ಮಡಿಕೇರಿ ಸೆ.20 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳ ಯಶಸ್ವಿ ಅನುಷ್ಠಾನಕ್ಕಾಗಿ ರಚಿತಗೊಂಡಿರುವ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಕೊಡಗು ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೂತನ ಕಚೇರಿಯನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಆರಂಭಗೊಂಡಿರುವ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಜಿಲ್ಲೆಯಲ್ಲಿ ಪ್ರತಿಯೊಬ್ಬರಿಗೂ ಸರಕಾರದ ಗ್ಯಾರಂಟಿ ತಲುಪಿಸುವಲ್ಲಿ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು. ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಡಿ.ಕೆ.ಬ್ರಿಜೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರುಗಳು, ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು ಹಾಗೂ ಪಕ್ಷದ ಪ್ರಮುಖರು, ಫಲಾನುಭವಿಗಳು ಹಾಜರಿದ್ದರು.
ಲೇಖಕ: admin
ಮಡಿಕೇರಿ ಸೆ.20 NEWS DESK : ಕೆಪಿಸಿಸಿಯಿಂದ ನೂತನವಾಗಿ ಉಸ್ತುವಾರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಭೃಜೇಶ್ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ನಂತರ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದಲೇ ಪುನರ್ ರಚಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರೊಂದಿಗೆ ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳಲ್ಲೂ ಮೇಲುಗೈ ಸಾಧಿಸುವಲ್ಲಿ ಶ್ರಮ ವಹಿಸಬೇಕೆಂದು ಕರೆ ನೀಡಿದರು. ಪಕ್ಷದ ಹೈಕಮಾಂಡ್ ನಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಗೆ ಬೇಕಾದಂತಹ ಎಲ್ಲಾ ಸಹಕಾರವನ್ನು ನೀಡುವುದರೊಂದಿಗೆ ಪಕ್ಷದ ಸಂಘಟನೆಯಲ್ಲಿ ತಾವು ಕೂಡ ಭಾಗಿಯಾಗುವುದಾಗಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪಕ್ಷದ ಶಿಷ್ಟಾಚಾರವನ್ನು ಯಾರೂ ಉಲ್ಲಂಘಿಸಬಾರದು. ಪಕ್ಷದಲ್ಲಿ ಯಾವುದೇ ರೀತಿಯ ಬೆಳವಣಿಗೆ ಆದರೂ ಪಕ್ಷದ ಜಿಲ್ಲಾಧ್ಯಕ್ಷರ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ನೆರದಿದ್ದ ಹಲವು ಮುಖಂಡರು ಇದೇ ಸಂದರ್ಭ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಸಭೆಯಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ…
