ಮಡಿಕೇರಿ ಸೆ.4 NEWS DESK : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರದ ನಾಗೇಗೌಡ ಬಡಾವಣೆಯ ಕಾವೇರಿ ಸ್ವ ಸಹಾಯ ಸಂಘದ ವತಿಯಿಂದ “ವಚನಗಾರ್ತಿ ಅಕ್ಕಮಹಾದೇವಿ” ಚಿಂತನಾ ಗೋಷ್ಠಿ ನಡೆಯಿತು. ಕಾರ್ಯಕ್ರಮದಲ್ಲಿ ಕುಶಾಲನಗರದ ನಿವೃತ್ತ ಪ್ರಾಂಶುಪಾಲೆ ಡಾ.ಬಿ.ಆರ್.ಶಾಂತಲಕ್ಷ್ಮಿ ಮಾತನಾಡಿ, ಅಕ್ಕಾಮಹಾದೇವಿ ರಚಿಸಿರುವ 400ಕ್ಕೂ ಹೆಚ್ಚಿನ ವಚನಗಳು ಮನುಕುಲದ ದೀವಿಗೆಗಳಾಗಿವೆ ಎಂದು ವಿಶ್ಲೇಷಿಸಿದರು. ನಿವೃತ್ತ ಶಿಕ್ಷಕಿ ಪೊನ್ನಚ್ಚನ ಲತಾ ಅಪ್ಪಣ್ಣ ಹಾಗೂ ಮುಕ್ಕಾಟಿ ಧರಣಿ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಶರಣರು ಸಾರಿ ಹೋಗಿರುವ ವಚನಗಳ ಸಂದೇಶಗಳನ್ನು ಶಾಲಾ ಮಕ್ಕಳಿಗೆ ವಿವರಿಸಿ ಕಲಿಸಿದಲ್ಲಿ ಮಾತ್ರ ಸಂಸ್ಕಾರವಂತ ಸಮಾಜ ಹಾಗೂ ಶರಣರು ಬಯಸಿದ ಆದರ್ಶ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಎಲ್ಲಾ ತಾಯಂದಿರು ವಚನಗಳನ್ನು ಕಲಿಸಲು ಮನವಿ ಮಾಡಿದರು. ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹೇಮಲತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕದಳಿ ವೇದಿಕೆಯ ಗೌರವಾಧ್ಯಕ್ಷೆ ವಿಜಯ ಪಾಲಾಕ್ಷ, ಕೋಶಾಧಿಕಾರಿ ಜಿ.ಎಸ್.ವೇದಾವತಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕಾವೇರಿ ಸ್ವಸಹಾಯ…
ಲೇಖಕ: admin
ಕುಶಾಲನಗರ ಸೆ.4 NEWS DESK : ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಪಿಓಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮ ಕುಮಾರ್ ಮನವಿ ಮಾಡಿದರು. ಸೆ.6 ಮತ್ತು 7 ರಂದು ನಡೆಯಲಿರುವ ಗೌರಿ-ಗಣೇಶೋತ್ಸವ ಆಚರಣೆ ಅಂಗವಾಗಿ ‘ನಮ್ಮ ನಡೆ ಹಸಿರೆಡೆಗೆ’ ಅಭಿಯಾನದಡಿ ‘(ಗೋ ಗ್ರೀನ್ ಕ್ಯಾಂಪೈನ್) ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ-2024 ಕುರಿತು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿಯ ಸಹಭಾಗಿತ್ವದಲ್ಲಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ. ವತಿಯಿಂದ ಕುಶಾಲನಗರ ತಾಲ್ಲೂಕಿನ…
ಮಡಿಕೇರಿ ಸೆ.4 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡಗಿನ ರೈತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ನಂತರ ಕಸ್ತೂರಿ ರಂಗನ್ ವರದಿ, ಸಿ ಮತ್ತು ಡಿ ಭೂಮಿ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಹಿರಿಯ ಮುಖಂಡ ಹಾಗೂ ವಕೀಲರಾದ ಚಂದ್ರಮೌಳಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಜಿಲ್ಲಾ ಮುಖಂಡರುಗಳು, ರೈತ ಸಂಘದ ಮುಖಂಡಗಳು ಹಾಜರಿದ್ದರು.
