ಮಡಿಕೇರಿ NEWS DESK ಸೆ.4 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖ, ಸಿದ್ದಾಪುರ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಹಾಗೂ ಕ್ರೀಡಾಪಟು ಎಂ.ಹೆಚ್.ಮೂಸಾ (49) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಪಾರ ಬಂಧು ಮಿತ್ರರು, ಸ್ನೇಹಿತರು ಹಾಗೂ ಕಾಂಗ್ರೆಸ್ ಮುಖಂಡರು ಮೂಸಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಲೇಖಕ: admin
ನಾಪೋಕ್ಲು ಸೆ.4 NEWS DESK : ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಹರ್ಷಿತ್ ಅಯ್ಯಪ್ಪ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಸೀನಿಯರ್ ಇಂಟರ್ ಡಿಪಾರ್ಟ್ ಮೆಂಟ್ ನ್ಯಾಷನಲ್ ಚಾಂಪಿಯನ್ ಶಿಪ್ ನ ಅಂಪೈರ್ ಆಗಿ ಆಯ್ಕೆಯಾಗಿದ್ದಾರೆ. ಇವರು ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದ ಅಪ್ಪಚೆಟ್ಟೋಳಂಡ ಬೋಪಯ್ಯ ಮತ್ತು ಬೋಜಮ್ಮ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.4 NEWS DESK : ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023 -24 ಸಾಲಿನಲ್ಲಿ ರೂ.36.29 ಲಕ್ಷ ಲಾಭ ಗಳಿಸಿದೆ ಎಂದು ಸಂಘಧ ಅಧ್ಯಕ್ಷ ಮಾಳೆಯಂಡ ಎಂ.ಅಪ್ಪಚ್ಚ ಹೇಳಿದರು. ಸಂಘದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ 1192 ಜನ ಸದಸ್ಯರಿದ್ದು 1 ಕೋಟಿ 71 ಲಕ್ಷ ರೂ ಶೇರು ಹಣ ಇರುತ್ತದೆ. ಸಂಘದಲ್ಲಿ ಒಟ್ಟು ದುಡಿಯುವ ಬಂಡವಾಳ 20 ಕೋಟಿ ಇರುತ್ತದೆ, ಸಂಘವು ಕೃಷಿ ಸಾಲವನ್ನು 480 ಜನ ರೈತರಿಗೆ 10 ಕೋಟಿ ೪೪ ಲಕ್ಷ ಸಾಲ ವಿತರಿಸಿದ್ದು, ಜಾಮೀನು ಸಾಲ ಮತ್ತು ಗೊಬ್ಬರ ಸಾಲ 90 ಲಕ್ಷ ರೂ ವಿತರಿಸಿದ್ದೇವೆ, ಸಂಘವು ಆಅಅ ಬ್ಯಾಂಕ್ ನಿಂದ 10 ಕೋಟಿ 40 ಲಕ್ಷ ರೂ ಸಾಲ ಪಡೆದುಕೊಂಡು¸ಸಂಘವು ಪರ್ತಿಯಾಗಿ ಹಣವನ್ನು ಪಾವತಿಸಿದೆ, ಸಂಘದ ಸದಸ್ಯರಿಗೆ ಶೇ.12 ಡಿವಿಡೆಂಡ್ ನೀಡುವಂತೆ ಸಭೆಯಲ್ಲಿ ನರ್ಣಯಿಸಲಾಯಿತು. ಸಂಘದಲ್ಲಿ ಗ್ರಾಹಕರಿಗೆ ಗೊಬ್ಬರ ಸೌಲಭ್ಯ ಹಾಗೂ ಕೃಷಿಉತ್ಪನ್ನಕ್ಕೆ ಬೇಕಾದ ಸಾಮಾಗ್ರಿಗಳು ದೊರೆಯುತ್ತದೆ…
