ಲೇಖಕ: admin

ಮಡಿಕೇರಿ ಸೆ.5 NEWS DESK : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪø್ಪಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು…

Read More

ಮಡಿಕೇರಿ ಸೆ.5 NEWS DESK : ಪ್ರಸಕ್ತ(2024-25) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ಪ್ರತಿ(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರಬೇಕು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ(ಕಡ್ಡಾಯ), ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ ಪ್ರಮಾಣ ಪತ್ರ (ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸುಗಳಿಗೆ), ತಂದೆ, ತಾಯಿ, ಪೋಷಕರ ಆಧಾರ್ ಪ್ರತಿ, ಆದಾಯ ಮತಿತಿ 2.50 ಲಕ್ಷಕಿಂತ ಒಳಗಿರುವ ಸಿಇಟಿ ಮೂಲ ಎಂಬಿಬಿಎಸ್, ಬಿಡಿಎಸ್, ಬಿ.ಇ, ಬಿಟೆಕ್,…

Read More

ಮಡಿಕೇರಿ ಸೆ.5 NEWS DESK : ಗ್ರಾಮ ಮಟ್ಟದಲ್ಲಿ ಜನರ ಆರೋಗ್ಯವನ್ನು ಉತ್ತಮಪಡಿಸುವಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅತ್ಯಂತ ಉಪಯೋಗಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಜಿ.ಧನರಾಜು ತಿಳಿಸಿದರು. ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ಗ್ರಾಮ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಜನರಿಗೆ ಆರೋಗ್ಯದ ಕುರಿತು ಜ್ಞಾನ ಮತ್ತು ಅರಿವನ್ನು ಮೂಡಿಸುವುದು ಗ್ರಾಮ ಆರೋಗ್ಯ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಈ ಮಹತ್ತರ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಹಮ್ಮಕೊಳ್ಳಲಾಗಿದ್ದು 2 ದಿನಗಳ ಕಾಲ ತರಬೇತಿ ನಡೆಯಲಿದೆ ಎಂದರು. ಈ ತರಬೇತಿ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮುಟ್ಟಿನ ನೈರ್ಮಲ್ಯ, ಕ್ಷಯ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಕುರಿತಂತೆ ಜಿಲ್ಲಾ ಮಟ್ಟದ…

Read More

ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿ.ಪಂ.ಸಿಇಒ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರರಾದ ಪಿ.ಆರ್. ಸುರೇಶ್ ಕುಮಾರ್ ಅವರು ಜಿಲ್ಲೆ ಹಾಗೂ ತಾಲ್ಲೂಕು ಪ್ರಯೋಗಾಲಯಗಳಿಂದ ಏಪ್ರಿಲ್, 2024 ರಿಂದ ಇಲ್ಲಿಯವರೆಗೆ ನೀರಿನ ಮಾದರಿ ಪರೀಕ್ಷೆಗಳ ವಿವರಣೆ ನೀಡಿದರು. ನೀರಿನ ಮಾದರಿ ಪರೀಕ್ಷೆಗಳಲ್ಲಿ ಕಂಡುಬಂದಿರುವ ರಾಸಾಯನಿಕ ವರದಿಗಳನ್ನು ವಿಸ್ತೃತವಾಗಿ ಮಂಡಿಸಿದ್ದರು. ಹಾಗೆಯೇ ಪಂಚಾಯಿತಿ ಮಟ್ಟದಲ್ಲಿ ಎಫ್‍ಟಿಕೆ ಕಿಟ್ ಉಪಯೋಗಿಸಿಕೊಂಡು ನೀರಿನ ಮಾದರಿಯನ್ನು ಪರೀಕ್ಷಿಸಿ ಶುದ್ಧವಾಗಿರುವ ನೀರನ್ನು ಕುಡಿಯಲು ಪೂರೈಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಬಂಧಿಸಿದಂತೆ ಇಲಾಖೆ ನಿರ್ದೇಶಕರಿಗೆ ಪತ್ರ ಪಡೆದು ಮಾಹಿತಿ ಪಡೆಯುವಂತೆ ಸೂಚಿಸಿದರು. ಜಲಜೀವನ್ ಮಿಷನ್ ಬ್ಯಾಚು ಒಂದು ಯೋಜನೆಯಡಿ ಮಡಿಕೇರಿ ತಾಲ್ಲೂಕಿನಲ್ಲಿ…

Read More

ಸುಂಟಿಕೊಪ್ಪ NEWS DESK ಸೆ.4: ಕಾನ್‌ಬೈಲ್ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾ ಕೂಟದ ಥ್ರೋಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಕ್ಕಳ ಸಾಧನೆಯನ್ನು ಶಾಲಾ ಮುಖ್ಯೋಪದ್ಯಾಯ ಕೆ.ಮೂರ್ತಿ, ದೈಹಿಕ ಶಿಕ್ಷಕಿ ಜಿ.ಕೆ.ಪಾರ್ವತಿ, ಸಹ ಶಿಕ್ಷಕರು, ಪಂಚಾಯಿತಿ ಸದಸ್ಯ ಕೊಳಂಬೆ ಸುಭಾಶ್ ಹಾಗೂ ಗ್ರಾಮಸ್ಥರು ಶ್ಲಾಘಿಸಿ ಅಭಿನಂದಿಸಿದರು.

Read More

ಸುಂಟಿಕೊಪ್ಪ NEWS DESK ಸೆ.4: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಗುಂಡಿ ಗ್ರಾಮದ ನಿವಾಸಿ ಐತ್ತಪ್ಪ ಪೂಜಾರಿ ಅವರ ಪತ್ನಿ ಲೀಲಾ(87) ಮಂಗಳವಾರ ಸಂಜೆ ನಿಧನರಾದರು. ಮೃತರು ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬುಧವಾರ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿತು.

