ಲೇಖಕ: admin

ವಿರಾಜಪೇಟೆ ಸೆ.3 NEWS DESK : ಪೆರಂಬಾಡಿ ನಿವಾಸಿ ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಬಿ.ಎಂ.ಗಣೇಶ್  ತನ್ನದೇ ಸ್ವಂತ ಖರ್ಚಿನಲ್ಲಿ ಮೂರು ಬಡ ಕುಟುಂಬಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆಯನ್ನು ಒದಗಿಸಿ ಮಾದರಿಯಾಗಿದ್ದಾರೆ. ವಿರಾಜಪೇಟೆ ಸಮೀಪದ ತೆರ್ಮೆಕಾಡು ಪೈಸಾರಿ ನಿವಾಸಿಗಳಾದ ರಾಜೇಶ್, ದೇವಿ ಹಾಗೂ ಎರಡನೇ ಪೆರಂಬಾಡಿ ನಿವಾಸಿ ಕಾಳ ಅವರ ಮನೆಗೆ ಉಚಿತ ವಿದ್ಯುತ್ ಸಂಪರ್ಕವನ್ನು ಒದಗಿಸಲು ನೆರವಾಗಿದ್ದಾರೆ. ಈ ಮೂರು ಮನೆಗಳಲ್ಲಿಯೂ ವಿದ್ಯುತ್ ಸಂಪರ್ಕವಿರಲಿಲ್ಲ. ಮಾತ್ರವಲ್ಲದೆ ಮನೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿದ್ದರು. ವಿದ್ಯುತ್ ವ್ಯವಸ್ಥೆ ಇಲ್ಲದೇ ಅವರ ವ್ಯಾಸಂಗಕ್ಕೆ ಅಡಚಣೆ ಉಂಟಾಗುತಿತ್ತು. ಇದನ್ನು ಅರಿತ ಬಿ.ಎಂ.ಗಣೇಶ್, ಅಂದಾಜು 35,000 ರೂ ವೆಚ್ಚದಲ್ಲಿ ವಿದ್ಯುತ್ ಸಂಪರ್ಕವನ್ನು ಮೂರು ಮನೆಗಳಿಗೂ ಒದಗಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಈ ಹಿಂದೆಯೂ ಇವರು ಕೆದಮುಳ್ಳೂರು ಗ್ರಾಮದಲ್ಲಿ ಸ್ವಂತ ಹಣದಲ್ಲಿ ಬಡವರಿಗೆ ಮನೆಯನ್ನು ನಿರ್ಮಿಸಿಕೊಟ್ಟು ಸಹಾಯ ಹಸ್ತ ನೀಡಿದ್ದರು. ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ಮನೆಯವರಿಗೆ ಹಾಗೂ ಮಕ್ಕಳಿಗೆ ತೊಂದರೆಯಾಗುತಿತ್ತು. ಅವರಿಗೆ ನೆರವು ನೀಡಬೇಕು ಎಂದೆನಿಸಿ…

Read More

ಮಡಿಕೇರಿ ಸೆ.3 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅರಮನೆ ಮೈದಾನದಲ್ಲಿ “ಕನ್ನಡ ಸುವರ್ಣ ಸಂಭ್ರಮ ರಥ” ಕ್ಕೆ ಚಾಲನೆ ನೀಡಿದರು.

Read More

ವಿರಾಜಪೇಟೆ ಸೆ.3 NEWS DESK : ಸಮಾಜ ಸೇವೆಯನ್ನೇ ದ್ಯೇಯವಾಗಿಟ್ಟಿರುವ ಮದರ್ ತೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿಯು ಶ್ಲಾಘನೀಯವಾಗಿದೆ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್  ಅಭಿಪ್ರಾಯಪಟ್ಟರು. ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ನಡೆದ ಮದರ್ ತೆರೇಸಾ ಜನ್ಮ ದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯರನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಹಿರಿಯರು ಮಕ್ಕಳಲ್ಲಿ ವಿಶ್ವಾಸವನ್ನು ತುಂಬಬೇಕು. ಪ್ರೀತಿಯನ್ನು ಪರಸ್ಪರ ಹಂಚಬೇಕು. ಆ ನಿಟ್ಟಿನಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಲ್ಲದೆಸಂಘಕ್ಕೆ ಸಂಪೂರ್ಣ ಸಹಕಾರವನ್ನು ಸದಾ ನೀಡುವುದಾಗಿ ಹೇಳಿದರು. ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಮಾತನಾಡಿ, ಮದರ್ ತೆರೇಸಾ ಸೇವಾ ಕೇಂದ್ರದ ಸದಸ್ಯರು ಹಿರಿಯರಿಗೆ ಎಲ್ಲಾ ರೀತಿಯಲ್ಲಿಯೂ ಸಹಕಾರವನ್ನು ನೀಡುತ್ತಾ…