ಮಡಿಕೇರಿ ಸೆ.4 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಪೋಷಣ್ ಮಾಸಾಚರಣೆ ಅಂಗವಾಗಿ ಮೂರ್ನಾಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಸೆಪ್ಟೆಂಬರ್ ಮಾಹೆ ಪೂರ್ಣ ಗ್ರಾ.ಪಂ ಮಟ್ಟಕ್ಕೆ ಸಂಬಂಧಪಟ್ಟಂತ ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ, ಪೌಷ್ಟಿಕ ಆಹಾರ ಸ್ಪರ್ಧೆ ಮಾಡುವ ಬಗ್ಗೆ ಸಲಹೆ ಮಾರ್ಗದರ್ಶ ನೀಡಿದರು. ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಮಾತನಾಡಿ, ಎಲ್ಲಾ ಕಾರ್ಯಕ್ರಮಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬಾಡಗ ಅಂಗನವಾಡಿ ಕಾರ್ಯಕರ್ತೆ ಜಯಂತಿ, ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಚೈತ್ರ ಜ್ಯೋತಿ, ಶಾಸ್ತ್ರಿ ನಗರ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ, ಗೀತಾ, ಕಿಗ್ಗಾಲು ಅಂಗನವಾಡಿ ಕಾರ್ಯಕರ್ತೆ ಗೌರಿ, ವೆಂಕಟೇಶ್ವರ ಕಾಲೋನಿಯ ಕಾರ್ಯಕರ್ತೆ ಕುಸುಮ,…
ಮಡಿಕೇರಿ ಸೆ.4 NEWS DESK : ಕಂಡಂಗಾಲದ ಮರೋಡಿ ಯುವಕ ಸಂಘದ ವತಿಯಿಂದ ಸೆ.22 ರಂದು ತೆಂಗಿನಕಾಯಿ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ. ಕುಟ್ಟಂದ್ದಿ ಕೆ.ಬಿ.ಪ್ರೌಢ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ನಡೆಯಲಿದೆ. .22 ಕೋವಿ ವಿಭಾಗ ಸ್ಪರ್ಧೆಯ ವಿಜೇತರಿಗೆ ಪ್ರಥಮ 30000 ನಗದು ಮತ್ತು ಪಾರಿತೋಷಕ, ದ್ವಿತೀಯ 25000 ನಗದು ಮತ್ತು ಪಾರಿತೋಷಕ ತೃತೀಯ 20000 ನಗದು ಮತ್ತು ಪಾರಿತೋಷಕ ನೀಡಲಾಗುವುದು. 12th ಬೋರ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ 25000 ನಗದು ಮತ್ತು ಪಾರಿತೋಷಕ, ದ್ವಿತೀಯ 20000 ನಗದು ಮತ್ತು ಪಾರಿತೋಷಕ ಹಾಗೂ ತೃತೀಯ 15000 ನಗದು ಮತ್ತು ಪಾರಿತೋಷಕ ನೀಡಲಾಗುವುದು. ಎರ್ ಗನ್ ವಿಭಾಗ (ಕೋಳಿ ಮೊಟ್ಟೆ ಗುಂಡು ಹೊಡೆಯುವ) ಸ್ಪರ್ಧೆಯಲ್ಲಿ ಪ್ರಥಮ 10000 ನಗದು ಮತ್ತು ಪಾರಿತೋಷಕ, ದ್ವಿತೀಯ 8000 ನಗದು ಮತ್ತು ಪಾರಿತೋಷಕ ಹಾಗೂ ತೃತೀಯ 6000 ನಗದು ಮತ್ತು ಪಾರಿತೋಷಕ ಇರಲಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿ…
ಮಡಿಕೇರಿ NEWS DESK ಸೆ.4 : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ನ ಮಡಿಕೇರಿಯ ತರಬೇತಿ ಸಂಸ್ಥೆಗೆ ರ್ಯಾಂಕ್ ಗಳು ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧೀನ ಸಂಸ್ಥೆಯಾದ ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್ ಮೆಂಟ್ ನ ಮಡಿಕೇರಿ ಸಂಸ್ಥೆ ಡಿಸಿಎಂ ಡಿಪ್ಲೊಮಾ ಪರೀಕ್ಷೆಯಲ್ಲಿ ಕ್ರಮವಾಗಿ 2, 3, 4, 5ನೇ ರ್ಯಾಂಕ್ ಮತ್ತು 1 ಡಿಸ್ಟಿಂಕ್ಷನ್ ಗಳಿಸಿ ಶೇ.100 ರಷ್ಟು ಸಾಧನೆ ಮಾಡಿದೆ. ದೇಚಕ್ಕ ಬಿ.ಬಿ 2ನೇ ರ್ಯಾಂಕ್, ರಶ್ಮಿತ ಎಸ್.ಎಂ 3ನೇ ರ್ಯಾಂಕ್, ನಮನ ಎನ್ 4ನೇ ರ್ಯಾಂಕ್ ಹಾಗೂ ತಂಗಮ್ಮ ಎಂ.ಜಿ 5ನೇ ರ್ಯಾಂಕ್ ಗಳಿಸಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಸಾಧಕರನ್ನು ಅಭಿನಂದಿಸಿದ್ದಾರೆ.
