ಸಿದ್ದಾಪುರ NEWS DESK ಸೆ.3 : ಜಿಲ್ಲೆಯ ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿ, ಸುಧಾರಣೆ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಸುನ್ನಿ ವಿಭಾಗದ ಎರಡು ಪಂಗಡಗಳ ಮುಖಂಡರುಗಳು ಒಗ್ಗೂಡಿ ಕೊಡಗು ಜಿಲ್ಲಾ ಮಟ್ಟದ ಸುನ್ನಿ ಸಮನ್ವಯ ಸಮಿತಿಯನ್ನು ರಚಿಸಿದ್ದಾರೆ. ನೆಲ್ಯಹುದಿಕೇರಿ ಕೋಪಿಯೋ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಮಸ್ತ ಕೊಡಗು ಜಂಮ್ಯತ್ತುಲ್ ಉಲಮ ಅಧ್ಯಕ್ಷ ಎಂ.ಎಂ.ಅಬ್ದುಲ್ಲಾ ಫೈಝಿ ಉಸ್ತಾದ್ ಹಾಗೂ ಕೂರ್ಗ್ ಜಂಮ್ಯತ್ತುಲ್ ಉಲಮ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಉಸ್ತಾದ್ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳಾಗಿ ಕೆ.ಎ.ಯಾಕುಬ್ ಬಜೆಗುಂಡಿ, ಪಿ.ಎಂ.ಅಬ್ದುಲ್ ಲತೀಫ್ ಸುಂಟಿಕೊಪ್ಪ, ಸಂಚಾಲಕರುಗಳಾಗಿ ಹಫೀಲ್ ಸಹದಿ ತಣ್ಣೀರ್ ಹಳ್ಳ, ಉಮ್ಮರ್ ಪೈಝಿ ಸಿದ್ದಾಪುರ, ಪ್ರಚಾರ ಸಮಿತಿ ಪ್ರತಿನಿಧಿಗಳಾಗಿ ಹನೀಫ್ ಸಖಾಫಿ ಕೊಂಡಂಗೇರಿ, ಸಿ.ಎಂ.ಹಮೀದ್ ಮೌಲವಿ ಸುಂಟಿಕೊಪ್ಪ ಸೇರಿದಂತೆ ಸುನ್ನತ್ ಜಮಾಆತ್ ನ 32 ಮುಖಂಡರುಗಳನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು. ಶಾಫಿ, ಹನಫಿ ಪಂಗಡಗಳ 150ಜಮಾಆತ್ ಆಡಳಿತ ಮಂಡಳಿಯವರನ್ನು ಒಗ್ಗೂಡಿಸಿ ಮಹಲ್ ಸಂಗಮ ಕಾರ್ಯಕ್ರಮವನ್ನು ಅ.22 ರಂದು ಸುಂಟಿಕೊಪ್ಪದಲ್ಲಿ ಆಯೋಜಿಸಲು ಸಭೆ ನಿರ್ಧರಿಸಿತು.
ಲೇಖಕ: admin
ಕುಶಾಲನಗರ ಸೆ.3 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಬಸವೇಶ್ವರ ಬಡಾವಣೆಯಲ್ಲಿ ಪಂಚಾಯಿತಿ ವತಿಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ವಾರ್ಡ್ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಕಾಮಗಾರಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, 15ನೇ ಹಣಕಾಸಿನಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಮಣಿಮಾಲ ಕುಬೇರರವರ ಮನೆಯಿಂದ ಅಕ್ಕಮ್ಮ ಅವರ ಮನೆವೆರೆಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ವಾರ್ಡ್ ನಂಬರ್ ಎರಡರಲ್ಲಿ ಸುಂದರನಗರ, ಬಸವೇಶ್ವರ ಬಡಾವಣೆ, ನವಗ್ರಾ ಹಾಗೂ ವಿನಾಯಕ ಬಡಾವಣೆ ಇದೆ. ವಾರ್ಡ್ ವ್ಯಾಪ್ತಿ ದೊಡ್ಡದಾಗಿದ್ದು, ಹಂತಹಂತವಾಗಿ ವಾರ್ಡನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು. ಈ ಸಂದರ್ಭ ಬಸವೇಶ್ವರ ಬಡಾವಣೆ ನಿವಾಸಿಗಳು ಇದ್ದರು.
