ಲೇಖಕ: admin

ಸುಂಟಿಕೊಪ್ಪ NEWS DESK ಸೆ.4: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಗುಂಡಿ ಗ್ರಾಮದ ನಿವಾಸಿ ಐತ್ತಪ್ಪ ಪೂಜಾರಿ ಅವರ ಪತ್ನಿ ಲೀಲಾ(87) ಮಂಗಳವಾರ ಸಂಜೆ ನಿಧನರಾದರು. ಮೃತರು ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬುಧವಾರ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿತು.

Read More

ಮಡಿಕೇರಿ NEWS DESK ಸೆ.4 : ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಸರಕಾರ ಘೋಷಣೆ ಮಾಡಿರುವ ಎರಡು ಕೋಟಿ ರೂ.ಗಳ  ಯೋಜನೆ ತಕ್ಷಣ ಕಾರ್ಯರೂಪಕ್ಕೆ ತರಬೇಕಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಆಗ್ರಹಿಸಿದ್ದಾರೆ. ಅವರು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ಏರ್ಪಡಿಸಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳು ಮತ್ತು ಓದುಗರ ನಡುವೆ ಪ್ರಮುಖ ಪಾತ್ರ ವಹಿಸುವ ಪತ್ರಿಕಾ ವಿತರಕರು ಹಲವು ಸಮಸ್ಯೆಗಳೊಳಗೆ ಕಾಯಕ ನಿರ್ವಹಿಸುತ್ತಿದ್ದು, ಆದ್ಯತೆ ಮೇರೆಗೆ ಅವರುಗಳ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಬೇಕು ಎಂದರು. ಕಳೆದ ಎರಡು ದಶಕಗಳಿಗೆ ಹೋಲಿಸಿದರೆ ಪತ್ರಿಕೆಗಳ ವಿತರಣೆ ಸಂಖ್ಯೆ ಹೆಚ್ಚಾಗಿದ್ದರೂ ಓದುಗರ ಸಂಖ್ಯೆ ಇಳಿಮುಖಗೊಳ್ಳುತ್ತಿದೆ. ಕೊರೋನಾ ಸಂದರ್ಭ ಹಾಗೂ ನಂತರದ ದಿನಗಳಲ್ಲಿ ಕಾಸ್ಟ್ ಕಟ್ಟಿಂಗ್ ಹೆಸರಿನಲ್ಲಿ ದಿನಪತ್ರಿಕೆಗಳು ಆದ್ಯತಾ ಪಟ್ಟಿಯಿಂದ ಹೊರಗೆ ಉಳಿದಿವೆ ಎಂದ ಅವರು ಮನೆಮನೆಗಳಿಗೆ ಪತ್ರಿಕೆ ತಲುಪದಿದ್ದಲ್ಲಿ ಓದುಗರು ತೆರಳಿ ಖರೀದಿಸಲು ಮುಂದಾಗುವುದಿಲ್ಲ.  ಮುಂದಿನ ಪೀಳಿಗೆಯಲ್ಲಿ ನಿರಾಸಕ್ತಿ ಕಾರಣ ಪತ್ರಿಕಾ…

Read More

*ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನ* ಮಡಿಕೇರಿ NEWS DESK ಸೆ.4 : ಇಂದು ದಿನಾಂಕ 4-09-2024 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಬೀವುಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ. ಈದ್ ಮೀಲಾದ್ ಸೆಪ್ಟಂಬರ್ 16 ಸೋಮವಾರದಂದು ಆಚರಿಸಲಾಗುತ್ತದೆ ಎಂದು ಕೊಡಗು ಜಿಲ್ಲಾ ಸಂಯುಕ್ತ ಖಾಝಿಗಳಾದ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಸೆ.4 NEWS DESK :  ರೈತ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿ ಸಿ ಮತ್ತು ಡಿ ತೆರವು ಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಅರಣ್ಯ ಭವನದಲ್ಲಿ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಕೊಡಗು ಜಿಲ್ಲೆಯಲ್ಲಿ ಪೈಸಾರಿ ಜಮೀನುಗಳನ್ನು ಸಿ & ಡಿ ಜಮೀನುಗಳೆಂದು ಮಾಡಿ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾಯಿಸಿದ್ದು, ಮೀಸಲು ಅರಣ್ಯ ಎಂದು ಉದ್ಯೋಷಣೆ ಮಾಡಲು ಆದೇಶ ಹೊರಡಿಸಿರುವುದನ್ನು ರದ್ದುಪಡಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು, ಸಾಗುವಳಿಗೆ ಯೋಗ್ಯವಾದ ಎಲ್ಲಾ ಜಮೀನುಗಳಿಗೆ ನಮೂನೆ 50,53 ಹಾಗೂ 57ರ ಅರ್ಜಿಯನ್ನು ಮಾನ್ಯ ಮಾಡಿ ಮಂಜೂರಾತಿ ಮಾಡಿ ಹಕ್ಕುಪತ್ರ ನೀಡಬೇಕು, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ ರೈತರಿಗೆ ಅನುವು ಮಾಡಿಕೊಡಬೇಕು ಎಂದು…