Read More

ಮಡಿಕೇರಿ ಸೆ.3 NEWS DESK :  ಪರೋಪಕಾರ ಹಿತ ಎಂಬಂತೆ ಪ್ರಕೃತಿಯ ಮರ, ಗಿಡ, ನದಿ, ಸರೋವರ, ಪಾಣಿ, ಪಕ್ಷಿ ಎಲ್ಲಾವು ಇತರರ ಸೇವೆಗಾಗಿಯೇ ಇವೆ. ಮಾನವ ಮಾತ್ರ ಸ್ವಾರ್ಥ ಜೀವನ ಸಾಗಿಸುತ್ತಿದ್ದಾನೆ. ವಿದ್ಯಾರ್ಥಿಗಳು ಇದರಿಂದ ದೂರವಾಗಿ ಇತರರ ಸೇವೆಗೆ ಮುಡಿಪಾಗಿರಬೇಕು ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ.ಕಾವೇರಿಯಪ್ಪ ಹೇಳಿದರು.  ಕಾಲೇಜಿನಲ್ಲಿ ನಡೆದ 2024-25 ನೇ ಸಾಲಿನ ಎನ್.ಎಸ್.ಎಸ್ ಘಟಕದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಎನ್.ಎಸ್.ಎಸ್ ಘಟಕದ ಮೂಲಕ ಸಮಾಜ ಸೇವೆಗೆ ಸೇವೆಯಲ್ಲಿ ತೊಡಗಿಕೊಳ್ಳುವ ಮೂಲಕ  ನಮ್ಮ ಬದುಕು ಪರೋಪಕಾರಿಯಾಗಿಸಬೇಕು ಎಂದು ಕರೆ ನೀಡಿದರು.  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕಿ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಕಾವೇರಿ ಪ್ರಕಾಶ್, ವಿದ್ಯಾರ್ಥಿಗಳು ಗುರುಗಳಿಗೆ ಗೌರವ ಕೊಡುವುದನ್ನು ಎಂದಿಗೂ ಮರೆಯಬಾರದು. ಸಮಾಜ ಸೇವಾ ಮನೋಭಾವ ಬೆಳೆಸಿಕೊಂಡರೇ ಮಾತ್ರ ಇತರರ ಭಾವನೆಗೆ ಸ್ಪಂದನೆ ನೀಡಲು ಸಾಧ್ಯ…

Read More

ಕುಶಾಲನಗರ ಸೆ.3 NEWS DESK : ಕುಶಾಲನಗರ ಶೈಕ್ಷಣಿಕ ಕ್ಲಸ್ಟರ್ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಜ್ಞಾನ ಭಾರತಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ  ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವದಲ್ಲಿ ಮಕ್ಕಳ ಬಹುಮುಖ‌ ಪ್ರತಿಭೆ ಅನಾವರಣಗೊಂಡಿತು. ಶಾಲಾ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಹಾಗೂ ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜ್ಞಾನಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ಎಲ್.ನಾಗರಾಜ್, ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು. ಮಕ್ಕಳಲ್ಲಿ ಉತ್ತಮ ಪ್ರತಿಭೆಯನ್ನು ಅನಾವರಣಗೊಳಿಸಲು ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕುಶಾಲನಗರ ಬಾಲಕಿಯರ…

Read More

ಮಡಿಕೇರಿ NEWS DESK ಸೆ.2 : ಕರ್ನಾಟಕ ಆಮೆಚೂರು ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಗೋಣಿಕೊಪ್ಪಲುವಿನಲ್ಲಿ ನಡೆದ ಓಪನ್ ಸ್ಟೇಟ್ ಬಾಡಿ ಬಿಲ್ಡಿಂಗ್ ಮತ್ತು ಓಪನ್ ಡಿಸ್ಟಿçಕ್ಟ್ ಬಾಡಿ ಬಿಲ್ಡಿಂಗ್ ಚಾಂಪಿಯನ್ ಶಿಪ್ 2024 ರಲ್ಲಿ ಶೋರ್ಟ್ ವಿಭಾಗದಲ್ಲಿ ಮಡಿಕೇರಿಯ ರಾಯಲ್ ಗೋಲ್ಡ್ ಫಿಟ್ನೆಸ್ ಜಿಮ್ ನ ಮೊಹಮ್ಮದ್ ಕಾಮಿಲ್ ತೃತೀಯ ಮತ್ತು ಬೈರಾಜು ಸಿ.ಎಂ ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಇವರುಗಳಿಗೆ ರಾಯಲ್ ಗೋಲ್ಡ್ ಫಿಟ್ನೆಸ್ ಜಿಮ್ ನ ಮಾಲೀಕರಾದ ರಾಜು ಹಾಗೂ ಗಣೇಶ್ ಪೂಜಾರಿ ತರಬೇತಿ ನೀಡಿದರು.