ಮಡಿಕೇರಿ ಸೆ.2 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಹಾಗೂ ಇಲಾಖಾ ವೆಬ್ಸೈಟ್ www.dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಸೆ.3 NEWS DESK : ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್ಸೈಟ್ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 14 ರೊಳಗೆ ಸಲ್ಲಿಸಬಹುದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ ಮತ್ತು ಪ.ಪಂ/ಪ್ರವರ್ಗ-1) ಅಂಕಗಳೊಂದಿಗೆ ಉತ್ತಿರ್ಣರಾದ, 19 ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನುಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಹಾಗೆಯೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ…
ಮಡಿಕೇರಿ ಸೆ.3 NEWS DESK : ಪೋಷಣ್ ಮಸಾಚರಣೆ ಅಂಗವಾಗಿ ಅಂಗನವಾಡಿ ಫಲಾನುಭವಿಗಗಳಾದ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಗಾಂಧಿನಗರ, ಶಾಸ್ತ್ರಿನಗರ, ಬಾಡಗ-1, ಬಾಡಗ-2, ಕೋಡಂಬೂರು, ಕಾಂತೂರು, ಕಿಗ್ಗಾಲು, ಐಕೊಳ 1, ಐಕೊಳ 2, ಐಕೊಳ 3 ಅಂಗನವಾಡಿಯಲ್ಲಿ ಆರೋಗ್ಯ ತಪಾಸಣೆ ಹಾಗೂ ರಕ್ತಹೀನತೆ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಫಲಾನುಭವಿಗಳು, ಮುರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ ವಿಜಯಕುಮಾರ್, ಹಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತೆ ಹೇಮಲತಾ, ಆರೋಗ್ಯ ಇಲಾಖೆಯ ಕಾಂಚನ, ಮೇಪಾಡಂಡ ಸವಿತಾ ಕೀರ್ತನ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ಹಾಜರಿದ್ದರು.
ಸೋಮವಾರಪೇಟೆ ಸೆ.3 NEWS DESK : ವಿಶ್ವದಲ್ಲಿಯೇ ಶ್ರೇಷ್ಠ ಎನಿಸಿಕೊಂಡಿರುವ ಹಿಂದೂ ಸಂಸ್ಕಾರ ಪದ್ಧತಿಯನ್ನು ಹಿಂದುಗಳಾದ ನಾವುಗಳೇ ಅಗೌರವಿಸುತ್ತಿರುವುದು ನಮ್ಮ ದುರಂತ ಎಂದು ವಿರಕ್ತ ಮಠದ ಮಠಾಧೀಶರಾದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಮಹಾಸ್ವಾಮಿಗಳು ವಿಷಾದ ವ್ಯಕ್ತಪಡಿಸಿದರು. ಸೋಮವಾರಪೇಟೆ ಕೊಡವ ಸಮಾಜದಲ್ಲಿ ವಿಶ್ವ ಹಿಂದೂ ಪರಿಷದ್ ಸೋಮವಾರಪೇಟೆ ಪ್ರಖಂಡದ ವತಿಯಿಂದ ನಡೆದ ವಿಶ್ವ ಹಿಂದೂ ಪರಿಷದ್ನ ಸ್ಥಾಪನಾ ದಿನ ಹಾಗೂ ಷಷ್ಟಿ ಪೂರ್ತಿ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ನಮ್ಮ ಧರ್ಮ ಮತ್ತು ಆಚರಣೆಗಳನ್ನು ನಮ್ಮವರೇ ತೆಗಳುವುದರಿಂದ ನಮ್ಮ ದೇಶದಲ್ಲಿಯೇ ಹಿಂದೂ ಧರ್ಮಕ್ಕೆ ಧಕ್ಕೆ ಬರುತ್ತಿದೆ. ಇಂತಹ ಕಾರ್ಯಗಳು ಮುಂದುವರಿಯುತ್ತಾ ಹೋದರೆ ಹಿಂದುತ್ವದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಅನಿವಾರ್ಯತೆ ಬರಲಿದೆ. ಈ ವರೆಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿ.ಹಿಂ.ಪ. ಮಠ ಮಾನ್ಯಗಳು ಹಿಂದೂ ಧರ್ಮವನ್ನು ರಕ್ಷಿಸುತ್ತಾ ಬರುತ್ತಿದೆ. ಮುಂದೆ ನಮ್ಮಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಂಡು ಎಲ್ಲಾರೂ ಸಂಘಿಗಳಾಗುವ ಮೂಲಕ ಹಿಂದೂ ಧರ್ಮ ಹಾಗೂ ಸಂಸ್ಕಾರವನ್ನು ಗೌರವಿಸುವಂತಾಗಬೇಕೆಂದರು. ವಿ.ಹಿಂ.ಪ. ನ ಜಿಲ್ಲಾ ಬೌದ್ಧಿಕ್…
ಮಡಿಕೇರಿ ಸೆ.3 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯದ ಟೈನಿ ಟಾಟ್ಸ್ ವಿದ್ಯಾಥಿ೯ಗಳು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಿದರು. ಮಡಿಕೇರಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಕಾರ್ಯಕ್ರಮದ ಮಹತ್ವವನ್ನು ಪುಟಾಣಿ ಮಕ್ಕಳಿಗೆ ತಿಳಿಸಿದರು. ಪುಟಾಣಿ ಮಕ್ಕಳಿಂದ ನಡೆದ ನೃತ್ಯ ಪ್ರದರ್ಶನವು ನೆರೆದಿದ್ದ ಪೋಷಕರು ಮತ್ತು ಪ್ರೇಕ್ಷಕರ ಮನಸೂರೆಗೊಂಡಿತ್ತು. ಕೊಡಗು ವಿದ್ಯಾಲಯದ ಪ್ರಾಂಶುಪಾಲಾರದ ಕೆ.ಎಸ್.ಸುಮಿತ್ರ ಆಡಳಿತ ನಿರ್ವಹಣಾಧಿಕಾರಿ ಪಿ.ರವಿ, ಪೋಷಕರು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.3 NEWS DESK : ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ನೂತನ ಅಧ್ಯಕ್ಷರಾಗಿ ರಾಮಚಂದ್ರ ಮೂಗೂರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಗರದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆದ ನಿಧಿಯ ವಾಷಿ೯ಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿಗೆ ನಿದೇ೯ಶಕರ ಆಯ್ಕೆ ನಡೆಯಿತು. ನಿಧಿಯ ಉಪಾಧ್ಯಕ್ಷರಾಗಿ ರಾಜಶೇಖರ್, ಕಾರ್ಯದರ್ಶಿಯಾಗಿ ಬಿ.ಕೆ.ಜಗದೀಶ್, ಸಹಕಾರ್ಯದರ್ಶಿಯಾಗಿ ಎ.ವಿ.ಮಂಜುನಾಥ್, ಖಜಾಂಚಿಯಾಗಿ ಜಿ.ಆರ್.ರವಿಶಂಕರ್ ಆಯ್ಕೆಯಾಗಿದ್ದಾರೆ.