ಮಡಿಕೇರಿ ಸೆ.4 NEWS DESK : ಶಿವಮೊಗ್ಗದಲ್ಲಿ ನಡೆದ ಶಿವಮೊಗ್ಗ ಓಪನ್ 5ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಹೋಲಿ ಮೌಂಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಸಕ್ಲೇನ್ ಸಾಧನೆ ಮಾಡಿದ್ದಾನೆ. ಕುಮಟಿ ಹಾಗೂ ಕಟಾ ಎರಡೂ ವಿಭಾಗದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವುದರ ಮೂಲಕ ಜಿಲ್ಲೆಗೆ ಹಾಗೂ ಭಾರತ ದೇಶಕ್ಕೆ ಕೀರ್ತಿ ತಂದಿದ್ದಾನೆ. ಕೊಡ್ಲಿಪೇಟೆಯ ಆಯೀಷಾ ಹಾಗೂ ಅಫ್ಸರ್ ದಂಪತಿ ಪುತ್ರನಾಗಿರುವ ಮೊಹಮ್ಮದ್ ಸಕ್ಲೇನ್ ಹಾಸನದ ಖ್ಯಾತ ಕರಾಟೆ ತರಬೇತುದಾರರಾಗಿರುವ ಆರೀಫ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾನೆ. ಶಿವಮೊಗ್ಗದ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಶ್ರೀ ಲಂಕಾ, ನೇಪಾಳ ಸೇರಿದಂತೆ ದೇಶದ 13 ರಾಜ್ಯಗಳಿಂದ ಸುಮಾರು ಎರಡೂವರೆ ಸಾವಿರ ಕ್ರೀಡಾಪಟುಗಳು ಭಾಗವಹಿಸಿದ್ದು, ಅಮೆರಿಕದಿಂದ ಗ್ರಾಂಡ್ ಮಾಸ್ಟರ್ ಚೆರಿ ಎಫ್.ಮೌಲೆ, ಚಿತ್ರ ನಟ ಸುಮನ್ ತಲ್ವಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಎರಡು ವಿಭಾಗದಲ್ಲಿ ನಡೆದ ಸ್ಪರ್ಧೆಗೆ ಏಷ್ಯನ್ ತೀರ್ಪುಗಾರರು ಸೇರಿದಂತೆ ರಾಷ್ಟ್ರೀಯ ತೀರ್ಪುಗಾರರು ಆಗಮಿಸಿದ್ದರು.
ಮಡಿಕೇರಿ NEWS DESK ಸೆ.3 : ವಿಘ್ನ ವಿನಾಯಕನ ಪ್ರತಿಷ್ಠಾಪನೆ ಮತ್ತು ಆರಾಧನೆಗೆ ದಿನಗಣನೆ ಅರಂಭವಾಗಿದೆ. ಈಗಾಗಲೇ ವಿವಿಧ ಗಣೇಶೋತ್ಸವ ಸಮಿತಿಗಳು ಗಣೇಶ ಚತುರ್ಥಿಯ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಪ್ರತಿ ವರ್ಷ ವಿಜ್ರಂಭಣೆಯ ಗಣೇಶೋತ್ಸವಕ್ಕೆ ಹೆಸರುವಾಸಿಯಾಗಿರುವ ಮಡಿಕೇರಿಯ ಪುಟಾಣಿ ನಗರದ ಶ್ರೀಉದ್ಭವ ವಿನಾಯಕ ಸೇವಾ ಸಮಿತಿ 31ನೇ ವರ್ಷದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ನಡೆಸಿದೆ. ಹಗಲಿರುಳು ಯುವಕರ ತಂಡ ಶ್ರಮಿಸುತ್ತಿದ್ದು, ಈಗಾಗಲೇ ಪುಟಾಣಿ ನಗರದಲ್ಲಿ ಆಕರ್ಷಕ ಸ್ವಾಗತ ದ್ವಾರವನ್ನು ಳವಡಿಸಿದ್ದಾರೆ. ಈ ಬಾರಿ ಏಳು ದಿನಗಳ ಕಾಲ ಗಣಪತಿ ಮೂರ್ತಿಗೆ ವಿಶೇಷ ಪೂಜೆ ನಡೆಯಲಿದೆ. ವಿವಿಧ ಭಕ್ತಿ ಪ್ರಧಾನ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿ ನಿರ್ಧರಿಸಿದೆ. ಶಾಸಕ ಡಾ.ಮಂತರ್ ಗೌಡ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಶ್ರೀಉದ್ಭವ ವಿನಾಯಕ ಸೇವಾ ಸಮಿತಿಗೆ ಸಂಪೂರ್ಣ ಸಹಕಾರ ನೀಡುತ್ತಿರುವುದು ವಿಶೇಷ.