Read More

*ಸಿದ್ದಾಪುರ NEWS DESK ಸೆ.2 : ನೆಲ್ಯಹುದಿಕೇರಿ, ಸಿದ್ದಾಪುರ ವ್ಯಾಪ್ತಿಯ ಆಟೋ ಚಾಲಕರನ್ನೊಳಗೊಂಡ ಕಾವೇರಿ ಆಟೋ ಚಾಲಕರ ಸಂಘ ಅಸ್ತಿತ್ವಕ್ಕೆ ಬಂದಿದೆ. ನೂತನ ಅಧ್ಯಕ್ಷರಾಗಿ ಎ.ಎಸ್.ಹುಸೈನ್ ಆಯ್ಕೆಯಾಗಿದ್ದಾರೆ. ನೆಲ್ಯಹುದಿಕೇರಿಯ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಬೆಳ್ಯಪ್ಪ, ವಿನೋದ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್, ಖಜಾಂಚಿಯಾಗಿ ರಶಾದ್ ಹಾಗೂ ಸಮಿತಿ ಸದಸ್ಯರನ್ನಾಗಿ 25 ಮಂದಿಯನ್ನು ಆಯ್ಕೆ ಮಾಡಲಾಯಿತು.

Read More

ಮಡಿಕೇರಿ NEWS DESK ಸೆ.2 : ಬಿರಿಯಾನಿ ಪ್ರಿಯರ ಅಚ್ಚುಮೆಚ್ಚಿನ “ಮಾವಳ್ಳಿ ಬಿರಿಯಾನಿ TASTE OF 1952″ ರ ಮತ್ತೊಂದು ಶಾಖೆ ಮಂಜಿನ ನಗರಿ ಮಡಿಕೇರಿಯಲ್ಲಿ ಶುಭಾರಂಭಗೊಂಡಿದೆ. ಅದ್ದೂರಿ ಪ್ರಾರಂಭೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಡಾ.ಮಂಥರ್ ಗೌಡ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾವಳ್ಳಿ ಬಿರಿಯಾನಿ TASTE OF 1952 ಶಾಖೆಯನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ “ಮಾವಳ್ಳಿ ಬಿರಿಯಾನಿ” ಯ ಪ್ರಮುಖರಾದ ಮಧು ಗೌಡ ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಬಿಸಿಬಿಸಿ “ಮಾವಳ್ಳಿ ಬಿರಿಯಾನಿ” ಯ ರುಚಿ ಸವಿಯಲು ಭೇಟಿ ನೀಡಿ “ಮಾವಳ್ಳಿ ಬಿರಿಯಾನಿ TASTE OF 1952″ ದಿ ಕೂರ್ಗ್ ಸೆಂಟರ್, ಬ್ಲಾಕ್ ನಂ.22, ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ, ಮಡಿಕೇರಿ.

Read More

ಮಡಿಕೇರಿ NEWS DESK ಸೆ.2 : ಕೊಡಗು ಜಿಲ್ಲೆಯ ವಿವಿಧೆಡೆ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕಳೆದ ವರ್ಷಕ್ಕಿಂತ ಎರಡು ಪಟ್ಟು ಅಧಿಕ ಮಳೆಯಾಗಿದೆ. ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ 105 ಇಂಚು ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 52 ಇಂಚು ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಈ ವರ್ಷ 150 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ಎರಡು ಇಂಚಿಗೂ ಅಧಿಕವಾಗಿದೆ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 3762.28 ಮಿ.ಮೀ (150 ಇಂಚಿಗೂ ಅಧಿಕ), ಕಳೆದ ವರ್ಷ ಇದೇ ಅವಧಿಯಲ್ಲಿ 2185.32 ಮಿ.ಮೀ. (88ಇಂಚು) ಮಳೆಯಾಗಿತ್ತು. ದಕ್ಷಿಣ ಕೊಡಗಿನಲ್ಲಿ ಕೊಂಚ ಮಳೆ ಇಳಿಮುಖವಾಗಿದ್ದು, ಉಳಿದೆಡೆ ಸುರಿದ ಧಾರಾಕಾರ ಮಳೆಯಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಜಲಾಶಯದಿಂದ ಇಂದು ಬೆಳಗ್ಗೆ…

Read More

ಮಡಿಕೇರಿ ಸೆ.2 NEWS DESK : ಅರಕಲಗೂಡು ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸಬೇಕಿರುವುದರಿಂದ ಸೆ.4 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11ಕೆವಿ ಶನಿವಾರಸಂತೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಆಲೂರು, ಅಂಕನಹಳ್ಳಿ, ಮಣಜೂರು, ಬೀಟಿಕಟ್ಟೆ ಗೋಪಲ್‍ಪುರ, ಬಲ್ಲಾರಳ್ಳಿ, ಬೆಸೂರು, ಊರುಗುತ್ತಿ, ನಿಲುವಾಗಿಲು, ಕ್ಯಾತೆ, ದೊಡ್ಡಕೊಡ್ಲಿ, ನೀರುಗುಂದ, ಕಿತ್ತೂರು ಗೌಡಳ್ಳಿ, ನಿಡ್ತ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More