ಮಡಿಕೇರಿ ಸೆ.20 NEWS DESK : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು. ನಗರದ ಕೊಡವ ಸಮಾಜದಲ್ಲಿ ನಡೆದ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಸೂದನ ಈರಪ್ಪ ಅವರು ವರದಿ ಸಾಲಿನಲ್ಲಿ ಸಂಘವು 23,43,150 ರೂ. ವ್ಯಾಪರ ಲಾಭ ಗಳಿಸಿದ್ದು, 12,25,760 ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.25ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ ಎಂದು ತಿಳಿಸಿದರು. ಕಳೆದ 39 ವರ್ಷಗಳಿಂದ ಸ್ಥಗಿತಗೊಂಡಿದ್ದ ಏಲಕ್ಕಿ ಖರೀದಿ ಮತ್ತು ಮುಂಗಡ ನೀಡಿ ಠೇವಣಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಕಳೆದ 2 ವರ್ಷಗಳಿಂದ ಆರಂಭಿಸಲಾಗಿದ್ದು, ಸಂಘದ ಸದಸ್ಯರು ಹಾಗೂ ಏಲಕ್ಕಿ ಬೆಳೆಗಾರರು ಇದರ ಸದುಪಯೋಗ ಪಡೆದು ತಮ್ಮ ಫಸಲಿಗೆ ಯೋಗ್ಯ ಬೆಲೆಯನ್ನು ಪಡೆಯಬೇಕೆಂದು ಕೋರಿದರು. ಎರಡು ವರ್ಷಗಳ ಹಿಂದೆ ಮಡಿಕೇರಿ ನಗರದಲ್ಲಿ ಆರಂಭವಾದ “ಉತ್ಪತ್ತಿ” ಮಳಿಗೆ (ಸ್ಪೈಸಸ್ ಮಳಿಗೆ) ರೈತರ ಹಾಗೂ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ರೈತರಿಗೆ ನಾವು ಉತ್ತಮ ದರ…
ಮಡಿಕೇರಿ ಸೆ.20 NEWS DESK : ಕೊಡಗಿನ ಕ್ರೀಡಾರಂಗದಲ್ಲಿ ಹಲವು ಆಟಗಾರರು ಸಾಧನೆಗಳನ್ನು ಮಾಡಿದ್ದಾರೆ. ಆದರೆ ಒಂದಕ್ಕಿಂತ ಹೆಚ್ಚು ಕ್ರೀಡೆಯಲ್ಲಿ ಹೆಸರು ಮಾಡಿದವರು ಬಹು ವಿರಳ. ಹೀಗಿರುವಾಗ ಹಾಕಿ ಹಾಗೂ ಫುಟ್ ಬಾಲ್ ಎರಡೂ ಕ್ರೀಡೆಯಲ್ಲೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕೊಡಗಿನ ಏಕೈಕ ಆಟಗಾರ ಕಳ್ಳಿಚಂಡ ಪ್ರಸಾದ್. ದಿವಂಗತ ಕಳ್ಳಿಚಂಡ ಕರುಂಬಯ್ಯ ಸೋಮಯ್ಯ ಹಾಗೂ ನೀಲಮ್ಮ( ತಾಮನೆ ಕರ್ತಮಾಡ) ದಂಪತಿಯರ ಪುತ್ರನಾಗಿ ಪ್ರಸಾದ್ ಅವರು 1950ರಲ್ಲಿ ಸುಳುಗೋಡು ಗ್ರಾಮದಲ್ಲಿ ಜನಿಸಿದರು. ಶಿಕ್ಷಣ :: ಪ್ರಾಥಮಿಕ ಶಿಕ್ಷಣವನ್ನು ಸುಳುಗೋಡು ಹಾಗೂ ಮಾಯಮುಡಿಯಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ಮೈಸೂರು ದಳವಾಯಿ ಪ್ರೌಢಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಮೈಸೂರು ಯುವರಾಜ ಕಾಲೇಜಿನಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿಯನ್ನು 1972 ಪಡೆದರು. ಕ್ರೀಡಾ ಲೋಕಕ್ಕೆ ಪಾದಾರ್ಪಣೆ :: ಪ್ರಸಾದ್ ಅವರು ಬಾಲ್ಯದಿಂದಲೂ ಕ್ರೀಡೆಯನ್ನು ಆಡುತ್ತಿದ್ದರೂ, ಹಾಕಿ ಹಾಗೂ ಫುಟ್ ಬಾಲ್ ನಲ್ಲಿ ವಿಶೇಷ ಒಲವಿತ್ತು. ಇದು ಅವರು ಕ್ರೀಡಲೋಕಕ್ಕೆ ಪಾದಾರ್ಪಣೆ ಮಾಡಲು ನಾಂದಿ ಹಾಡಿತು. ಮೈಸೂರು…
ಮಡಿಕೇರಿ ಸೆ.20 NEWS DESK : ಭಾಗಮಂಡಲ ಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಬೇಕೆಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಯ್ಯಂಗೇರಿ ಘಟಕ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದು, ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ನುರಿತ ವೈದ್ಯರನ್ನು ನೇಮಕ ಮಾಡಬೇಕು ಎಂದು ಪಕ್ಷದ ಪ್ರಮುಖರು ಮನವಿ ಮಾಡಿದರು. ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಇದೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಭಿಸಿದ್ದು, ವೈದ್ಯರಿಲ್ಲದೆ ರೋಗಿಗಳು ಕಷ್ಟ ಅನುಭವಿಸುತ್ತಿದ್ದಾರೆ. ಭಾಗಮಂಡಲ ಮತ್ತು ತಲಕಾವೇರಿ ಪುಣ್ಯ ಕ್ಷೇತ್ರಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಮಡಿಕೇರಿ ಆಸ್ಪತ್ರೆಯನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ವೈದ್ಯರ ಕೊರತೆ ಕುರಿತು ಈಗಾಗಲೇ ವಿರಾಜಪೇಟೆ ಕ್ಷೇತ್ರದ ಶಾಸಕರಿಗೂ ಮನವಿ ಸಲ್ಲಿಸಲಾಗಿದೆ. ತಕ್ಷಣ ವೈದ್ಯರನ್ನು ನೇಮಕ ಮಾಡುವ ಮೂಲಕ ಆರೋಗ್ಯಾಧಿಕಾರಿಗಳು ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಬೇಕೆಂದು…
ನಾಪೋಕ್ಲು ಸೆ.20 NEWS DESK : ನಾಪೋಕ್ಲುವಿನ ಶ್ರೀ ರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಶಾಂತಿಗಾಗಿ ಲೇಖನಿ ಅಭಿಯಾನ ನಡೆಯಿತು. ಪ್ರಾಂಶುಪಾಲರಾದ ಶಾರದ ಲೇಖನಿ ಅಭಿಯಾನದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಕ ಕಾಳಯ್ಯ ಮಾತನಾಡಿ, 25 ಅಂಶ ವಿರುವ ಲೇಖನಿ ಮಹತ್ವ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ತನುಜಾ, ಚಂದ್ರಕಲಾ, ಶೋಭ, ಶಾಲಾ ಸಿಬ್ಬಂದಿ ವರ್ಗದವರಿದ್ದರು. ಲೇಖನಿ ಅಭಿಯಾನದ ಸಂಚಾಲಕಿ ಕೆ.ಟಿ.ವಾತ್ಸಲ್ಯ ತಯಾರಿಸಿದ ಲೇಖನಿಯನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.
ನಾಪೋಕ್ಲು ಸೆ.20 NEWS DESK : ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 43.55 ಲಕ್ಷ ರೂ. ನಿವ್ವಳ ಲಾಭಗಳಿಸಿ ಎ ಶ್ರೇಣಿ ಯಲ್ಲಿದೆ ಎಂದು ಸಂಘದ ಅಧ್ಯಕ್ಷ ಕೇಟೋಳಿರ ಎಸ್.ಹರೀಶ್ ಪೂವಯ್ಯ ತಿಳಿಸಿದರು. ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಘದಲ್ಲಿ ಒಟ್ಟು 2534 ಸದಸ್ಯರಿದ್ದಾರೆ. ಪಾಲು ಬಂಡವಾಳ 1.25 ಕೋಟಿ ರೂ. ಒಟ್ಟು ನಿಧಿ 3.30 ಕೋಟಿ ಇದೆ ಎಂದ ಅವರು, ಸದಸ್ಯರು 43.23 ಕೋಟಿ ರೂ.ಳನ್ನು ಠೇವಣಿ ಇರಿಸಿದ್ದು, ಸದಸ್ಯರಿಗೆ 40.18 ಕೋಟಿ ರೂ.ಗಳನ್ನು ಸಾಲ ರೂಪದಲ್ಲಿ ನೀಡಲಾಗಿದೆ. ದುಡಿಯುವ ಬಂಡವಾಳ 55 ಕೋಟಿ ಇದ್ದು, ಸಂಘವು ಪ್ರಸಕ್ತ 2023-24 ಸಾಲಿನಲ್ಲಿ ಒಟ್ಟು 187 ಕೋಟಿ ರೂ.ಗಳ ವಹಿವಾಟು ನಡೆಸುವುದರ ಮೂಲಕ 46.87 ಲಕ್ಷ ನಿವ್ವಳ ಲಾಭ ಗಳಿಸಿ ಎ. ಶ್ರೇಣಿಯಲ್ಲಿದೆ ಎಂದು ಮಾಹಿತಿ ನೀಡಿದರು. ಸದಸ್ಯರಿಗೆ ಈ ವರ್ಷ ಶೇ.14 ರಷ್ಟು ಡಿವಿಡೆಂಟ್ ನೀಡಲಾಗುವುದು. ಹಿರಿಯ ನಾಗರಿಕರಿಗೆ ಶೇ.8 ಹಾಗೂ…
ನಾಪೋಕ್ಲು ಸೆ.20 NEWS DESK : ಮನೆ ಸಂಸಾರವನ್ನು ನಿಭಾಯಿಸಿಕೊಂಡು ಸಮಾಜದಲ್ಲಿ ಸಾಧನೆ ಮಾಡುವುದು ಸುಲಭದ ಮಾತಲ್ಲ. ಮಹಿಳೆಯರು ಸಮಾಜದಲ್ಲೂ ಗುರುತರವಾದ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ನಾಪೋಕ್ಲುವಿನ ಮಹಿಳಾ ಸಮಾಜದ ಕಟ್ಟಡದಲ್ಲಿ ನಡೆದ ನಂ. 393ನೇ ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2023-24ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಸಂಘಟಿತರಾಗೀ ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದ ಅವರು, ಸಮಾಜದಲ್ಲಿ ಮುಂದೆ ಬರಬೇಕಾದರೆ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ಧ್ವನಿ ಎತ್ತಬೇಕು ಎಂದರು. ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಬೇಬ ಮಾತನಾಡಿ, ಸಮಾಜದ ಹಿರಿಯ ಮಹಿಳೆಯರು ಜ್ಞಾನ ವೃದ್ಧಿಸುವ ಕೆಲಸವನ್ನು ಮಾಡಿದ್ದಾರೆ. ಸಮಾಜದಿಂದ ಉತ್ತಮ ಕಾರ್ಯಗಳಾಗುತ್ತಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಸಮಾಜದ ಅಭಿವೃದ್ಧಿಗೆ ಎಲ್ಲರ ಸಲಹೆ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ…
ಮಡಿಕೇರಿ ಸೆ.20 NEWS DESK : ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅ.8 ರಂದು 7 ನೇ ವಷ೯ದ ಮಹಿಳಾ ದಸರಾ ಆಯೋಜಿಸಲಾಗಿದ್ದು, ವೈವಿಧ್ಯಮಯ ಸ್ಪಧೆ೯ಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಮತ್ತು ಮಹಿಳಾ ದಸರಾ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ತಿಳಿಸಿದ್ದಾರೆ. ಅ.8 ರಂದು ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪಧೆ೯ಗಳು, ಕಾಯ೯ಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮಡಿಕೇರಿ ನಗರಸಭೆಯ ಸದಸ್ಯೆಯರು, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ ಇಲಾಖೆ ಸಹಯೋಗದಲ್ಲಿ ಆಯೋಜಿತವಾಗಿದೆ. ಸ್ಪಧೆ೯ಯ ವಿವರಗಳು :: ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪಧೆ೯, ಒಂಟಿಕಾಲಿನ ಓಟ, ಕಪ್ಪೆ ಜಿಗಿತ, ಕೇಶವಿನ್ಯಾಸ, ಗಾಭ೯ ನೃತ್ಯ, ಸೀರೆಗೆ ನಿಖರ ಬೆಲೆ ಹೇಳುವುದು, 60 ವಷ೯ ಮೇಲ್ಪಟ್ಟವರಿಗೆ ಅಜ್ಜಿ ಜತೆ ಮೊಮ್ಮಕ್ಕಳ ನಡಿಗೆ, ವಾಲಗತ್ತಾಟ್, ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪಧೆ೯, ಬಾಂಬ್…
ಗೋಣಿಕೊಪ್ಪ ಸೆ.20 NEWS DESK : ಗೋಣಿಕೊಪ್ಪ ಸ್ನೇಹಿತರ ಬಳಗ ದಸರಾ ಸಮಿತಿಯ ಅಧ್ಯಕ್ಷರಾಗಿ ಸುದೀಶ್ ರೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಕಾರ್ಯದರ್ಶಿಯಾಗಿ ಪ್ರದೀಪ್, ಖಜಾಂಚಿಯಾಗಿ ಅನೀಶ್ ಆಯ್ಕೆಯಾಗಿದ್ದಾರೆ. ಕಾರ್ಯಧ್ಯಕ್ಷರಾಗಿ ಕಾಡ್ಯಮಾಡ ಚೇತನ್ ಕಾರ್ಯನಿರ್ವಹಿಸಲಿದ್ದಾರೆ. ಸಭೆಯಲ್ಲಿ ಸತೀಶ್ ರೈ, ಸುಹಾಸ್, ಥೋಮಸ್, ಶ್ರೀಧರ್ ರೈ, ಸುಧಾಕರ್, ಅಯ್ಯಪ್ಪ, ಕಾರ್ತಿಕ್ ರೈ, ಸುನೀಲ್ ರೈ ಮತ್ತು ಗಿರಿ ಇದ್ದರು.