ಹೊಲತಾಳು NEWS DESK ಸೆ.3 : ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾ.ಪಂ ವ್ಯಾಪ್ತಿಯ ಹೊಲತಾಳು ಗ್ರಾಮದಲ್ಲಿ 4 ತಿಂಗಳ ಚಿರತೆ ಮರಿಯೊಂದು ಪತ್ತೆಯಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿನಲ್ಲಿ ನಾಯಿಗಳು ಜೋರಾಗಿ ಬೊಗಳುತ್ತಿದ್ದಾಗ ಗ್ರಾಮಸ್ಥರು ಚಿರತೆ ಮರಿಯನ್ನು ಗಮನಿಸಿದ್ದಾರೆ. ಗ್ರಾಮಸ್ಥರಿಂದ ಮಾಹಿತಿ ದೊರೆತು ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಚಿರತೆ ಮರಿಯನ್ನು ವಶಕ್ಕೆ ಪಡೆದರು. ನಂತರ ಆರೈಕೆ ನೀಡಿ ಅರಣ್ಯ ಪ್ರದೇಶದಲ್ಲಿ ತಾಯಿಯ ಬಳಿಗೆ ಬಿಡಲು ಕ್ರಮ ಕೈಗೊಂಡರು.
ಸೋಮವಾರಪೇಟೆ NEWS DESK ಸೆ.3 :ರೈತರ ಸಿ ಆ್ಯಂಡ್ ಡಿ ಭೂಮಿ ಮತ್ತು ಸರ್ಕಾರಿ ಜಾಗ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಮುಂದಾದರೆ, ಜನಪ್ರತಿನಿಧಿಗಳು ಪಕ್ಷಭೇದ ಮರೆತು ರೈತರ ಪರ ನಿಲ್ಲಬೇಕು ಎಂದು ಸೋಮವಾರಪೇಟೆ ತಾಲ್ಲೂಕು ರೈತ ಹೋರಾಟ ಸಮಿತಿ ಕೆ.ಬಿ.ಸುರೇಶ್ ಮನವಿ ಮಾಡಿದ್ದಾರೆ. ಶಾಂತಳ್ಳಿ ಹೋಬಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸಿ ಆ್ಯಂಡ್ ಡಿ ಭೂಮಿಯಲ್ಲೇ ಕೃಷಿ ಮಾಡಿದ್ದಾರೆ. ಕಾಳುಮೆಣಸು, ಕಾಫಿ ಬೆಳೆಯುತ್ತಿದ್ದಾರೆ. ಅದರಲ್ಲೆ ಬದುಕು ಕಟ್ಟಿಕೊಂಡಿದ್ದಾರೆ. ಈಗ ಆಸ್ತಿ ಕಳೆದುಕೊಂಡು ಹೆಚ್ಚಿನ ರೈತರು ಬೀದಿ ಪಾಲಾಗುವ ಆತಂಕ ಎದುರಿಸುವಂತಾಗಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ದಿನಕ್ಕೊಂದು ಹೇಳಿಕೆ ನೀಡುತ್ತ ರೈತರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ರೈತ ವಿರೋಧಿ ಹೇಳಿಕೆಯನ್ನು ನೀಡುವುದನ್ನು ಬಿಟ್ಟು, ರೈತಪರವಾದ ಹೇಳಿಕೆ ನೀಡಬೇಕೆಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮೂರು ಎಕರೆಯಷ್ಟು ಒತ್ತುವರಿ ಭೂಮಿಯನ್ನು ತೆರವುಗೊಳಿಸುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಕೂಡಲೆ ಮೂರು ಎಕರೆ ಒತ್ತುವರಿ ಭೂಮಿಗಾದರೂ ಹಕ್ಕುಪತ್ರ ಕೊಡುವಂತಾಗಲಿ ಎಂದು ಒತ್ತಾಯಿಸಿದರು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಸಿ ಆ್ಯಂಡ್ ಡಿ…