Read More

ಮಡಿಕೇರಿ NEWS DESK ಸೆ.4 : ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಸರಕಾರ ಘೋಷಣೆ ಮಾಡಿರುವ ಎರಡು ಕೋಟಿ ರೂ.ಗಳ  ಯೋಜನೆ ತಕ್ಷಣ ಕಾರ್ಯರೂಪಕ್ಕೆ ತರಬೇಕಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಆಗ್ರಹಿಸಿದ್ದಾರೆ. ಅವರು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಏರ್ಪಡಿಸಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳು ಮತ್ತು ಓದುಗರ ನಡುವೆ ಪ್ರಮುಖ ಪಾತ್ರ ವಹಿಸುವ ಪತ್ರಿಕಾ ವಿತರಕರು ಹಲವು ಸಮಸ್ಯೆಗಳೊಳಗೆ ಕಾಯಕ ನಿರ್ವಹಿಸುತ್ತಿದ್ದು, ಆದ್ಯತೆ ಮೇರೆಗೆ ಅವರುಗಳ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಬೇಕು ಎಂದರು. ಕಳೆದ ಎರಡು ದಶಕಗಳಿಗೆ ಹೋಲಿಸಿದರೆ ಪತ್ರಿಕೆಗಳ ವಿತರಣೆ ಸಂಖ್ಯೆ ಹೆಚ್ಚಾಗಿದ್ದರೂ ಓದುಗರ ಸಂಖ್ಯೆ ಇಳಿಮುಖಗೊಳ್ಳುತ್ತಿದೆ. ಕೊರೋನಾ ಸಂದರ್ಭ ಹಾಗೂ ನಂತರದ ದಿನಗಳಲ್ಲಿ ಕಾಸ್ಟ್ ಕಟ್ಟಿಂಗ್ ಹೆಸರಿನಲ್ಲಿ ದಿನಪತ್ರಿಕೆಗಳು ಆದ್ಯತಾ ಪಟ್ಟಿಯಿಂದ ಹೊರಗೆ ಉಳಿದಿವೆ ಎಂದ ಅವರು ಮನೆಮನೆಗಳಿಗೆ ಪತ್ರಿಕೆ ತಲುಪದಿದ್ದಲ್ಲಿ ಓದುಗರು ತೆರಳಿ ಖರೀದಿಸಲು ಮುಂದಾಗುವುದಿಲ್ಲ.  ಮುಂದಿನ ಪೀಳಿಗೆಯಲ್ಲಿ ನಿರಾಸಕ್ತಿ ಕಾರಣ ಪತ್ರಿಕಾ…

Read More

*ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನ* ಮಡಿಕೇರಿ NEWS DESK ಸೆ.4 : ಇಂದು ದಿನಾಂಕ 4-09-2024 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಬೀವುಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ. ಈದ್ ಮೀಲಾದ್ ಸೆಪ್ಟಂಬರ್ 16 ಸೋಮವಾರದಂದು ಆಚರಿಸಲಾಗುತ್ತದೆ ಎಂದು ಕೊಡಗು ಜಿಲ್ಲಾ ಸಂಯುಕ್ತ ಖಾಝಿಗಳಾದ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಸೆ.4 NEWS DESK :  ರೈತ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿ ಸಿ ಮತ್ತು ಡಿ ತೆರವು ಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಅರಣ್ಯ ಭವನದಲ್ಲಿ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಕೊಡಗು ಜಿಲ್ಲೆಯಲ್ಲಿ ಪೈಸಾರಿ ಜಮೀನುಗಳನ್ನು ಸಿ & ಡಿ ಜಮೀನುಗಳೆಂದು ಮಾಡಿ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾಯಿಸಿದ್ದು, ಮೀಸಲು ಅರಣ್ಯ ಎಂದು ಉದ್ಯೋಷಣೆ ಮಾಡಲು ಆದೇಶ ಹೊರಡಿಸಿರುವುದನ್ನು ರದ್ದುಪಡಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು, ಸಾಗುವಳಿಗೆ ಯೋಗ್ಯವಾದ ಎಲ್ಲಾ ಜಮೀನುಗಳಿಗೆ ನಮೂನೆ 50,53 ಹಾಗೂ 57ರ ಅರ್ಜಿಯನ್ನು ಮಾನ್ಯ ಮಾಡಿ ಮಂಜೂರಾತಿ ಮಾಡಿ ಹಕ್ಕುಪತ್ರ ನೀಡಬೇಕು, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ ರೈತರಿಗೆ ಅನುವು ಮಾಡಿಕೊಡಬೇಕು ಎಂದು…

Read More

ಮಡಿಕೇರಿ ಸೆ.4 NEWS DESK : ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ತಿಳಿಸಿದ್ದಾರೆ. ಈ ಸಂಬಂಧ ಸೆಪ್ಟೆಂಬರ್, 05 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಹೆಸರು: ಸೋಮವಾರಪೇಟೆ ತಾಲ್ಲುಕು ಕುಶಾಲನಗರ ಜೇನುಕಲ್ಲು ಬೆಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಂ.ಎನ್.ರಾಮೇಗೌಡ, ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಎಸ್.ವಾಸುವರ್ಮ, ಮಡಿಕೇರಿ ತಾಲ್ಲೂಕಿನ ಚೇರಂಡೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಜಿ.ಚೈತ್ರ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಆರ್.ಸುನೀತ, ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಸರ್ಕಾರಿ ಹಿರಿಯ…

Read More