್ಮ್ ಯೋಜನೆಯ ಪೋಷಣ್ ಪ್ರಮಾಣ ಪತ್ರ ನೋಟರಿಯಿಂದ ದೃಢೀಕರಿಸಿದ ಪ್ರತಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 20 ಕೊನೆಯ ದಿನವಾಗಿದೆ. ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಸೂಚನೆ: ಮುಂದೆ ಹಾಜರು ಪಡಿಸಬಹುದಾದಂತಹ ಅಗತ್ಯ ದಾಖಲಾತಿಗಳನ್ನು…
ಮಡಿಕೇರಿ ಸೆ.5 NEWS DESK : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪø್ಪಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು…