ಮಡಿಕೇರಿ ಸೆ.3 NEWS DESK : ಚೇತನ ಫೌಂಡೇಷನ್ ಧಾರವಾಡದ ಅಂಗಸಂಸ್ಥೆಯಾದ ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಆಶುಕವಿತೆ ಬರೆಯುವ ಸ್ಪರ್ಧೆಯಲ್ಲಿ ನಾಲಡಿ ಗ್ರಾಮದ ಪ್ರಿತುನ್ ಪೂವಣ್ಣ ಅಯ್ಯನೆರವಂಡ ಆಶುಕವಿತೆ ಬರೆದು ಬರೆಯುವ ಮೂಲಕ ವಿಶ್ವದಾಖಲೆಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇವಲ 24 ನಿಮಿಷಗಳಲ್ಲಿ 224 ಮಂದಿ ಕವಿಗಳು ವಾಟ್ಸಾಪ್ ಮೂಲಕ ಏಕಕಾಲದಲ್ಲಿ ಆಶುಕವಿತೆ ಬರೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಇತ್ತೀಚಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವತಿಯಿಂದ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ವಂದೇ ಮಾತರಂ ಕಾರ್ಯಕ್ರಮದಲ್ಲಿ 224 ಕವಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಪ್ರಿತುನ್ ಪೂವಣ್ಣ ಕಕ್ಕಬ್ಬೆ ನಾಲಡಿ ಗ್ರಾಮದ ಪೂವಯ್ಯ, ಪ್ರಭಾ ದಂಪತಿಯ ಪುತ್ರ.
ನಾಪೋಕ್ಲು ಸೆ.3 NEWS DESK : ಮೈಸೂರಿನ ಕೊಡಗು ಗೌಡ ಸಮಾಜದ ವತಿಯಿಂದ ಕೈಲು ಮುಹೂರ್ತ (ಕೈಲ್ ಪೊಳ್ದ್) ಪ್ರಯುಕ್ತ ಜನಾಂಗ ಬಂಧುಗಳಿಗೆ ಕ್ರೀಡಾಕೂಟ ನಡೆಯಿತು. ಮೈಸೂರಿನ ವಿಶ್ವ ವಿದ್ಯಾಲಯ ಕ್ರೀಡಾ ಮೈದಾನದಲ್ಲಿ ನಡೆದ ಕ್ರೀಡಾಕೂಟ ವನ್ನು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಬಲೂನು ಹಾರಿಬಿಡುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಕ್ರೀಡಾಕೂಟದಲ್ಲಿ 5 ವರ್ಷದ ಮಕ್ಕಳಿಂದ ಹಿಡಿದು 70 ವರ್ಷ ವಯಸ್ಸಿನ, ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ತಲಾ ಎರಡು ಸ್ಪರ್ಧೆ ಗಳಂತೆ ಒಟ್ಟು 40 ಸ್ಪರ್ಧೆಗಳು ನಡೆದವು. ಇದರೊಂದಿಗೆ ಸಾಂಪ್ರದಾಯಿಕ ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆಯು ನಡೆಯಿತು. ಇದೆ ಕ್ರೀಡಾ ಕೂಟದ ಭಾಗವಾಗಿ ಪುರುಷರು ಮತ್ತು ಮಹಿಳೆಯರಿಗೆ ಶಟಲ್ ಬ್ಯಾಡ್ಮಿಂಟನ್ ಸ್ಪರ್ದೆ ಹಾಗೂ ಕ್ರಿಕೆಟ್ ಪಂದ್ಯಾಟ ಗಳು ನಡೆದವು. ಈ ಸಂದರ್ಭ ವೇದಿಕೆಯಲ್ಲಿ ಮೈಸೂರು ಕೊಡಗು ಗೌಡ ಸಮಾಜದ ಮಾಜಿ ಅಧ್ಯಕ್ಷ ತೋಟಂಬೈಲು ಮನೋಹರ್, ಕ್ರೀಡಾ ಸಂಚಾಲಕ ಕೊಂಬಾರಾನ ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷ…