Read More

ಮಡಿಕೇರಿ ಸೆ.4 NEWS DESK : ಪ್ರಸಕ್ತ(2024-25) ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ತಿಳಿಸಿದ್ದಾರೆ. ಈ ಸಂಬಂಧ ಸೆಪ್ಟೆಂಬರ್, 05 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಹೆಸರು: ಸೋಮವಾರಪೇಟೆ ತಾಲ್ಲುಕು ಕುಶಾಲನಗರ ಜೇನುಕಲ್ಲು ಬೆಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಂ.ಎನ್.ರಾಮೇಗೌಡ, ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಎಸ್.ವಾಸುವರ್ಮ, ಮಡಿಕೇರಿ ತಾಲ್ಲೂಕಿನ ಚೇರಂಡೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಜಿ.ಚೈತ್ರ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಆರ್.ಸುನೀತ, ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಸರ್ಕಾರಿ ಹಿರಿಯ…

Read More

ಮಡಿಕೇರಿ ಸೆ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ನೀಲಗಿರಿ ಎಂ.ತಳವಾರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ…

Read More

ಮಡಿಕೇರಿ ಸೆ.4 NEWS DESK : ಮಡಿಕೇರಿ ನಗರಸಭೆಯ ಕೌನ್ಸಿಲ್ ಸಾಮಾನ್ಯ ಸಭೆಯು ಜಿಲ್ಲಾಧಿಕಾರಿಯವರು ಹಾಗೂ ನಗರಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಸೆ.6 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.4 NEWS DESK : “ಕೈಲ್ ಪೊಳ್ದ್” ಹಬ್ಬದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಮೀದಿ ಇಟ್ಟು ತೋಕ್ ಪೂ ಮೂಲಕ ನಮನ ಸಲ್ಲಿಸಿತು. ಹತ್ಯೆಗೀಡಾದ ಹಿರಿಯರಿಗೆ ನರಮೇಧದ ಸ್ಮಾರಕ ಸ್ಥಳದಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪ್ರಮುಖರು ಪುಷ್ಪ ನಮನ ಸಲ್ಲಿಸಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಿದರು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಎಸ್‍ಟಿ ಟ್ಯಾಗ್ ನೀಡಬೇಕು. ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವ ಬುಡಕಟ್ಟಿನ ಮಾತೃ ಮಣ್ಣಿನಲ್ಲಿ ಐತಿಹಾಸಿಕ ನಿರಂತರತೆಗಾಗಿ ಸಾರ್ವತ್ರಿಕ ಮನ್ನಣೆಯನ್ನು ಕಲ್ಪಿಸಬೇಕು. ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು. ದೇವಟ್‍ಪರಂಬ್‍ನಲ್ಲಿ ಅಂತರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು…

Read More

ಮಡಿಕೇರಿ ಸೆ.4 NEWS DESK : ಅಸಂಘಟಿತ ಕಾರ್ಮಿಕ ವರ್ಗಕ್ಕೆ ಒಳಪಡುವ ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಸಾಮಾಜಿಕ ಭದ್ರತೆ ನೀಡುವ ಕೆಲಸ ಆಗಬೇಕೆಂದು ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ ಹೇಳಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2018ರಲ್ಲಿ ಸರ್ಕಾರ ಬಜೆಟ್‍ನಲ್ಲಿ ಪತ್ರಿಕಾ ವಿತರಕರಿಗೆ ಸುಮಾರು ರೂ.10 ಕೋಟಿ ಕ್ಷೇಮಾಭಿವೃದ್ಧಿಗೆ ಘೋಷಣೆ ಮಾಡಿತ್ತು. ಆದರೆ, ಇದು ಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಆದ್ದರಿಂದ ಸರ್ಕಾರ ಆದಷ್ಟು ಕೂಡಲೇ ಅನುದಾನವನ್ನು ನೀಡಿ ಪತ್ರಿಕಾ ವಿತರಕರಿಗೆ ನೆರವಾಗಬೇಕೆಂದು ಒತ್ತಾಯಿಸಿ, ತಾನು ಕಾರ್ಮಿಕ ಮುಖಂಡನಾಗಿ ಪತ್ರಿಕಾ ವಿತರಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡುವುದಾಗಿ ತಿಳಿಸಿದರು. ಪತ್ರಿಕಾ ವಿತರಕರು ಮುಂಜಾನೆಯೇ ಗಾಳಿ, ಮಳೆ, ಚಳಿ ಎನ್ನದೆ ಪತ್ರಿಕಾ ವಿತರಣೆ ಕೆಲಸವನ್ನು ಮಾಡುತ್ತಾರೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ, ಮಳೆಗಾಲ…

Read More

ಮಡಿಕೇರಿ NEWS DESK ಸೆ.4 : ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸಮಿತಿಯ ಸದಸ್ಯರಾಗಿ ಕೊಡಗು ಜಿಲ್ಲೆಯ ಪಾಲಿಬೆಟ್ಟದ ಡಾ.ಕಾವೇರಿ ಹೆಚ್.ಎಂ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.  

Read More