ನಾಪೋಕ್ಲು ಸೆ.4 NEWS DESK : ಬಲಮುರಿ ಗ್ರಾಮದ ಮಹದೇವ ಕ್ರೀಡಾ ಮಂಡಳಿ ವತಿಯಿಂದ ಬಲಮುರಿ ಹೊಳೆಮುಡಿ ಮೈದಾನದಲ್ಲಿ 72ನೇ ವರ್ಷದ ಕೈಲ್ ಮುಹೂರ್ತ (ಕೈಲ್ಪೊಳ್ದ್) ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಭಾರದ ಕಲ್ಲು ಎಸೆತ, ಗೋಣಿಚೀಲ ಓಟ, ಮೂರು ಕಾಲಿನ ಓಟ, ಸ್ಲೋ ಸೈಕಲ್ ರೇಸ್ ,ನಿಂಬೆ ಚಮಚ ಓಟ, ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ವೈವಿಧ್ಯಮಯ ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಣಂಜಗೇರಿ ಗ್ರಾ.ಪಂ ಸದಸ್ಯ ಬೊಳ್ಳಚೆಟ್ಟೀರ ಪ್ರಕಾಶ್ ಕಾಳಪ್ಪ ವಹಿಸಿದ್ದರು. ಮಹಾದೇವ ಕ್ರೀಡಾ ಮಂಡಳಿ ಅಧ್ಯಕ್ಷ ತೊತ್ತಿಯಂಡ ಬನ್ಸಿ ಚಿಣ್ಣಪ್ಪ, ನಿವೃತ್ತ ವಿಜ್ಞಾನಿ ನಾಡಂಡ ಎ.ಪ್ರಿನ್ಸ್ ತಿಮ್ಮಯ್ಯ, ನಿವೃತ್ತ ನಾಯಕ್ ಸುಬೇದಾರ್ ಪೊನ್ನಚ್ಚನ ದಯಾನಂದ, ನಿವೃತ್ತ ಸುಬೇದಾರ್ ಬೊಳ್ಳಚೆಟ್ಟಿರ ವಿಜಯ ಚೆಟ್ಟಿಚ್ಚ ಇನ್ನಿತರರು ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು . ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.4 NEWS DESK : ಕೊಡಗಿನ ಸಾಂಪ್ರದಾಯ ಹಬ್ಬ (ಕೈಲ್ ಮುಹೂರ್ತ) ಕೈಲ್ ಪೊಳ್ದ್ ನಮ್ಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನೆಲಜಿ ಗ್ರಾಮದ ಚೀಯಕ ಪೂವಂಡ ಐನ್ ಮನೆಯಲ್ಲಿ ಕುಟುಂಬಸ್ಥರೆಲ್ಲ ಸೇರಿ ಕೈಲ್ ಪೊಳ್ದ್ ನಮ್ಮೆಯನ್ನು ಆಚರಿಸಿದರು. ಹಬ್ಬದ ಪ್ರಯುಕ್ತ ನೆಲ್ಲಕ್ಕಿ ನಡುಬಾಡೆಯಲ್ಲಿ ಕೋವಿ, ಓಡಿಕತ್ತಿ, ಗೆಜ್ಜೆ ತಂಡ್ ಇಟ್ಟು ತೋಕ್ ಪೂ ಹಾಗೂ ಇತರ ಹೂವುಗಳಿಂದ ಶೃಂಗರಿಸಿ ಮೀದಿ ಇಟ್ಟು ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು. ಹಬ್ಬದ ವಿಶೇಷ ಭೋಜನದ ನಂತರ ಹಿರಿಯರು, ಕಿರಿಯರು, ಮಹಿಳೆಯರು ತೆಂಗಿನ ಕಾಯಿಗೆ ಗುಂಡುಹೊಡೆಯುವ ಮೂಲಕ ವಿವಿಧ ಕ್ರೀಡಾಕೂಟಗಳು ನಡೆಯಿತು. ನಾಪೋಕ್ಲು ಸುತ್ತಮುತ್ತಲ ಗ್ರಾಮಗಳಾದ ನೆಲಜಿ ಪುಲಿಕೋಟ್, ಪೇರೂರು, ಕೈಕಾಡು, ಪಾರಾಣೆ, ಬೆಟ್ಟಗೇರಿ, ಪಾಲೂರು, ಕಾರುಗುಂದ, ಹೆರವನಾಡು, ಅವಂದೂರು, ಹೊದ್ದೂರು, ಬಲಮುರಿ ಸೇರಿದಂತೆ ಇನ್ನಿತರ ಕಡೆಗಲಲ್ಲಿಯೂ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಯಿತು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ NEWS DESK ಸೆ.4 : ಕಾರ್ಮಿಕರಿಬ್ಬರ ಕಲಹ ಓರ್ವನ ಸಾವಿನಲ್ಲಿ ಕೊನೆಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಳತ್ತೋಡು ಬೈಗೋಡು ಗ್ರಾಮದಲ್ಲಿ ನಡೆದಿದೆ. ಕೊಳತ್ತೋಡು ಬೈಗೋಡು ಗ್ರಾಮದ ನಿವಾಸಿ ಮೊಗೇರ ವಿಶ್ವ(40) ಎಂಬುವವರೇ ಮೃತ ದುರ್ದೈವಿ. ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಡಿ ಮೊಗೇರ ಗಣೇಶ ಎಂಬಾತನನ್ನು ಬಂಧಿಸಲಾಗಿದೆ. ಲೈನ್ ಮನೆಯಲ್ಲಿ ವಾಸವಿದ್ದ ಈ ಇಬ್ಬರು ಕಾರ್ಮಿಕರು ಮದ್ಯದ ಅಮಲಿನಲ್ಲಿ ಕಲಹ ನಡೆಸಿದ್ದಾರೆ. ಇದು ವಿಕೋಪಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾಪೋಕ್ಲು ಸೆ.4 NEWS DESK : ಹೊದ್ದೂರು ಗ್ರಾ.ಪಂ ಗ್ರಂಥಾಲಯದಲ್ಲಿ ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಟೆಕ್ನಾಲಜಿ ಸಹಯೋಗದೊಂದಿಗೆ ಗ್ರಾಮೀಣ ಜನತೆಗೆ, ಮಹಿಳಾ ಸಂಘದ ಸದಸ್ಯರಿಗೆ ಡಿಜಿಟಲ್ ಸಾಕ್ಷರತೆಯ ತರಬೇತಿ ಕಾರ್ಯಾಗಾರ ನಡೆಯಿತು. ಶಿಕ್ಷಣ ಫೌಂಡೇಶನ್ ಜಿಲ್ಲಾ ಸಂಯೋಜಕ ದಿಲೀಪ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ಡಿಜಿಟಲ್ ಸಾಕ್ಷರತೆ ಅತಿ ಮಹತ್ವದಿಂದ ಕೂಡಿದೆ. ಇದರ ತರಬೇತಿಯ ಮೊದಲ ಅಧಿವೇಶನದ ಬಗ್ಗೆ ತರಬೇತಿ ನೀಡಿ ಮಹಿಳೆಯರು ತಮ್ಮ ಸ್ವ ಅಭಿವೃದ್ಧಿಗೆ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಸದಸ್ಯೆ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಲೀಲಾವತಿ, ಗ್ರಾಮೀಣ ಮಹಿಳೆಯರು ಡಿಜಿಟಲ್ ಸಾಕ್ಷರತೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ, ಗ್ರಂಥಪಾಲಕಿ ಸರಸ್ವತಿ ಹಾಗೂ ಸಂಜೀವಿನಿ ಒಕ್ಕೂಟ, ಸ್ವ ಸಹಾಯ ಸಂಘದ, ಎಂ ಬಿ ಕೆ ಸದಸ್ಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.