ಚೆಟ್ಟಳ್ಳಿ NEWS DESK ಸೆ.3 : ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕುಟುಂಬಸ್ಥರು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಕೊಡವರ ದೇವನೆಲೆಯಾದ ನೆಲ್ಲಕ್ಕಿ ನಡುಬಾಡೆಯಲ್ಲಿ ಕೋವಿ, ಒಡಿಕತ್ತಿ, ಗೆಜ್ಜೆತಂಡ, ತೋಕ್ ಪೂ, ಮೀದಿ, ನೀರಿಟ್ಟು, ವಿಶೇಷ ಪೂಜೆ ಸಲ್ಲಿಸಲಾಯಿತು. ಕುಟುಂಬದ ಹಿರಿಯರಾದ ವಾಯುಸೇನೆಯ ನಿವೃತ್ತ ಯೋಧ ಪುತ್ತರಿರ ಗಣೇಶ್ ಭೀಮಯ್ಯ ಅವರು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಾಡಿಗೆ ಹಾಗೂ ಕುಟುಂಬಕ್ಕೆ ಒಳಿತಾಗಲಿ ಎಂದು ಶುಭ ಹಾರೈಸಿದರು. ಕೈಲ್ ಪೊಳ್ದ್ ಹಬ್ಬದ ವಿಶೇಷ ಭೋಜನದ ನಂತರ ಹಿರಿಯರು, ಕಿರಿಯರು, ಮಹಿಳೆಯರು, ಅಕ್ಕಪಕ್ಕದ ಗ್ರಾಮಸ್ಥರು ಊರುಮಂದ್ ನಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆದು ಸಂಭ್ರಮಿಸಿದರು.
ಬೆಂಗಳೂರು NEWS DESK ಸೆ.3: ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು. ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು. ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು. ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. “ಪ್ರಕೃತಿ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ” ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು. ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು…
ಮಡಿಕೇರಿ NEWS DESK ಸೆ.3 : ರಾಜ್ಯ ಸರ್ಕಾರ ಅರಣ್ಯ ಮತ್ತು ಕಂದಾಯ ಇಲಾಖೆಯ ಮೂಲಕ ಹೊರಡಿಸಿರುವ ಕೊಡಗಿನ ಜನರು ಹಾಗೂ ಬೆಳೆಗಾರರಿಗೆ ಮಾರಕವಾಗಬಲ್ಲ ಸುತ್ತೋಲೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುತ್ತೋಲೆಗಳ ಮೂಲಕ ಕೊಡಗಿನ ಜನರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ರೈತರು ಕಳೆದ 30- 40 ವರ್ಷಗಳಿಂದ ಕೃಷಿ ಮಾಡಿ ಬದುಕು ಸಾಗಿಸುತ್ತಿರುವ ಸಿ ಮತ್ತು ಡಿ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಕಂದಾಯ ಇಲಾಖೆಯಿಂದ ಸರ್ವೆ ಕಾರ್ಯ ಆರಂಭಗೊಂಡಿದೆ. ಸಿ ಮತ್ತು ಡಿ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ಕೊಡಗಿನ ರೈತರು ಕಂದಾಯ ಪಾವತಿಸುತ್ತಿರುವುದಲ್ಲದೆ ಹಕ್ಕುಪತ್ರವನ್ನು ಕೂಡ ಹೊಂದಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರದ ದಿಢೀರ್ ನಿರ್ಧಾರದಿಂದ ಕೃಷಿಕರು ಭೂಮಿ ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ. ಬೆಳೆಗಾರರು ಕಾಫಿ…






